Homeಕರ್ನಾಟಕಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ...

ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

- Advertisement -
- Advertisement -

ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ ಅವರನ್ನು ‘ನಕ್ಸಲ್ ಬೆಂಬಲಿಗ’ ಎಂಬ ಶಿರ್ಷಿಕೆ ಅಡಿಯಲ್ಲಿ ವರದಿ ಪ್ರಕಟಿಸಿದ್ದ ಸಂಘ ಪರಿವಾರ ಬೆಂಬಲಿಗ ದಿನ ಪತ್ರಿಕೆಯಾದ ‘ಹೊಸದಿಗಂತ’ದ ಸಂಪಾದಕ ದು.ಗು. ಲಕ್ಷ್ಮಣ ಹಾಗೂ ಪ್ರಕಾಶಕ ಎಸ್‌.ಶಾಂತಾರಾಮ್‌ ಅವರಿಗೆ ಶೃಂಗೇರಿ ಜೆ.ಎಂ.ಎಫ್‌.ಸಿ ನ್ಯಾಯಾಲಯ ನೀಡಿದ್ದ ದಂಡ ಹಾಗೂ ಜೈಲು ಶಿಕ್ಷಯನ್ನು ಜಿಲ್ಲಾ ಸತ್ರ ನ್ಯಾಯಾಲಯ ಎತ್ತಿ ಹಿಡಿದಿದ್ದು ಶಿಕ್ಷೆಯನ್ನು ಖಾಯಂಗೊಳಿಸಿ ಆದೇಶ ನೀಡಿದೆ.

ಹೊಸ ದಿಗಂತ ಪತ್ರಿಕೆಯು 2007 ರ ಜುಲೈ 3 ರಂದು ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ ಅವರ ಚಿತ್ರವನ್ನು ಪ್ರಕಟಿಸಿ, ‘ನಕ್ಸಲ್‌ ಬೆಂಬಲಿಗ’ ಎಂಬ ಶಿರ್ಷಿಕೆಯಲ್ಲಿ ಸುಳ್ಳು ಮತ್ತು ಮಾನಹಾನಿ ವರದಿಯನ್ನು  ಪ್ರಕಟಿಸಿತ್ತು. ಇದರ ವಿರುದ್ದ ಸಾಹಿತಿ ವಿಠಲ ಹೆಗ್ಗಡೆ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನ ಮತ್ತು ಶೃಂಗೇರಿಯಲ್ಲಿ ತಾಲಿಬಾನಿಗಳು – ಬಿ.ಚಂದ್ರೇಗೌಡ

ಪ್ರಕರಣದ ವಿಚಾರಣೆ ನಡೆಸಿದ ಶೃಂಗೇರಿ ಜೆ.ಎಂ.ಎಫ್‌.ಸಿ ನ್ಯಾಯಾಲಯವು 2019 ಜನವರಿಯಂದು ಆರೋಪಿಗಳನ್ನು ತಪ್ಪಿತಸ್ಥರು ಎಂದು ಘೋಷಿಸಿತ್ತು. ಆದರೆ ಈ ತೀರ್ಪಿನ ವಿರುದ್ದ ಅವರು ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಇದೀಗ ಜಿಲ್ಲಾ ಸತ್ರ ನ್ಯಾಯಾಲಯ ಶೃಂಗೇರಿ ನ್ಯಾಯಾಲಯ ನೀಡಿರುವ ತೀರ್ಪನ್ನು ಎತ್ತಿ ಹಿಡಿದಿದ್ದು, ಪತ್ರಿಕೆಯ ಸಂಪಾದಕ ದು.ಗು ಲಕ್ಷ್ಮಣ ಹಾಗೂ ಪ್ರಕಾಶಕ ಎಸ್. ಶಾಂತಾರಾಮ್‌ ಅವರಿಗೆ 40 ಸಾವಿರ ದಂಡ ಮತ್ತು ಏಳು ತಿಂಗಳ ಸಜೆಯನ್ನು ಖಾಯಂಗೊಳಿಸಿದೆ. ಸಾಹಿತಿ ವಿಠಲ ಹೆಗ್ಗಡೆ ಅವರ ಚಾರಿತ್ಯ್ರ ವಧೆ ಮಾಡಿರುವುದರಿಂದ ಅವರಿಗೆ 35 ಸಾವಿರ ಹಾಗೂ ಸರ್ಕಾರಕ್ಕೆ 5 ಸಾವಿರ ಪಾವತಿಸಬೇಕೆಂದು, ತಪ್ಪಿದ್ದಲ್ಲಿ ಏಳು ತಿಂಗಳ ಜೈಲು ಶಿಕ್ಷೆಗೆ ಒಳಗಾಗಬೇಕೆಂದು ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.

ಇದನ್ನೂ ಓದಿ: ಚಿಕ್ಕಮಗಳೂರು ಸಾಹಿತ್ಯ ಸಮ್ಮೇಳನ: ಕಲ್ಕುಳಿ ವಿಠಲ ಹೆಗಡೆಯವರ ಅಧ್ಯಕ್ಷ ಭಾಷಣದ ಆಯ್ದ ಭಾಗ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ, “ನಮ್ಮ ಜನಪರ ಚಳವಳಿಗಳನ್ನು ಹತ್ತಿಕ್ಕುವ ದುರುದ್ದೇಶದಿಂದ ಹಾಗೂ ಸಾರ್ವಜನಿಕರಲ್ಲಿ ನಮ್ಮ ಬಗ್ಗೆ ಅಗೌರವ ಉಂಟು ಮಾಡಿ, ನನ್ನನ್ನು ಹಾಗೂ ನನ್ನ ಚಳುವಳಿಗಳನ್ನು ಮುಗಿಸುವ ಷಡ್ಯಂತ್ರ ರೂಪಿಸಿದ ಪತ್ರಕರ್ತರಿಬ್ಬರಿಗೆ ತಕ್ಕ ಶಿಕ್ಷೆಯಾಗಿದೆ. ನಮ್ಮ ಹೋರಾಟವು ಎಂದೆಂದಿಗೂ ಪ್ರಜಾತಾಂತ್ರಿಕ ಮತ್ತು ಕಾನೂನಿನ ಚೌಕಟ್ಟಿನಲ್ಲಿಯೆ ನಡೆಯುತ್ತಿರುವುದಕ್ಕೆ ಸಿಕ್ಕ ಜಯ ಇದಾಗಿದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಸಾಹಿತಿ ಕಲ್ಕುಳಿ ವಿಠಲ ಹೆಗ್ಗಡೆ

“ಕಳೆದ ವರ್ಷ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಾಗಲೂ ಶಾಸಕ ಸಿ.ಟಿ. ರವಿ ಹಾಗೂ ಅವರ ಪಕ್ಷ ಕೂಡಾ ಇದೇ ಆರೋಪವನ್ನು ಮಾಡಿತ್ತು. ಅವರೆಲ್ಲರಿಗೂ ಈ ತೀರ್ಪು ಎಚ್ಚರಿಕೆಯಾಗಿ ಬಂದಿದೆ” ಎಂದು ವಿಠಲ ಹೆಗ್ಗಡೆ ತಿಳಿಸಿದ್ದಾರೆ.

ಇದನ್ನೂ ಓದಿ: ಶೃಂಗೇರಿ ಮಠದಲ್ಲೊಂದು ಮುಚ್ಚಿಹೋದ ನಿರ್ಭಯ ಪ್ರಕರಣ! – ಬಿ.ಚಂದ್ರೇಗೌಡ

ವಿಡಿಯೋ ನೋಡಿ: ಸಾರಿಗೆ ನೌಕರರು ಸೇರಿದಂತೆ ಯಾರೆಲ್ಲ ಹೋರಾಟ ಮಾಡುತ್ತಿದ್ದಾರೋ ಅವರ ಜತೆ ಕಾಂಗ್ರೆಸ್‌ ನಿಲ್ಲಲಿದೆ: ಡಿಕೆ ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...