Homeಕರ್ನಾಟಕಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ...

ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

- Advertisement -
- Advertisement -

ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ ಅವರನ್ನು ‘ನಕ್ಸಲ್ ಬೆಂಬಲಿಗ’ ಎಂಬ ಶಿರ್ಷಿಕೆ ಅಡಿಯಲ್ಲಿ ವರದಿ ಪ್ರಕಟಿಸಿದ್ದ ಸಂಘ ಪರಿವಾರ ಬೆಂಬಲಿಗ ದಿನ ಪತ್ರಿಕೆಯಾದ ‘ಹೊಸದಿಗಂತ’ದ ಸಂಪಾದಕ ದು.ಗು. ಲಕ್ಷ್ಮಣ ಹಾಗೂ ಪ್ರಕಾಶಕ ಎಸ್‌.ಶಾಂತಾರಾಮ್‌ ಅವರಿಗೆ ಶೃಂಗೇರಿ ಜೆ.ಎಂ.ಎಫ್‌.ಸಿ ನ್ಯಾಯಾಲಯ ನೀಡಿದ್ದ ದಂಡ ಹಾಗೂ ಜೈಲು ಶಿಕ್ಷಯನ್ನು ಜಿಲ್ಲಾ ಸತ್ರ ನ್ಯಾಯಾಲಯ ಎತ್ತಿ ಹಿಡಿದಿದ್ದು ಶಿಕ್ಷೆಯನ್ನು ಖಾಯಂಗೊಳಿಸಿ ಆದೇಶ ನೀಡಿದೆ.

ಹೊಸ ದಿಗಂತ ಪತ್ರಿಕೆಯು 2007 ರ ಜುಲೈ 3 ರಂದು ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ ಅವರ ಚಿತ್ರವನ್ನು ಪ್ರಕಟಿಸಿ, ‘ನಕ್ಸಲ್‌ ಬೆಂಬಲಿಗ’ ಎಂಬ ಶಿರ್ಷಿಕೆಯಲ್ಲಿ ಸುಳ್ಳು ಮತ್ತು ಮಾನಹಾನಿ ವರದಿಯನ್ನು  ಪ್ರಕಟಿಸಿತ್ತು. ಇದರ ವಿರುದ್ದ ಸಾಹಿತಿ ವಿಠಲ ಹೆಗ್ಗಡೆ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನ ಮತ್ತು ಶೃಂಗೇರಿಯಲ್ಲಿ ತಾಲಿಬಾನಿಗಳು – ಬಿ.ಚಂದ್ರೇಗೌಡ

ಪ್ರಕರಣದ ವಿಚಾರಣೆ ನಡೆಸಿದ ಶೃಂಗೇರಿ ಜೆ.ಎಂ.ಎಫ್‌.ಸಿ ನ್ಯಾಯಾಲಯವು 2019 ಜನವರಿಯಂದು ಆರೋಪಿಗಳನ್ನು ತಪ್ಪಿತಸ್ಥರು ಎಂದು ಘೋಷಿಸಿತ್ತು. ಆದರೆ ಈ ತೀರ್ಪಿನ ವಿರುದ್ದ ಅವರು ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಇದೀಗ ಜಿಲ್ಲಾ ಸತ್ರ ನ್ಯಾಯಾಲಯ ಶೃಂಗೇರಿ ನ್ಯಾಯಾಲಯ ನೀಡಿರುವ ತೀರ್ಪನ್ನು ಎತ್ತಿ ಹಿಡಿದಿದ್ದು, ಪತ್ರಿಕೆಯ ಸಂಪಾದಕ ದು.ಗು ಲಕ್ಷ್ಮಣ ಹಾಗೂ ಪ್ರಕಾಶಕ ಎಸ್. ಶಾಂತಾರಾಮ್‌ ಅವರಿಗೆ 40 ಸಾವಿರ ದಂಡ ಮತ್ತು ಏಳು ತಿಂಗಳ ಸಜೆಯನ್ನು ಖಾಯಂಗೊಳಿಸಿದೆ. ಸಾಹಿತಿ ವಿಠಲ ಹೆಗ್ಗಡೆ ಅವರ ಚಾರಿತ್ಯ್ರ ವಧೆ ಮಾಡಿರುವುದರಿಂದ ಅವರಿಗೆ 35 ಸಾವಿರ ಹಾಗೂ ಸರ್ಕಾರಕ್ಕೆ 5 ಸಾವಿರ ಪಾವತಿಸಬೇಕೆಂದು, ತಪ್ಪಿದ್ದಲ್ಲಿ ಏಳು ತಿಂಗಳ ಜೈಲು ಶಿಕ್ಷೆಗೆ ಒಳಗಾಗಬೇಕೆಂದು ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನ: ಕಲ್ಕುಳಿ ವಿಠಲ ಹೆಗಡೆಯವರ ಅಧ್ಯಕ್ಷ ಭಾಷಣದ ಆಯ್ದ ಭಾಗ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ, “ನಮ್ಮ ಜನಪರ ಚಳವಳಿಗಳನ್ನು ಹತ್ತಿಕ್ಕುವ ದುರುದ್ದೇಶದಿಂದ ಹಾಗೂ ಸಾರ್ವಜನಿಕರಲ್ಲಿ ನಮ್ಮ ಬಗ್ಗೆ ಅಗೌರವ ಉಂಟು ಮಾಡಿ, ನನ್ನನ್ನು ಹಾಗೂ ನನ್ನ ಚಳುವಳಿಗಳನ್ನು ಮುಗಿಸುವ ಷಡ್ಯಂತ್ರ ರೂಪಿಸಿದ ಪತ್ರಕರ್ತರಿಬ್ಬರಿಗೆ ತಕ್ಕ ಶಿಕ್ಷೆಯಾಗಿದೆ. ನಮ್ಮ ಹೋರಾಟವು ಎಂದೆಂದಿಗೂ ಪ್ರಜಾತಾಂತ್ರಿಕ ಮತ್ತು ಕಾನೂನಿನ ಚೌಕಟ್ಟಿನಲ್ಲಿಯೆ ನಡೆಯುತ್ತಿರುವುದಕ್ಕೆ ಸಿಕ್ಕ ಜಯ ಇದಾಗಿದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ

“ಕಳೆದ ವರ್ಷ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಾಗಲೂ ಶಾಸಕ ಸಿ.ಟಿ. ರವಿ ಹಾಗೂ ಅವರ ಪಕ್ಷ ಕೂಡಾ ಇದೇ ಆರೋಪವನ್ನು ಮಾಡಿತ್ತು. ಅವರೆಲ್ಲರಿಗೂ ಈ ತೀರ್ಪು ಎಚ್ಚರಿಕೆಯಾಗಿ ಬಂದಿದೆ” ಎಂದು ವಿಠಲ ಹೆಗ್ಗಡೆ ತಿಳಿಸಿದ್ದಾರೆ.

ಇದನ್ನೂ ಓದಿ: ಶೃಂಗೇರಿ ಮಠದಲ್ಲೊಂದು ಮುಚ್ಚಿಹೋದ ನಿರ್ಭಯ ಪ್ರಕರಣ! – ಬಿ.ಚಂದ್ರೇಗೌಡ

ವಿಡಿಯೋ ನೋಡಿ: ಸಾರಿಗೆ ನೌಕರರು ಸೇರಿದಂತೆ ಯಾರೆಲ್ಲ ಹೋರಾಟ ಮಾಡುತ್ತಿದ್ದಾರೋ ಅವರ ಜತೆ ಕಾಂಗ್ರೆಸ್‌ ನಿಲ್ಲಲಿದೆ: ಡಿಕೆ ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...