Homeಮುಖಪುಟವಿಡಿಯೋ ತಿರುಚಿ ತೇಜೋವಧೆ-ಮನೆ ಮೇಲೆ ದಾಳಿ: ವಿಕ್ರಮ ಟಿವಿ ವಿರುದ್ಧ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯ ದೂರು

ವಿಡಿಯೋ ತಿರುಚಿ ತೇಜೋವಧೆ-ಮನೆ ಮೇಲೆ ದಾಳಿ: ವಿಕ್ರಮ ಟಿವಿ ವಿರುದ್ಧ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯ ದೂರು

- Advertisement -
- Advertisement -

ಕ್ಲಬ್ ಹೌಸ್ ಚರ್ಚೆಯ ತಿರುಚಿದ ವಿಡಿಯೋ ಪ್ರಸಾರ ಮಾಡಿ ನನ್ನ ತೇಜೋವಧೆ ಮಾಡಲಾಗಿದೆ. ನನ್ನ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶೈಲಜಾ ಅಮರ್‌ನಾಥ್‌ರವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜೂನ್ 16ರ ಸಂಜೆ ಕ್ಲಬ್‌ಹೌಸ್‌ ಚರ್ಚೆಯಲ್ಲಿ ಶ್ರೀರಾಮ, ಸೀತೆ ಹಾಗೂ ಹನುಮಂತ ದೇವರನ್ನು ಅವಹೇಳನ ಮಾಡಿದ್ದೇನೆ ಎಂದು ನನ್ನ ಧ್ವನಿಯನ್ನು ಬಳಸಿ ವಿಕ್ರಮ ಟಿವಿ ತಿರುಚಿದ ವಿಡಿಯೋ ಪ್ರಕಟಿಸಿದೆ. ಅದನ್ನೆ ಬಿಜೆಪಿ ಪಕ್ಷವು ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿ ತೇಜೋವಧೆ ಮಾಡಿದೆ. ಇದರಿಂದಾಗಿ ದುಷ್ಕರ್ಮಿಗಳು ನನ್ನ ಮನೆ ಮೇಲೆ ದಾಳಿ ಮಾಡಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೂನ್ 16 ರಂದು ನಾನು ಯಾವುದೇ ಕ್ಲಬ್‌ಹೌಸ್ ಚರ್ಚೆಯಲ್ಲಿ ಭಾಗವಹಿಸಿಲ್ಲ. ಅಂದು ನಾನು ನನ್ನ ಪತಿಯೊಂದಿಗೆ ಬೆಂಗಳೂರಿನಲ್ಲಿದ್ದೆ. ಈ ಕುರಿತು ಯಾವುದೇ ತನಿಖೆಗೆ ಸಿದ್ದವಿದ್ದೇನೆ. ಆದರೆ ಪೊಲೀಸರು ತನಿಖೆ ಮಾಡುತ್ತಿಲ್ಲ ಏಕೆ? ನಾನು ದೇವರ ಭಕ್ತೆಯಾಗಿದ್ದು, ಯಾವುದೇ ಕಾರಣಕ್ಕೂ ದೇವರಿಗೆ ಅವಹೇಳನ ಮಾಡುವ ಹೆಣ್ಣುಮಗಳಲ್ಲ. ಶ್ರೀರಾಮ ಸೀತೆ, ಪುತ್ತೂರು ಮಹಾಲಿಂಗೇಶ್ವರ ದೇವರ ಸಹಿತ ಎಲ್ಲಾ ದೇವರುಗಳನ್ನು ನಂಬುವ ಹಾಗೂ ಹಿಂದೂ ಸಂಪ್ರದಾಯ-ಧಾರ್ಮಿಕ ಆಚರಣೆಗಳನ್ನು ಪಾಲಿಸುವ ಮಹಿಳೆಯಾಗಿದ್ದೇನೆ. ನಾನು ಹಿಂದು ಧರ್ಮೀಯಳು ಹೌದೋ, ಅಲ್ಲವೋ ಅನ್ನುವುದಕ್ಕೆ ಯಾವುದೊ ಯುಟ್ಯೂಬ್ ಚಾನೆಲ್ ಅಥವಾ ಯಾವುದೇ ಸಂಘಟನೆಗಳ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಕ್ಲಬ್ ಹೌಸ್‌ನಲ್ಲಿ ಹಿಂದೆ ನಡೆದ ಚರ್ಚೆಯನ್ನು ತಿರುಚಿ, ವಿಡಿಯೋ ಎಡಿಟ್ ಮಾಡಿ ಪ್ರಸಾರ ಮಾಡಿದ ವಿಕ್ರಮ ಯುಟ್ಯೂಬ್ ಚಾನೆಲ್‌ ಮತ್ತು ನಿರೂಪಕಿಯ ವಿರುದ್ದ ಪೊಲೀಸರಿಗೆ ದೂರು ನೀಡಿದ್ದೇನೆ. ನನ್ನ ಮನೆ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳ ವಿರುದ್ಧ ದೂರು ನೀಡಿದ್ದೇನೆ. ಆದರೆ ಪೊಲೀಸರು ಆರೋಪಿಗಳನ್ನು ಬಂಧಿಸುವ ಬದಲು ಸುಮ್ಮನಿದ್ದಾರೆ. ನನಗೆ 48 ಗಂಟೆಯೊಳಗೆ ನ್ಯಾಯ ಸಿಗದಿದ್ದರೆ ನನ್ನನ್ನು ಬಂಧಿಸಿ ಎಂದು ಪೊಲೀಸ್ ಠಾಣೆ ಎದುರು ಧರಣಿ ಕೂರುತ್ತೇನೆ. ಜಾಮೀನು ಕೂಡ ಪಡೆಯುವುದಿಲ್ಲ. ಇಡೀ ಪ್ರಕರಣದ ಸಮರ್ಪಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಹೋರಾಡುತ್ತೇನೆ ಎಂದರು.

ನಾನು ಅಧರ್ಮಿ ಅಲ್ಲವೇ ಅಲ್ಲ. ಅದೇ ರೀತಿ ನಾನು ಹೆಮ್ಮೆಯ ಕಾಂಗ್ರೆಸಿಗಳು ಸಹ ಹೌದು. ಸಮಾಜದಲ್ಲಿ ಸಮಾನತೆಗಾಗಿ ಹೋರಾಡುತ್ತೇನೆ. ಆದರೆ ಬಿಜೆಪಿ ಧರ್ಮದ ಹೆಸರಲ್ಲಿ ಅಧರ್ಮ ಮಾಡುತ್ತಿದೆ. ಬಿಜೆಪಿ ಓಟು ಗಿಟ್ಟಿಸುವ ನಿಟ್ಟಿನಲ್ಲಿ ಹಿಂದೂಪರ ಸಂಘಟನೆಗಳನ್ನು ನನ್ನ ವಿರುದ್ಧ ಎತ್ತಿಕಟ್ಟಿದೆ ಎಂದು ಕಿಡಿಕಾರಿದರು.

ಇನ್ನು ನಾನು ಕ್ಷಮೆಯಾಚಿಸಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ. ತಪ್ಪು ಮಾಡಿಲ್ಲದ ನಾನ್ಯಾಕೆ ಕ್ಷಮೆ ಕೇಳಬೇಕು? ತನ್ನ ಪಟಲಾಂ ಬಿಟ್ಟು ಮಹಿಳೆಯ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ, ನಾನು ನಿಧನ ಹೊಂದಿದ್ದೇನೆ ಎಂದು ಬ್ಯಾನರ್ ಹಾಕಿ ಕ್ಷೇತ್ರದ ವ್ಯಾಪ್ತಿಯ ಮಹಿಳೆಯೊಬ್ಬಳ ತೇಜೋವಧೆ ಮಾಡುತ್ತಿರುವಾಗ ಸೂಕ್ತ ಭದ್ರತೆ ಒದಗಿಸದ ಶಾಸಕರೇ ಕ್ಷಮೆ ಯಾಚಿಸಬೇಕು. ನಾನು ಯಾವುದೇ ದೇವರಿಗೆ ಅವಹೇಳನ ಮಾಡಿಲ್ಲ. ನನಗೆ ದೇವರ ಬೆಂಬಲ ಇದೆ. ಶ್ರೀರಾಮಚಂದ್ರನೇ ನನ್ನನ್ನು ರಕ್ಷಿಸುತ್ತಾನೆ ಎಂದರು.

ಇದನ್ನೂ ಓದಿ: ಬೆಂಗಳೂರು: ವಲಸೆ ಕಾರ್ಮಿಕರ ಮೇಲೆ ಪೊಲೀಸ್ ದೌರ್ಜನ್ಯ; ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಹಿಂದೂ ದೇವತೆಗಳಾದ ಶ್ರೀರಾಮ,ಸೀತೆ,ಹನುಮಂತ ಇವರುಗಳ ಬಗ್ಗೆ ಹೀಯಾಳಿಸಿದ ಇಂತ ಬೇವರ್ಸಿ ಹಂದಿಗಳನ್ನು ಸಿಕ್ಕ ಲ್ಲಿ ಗುಂಡುಹಿಟ್ಟು ಕೊಲ್ಲಬೇಕಿದೆ ,ಗುಲಾಮರ ತಳಿಗಳಿಂದ ಮಾತ್ರ ಇಂತ ಹೇಳಿಕೆಗಳು ಬರಲು ಸಾಧ್ಯ

  2. ಶೈಲಜಾ ಅಮರನಾಥ್ ನಿಮ್ಮ ನ್ಯಾಯಯುತ ಹೆಜ್ಜೆಗೆ ನಮ್ಮ ಬೆಂಬಲವಿದೆ , ರಾಮ ಸೀತೆ ಹನುಮಂತಪ್ಪ ರನ್ನು ಯಾರಿಗೂ ಸ್ವಂತಕ್ಕೆ ಬಿಟ್ಟು ಕೊಟ್ಟಿಲ್ಲ ,ಈ ದೇಶದ ಜನರ ನಡೆನುಡಿಗಳಲ್ಲಿ ಬೆರೆತುಹೋಗಿದ್ದಾರೆ .

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...