Homeಮುಖಪುಟವಾಟ್ಸಾಪ್‌ನಲ್ಲಿ ಬರಲಿದೆ ಎಡಿಟ್ ಮಾಡುವ ಅವಕಾಶ

ವಾಟ್ಸಾಪ್‌ನಲ್ಲಿ ಬರಲಿದೆ ಎಡಿಟ್ ಮಾಡುವ ಅವಕಾಶ

- Advertisement -
- Advertisement -

ಜನಪ್ರಿಯ ಮೆಸೇಂಜಿಂಗ್ ತಾಣವಾದ ವಾಟ್ಸಾಪ್ ತನ್ನ ಬಳಕೆದಾರರಿಗೆ ಹಲವು ವೈಶಿಷ್ಯಗಳನ್ನು ಪರಿಚಯಿಸುತ್ತಿದೆ. ವಿಶ್ವದಾದ್ಯಂತ 200 ಕೋಟಿಗೂ ಅಧಿಕ ಬಳಕೆದಾರರನ್ನು ಹೊಂದಿರುವ ಅದು ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 512 ರಿಂದ 1024 ಏರಿಸಿದ್ದು, ಮುಂದೆ ಎಡಿಟ್ ಅವಕಾಶ ನೀಡಲು ಮುಂದಾಗಿದೆ.

ಇದುವರೆಗೂ ವಾಟ್ಸಾಪ್ ಗುಂಪುಗಳಲ್ಲಿ 512 ಸದಸ್ಯರಿಗೆ ಮಾತ್ರ ಅವಕಾಶವಿತ್ತು. ಆದರೆ ಮತ್ತೊಂದು ಮೆಸೆಂಜಿಂಗ್ ತಾಣವಾದ ಟೆಲಿಗ್ರಾಂ 2 ಲಕ್ಷದವರೆಗೆ ಸದಸ್ಯರನ್ನು ಹೊಂದುವ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ಗುಂಪಿನ ಮಿತಿಯನ್ನು ಹೆಚ್ಚಿಸುವ ಬೇಡಿಕೆಯಿತ್ತು. ಅದನ್ನು ಪರಿಗಣಿಸಿರುವ ವಾಟ್ಸಾಪ್ ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 1024ಕ್ಕೆ ಏರಿಸಿದೆ.

ಮುಂದೆ ಬರಲಿದೆ ಎಡಿಟ್ ಆಯ್ಕೆ

ಫೇಸ್‌ಬುಕ್‌ನಲ್ಲಿ ನೀವು ಪೋಸ್ಟ್ ಮಾಡಿದ ಸಂದೇಶವನ್ನು ಮತ್ತೆ ಎಡಿಟ್ ಮಾಡುವ ಅವಕಾಶವಿದೆ. ಸದ್ಯ ವಾಟ್ಸಾಪಿನಲ್ಲಿ ಒಮ್ಮೆ ಸಂದೇಶ ಕಳುಹಿಸಿದರೆ ಅದನ್ನು ಮತ್ತೆ ತಿದ್ದುವ ಅವಕಾಶವಿಲ್ಲ. ಅದನ್ನು ಡಿಲೀಟ್ ಮಾಡಿ ಮತ್ತೆ ಬರೆಯಬೇಕಾದ ಅನಿವಾರ್ಯತೆಯಿದೆ. ಆ ಕಷ್ಟವನ್ನು ಅರ್ಥ ಮಾಡಿಕೊಂಡಿರುವ ವಾಟ್ಸಾಪ್ ಕಂಪನಿಯು ಎಡಿಟ್ ಮಾಡುವ ಅವಕಾಶ ನೀಡುವುದಾಗಿ ಘೋಷಿಸಿದ್ದು ಅದರ ಮೇಲೆ ಕೆಲಸ ಮಾಡುತ್ತಿದೆ. ಆ ಸೇವೆ ಜಾರಿಯಾದಲ್ಲಿ ಕಳುಹಿಸಿದ ಸಂದೇಶದಲ್ಲಿ ಏನಾದರೂ ಬದಲಾವಣೆ ಇದ್ದರೆ 15 ನಿಮಿಷದೊಳಗೆ ಎಡಿಟ್ ಮಾಡಬಹುದಾಗಿದೆ. ಇದೇ ರೀತಿಯ ಎಡಿಟ್ ಆಯ್ಕೆ ಟ್ವಿಟರ್‌ನಲ್ಲಿ ಸಹ ತರಲು ಕೆಲಸ ನಡೆಯುತ್ತಿದೆ ಎನ್ನಲಾಗಿದೆ.

ನೀವು ಯಾವುದೇ ಕಾಗುಣಿತ ಅಥವಾ ವ್ಯಾಕರಣದ ತಪ್ಪುಗಳನ್ನು ಸರಿಪಡಿಸಲು ಅಥವಾ ಕೆಲವು ಮಾಹಿತಿಯನ್ನು ಸೇರಿಸಲು ಅಥವಾ ತೆಗೆದುಹಾಕಲು ಬಯಸಿದರೆ ಎಡಿಟ್ ಮಾಡಬಹುದಾಗಿದೆ. ಈ ಹೊಸ ಫಿಚರ್ ಅನ್ನು ಟೆಸ್ಟಿಂಗ್ ಪ್ರೋಗ್ರಾಂನಲ್ಲಿ ನೋಂದಾಯಿಸಿದವರಿಗೆ ನೀಡಲಾಗಿದೆ ಎಂದು ವರದಿಯಾಗಿದೆ.

Undo ಆಯ್ಕೆ ಇರುವುದನ್ನು ಗಮನಿಸಿದ್ದೀರಾ?

ವಾಟ್ಸಾಪ್‌ನಲ್ಲಿ ಯಾವುದೇ ಕಾರಣಕ್ಕಾಗಿ ಸಂದೇಶವನ್ನು ನೀವು ಡಿಲೀಟ್ ಮಾಡಿದ್ದಲ್ಲಿ Undo ಆಯ್ಕೆ ಮೂಲಕ ಅದನ್ನು ವಾಪಸ್ ಪಡೆಯುವ ಸೌಲಭ್ಯವಿದೆ. ನೀವು ಸಂದೇಶ ಕಳಿಸಲು ಟೈಪ್ ಮಾಡುತ್ತಿರುವಾಗ ಬೈ ಮಿಸ್ಟೇಕ್  ಅಳಿಸಿಬಿಟ್ಟರೆ Undo ಆಯ್ಕೆ ಮೂಲಕ ವಾಪಸ್ ಪಡೆಯಬಹುದು. ಆದರೆ ಇದಕ್ಕೆ ನಿರ್ಧಿಷ್ಟ ಕಾಲಮಿತಿ ಇರುತ್ತದೆ ಎಂದು ವಾಟ್ಸಾಪ್ ಹೇಳಿದೆ. ನೀವು ಅಳಿಸಿದ ಸಂದೇಶವನ್ನು ನಿಗಧಿತ ಸಮಯದೊಳಗೆ ಮಾತ್ರ ಪಡೆಯಬಹುದು. ಇಲ್ಲದಿದ್ದರೆ ಅದು ಕಣ್ಮರೆಯಾಗಲಿದೆ.

ಇವಿಷ್ಟು ಸದ್ಯಕ್ಕೆ ವಾಟ್ಸಾಪ್ ನೀಡಿರುವ ಕೊಡುಗೆಗಳಾಗಿದ್ದು, ಅದಕ್ಕೆ ಯಾವುದೇ ದರ ನಿಗಧಿ ಮಾಡಿಲ್ಲ. ಮೆಟಾ ಮಾಲಿಕತ್ವದ ವಾಟ್ಸಾಪ್ ತನ್ನ ಸೇವೆಗಳಿಗೆ ಮುಂದೆ ದರ ನಿಗಧಿ ಮಾಡಲಿದೆ ಎಂಬ ಚರ್ಚೆಗಳು ಸಹ ನಡೆಯುತ್ತಿವೆ.

ಇದನ್ನೂ ಓದಿ: ವಾಟ್ಸಾಪ್ ಪೋಲ್ ರಚಿಸಬಹುದು: ಹೇಗೆಂದು ಇಲ್ಲಿ ತಿಳಿಯಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...