Homeಕರ್ನಾಟಕಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ...

ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

- Advertisement -
- Advertisement -

ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ ಅವರನ್ನು ‘ನಕ್ಸಲ್ ಬೆಂಬಲಿಗ’ ಎಂಬ ಶಿರ್ಷಿಕೆ ಅಡಿಯಲ್ಲಿ ವರದಿ ಪ್ರಕಟಿಸಿದ್ದ ಸಂಘ ಪರಿವಾರ ಬೆಂಬಲಿಗ ದಿನ ಪತ್ರಿಕೆಯಾದ ‘ಹೊಸದಿಗಂತ’ದ ಸಂಪಾದಕ ದು.ಗು. ಲಕ್ಷ್ಮಣ ಹಾಗೂ ಪ್ರಕಾಶಕ ಎಸ್‌.ಶಾಂತಾರಾಮ್‌ ಅವರಿಗೆ ಶೃಂಗೇರಿ ಜೆ.ಎಂ.ಎಫ್‌.ಸಿ ನ್ಯಾಯಾಲಯ ನೀಡಿದ್ದ ದಂಡ ಹಾಗೂ ಜೈಲು ಶಿಕ್ಷಯನ್ನು ಜಿಲ್ಲಾ ಸತ್ರ ನ್ಯಾಯಾಲಯ ಎತ್ತಿ ಹಿಡಿದಿದ್ದು ಶಿಕ್ಷೆಯನ್ನು ಖಾಯಂಗೊಳಿಸಿ ಆದೇಶ ನೀಡಿದೆ.

ಹೊಸ ದಿಗಂತ ಪತ್ರಿಕೆಯು 2007 ರ ಜುಲೈ 3 ರಂದು ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ ಅವರ ಚಿತ್ರವನ್ನು ಪ್ರಕಟಿಸಿ, ‘ನಕ್ಸಲ್‌ ಬೆಂಬಲಿಗ’ ಎಂಬ ಶಿರ್ಷಿಕೆಯಲ್ಲಿ ಸುಳ್ಳು ಮತ್ತು ಮಾನಹಾನಿ ವರದಿಯನ್ನು  ಪ್ರಕಟಿಸಿತ್ತು. ಇದರ ವಿರುದ್ದ ಸಾಹಿತಿ ವಿಠಲ ಹೆಗ್ಗಡೆ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನ ಮತ್ತು ಶೃಂಗೇರಿಯಲ್ಲಿ ತಾಲಿಬಾನಿಗಳು – ಬಿ.ಚಂದ್ರೇಗೌಡ

ಪ್ರಕರಣದ ವಿಚಾರಣೆ ನಡೆಸಿದ ಶೃಂಗೇರಿ ಜೆ.ಎಂ.ಎಫ್‌.ಸಿ ನ್ಯಾಯಾಲಯವು 2019 ಜನವರಿಯಂದು ಆರೋಪಿಗಳನ್ನು ತಪ್ಪಿತಸ್ಥರು ಎಂದು ಘೋಷಿಸಿತ್ತು. ಆದರೆ ಈ ತೀರ್ಪಿನ ವಿರುದ್ದ ಅವರು ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಇದೀಗ ಜಿಲ್ಲಾ ಸತ್ರ ನ್ಯಾಯಾಲಯ ಶೃಂಗೇರಿ ನ್ಯಾಯಾಲಯ ನೀಡಿರುವ ತೀರ್ಪನ್ನು ಎತ್ತಿ ಹಿಡಿದಿದ್ದು, ಪತ್ರಿಕೆಯ ಸಂಪಾದಕ ದು.ಗು ಲಕ್ಷ್ಮಣ ಹಾಗೂ ಪ್ರಕಾಶಕ ಎಸ್. ಶಾಂತಾರಾಮ್‌ ಅವರಿಗೆ 40 ಸಾವಿರ ದಂಡ ಮತ್ತು ಏಳು ತಿಂಗಳ ಸಜೆಯನ್ನು ಖಾಯಂಗೊಳಿಸಿದೆ. ಸಾಹಿತಿ ವಿಠಲ ಹೆಗ್ಗಡೆ ಅವರ ಚಾರಿತ್ಯ್ರ ವಧೆ ಮಾಡಿರುವುದರಿಂದ ಅವರಿಗೆ 35 ಸಾವಿರ ಹಾಗೂ ಸರ್ಕಾರಕ್ಕೆ 5 ಸಾವಿರ ಪಾವತಿಸಬೇಕೆಂದು, ತಪ್ಪಿದ್ದಲ್ಲಿ ಏಳು ತಿಂಗಳ ಜೈಲು ಶಿಕ್ಷೆಗೆ ಒಳಗಾಗಬೇಕೆಂದು ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನ: ಕಲ್ಕುಳಿ ವಿಠಲ ಹೆಗಡೆಯವರ ಅಧ್ಯಕ್ಷ ಭಾಷಣದ ಆಯ್ದ ಭಾಗ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ, “ನಮ್ಮ ಜನಪರ ಚಳವಳಿಗಳನ್ನು ಹತ್ತಿಕ್ಕುವ ದುರುದ್ದೇಶದಿಂದ ಹಾಗೂ ಸಾರ್ವಜನಿಕರಲ್ಲಿ ನಮ್ಮ ಬಗ್ಗೆ ಅಗೌರವ ಉಂಟು ಮಾಡಿ, ನನ್ನನ್ನು ಹಾಗೂ ನನ್ನ ಚಳುವಳಿಗಳನ್ನು ಮುಗಿಸುವ ಷಡ್ಯಂತ್ರ ರೂಪಿಸಿದ ಪತ್ರಕರ್ತರಿಬ್ಬರಿಗೆ ತಕ್ಕ ಶಿಕ್ಷೆಯಾಗಿದೆ. ನಮ್ಮ ಹೋರಾಟವು ಎಂದೆಂದಿಗೂ ಪ್ರಜಾತಾಂತ್ರಿಕ ಮತ್ತು ಕಾನೂನಿನ ಚೌಕಟ್ಟಿನಲ್ಲಿಯೆ ನಡೆಯುತ್ತಿರುವುದಕ್ಕೆ ಸಿಕ್ಕ ಜಯ ಇದಾಗಿದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ

“ಕಳೆದ ವರ್ಷ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಾಗಲೂ ಶಾಸಕ ಸಿ.ಟಿ. ರವಿ ಹಾಗೂ ಅವರ ಪಕ್ಷ ಕೂಡಾ ಇದೇ ಆರೋಪವನ್ನು ಮಾಡಿತ್ತು. ಅವರೆಲ್ಲರಿಗೂ ಈ ತೀರ್ಪು ಎಚ್ಚರಿಕೆಯಾಗಿ ಬಂದಿದೆ” ಎಂದು ವಿಠಲ ಹೆಗ್ಗಡೆ ತಿಳಿಸಿದ್ದಾರೆ.

ಇದನ್ನೂ ಓದಿ: ಶೃಂಗೇರಿ ಮಠದಲ್ಲೊಂದು ಮುಚ್ಚಿಹೋದ ನಿರ್ಭಯ ಪ್ರಕರಣ! – ಬಿ.ಚಂದ್ರೇಗೌಡ

ವಿಡಿಯೋ ನೋಡಿ: ಸಾರಿಗೆ ನೌಕರರು ಸೇರಿದಂತೆ ಯಾರೆಲ್ಲ ಹೋರಾಟ ಮಾಡುತ್ತಿದ್ದಾರೋ ಅವರ ಜತೆ ಕಾಂಗ್ರೆಸ್‌ ನಿಲ್ಲಲಿದೆ: ಡಿಕೆ ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...