Homeಮುಖಪುಟವಿಡಿಯೋ ತಿರುಚಿ ತೇಜೋವಧೆ-ಮನೆ ಮೇಲೆ ದಾಳಿ: ವಿಕ್ರಮ ಟಿವಿ ವಿರುದ್ಧ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯ ದೂರು

ವಿಡಿಯೋ ತಿರುಚಿ ತೇಜೋವಧೆ-ಮನೆ ಮೇಲೆ ದಾಳಿ: ವಿಕ್ರಮ ಟಿವಿ ವಿರುದ್ಧ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯ ದೂರು

- Advertisement -
- Advertisement -

ಕ್ಲಬ್ ಹೌಸ್ ಚರ್ಚೆಯ ತಿರುಚಿದ ವಿಡಿಯೋ ಪ್ರಸಾರ ಮಾಡಿ ನನ್ನ ತೇಜೋವಧೆ ಮಾಡಲಾಗಿದೆ. ನನ್ನ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶೈಲಜಾ ಅಮರ್‌ನಾಥ್‌ರವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜೂನ್ 16ರ ಸಂಜೆ ಕ್ಲಬ್‌ಹೌಸ್‌ ಚರ್ಚೆಯಲ್ಲಿ ಶ್ರೀರಾಮ, ಸೀತೆ ಹಾಗೂ ಹನುಮಂತ ದೇವರನ್ನು ಅವಹೇಳನ ಮಾಡಿದ್ದೇನೆ ಎಂದು ನನ್ನ ಧ್ವನಿಯನ್ನು ಬಳಸಿ ವಿಕ್ರಮ ಟಿವಿ ತಿರುಚಿದ ವಿಡಿಯೋ ಪ್ರಕಟಿಸಿದೆ. ಅದನ್ನೆ ಬಿಜೆಪಿ ಪಕ್ಷವು ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿ ತೇಜೋವಧೆ ಮಾಡಿದೆ. ಇದರಿಂದಾಗಿ ದುಷ್ಕರ್ಮಿಗಳು ನನ್ನ ಮನೆ ಮೇಲೆ ದಾಳಿ ಮಾಡಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೂನ್ 16 ರಂದು ನಾನು ಯಾವುದೇ ಕ್ಲಬ್‌ಹೌಸ್ ಚರ್ಚೆಯಲ್ಲಿ ಭಾಗವಹಿಸಿಲ್ಲ. ಅಂದು ನಾನು ನನ್ನ ಪತಿಯೊಂದಿಗೆ ಬೆಂಗಳೂರಿನಲ್ಲಿದ್ದೆ. ಈ ಕುರಿತು ಯಾವುದೇ ತನಿಖೆಗೆ ಸಿದ್ದವಿದ್ದೇನೆ. ಆದರೆ ಪೊಲೀಸರು ತನಿಖೆ ಮಾಡುತ್ತಿಲ್ಲ ಏಕೆ? ನಾನು ದೇವರ ಭಕ್ತೆಯಾಗಿದ್ದು, ಯಾವುದೇ ಕಾರಣಕ್ಕೂ ದೇವರಿಗೆ ಅವಹೇಳನ ಮಾಡುವ ಹೆಣ್ಣುಮಗಳಲ್ಲ. ಶ್ರೀರಾಮ ಸೀತೆ, ಪುತ್ತೂರು ಮಹಾಲಿಂಗೇಶ್ವರ ದೇವರ ಸಹಿತ ಎಲ್ಲಾ ದೇವರುಗಳನ್ನು ನಂಬುವ ಹಾಗೂ ಹಿಂದೂ ಸಂಪ್ರದಾಯ-ಧಾರ್ಮಿಕ ಆಚರಣೆಗಳನ್ನು ಪಾಲಿಸುವ ಮಹಿಳೆಯಾಗಿದ್ದೇನೆ. ನಾನು ಹಿಂದು ಧರ್ಮೀಯಳು ಹೌದೋ, ಅಲ್ಲವೋ ಅನ್ನುವುದಕ್ಕೆ ಯಾವುದೊ ಯುಟ್ಯೂಬ್ ಚಾನೆಲ್ ಅಥವಾ ಯಾವುದೇ ಸಂಘಟನೆಗಳ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಕ್ಲಬ್ ಹೌಸ್‌ನಲ್ಲಿ ಹಿಂದೆ ನಡೆದ ಚರ್ಚೆಯನ್ನು ತಿರುಚಿ, ವಿಡಿಯೋ ಎಡಿಟ್ ಮಾಡಿ ಪ್ರಸಾರ ಮಾಡಿದ ವಿಕ್ರಮ ಯುಟ್ಯೂಬ್ ಚಾನೆಲ್‌ ಮತ್ತು ನಿರೂಪಕಿಯ ವಿರುದ್ದ ಪೊಲೀಸರಿಗೆ ದೂರು ನೀಡಿದ್ದೇನೆ. ನನ್ನ ಮನೆ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳ ವಿರುದ್ಧ ದೂರು ನೀಡಿದ್ದೇನೆ. ಆದರೆ ಪೊಲೀಸರು ಆರೋಪಿಗಳನ್ನು ಬಂಧಿಸುವ ಬದಲು ಸುಮ್ಮನಿದ್ದಾರೆ. ನನಗೆ 48 ಗಂಟೆಯೊಳಗೆ ನ್ಯಾಯ ಸಿಗದಿದ್ದರೆ ನನ್ನನ್ನು ಬಂಧಿಸಿ ಎಂದು ಪೊಲೀಸ್ ಠಾಣೆ ಎದುರು ಧರಣಿ ಕೂರುತ್ತೇನೆ. ಜಾಮೀನು ಕೂಡ ಪಡೆಯುವುದಿಲ್ಲ. ಇಡೀ ಪ್ರಕರಣದ ಸಮರ್ಪಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಹೋರಾಡುತ್ತೇನೆ ಎಂದರು.

ನಾನು ಅಧರ್ಮಿ ಅಲ್ಲವೇ ಅಲ್ಲ. ಅದೇ ರೀತಿ ನಾನು ಹೆಮ್ಮೆಯ ಕಾಂಗ್ರೆಸಿಗಳು ಸಹ ಹೌದು. ಸಮಾಜದಲ್ಲಿ ಸಮಾನತೆಗಾಗಿ ಹೋರಾಡುತ್ತೇನೆ. ಆದರೆ ಬಿಜೆಪಿ ಧರ್ಮದ ಹೆಸರಲ್ಲಿ ಅಧರ್ಮ ಮಾಡುತ್ತಿದೆ. ಬಿಜೆಪಿ ಓಟು ಗಿಟ್ಟಿಸುವ ನಿಟ್ಟಿನಲ್ಲಿ ಹಿಂದೂಪರ ಸಂಘಟನೆಗಳನ್ನು ನನ್ನ ವಿರುದ್ಧ ಎತ್ತಿಕಟ್ಟಿದೆ ಎಂದು ಕಿಡಿಕಾರಿದರು.

ಇನ್ನು ನಾನು ಕ್ಷಮೆಯಾಚಿಸಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ. ತಪ್ಪು ಮಾಡಿಲ್ಲದ ನಾನ್ಯಾಕೆ ಕ್ಷಮೆ ಕೇಳಬೇಕು? ತನ್ನ ಪಟಲಾಂ ಬಿಟ್ಟು ಮಹಿಳೆಯ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ, ನಾನು ನಿಧನ ಹೊಂದಿದ್ದೇನೆ ಎಂದು ಬ್ಯಾನರ್ ಹಾಕಿ ಕ್ಷೇತ್ರದ ವ್ಯಾಪ್ತಿಯ ಮಹಿಳೆಯೊಬ್ಬಳ ತೇಜೋವಧೆ ಮಾಡುತ್ತಿರುವಾಗ ಸೂಕ್ತ ಭದ್ರತೆ ಒದಗಿಸದ ಶಾಸಕರೇ ಕ್ಷಮೆ ಯಾಚಿಸಬೇಕು. ನಾನು ಯಾವುದೇ ದೇವರಿಗೆ ಅವಹೇಳನ ಮಾಡಿಲ್ಲ. ನನಗೆ ದೇವರ ಬೆಂಬಲ ಇದೆ. ಶ್ರೀರಾಮಚಂದ್ರನೇ ನನ್ನನ್ನು ರಕ್ಷಿಸುತ್ತಾನೆ ಎಂದರು.

ಇದನ್ನೂ ಓದಿ: ಬೆಂಗಳೂರು: ವಲಸೆ ಕಾರ್ಮಿಕರ ಮೇಲೆ ಪೊಲೀಸ್ ದೌರ್ಜನ್ಯ; ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಿಂದೂ ದೇವತೆಗಳಾದ ಶ್ರೀರಾಮ,ಸೀತೆ,ಹನುಮಂತ ಇವರುಗಳ ಬಗ್ಗೆ ಹೀಯಾಳಿಸಿದ ಇಂತ ಬೇವರ್ಸಿ ಹಂದಿಗಳನ್ನು ಸಿಕ್ಕ ಲ್ಲಿ ಗುಂಡುಹಿಟ್ಟು ಕೊಲ್ಲಬೇಕಿದೆ ,ಗುಲಾಮರ ತಳಿಗಳಿಂದ ಮಾತ್ರ ಇಂತ ಹೇಳಿಕೆಗಳು ಬರಲು ಸಾಧ್ಯ

  2. ಶೈಲಜಾ ಅಮರನಾಥ್ ನಿಮ್ಮ ನ್ಯಾಯಯುತ ಹೆಜ್ಜೆಗೆ ನಮ್ಮ ಬೆಂಬಲವಿದೆ , ರಾಮ ಸೀತೆ ಹನುಮಂತಪ್ಪ ರನ್ನು ಯಾರಿಗೂ ಸ್ವಂತಕ್ಕೆ ಬಿಟ್ಟು ಕೊಟ್ಟಿಲ್ಲ ,ಈ ದೇಶದ ಜನರ ನಡೆನುಡಿಗಳಲ್ಲಿ ಬೆರೆತುಹೋಗಿದ್ದಾರೆ .

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....