Homeಮುಖಪುಟವಾಟ್ಸಾಪ್‌ನಲ್ಲಿ ಬರಲಿದೆ ಎಡಿಟ್ ಮಾಡುವ ಅವಕಾಶ

ವಾಟ್ಸಾಪ್‌ನಲ್ಲಿ ಬರಲಿದೆ ಎಡಿಟ್ ಮಾಡುವ ಅವಕಾಶ

- Advertisement -
- Advertisement -

ಜನಪ್ರಿಯ ಮೆಸೇಂಜಿಂಗ್ ತಾಣವಾದ ವಾಟ್ಸಾಪ್ ತನ್ನ ಬಳಕೆದಾರರಿಗೆ ಹಲವು ವೈಶಿಷ್ಯಗಳನ್ನು ಪರಿಚಯಿಸುತ್ತಿದೆ. ವಿಶ್ವದಾದ್ಯಂತ 200 ಕೋಟಿಗೂ ಅಧಿಕ ಬಳಕೆದಾರರನ್ನು ಹೊಂದಿರುವ ಅದು ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 512 ರಿಂದ 1024 ಏರಿಸಿದ್ದು, ಮುಂದೆ ಎಡಿಟ್ ಅವಕಾಶ ನೀಡಲು ಮುಂದಾಗಿದೆ.

ಇದುವರೆಗೂ ವಾಟ್ಸಾಪ್ ಗುಂಪುಗಳಲ್ಲಿ 512 ಸದಸ್ಯರಿಗೆ ಮಾತ್ರ ಅವಕಾಶವಿತ್ತು. ಆದರೆ ಮತ್ತೊಂದು ಮೆಸೆಂಜಿಂಗ್ ತಾಣವಾದ ಟೆಲಿಗ್ರಾಂ 2 ಲಕ್ಷದವರೆಗೆ ಸದಸ್ಯರನ್ನು ಹೊಂದುವ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ಗುಂಪಿನ ಮಿತಿಯನ್ನು ಹೆಚ್ಚಿಸುವ ಬೇಡಿಕೆಯಿತ್ತು. ಅದನ್ನು ಪರಿಗಣಿಸಿರುವ ವಾಟ್ಸಾಪ್ ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 1024ಕ್ಕೆ ಏರಿಸಿದೆ.

ಮುಂದೆ ಬರಲಿದೆ ಎಡಿಟ್ ಆಯ್ಕೆ

ಫೇಸ್‌ಬುಕ್‌ನಲ್ಲಿ ನೀವು ಪೋಸ್ಟ್ ಮಾಡಿದ ಸಂದೇಶವನ್ನು ಮತ್ತೆ ಎಡಿಟ್ ಮಾಡುವ ಅವಕಾಶವಿದೆ. ಸದ್ಯ ವಾಟ್ಸಾಪಿನಲ್ಲಿ ಒಮ್ಮೆ ಸಂದೇಶ ಕಳುಹಿಸಿದರೆ ಅದನ್ನು ಮತ್ತೆ ತಿದ್ದುವ ಅವಕಾಶವಿಲ್ಲ. ಅದನ್ನು ಡಿಲೀಟ್ ಮಾಡಿ ಮತ್ತೆ ಬರೆಯಬೇಕಾದ ಅನಿವಾರ್ಯತೆಯಿದೆ. ಆ ಕಷ್ಟವನ್ನು ಅರ್ಥ ಮಾಡಿಕೊಂಡಿರುವ ವಾಟ್ಸಾಪ್ ಕಂಪನಿಯು ಎಡಿಟ್ ಮಾಡುವ ಅವಕಾಶ ನೀಡುವುದಾಗಿ ಘೋಷಿಸಿದ್ದು ಅದರ ಮೇಲೆ ಕೆಲಸ ಮಾಡುತ್ತಿದೆ. ಆ ಸೇವೆ ಜಾರಿಯಾದಲ್ಲಿ ಕಳುಹಿಸಿದ ಸಂದೇಶದಲ್ಲಿ ಏನಾದರೂ ಬದಲಾವಣೆ ಇದ್ದರೆ 15 ನಿಮಿಷದೊಳಗೆ ಎಡಿಟ್ ಮಾಡಬಹುದಾಗಿದೆ. ಇದೇ ರೀತಿಯ ಎಡಿಟ್ ಆಯ್ಕೆ ಟ್ವಿಟರ್‌ನಲ್ಲಿ ಸಹ ತರಲು ಕೆಲಸ ನಡೆಯುತ್ತಿದೆ ಎನ್ನಲಾಗಿದೆ.

ನೀವು ಯಾವುದೇ ಕಾಗುಣಿತ ಅಥವಾ ವ್ಯಾಕರಣದ ತಪ್ಪುಗಳನ್ನು ಸರಿಪಡಿಸಲು ಅಥವಾ ಕೆಲವು ಮಾಹಿತಿಯನ್ನು ಸೇರಿಸಲು ಅಥವಾ ತೆಗೆದುಹಾಕಲು ಬಯಸಿದರೆ ಎಡಿಟ್ ಮಾಡಬಹುದಾಗಿದೆ. ಈ ಹೊಸ ಫಿಚರ್ ಅನ್ನು ಟೆಸ್ಟಿಂಗ್ ಪ್ರೋಗ್ರಾಂನಲ್ಲಿ ನೋಂದಾಯಿಸಿದವರಿಗೆ ನೀಡಲಾಗಿದೆ ಎಂದು ವರದಿಯಾಗಿದೆ.

Undo ಆಯ್ಕೆ ಇರುವುದನ್ನು ಗಮನಿಸಿದ್ದೀರಾ?

ವಾಟ್ಸಾಪ್‌ನಲ್ಲಿ ಯಾವುದೇ ಕಾರಣಕ್ಕಾಗಿ ಸಂದೇಶವನ್ನು ನೀವು ಡಿಲೀಟ್ ಮಾಡಿದ್ದಲ್ಲಿ Undo ಆಯ್ಕೆ ಮೂಲಕ ಅದನ್ನು ವಾಪಸ್ ಪಡೆಯುವ ಸೌಲಭ್ಯವಿದೆ. ನೀವು ಸಂದೇಶ ಕಳಿಸಲು ಟೈಪ್ ಮಾಡುತ್ತಿರುವಾಗ ಬೈ ಮಿಸ್ಟೇಕ್  ಅಳಿಸಿಬಿಟ್ಟರೆ Undo ಆಯ್ಕೆ ಮೂಲಕ ವಾಪಸ್ ಪಡೆಯಬಹುದು. ಆದರೆ ಇದಕ್ಕೆ ನಿರ್ಧಿಷ್ಟ ಕಾಲಮಿತಿ ಇರುತ್ತದೆ ಎಂದು ವಾಟ್ಸಾಪ್ ಹೇಳಿದೆ. ನೀವು ಅಳಿಸಿದ ಸಂದೇಶವನ್ನು ನಿಗಧಿತ ಸಮಯದೊಳಗೆ ಮಾತ್ರ ಪಡೆಯಬಹುದು. ಇಲ್ಲದಿದ್ದರೆ ಅದು ಕಣ್ಮರೆಯಾಗಲಿದೆ.

ಇವಿಷ್ಟು ಸದ್ಯಕ್ಕೆ ವಾಟ್ಸಾಪ್ ನೀಡಿರುವ ಕೊಡುಗೆಗಳಾಗಿದ್ದು, ಅದಕ್ಕೆ ಯಾವುದೇ ದರ ನಿಗಧಿ ಮಾಡಿಲ್ಲ. ಮೆಟಾ ಮಾಲಿಕತ್ವದ ವಾಟ್ಸಾಪ್ ತನ್ನ ಸೇವೆಗಳಿಗೆ ಮುಂದೆ ದರ ನಿಗಧಿ ಮಾಡಲಿದೆ ಎಂಬ ಚರ್ಚೆಗಳು ಸಹ ನಡೆಯುತ್ತಿವೆ.

ಇದನ್ನೂ ಓದಿ: ವಾಟ್ಸಾಪ್ ಪೋಲ್ ರಚಿಸಬಹುದು: ಹೇಗೆಂದು ಇಲ್ಲಿ ತಿಳಿಯಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...