Homeಕರ್ನಾಟಕಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ...

ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

- Advertisement -
- Advertisement -

ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ ಅವರನ್ನು ‘ನಕ್ಸಲ್ ಬೆಂಬಲಿಗ’ ಎಂಬ ಶಿರ್ಷಿಕೆ ಅಡಿಯಲ್ಲಿ ವರದಿ ಪ್ರಕಟಿಸಿದ್ದ ಸಂಘ ಪರಿವಾರ ಬೆಂಬಲಿಗ ದಿನ ಪತ್ರಿಕೆಯಾದ ‘ಹೊಸದಿಗಂತ’ದ ಸಂಪಾದಕ ದು.ಗು. ಲಕ್ಷ್ಮಣ ಹಾಗೂ ಪ್ರಕಾಶಕ ಎಸ್‌.ಶಾಂತಾರಾಮ್‌ ಅವರಿಗೆ ಶೃಂಗೇರಿ ಜೆ.ಎಂ.ಎಫ್‌.ಸಿ ನ್ಯಾಯಾಲಯ ನೀಡಿದ್ದ ದಂಡ ಹಾಗೂ ಜೈಲು ಶಿಕ್ಷಯನ್ನು ಜಿಲ್ಲಾ ಸತ್ರ ನ್ಯಾಯಾಲಯ ಎತ್ತಿ ಹಿಡಿದಿದ್ದು ಶಿಕ್ಷೆಯನ್ನು ಖಾಯಂಗೊಳಿಸಿ ಆದೇಶ ನೀಡಿದೆ.

ಹೊಸ ದಿಗಂತ ಪತ್ರಿಕೆಯು 2007 ರ ಜುಲೈ 3 ರಂದು ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ ಅವರ ಚಿತ್ರವನ್ನು ಪ್ರಕಟಿಸಿ, ‘ನಕ್ಸಲ್‌ ಬೆಂಬಲಿಗ’ ಎಂಬ ಶಿರ್ಷಿಕೆಯಲ್ಲಿ ಸುಳ್ಳು ಮತ್ತು ಮಾನಹಾನಿ ವರದಿಯನ್ನು  ಪ್ರಕಟಿಸಿತ್ತು. ಇದರ ವಿರುದ್ದ ಸಾಹಿತಿ ವಿಠಲ ಹೆಗ್ಗಡೆ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನ ಮತ್ತು ಶೃಂಗೇರಿಯಲ್ಲಿ ತಾಲಿಬಾನಿಗಳು – ಬಿ.ಚಂದ್ರೇಗೌಡ

ಪ್ರಕರಣದ ವಿಚಾರಣೆ ನಡೆಸಿದ ಶೃಂಗೇರಿ ಜೆ.ಎಂ.ಎಫ್‌.ಸಿ ನ್ಯಾಯಾಲಯವು 2019 ಜನವರಿಯಂದು ಆರೋಪಿಗಳನ್ನು ತಪ್ಪಿತಸ್ಥರು ಎಂದು ಘೋಷಿಸಿತ್ತು. ಆದರೆ ಈ ತೀರ್ಪಿನ ವಿರುದ್ದ ಅವರು ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಇದೀಗ ಜಿಲ್ಲಾ ಸತ್ರ ನ್ಯಾಯಾಲಯ ಶೃಂಗೇರಿ ನ್ಯಾಯಾಲಯ ನೀಡಿರುವ ತೀರ್ಪನ್ನು ಎತ್ತಿ ಹಿಡಿದಿದ್ದು, ಪತ್ರಿಕೆಯ ಸಂಪಾದಕ ದು.ಗು ಲಕ್ಷ್ಮಣ ಹಾಗೂ ಪ್ರಕಾಶಕ ಎಸ್. ಶಾಂತಾರಾಮ್‌ ಅವರಿಗೆ 40 ಸಾವಿರ ದಂಡ ಮತ್ತು ಏಳು ತಿಂಗಳ ಸಜೆಯನ್ನು ಖಾಯಂಗೊಳಿಸಿದೆ. ಸಾಹಿತಿ ವಿಠಲ ಹೆಗ್ಗಡೆ ಅವರ ಚಾರಿತ್ಯ್ರ ವಧೆ ಮಾಡಿರುವುದರಿಂದ ಅವರಿಗೆ 35 ಸಾವಿರ ಹಾಗೂ ಸರ್ಕಾರಕ್ಕೆ 5 ಸಾವಿರ ಪಾವತಿಸಬೇಕೆಂದು, ತಪ್ಪಿದ್ದಲ್ಲಿ ಏಳು ತಿಂಗಳ ಜೈಲು ಶಿಕ್ಷೆಗೆ ಒಳಗಾಗಬೇಕೆಂದು ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನ: ಕಲ್ಕುಳಿ ವಿಠಲ ಹೆಗಡೆಯವರ ಅಧ್ಯಕ್ಷ ಭಾಷಣದ ಆಯ್ದ ಭಾಗ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ, “ನಮ್ಮ ಜನಪರ ಚಳವಳಿಗಳನ್ನು ಹತ್ತಿಕ್ಕುವ ದುರುದ್ದೇಶದಿಂದ ಹಾಗೂ ಸಾರ್ವಜನಿಕರಲ್ಲಿ ನಮ್ಮ ಬಗ್ಗೆ ಅಗೌರವ ಉಂಟು ಮಾಡಿ, ನನ್ನನ್ನು ಹಾಗೂ ನನ್ನ ಚಳುವಳಿಗಳನ್ನು ಮುಗಿಸುವ ಷಡ್ಯಂತ್ರ ರೂಪಿಸಿದ ಪತ್ರಕರ್ತರಿಬ್ಬರಿಗೆ ತಕ್ಕ ಶಿಕ್ಷೆಯಾಗಿದೆ. ನಮ್ಮ ಹೋರಾಟವು ಎಂದೆಂದಿಗೂ ಪ್ರಜಾತಾಂತ್ರಿಕ ಮತ್ತು ಕಾನೂನಿನ ಚೌಕಟ್ಟಿನಲ್ಲಿಯೆ ನಡೆಯುತ್ತಿರುವುದಕ್ಕೆ ಸಿಕ್ಕ ಜಯ ಇದಾಗಿದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ

“ಕಳೆದ ವರ್ಷ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಾಗಲೂ ಶಾಸಕ ಸಿ.ಟಿ. ರವಿ ಹಾಗೂ ಅವರ ಪಕ್ಷ ಕೂಡಾ ಇದೇ ಆರೋಪವನ್ನು ಮಾಡಿತ್ತು. ಅವರೆಲ್ಲರಿಗೂ ಈ ತೀರ್ಪು ಎಚ್ಚರಿಕೆಯಾಗಿ ಬಂದಿದೆ” ಎಂದು ವಿಠಲ ಹೆಗ್ಗಡೆ ತಿಳಿಸಿದ್ದಾರೆ.

ಇದನ್ನೂ ಓದಿ: ಶೃಂಗೇರಿ ಮಠದಲ್ಲೊಂದು ಮುಚ್ಚಿಹೋದ ನಿರ್ಭಯ ಪ್ರಕರಣ! – ಬಿ.ಚಂದ್ರೇಗೌಡ

ವಿಡಿಯೋ ನೋಡಿ: ಸಾರಿಗೆ ನೌಕರರು ಸೇರಿದಂತೆ ಯಾರೆಲ್ಲ ಹೋರಾಟ ಮಾಡುತ್ತಿದ್ದಾರೋ ಅವರ ಜತೆ ಕಾಂಗ್ರೆಸ್‌ ನಿಲ್ಲಲಿದೆ: ಡಿಕೆ ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...