Homeಕರ್ನಾಟಕಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ...

ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

- Advertisement -
- Advertisement -

ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ ಅವರನ್ನು ‘ನಕ್ಸಲ್ ಬೆಂಬಲಿಗ’ ಎಂಬ ಶಿರ್ಷಿಕೆ ಅಡಿಯಲ್ಲಿ ವರದಿ ಪ್ರಕಟಿಸಿದ್ದ ಸಂಘ ಪರಿವಾರ ಬೆಂಬಲಿಗ ದಿನ ಪತ್ರಿಕೆಯಾದ ‘ಹೊಸದಿಗಂತ’ದ ಸಂಪಾದಕ ದು.ಗು. ಲಕ್ಷ್ಮಣ ಹಾಗೂ ಪ್ರಕಾಶಕ ಎಸ್‌.ಶಾಂತಾರಾಮ್‌ ಅವರಿಗೆ ಶೃಂಗೇರಿ ಜೆ.ಎಂ.ಎಫ್‌.ಸಿ ನ್ಯಾಯಾಲಯ ನೀಡಿದ್ದ ದಂಡ ಹಾಗೂ ಜೈಲು ಶಿಕ್ಷಯನ್ನು ಜಿಲ್ಲಾ ಸತ್ರ ನ್ಯಾಯಾಲಯ ಎತ್ತಿ ಹಿಡಿದಿದ್ದು ಶಿಕ್ಷೆಯನ್ನು ಖಾಯಂಗೊಳಿಸಿ ಆದೇಶ ನೀಡಿದೆ.

ಹೊಸ ದಿಗಂತ ಪತ್ರಿಕೆಯು 2007 ರ ಜುಲೈ 3 ರಂದು ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ ಅವರ ಚಿತ್ರವನ್ನು ಪ್ರಕಟಿಸಿ, ‘ನಕ್ಸಲ್‌ ಬೆಂಬಲಿಗ’ ಎಂಬ ಶಿರ್ಷಿಕೆಯಲ್ಲಿ ಸುಳ್ಳು ಮತ್ತು ಮಾನಹಾನಿ ವರದಿಯನ್ನು  ಪ್ರಕಟಿಸಿತ್ತು. ಇದರ ವಿರುದ್ದ ಸಾಹಿತಿ ವಿಠಲ ಹೆಗ್ಗಡೆ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನ ಮತ್ತು ಶೃಂಗೇರಿಯಲ್ಲಿ ತಾಲಿಬಾನಿಗಳು – ಬಿ.ಚಂದ್ರೇಗೌಡ

ಪ್ರಕರಣದ ವಿಚಾರಣೆ ನಡೆಸಿದ ಶೃಂಗೇರಿ ಜೆ.ಎಂ.ಎಫ್‌.ಸಿ ನ್ಯಾಯಾಲಯವು 2019 ಜನವರಿಯಂದು ಆರೋಪಿಗಳನ್ನು ತಪ್ಪಿತಸ್ಥರು ಎಂದು ಘೋಷಿಸಿತ್ತು. ಆದರೆ ಈ ತೀರ್ಪಿನ ವಿರುದ್ದ ಅವರು ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಇದೀಗ ಜಿಲ್ಲಾ ಸತ್ರ ನ್ಯಾಯಾಲಯ ಶೃಂಗೇರಿ ನ್ಯಾಯಾಲಯ ನೀಡಿರುವ ತೀರ್ಪನ್ನು ಎತ್ತಿ ಹಿಡಿದಿದ್ದು, ಪತ್ರಿಕೆಯ ಸಂಪಾದಕ ದು.ಗು ಲಕ್ಷ್ಮಣ ಹಾಗೂ ಪ್ರಕಾಶಕ ಎಸ್. ಶಾಂತಾರಾಮ್‌ ಅವರಿಗೆ 40 ಸಾವಿರ ದಂಡ ಮತ್ತು ಏಳು ತಿಂಗಳ ಸಜೆಯನ್ನು ಖಾಯಂಗೊಳಿಸಿದೆ. ಸಾಹಿತಿ ವಿಠಲ ಹೆಗ್ಗಡೆ ಅವರ ಚಾರಿತ್ಯ್ರ ವಧೆ ಮಾಡಿರುವುದರಿಂದ ಅವರಿಗೆ 35 ಸಾವಿರ ಹಾಗೂ ಸರ್ಕಾರಕ್ಕೆ 5 ಸಾವಿರ ಪಾವತಿಸಬೇಕೆಂದು, ತಪ್ಪಿದ್ದಲ್ಲಿ ಏಳು ತಿಂಗಳ ಜೈಲು ಶಿಕ್ಷೆಗೆ ಒಳಗಾಗಬೇಕೆಂದು ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನ: ಕಲ್ಕುಳಿ ವಿಠಲ ಹೆಗಡೆಯವರ ಅಧ್ಯಕ್ಷ ಭಾಷಣದ ಆಯ್ದ ಭಾಗ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ, “ನಮ್ಮ ಜನಪರ ಚಳವಳಿಗಳನ್ನು ಹತ್ತಿಕ್ಕುವ ದುರುದ್ದೇಶದಿಂದ ಹಾಗೂ ಸಾರ್ವಜನಿಕರಲ್ಲಿ ನಮ್ಮ ಬಗ್ಗೆ ಅಗೌರವ ಉಂಟು ಮಾಡಿ, ನನ್ನನ್ನು ಹಾಗೂ ನನ್ನ ಚಳುವಳಿಗಳನ್ನು ಮುಗಿಸುವ ಷಡ್ಯಂತ್ರ ರೂಪಿಸಿದ ಪತ್ರಕರ್ತರಿಬ್ಬರಿಗೆ ತಕ್ಕ ಶಿಕ್ಷೆಯಾಗಿದೆ. ನಮ್ಮ ಹೋರಾಟವು ಎಂದೆಂದಿಗೂ ಪ್ರಜಾತಾಂತ್ರಿಕ ಮತ್ತು ಕಾನೂನಿನ ಚೌಕಟ್ಟಿನಲ್ಲಿಯೆ ನಡೆಯುತ್ತಿರುವುದಕ್ಕೆ ಸಿಕ್ಕ ಜಯ ಇದಾಗಿದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ

“ಕಳೆದ ವರ್ಷ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಾಗಲೂ ಶಾಸಕ ಸಿ.ಟಿ. ರವಿ ಹಾಗೂ ಅವರ ಪಕ್ಷ ಕೂಡಾ ಇದೇ ಆರೋಪವನ್ನು ಮಾಡಿತ್ತು. ಅವರೆಲ್ಲರಿಗೂ ಈ ತೀರ್ಪು ಎಚ್ಚರಿಕೆಯಾಗಿ ಬಂದಿದೆ” ಎಂದು ವಿಠಲ ಹೆಗ್ಗಡೆ ತಿಳಿಸಿದ್ದಾರೆ.

ಇದನ್ನೂ ಓದಿ: ಶೃಂಗೇರಿ ಮಠದಲ್ಲೊಂದು ಮುಚ್ಚಿಹೋದ ನಿರ್ಭಯ ಪ್ರಕರಣ! – ಬಿ.ಚಂದ್ರೇಗೌಡ

ವಿಡಿಯೋ ನೋಡಿ: ಸಾರಿಗೆ ನೌಕರರು ಸೇರಿದಂತೆ ಯಾರೆಲ್ಲ ಹೋರಾಟ ಮಾಡುತ್ತಿದ್ದಾರೋ ಅವರ ಜತೆ ಕಾಂಗ್ರೆಸ್‌ ನಿಲ್ಲಲಿದೆ: ಡಿಕೆ ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...