Homeಮುಖಪುಟವಿಡಿಯೋ ತಿರುಚಿ ತೇಜೋವಧೆ-ಮನೆ ಮೇಲೆ ದಾಳಿ: ವಿಕ್ರಮ ಟಿವಿ ವಿರುದ್ಧ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯ ದೂರು

ವಿಡಿಯೋ ತಿರುಚಿ ತೇಜೋವಧೆ-ಮನೆ ಮೇಲೆ ದಾಳಿ: ವಿಕ್ರಮ ಟಿವಿ ವಿರುದ್ಧ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯ ದೂರು

- Advertisement -
- Advertisement -

ಕ್ಲಬ್ ಹೌಸ್ ಚರ್ಚೆಯ ತಿರುಚಿದ ವಿಡಿಯೋ ಪ್ರಸಾರ ಮಾಡಿ ನನ್ನ ತೇಜೋವಧೆ ಮಾಡಲಾಗಿದೆ. ನನ್ನ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶೈಲಜಾ ಅಮರ್‌ನಾಥ್‌ರವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜೂನ್ 16ರ ಸಂಜೆ ಕ್ಲಬ್‌ಹೌಸ್‌ ಚರ್ಚೆಯಲ್ಲಿ ಶ್ರೀರಾಮ, ಸೀತೆ ಹಾಗೂ ಹನುಮಂತ ದೇವರನ್ನು ಅವಹೇಳನ ಮಾಡಿದ್ದೇನೆ ಎಂದು ನನ್ನ ಧ್ವನಿಯನ್ನು ಬಳಸಿ ವಿಕ್ರಮ ಟಿವಿ ತಿರುಚಿದ ವಿಡಿಯೋ ಪ್ರಕಟಿಸಿದೆ. ಅದನ್ನೆ ಬಿಜೆಪಿ ಪಕ್ಷವು ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿ ತೇಜೋವಧೆ ಮಾಡಿದೆ. ಇದರಿಂದಾಗಿ ದುಷ್ಕರ್ಮಿಗಳು ನನ್ನ ಮನೆ ಮೇಲೆ ದಾಳಿ ಮಾಡಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೂನ್ 16 ರಂದು ನಾನು ಯಾವುದೇ ಕ್ಲಬ್‌ಹೌಸ್ ಚರ್ಚೆಯಲ್ಲಿ ಭಾಗವಹಿಸಿಲ್ಲ. ಅಂದು ನಾನು ನನ್ನ ಪತಿಯೊಂದಿಗೆ ಬೆಂಗಳೂರಿನಲ್ಲಿದ್ದೆ. ಈ ಕುರಿತು ಯಾವುದೇ ತನಿಖೆಗೆ ಸಿದ್ದವಿದ್ದೇನೆ. ಆದರೆ ಪೊಲೀಸರು ತನಿಖೆ ಮಾಡುತ್ತಿಲ್ಲ ಏಕೆ? ನಾನು ದೇವರ ಭಕ್ತೆಯಾಗಿದ್ದು, ಯಾವುದೇ ಕಾರಣಕ್ಕೂ ದೇವರಿಗೆ ಅವಹೇಳನ ಮಾಡುವ ಹೆಣ್ಣುಮಗಳಲ್ಲ. ಶ್ರೀರಾಮ ಸೀತೆ, ಪುತ್ತೂರು ಮಹಾಲಿಂಗೇಶ್ವರ ದೇವರ ಸಹಿತ ಎಲ್ಲಾ ದೇವರುಗಳನ್ನು ನಂಬುವ ಹಾಗೂ ಹಿಂದೂ ಸಂಪ್ರದಾಯ-ಧಾರ್ಮಿಕ ಆಚರಣೆಗಳನ್ನು ಪಾಲಿಸುವ ಮಹಿಳೆಯಾಗಿದ್ದೇನೆ. ನಾನು ಹಿಂದು ಧರ್ಮೀಯಳು ಹೌದೋ, ಅಲ್ಲವೋ ಅನ್ನುವುದಕ್ಕೆ ಯಾವುದೊ ಯುಟ್ಯೂಬ್ ಚಾನೆಲ್ ಅಥವಾ ಯಾವುದೇ ಸಂಘಟನೆಗಳ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಕ್ಲಬ್ ಹೌಸ್‌ನಲ್ಲಿ ಹಿಂದೆ ನಡೆದ ಚರ್ಚೆಯನ್ನು ತಿರುಚಿ, ವಿಡಿಯೋ ಎಡಿಟ್ ಮಾಡಿ ಪ್ರಸಾರ ಮಾಡಿದ ವಿಕ್ರಮ ಯುಟ್ಯೂಬ್ ಚಾನೆಲ್‌ ಮತ್ತು ನಿರೂಪಕಿಯ ವಿರುದ್ದ ಪೊಲೀಸರಿಗೆ ದೂರು ನೀಡಿದ್ದೇನೆ. ನನ್ನ ಮನೆ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳ ವಿರುದ್ಧ ದೂರು ನೀಡಿದ್ದೇನೆ. ಆದರೆ ಪೊಲೀಸರು ಆರೋಪಿಗಳನ್ನು ಬಂಧಿಸುವ ಬದಲು ಸುಮ್ಮನಿದ್ದಾರೆ. ನನಗೆ 48 ಗಂಟೆಯೊಳಗೆ ನ್ಯಾಯ ಸಿಗದಿದ್ದರೆ ನನ್ನನ್ನು ಬಂಧಿಸಿ ಎಂದು ಪೊಲೀಸ್ ಠಾಣೆ ಎದುರು ಧರಣಿ ಕೂರುತ್ತೇನೆ. ಜಾಮೀನು ಕೂಡ ಪಡೆಯುವುದಿಲ್ಲ. ಇಡೀ ಪ್ರಕರಣದ ಸಮರ್ಪಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಹೋರಾಡುತ್ತೇನೆ ಎಂದರು.

ನಾನು ಅಧರ್ಮಿ ಅಲ್ಲವೇ ಅಲ್ಲ. ಅದೇ ರೀತಿ ನಾನು ಹೆಮ್ಮೆಯ ಕಾಂಗ್ರೆಸಿಗಳು ಸಹ ಹೌದು. ಸಮಾಜದಲ್ಲಿ ಸಮಾನತೆಗಾಗಿ ಹೋರಾಡುತ್ತೇನೆ. ಆದರೆ ಬಿಜೆಪಿ ಧರ್ಮದ ಹೆಸರಲ್ಲಿ ಅಧರ್ಮ ಮಾಡುತ್ತಿದೆ. ಬಿಜೆಪಿ ಓಟು ಗಿಟ್ಟಿಸುವ ನಿಟ್ಟಿನಲ್ಲಿ ಹಿಂದೂಪರ ಸಂಘಟನೆಗಳನ್ನು ನನ್ನ ವಿರುದ್ಧ ಎತ್ತಿಕಟ್ಟಿದೆ ಎಂದು ಕಿಡಿಕಾರಿದರು.

ಇನ್ನು ನಾನು ಕ್ಷಮೆಯಾಚಿಸಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ. ತಪ್ಪು ಮಾಡಿಲ್ಲದ ನಾನ್ಯಾಕೆ ಕ್ಷಮೆ ಕೇಳಬೇಕು? ತನ್ನ ಪಟಲಾಂ ಬಿಟ್ಟು ಮಹಿಳೆಯ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ, ನಾನು ನಿಧನ ಹೊಂದಿದ್ದೇನೆ ಎಂದು ಬ್ಯಾನರ್ ಹಾಕಿ ಕ್ಷೇತ್ರದ ವ್ಯಾಪ್ತಿಯ ಮಹಿಳೆಯೊಬ್ಬಳ ತೇಜೋವಧೆ ಮಾಡುತ್ತಿರುವಾಗ ಸೂಕ್ತ ಭದ್ರತೆ ಒದಗಿಸದ ಶಾಸಕರೇ ಕ್ಷಮೆ ಯಾಚಿಸಬೇಕು. ನಾನು ಯಾವುದೇ ದೇವರಿಗೆ ಅವಹೇಳನ ಮಾಡಿಲ್ಲ. ನನಗೆ ದೇವರ ಬೆಂಬಲ ಇದೆ. ಶ್ರೀರಾಮಚಂದ್ರನೇ ನನ್ನನ್ನು ರಕ್ಷಿಸುತ್ತಾನೆ ಎಂದರು.

ಇದನ್ನೂ ಓದಿ: ಬೆಂಗಳೂರು: ವಲಸೆ ಕಾರ್ಮಿಕರ ಮೇಲೆ ಪೊಲೀಸ್ ದೌರ್ಜನ್ಯ; ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಿಂದೂ ದೇವತೆಗಳಾದ ಶ್ರೀರಾಮ,ಸೀತೆ,ಹನುಮಂತ ಇವರುಗಳ ಬಗ್ಗೆ ಹೀಯಾಳಿಸಿದ ಇಂತ ಬೇವರ್ಸಿ ಹಂದಿಗಳನ್ನು ಸಿಕ್ಕ ಲ್ಲಿ ಗುಂಡುಹಿಟ್ಟು ಕೊಲ್ಲಬೇಕಿದೆ ,ಗುಲಾಮರ ತಳಿಗಳಿಂದ ಮಾತ್ರ ಇಂತ ಹೇಳಿಕೆಗಳು ಬರಲು ಸಾಧ್ಯ

  2. ಶೈಲಜಾ ಅಮರನಾಥ್ ನಿಮ್ಮ ನ್ಯಾಯಯುತ ಹೆಜ್ಜೆಗೆ ನಮ್ಮ ಬೆಂಬಲವಿದೆ , ರಾಮ ಸೀತೆ ಹನುಮಂತಪ್ಪ ರನ್ನು ಯಾರಿಗೂ ಸ್ವಂತಕ್ಕೆ ಬಿಟ್ಟು ಕೊಟ್ಟಿಲ್ಲ ,ಈ ದೇಶದ ಜನರ ನಡೆನುಡಿಗಳಲ್ಲಿ ಬೆರೆತುಹೋಗಿದ್ದಾರೆ .

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....