Homeಕರ್ನಾಟಕಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ...

ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

- Advertisement -
- Advertisement -

ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ ಅವರನ್ನು ‘ನಕ್ಸಲ್ ಬೆಂಬಲಿಗ’ ಎಂಬ ಶಿರ್ಷಿಕೆ ಅಡಿಯಲ್ಲಿ ವರದಿ ಪ್ರಕಟಿಸಿದ್ದ ಸಂಘ ಪರಿವಾರ ಬೆಂಬಲಿಗ ದಿನ ಪತ್ರಿಕೆಯಾದ ‘ಹೊಸದಿಗಂತ’ದ ಸಂಪಾದಕ ದು.ಗು. ಲಕ್ಷ್ಮಣ ಹಾಗೂ ಪ್ರಕಾಶಕ ಎಸ್‌.ಶಾಂತಾರಾಮ್‌ ಅವರಿಗೆ ಶೃಂಗೇರಿ ಜೆ.ಎಂ.ಎಫ್‌.ಸಿ ನ್ಯಾಯಾಲಯ ನೀಡಿದ್ದ ದಂಡ ಹಾಗೂ ಜೈಲು ಶಿಕ್ಷಯನ್ನು ಜಿಲ್ಲಾ ಸತ್ರ ನ್ಯಾಯಾಲಯ ಎತ್ತಿ ಹಿಡಿದಿದ್ದು ಶಿಕ್ಷೆಯನ್ನು ಖಾಯಂಗೊಳಿಸಿ ಆದೇಶ ನೀಡಿದೆ.

ಹೊಸ ದಿಗಂತ ಪತ್ರಿಕೆಯು 2007 ರ ಜುಲೈ 3 ರಂದು ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ ಅವರ ಚಿತ್ರವನ್ನು ಪ್ರಕಟಿಸಿ, ‘ನಕ್ಸಲ್‌ ಬೆಂಬಲಿಗ’ ಎಂಬ ಶಿರ್ಷಿಕೆಯಲ್ಲಿ ಸುಳ್ಳು ಮತ್ತು ಮಾನಹಾನಿ ವರದಿಯನ್ನು  ಪ್ರಕಟಿಸಿತ್ತು. ಇದರ ವಿರುದ್ದ ಸಾಹಿತಿ ವಿಠಲ ಹೆಗ್ಗಡೆ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನ ಮತ್ತು ಶೃಂಗೇರಿಯಲ್ಲಿ ತಾಲಿಬಾನಿಗಳು – ಬಿ.ಚಂದ್ರೇಗೌಡ

ಪ್ರಕರಣದ ವಿಚಾರಣೆ ನಡೆಸಿದ ಶೃಂಗೇರಿ ಜೆ.ಎಂ.ಎಫ್‌.ಸಿ ನ್ಯಾಯಾಲಯವು 2019 ಜನವರಿಯಂದು ಆರೋಪಿಗಳನ್ನು ತಪ್ಪಿತಸ್ಥರು ಎಂದು ಘೋಷಿಸಿತ್ತು. ಆದರೆ ಈ ತೀರ್ಪಿನ ವಿರುದ್ದ ಅವರು ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಇದೀಗ ಜಿಲ್ಲಾ ಸತ್ರ ನ್ಯಾಯಾಲಯ ಶೃಂಗೇರಿ ನ್ಯಾಯಾಲಯ ನೀಡಿರುವ ತೀರ್ಪನ್ನು ಎತ್ತಿ ಹಿಡಿದಿದ್ದು, ಪತ್ರಿಕೆಯ ಸಂಪಾದಕ ದು.ಗು ಲಕ್ಷ್ಮಣ ಹಾಗೂ ಪ್ರಕಾಶಕ ಎಸ್. ಶಾಂತಾರಾಮ್‌ ಅವರಿಗೆ 40 ಸಾವಿರ ದಂಡ ಮತ್ತು ಏಳು ತಿಂಗಳ ಸಜೆಯನ್ನು ಖಾಯಂಗೊಳಿಸಿದೆ. ಸಾಹಿತಿ ವಿಠಲ ಹೆಗ್ಗಡೆ ಅವರ ಚಾರಿತ್ಯ್ರ ವಧೆ ಮಾಡಿರುವುದರಿಂದ ಅವರಿಗೆ 35 ಸಾವಿರ ಹಾಗೂ ಸರ್ಕಾರಕ್ಕೆ 5 ಸಾವಿರ ಪಾವತಿಸಬೇಕೆಂದು, ತಪ್ಪಿದ್ದಲ್ಲಿ ಏಳು ತಿಂಗಳ ಜೈಲು ಶಿಕ್ಷೆಗೆ ಒಳಗಾಗಬೇಕೆಂದು ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನ: ಕಲ್ಕುಳಿ ವಿಠಲ ಹೆಗಡೆಯವರ ಅಧ್ಯಕ್ಷ ಭಾಷಣದ ಆಯ್ದ ಭಾಗ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ, “ನಮ್ಮ ಜನಪರ ಚಳವಳಿಗಳನ್ನು ಹತ್ತಿಕ್ಕುವ ದುರುದ್ದೇಶದಿಂದ ಹಾಗೂ ಸಾರ್ವಜನಿಕರಲ್ಲಿ ನಮ್ಮ ಬಗ್ಗೆ ಅಗೌರವ ಉಂಟು ಮಾಡಿ, ನನ್ನನ್ನು ಹಾಗೂ ನನ್ನ ಚಳುವಳಿಗಳನ್ನು ಮುಗಿಸುವ ಷಡ್ಯಂತ್ರ ರೂಪಿಸಿದ ಪತ್ರಕರ್ತರಿಬ್ಬರಿಗೆ ತಕ್ಕ ಶಿಕ್ಷೆಯಾಗಿದೆ. ನಮ್ಮ ಹೋರಾಟವು ಎಂದೆಂದಿಗೂ ಪ್ರಜಾತಾಂತ್ರಿಕ ಮತ್ತು ಕಾನೂನಿನ ಚೌಕಟ್ಟಿನಲ್ಲಿಯೆ ನಡೆಯುತ್ತಿರುವುದಕ್ಕೆ ಸಿಕ್ಕ ಜಯ ಇದಾಗಿದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ

“ಕಳೆದ ವರ್ಷ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಾಗಲೂ ಶಾಸಕ ಸಿ.ಟಿ. ರವಿ ಹಾಗೂ ಅವರ ಪಕ್ಷ ಕೂಡಾ ಇದೇ ಆರೋಪವನ್ನು ಮಾಡಿತ್ತು. ಅವರೆಲ್ಲರಿಗೂ ಈ ತೀರ್ಪು ಎಚ್ಚರಿಕೆಯಾಗಿ ಬಂದಿದೆ” ಎಂದು ವಿಠಲ ಹೆಗ್ಗಡೆ ತಿಳಿಸಿದ್ದಾರೆ.

ಇದನ್ನೂ ಓದಿ: ಶೃಂಗೇರಿ ಮಠದಲ್ಲೊಂದು ಮುಚ್ಚಿಹೋದ ನಿರ್ಭಯ ಪ್ರಕರಣ! – ಬಿ.ಚಂದ್ರೇಗೌಡ

ವಿಡಿಯೋ ನೋಡಿ: ಸಾರಿಗೆ ನೌಕರರು ಸೇರಿದಂತೆ ಯಾರೆಲ್ಲ ಹೋರಾಟ ಮಾಡುತ್ತಿದ್ದಾರೋ ಅವರ ಜತೆ ಕಾಂಗ್ರೆಸ್‌ ನಿಲ್ಲಲಿದೆ: ಡಿಕೆ ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...