Homeಮುಖಪುಟವಿಡಿಯೋ ತಿರುಚಿ ತೇಜೋವಧೆ-ಮನೆ ಮೇಲೆ ದಾಳಿ: ವಿಕ್ರಮ ಟಿವಿ ವಿರುದ್ಧ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯ ದೂರು

ವಿಡಿಯೋ ತಿರುಚಿ ತೇಜೋವಧೆ-ಮನೆ ಮೇಲೆ ದಾಳಿ: ವಿಕ್ರಮ ಟಿವಿ ವಿರುದ್ಧ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯ ದೂರು

- Advertisement -
- Advertisement -

ಕ್ಲಬ್ ಹೌಸ್ ಚರ್ಚೆಯ ತಿರುಚಿದ ವಿಡಿಯೋ ಪ್ರಸಾರ ಮಾಡಿ ನನ್ನ ತೇಜೋವಧೆ ಮಾಡಲಾಗಿದೆ. ನನ್ನ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶೈಲಜಾ ಅಮರ್‌ನಾಥ್‌ರವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜೂನ್ 16ರ ಸಂಜೆ ಕ್ಲಬ್‌ಹೌಸ್‌ ಚರ್ಚೆಯಲ್ಲಿ ಶ್ರೀರಾಮ, ಸೀತೆ ಹಾಗೂ ಹನುಮಂತ ದೇವರನ್ನು ಅವಹೇಳನ ಮಾಡಿದ್ದೇನೆ ಎಂದು ನನ್ನ ಧ್ವನಿಯನ್ನು ಬಳಸಿ ವಿಕ್ರಮ ಟಿವಿ ತಿರುಚಿದ ವಿಡಿಯೋ ಪ್ರಕಟಿಸಿದೆ. ಅದನ್ನೆ ಬಿಜೆಪಿ ಪಕ್ಷವು ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿ ತೇಜೋವಧೆ ಮಾಡಿದೆ. ಇದರಿಂದಾಗಿ ದುಷ್ಕರ್ಮಿಗಳು ನನ್ನ ಮನೆ ಮೇಲೆ ದಾಳಿ ಮಾಡಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೂನ್ 16 ರಂದು ನಾನು ಯಾವುದೇ ಕ್ಲಬ್‌ಹೌಸ್ ಚರ್ಚೆಯಲ್ಲಿ ಭಾಗವಹಿಸಿಲ್ಲ. ಅಂದು ನಾನು ನನ್ನ ಪತಿಯೊಂದಿಗೆ ಬೆಂಗಳೂರಿನಲ್ಲಿದ್ದೆ. ಈ ಕುರಿತು ಯಾವುದೇ ತನಿಖೆಗೆ ಸಿದ್ದವಿದ್ದೇನೆ. ಆದರೆ ಪೊಲೀಸರು ತನಿಖೆ ಮಾಡುತ್ತಿಲ್ಲ ಏಕೆ? ನಾನು ದೇವರ ಭಕ್ತೆಯಾಗಿದ್ದು, ಯಾವುದೇ ಕಾರಣಕ್ಕೂ ದೇವರಿಗೆ ಅವಹೇಳನ ಮಾಡುವ ಹೆಣ್ಣುಮಗಳಲ್ಲ. ಶ್ರೀರಾಮ ಸೀತೆ, ಪುತ್ತೂರು ಮಹಾಲಿಂಗೇಶ್ವರ ದೇವರ ಸಹಿತ ಎಲ್ಲಾ ದೇವರುಗಳನ್ನು ನಂಬುವ ಹಾಗೂ ಹಿಂದೂ ಸಂಪ್ರದಾಯ-ಧಾರ್ಮಿಕ ಆಚರಣೆಗಳನ್ನು ಪಾಲಿಸುವ ಮಹಿಳೆಯಾಗಿದ್ದೇನೆ. ನಾನು ಹಿಂದು ಧರ್ಮೀಯಳು ಹೌದೋ, ಅಲ್ಲವೋ ಅನ್ನುವುದಕ್ಕೆ ಯಾವುದೊ ಯುಟ್ಯೂಬ್ ಚಾನೆಲ್ ಅಥವಾ ಯಾವುದೇ ಸಂಘಟನೆಗಳ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಕ್ಲಬ್ ಹೌಸ್‌ನಲ್ಲಿ ಹಿಂದೆ ನಡೆದ ಚರ್ಚೆಯನ್ನು ತಿರುಚಿ, ವಿಡಿಯೋ ಎಡಿಟ್ ಮಾಡಿ ಪ್ರಸಾರ ಮಾಡಿದ ವಿಕ್ರಮ ಯುಟ್ಯೂಬ್ ಚಾನೆಲ್‌ ಮತ್ತು ನಿರೂಪಕಿಯ ವಿರುದ್ದ ಪೊಲೀಸರಿಗೆ ದೂರು ನೀಡಿದ್ದೇನೆ. ನನ್ನ ಮನೆ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳ ವಿರುದ್ಧ ದೂರು ನೀಡಿದ್ದೇನೆ. ಆದರೆ ಪೊಲೀಸರು ಆರೋಪಿಗಳನ್ನು ಬಂಧಿಸುವ ಬದಲು ಸುಮ್ಮನಿದ್ದಾರೆ. ನನಗೆ 48 ಗಂಟೆಯೊಳಗೆ ನ್ಯಾಯ ಸಿಗದಿದ್ದರೆ ನನ್ನನ್ನು ಬಂಧಿಸಿ ಎಂದು ಪೊಲೀಸ್ ಠಾಣೆ ಎದುರು ಧರಣಿ ಕೂರುತ್ತೇನೆ. ಜಾಮೀನು ಕೂಡ ಪಡೆಯುವುದಿಲ್ಲ. ಇಡೀ ಪ್ರಕರಣದ ಸಮರ್ಪಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಹೋರಾಡುತ್ತೇನೆ ಎಂದರು.

ನಾನು ಅಧರ್ಮಿ ಅಲ್ಲವೇ ಅಲ್ಲ. ಅದೇ ರೀತಿ ನಾನು ಹೆಮ್ಮೆಯ ಕಾಂಗ್ರೆಸಿಗಳು ಸಹ ಹೌದು. ಸಮಾಜದಲ್ಲಿ ಸಮಾನತೆಗಾಗಿ ಹೋರಾಡುತ್ತೇನೆ. ಆದರೆ ಬಿಜೆಪಿ ಧರ್ಮದ ಹೆಸರಲ್ಲಿ ಅಧರ್ಮ ಮಾಡುತ್ತಿದೆ. ಬಿಜೆಪಿ ಓಟು ಗಿಟ್ಟಿಸುವ ನಿಟ್ಟಿನಲ್ಲಿ ಹಿಂದೂಪರ ಸಂಘಟನೆಗಳನ್ನು ನನ್ನ ವಿರುದ್ಧ ಎತ್ತಿಕಟ್ಟಿದೆ ಎಂದು ಕಿಡಿಕಾರಿದರು.

ಇನ್ನು ನಾನು ಕ್ಷಮೆಯಾಚಿಸಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ. ತಪ್ಪು ಮಾಡಿಲ್ಲದ ನಾನ್ಯಾಕೆ ಕ್ಷಮೆ ಕೇಳಬೇಕು? ತನ್ನ ಪಟಲಾಂ ಬಿಟ್ಟು ಮಹಿಳೆಯ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ, ನಾನು ನಿಧನ ಹೊಂದಿದ್ದೇನೆ ಎಂದು ಬ್ಯಾನರ್ ಹಾಕಿ ಕ್ಷೇತ್ರದ ವ್ಯಾಪ್ತಿಯ ಮಹಿಳೆಯೊಬ್ಬಳ ತೇಜೋವಧೆ ಮಾಡುತ್ತಿರುವಾಗ ಸೂಕ್ತ ಭದ್ರತೆ ಒದಗಿಸದ ಶಾಸಕರೇ ಕ್ಷಮೆ ಯಾಚಿಸಬೇಕು. ನಾನು ಯಾವುದೇ ದೇವರಿಗೆ ಅವಹೇಳನ ಮಾಡಿಲ್ಲ. ನನಗೆ ದೇವರ ಬೆಂಬಲ ಇದೆ. ಶ್ರೀರಾಮಚಂದ್ರನೇ ನನ್ನನ್ನು ರಕ್ಷಿಸುತ್ತಾನೆ ಎಂದರು.

ಇದನ್ನೂ ಓದಿ: ಬೆಂಗಳೂರು: ವಲಸೆ ಕಾರ್ಮಿಕರ ಮೇಲೆ ಪೊಲೀಸ್ ದೌರ್ಜನ್ಯ; ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಿಂದೂ ದೇವತೆಗಳಾದ ಶ್ರೀರಾಮ,ಸೀತೆ,ಹನುಮಂತ ಇವರುಗಳ ಬಗ್ಗೆ ಹೀಯಾಳಿಸಿದ ಇಂತ ಬೇವರ್ಸಿ ಹಂದಿಗಳನ್ನು ಸಿಕ್ಕ ಲ್ಲಿ ಗುಂಡುಹಿಟ್ಟು ಕೊಲ್ಲಬೇಕಿದೆ ,ಗುಲಾಮರ ತಳಿಗಳಿಂದ ಮಾತ್ರ ಇಂತ ಹೇಳಿಕೆಗಳು ಬರಲು ಸಾಧ್ಯ

  2. ಶೈಲಜಾ ಅಮರನಾಥ್ ನಿಮ್ಮ ನ್ಯಾಯಯುತ ಹೆಜ್ಜೆಗೆ ನಮ್ಮ ಬೆಂಬಲವಿದೆ , ರಾಮ ಸೀತೆ ಹನುಮಂತಪ್ಪ ರನ್ನು ಯಾರಿಗೂ ಸ್ವಂತಕ್ಕೆ ಬಿಟ್ಟು ಕೊಟ್ಟಿಲ್ಲ ,ಈ ದೇಶದ ಜನರ ನಡೆನುಡಿಗಳಲ್ಲಿ ಬೆರೆತುಹೋಗಿದ್ದಾರೆ .

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...