Homeಚಳವಳಿಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?...

ಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?…

- Advertisement -
- Advertisement -

ಪತ್ರಿಕೆಯಲ್ಲಿ ಈ ದಿನ ಅಥವಾ ವಾರ ನೀವು ಯಾವುದರ ಮೇಲೆ ಕೇಂದ್ರೀಕರಿಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸುವುದು ಈ ಕಾಲದಲ್ಲಿ ಅಷ್ಟು ಸುಲಭವಲ್ಲ. ಏಕೆಂದರೆ ನಿಮ್ಮ ಗಮನ ಅಸಲೀ ಸಮಸ್ಯೆಯ ಮೇಲೆ ಹೋಗದಂತೆ ಮಾಡಲೆಂದೇ ಕೆಲವು ವಾಗ್ವಾದಗಳನ್ನು ತೇಲಿಬಿಟ್ಟಿರಬಹುದೆಂಬ ಅನುಮಾನ ಬಂದಿರುತ್ತದೆ. ಕೆಲವೊಮ್ಮೆ ಅವು ಕೇವಲ ವಾಗ್ವಾದಗಳಾಗಿರುವುದಿಲ್ಲ; ಯಾರದ್ದೋ ಬದುಕಿನ ಅತ್ಯಂತ ಜ್ವಲಂತ ಸಮಸ್ಯೆಯಾಗಿರುತ್ತದೆ. ಉದಾಹರಣೆಗೆ ಕಾಶ್ಮೀರ, ಎನ್‍ಆರ್‍ಸಿ ಇತ್ಯಾದಿ. ಕೆಲವು ಸಾರಿ ಅದು ಯಾರ ಬದುಕಿನ ತಕ್ಷಣದ ಕಾಡುವ ಸಮಸ್ಯೆಯೂ ಆಗಿರುವುದಿಲ್ಲ; ಆದರೆ ನಮ್ಮ ಇತಿಹಾಸದಲ್ಲಿ ಅಡಗಿರುವ ಸತ್ಯಗಳನ್ನು ಬುಡಮೇಲು ಮಾಡುವ ಕೆಲಸ ನಡೆದಿರುತ್ತದೆ. ಸಾವರ್ಕರ್‌ಗೆ ಭಾರತರತ್ನ ನೀಡುತ್ತೇವೆನ್ನುವುದನ್ನು ಬಿಜೆಪಿ ಪಕ್ಷವು ಮಹಾರಾಷ್ಟ್ರ ಚುನಾವಣೆಯ ಪ್ರಣಾಳಿಕೆಯಲ್ಲಿ ಸೇರಿಸಿದ್ದು ಅದಕ್ಕೆ ನಿದರ್ಶನ.

ಅಸಲೀ ಸಮಸ್ಯೆ ಮತ್ತು ಹೊಸದಾಗಿ ಸೃಷ್ಟಿಸಿದ ಇಶ್ಯೂ ಎರಡನ್ನೂ ಆಯ್ದುಕೊಂಡು, ಅವುಗಳನ್ನು ಸತ್ಯದ ಮುಖಾಂತರ ಎದುರಿಸಬೇಕಾದ್ದು ನಮ್ಮ ಜವಾಬ್ದಾರಿ. ಆದರೆ, ಎರಡರಲ್ಲಿ ಒಂದನ್ನು ಮಾತ್ರ ಆಯ್ದುಕೊಳ್ಳುವಂತೆ ಪರಿಸ್ಥಿತಿ ದೂಡುತ್ತದೆ. ಇದು ರಾಜಕೀಯ ಕಾರ್ಯಕರ್ತರಿಗೆ ಮಾತ್ರವಲ್ಲದೇ, ನಮ್ಮಂತಹ ಪತ್ರಿಕೆಗಳಿಗೂ ಇರುವ ಸಂದಿಗ್ಧ.

ದೇಶದ ಸಾರ್ವಭೌಮತೆಯನ್ನು ಮತ್ತಷ್ಟು ಕಿತ್ತುಕೊಳ್ಳುವ ಆರ್‍ಸಿಇಪಿ ಒಪ್ಪಂದದ ಕುರಿತು ರೈತಸಂಘಗಳು ಪ್ರತಿಭಟಿಸುತ್ತಿರುವಾಗ ಅದಕ್ಕೆ ಇಂಬು ಕೊಡುವುದು ನಮ್ಮ ಕರ್ತವ್ಯ; ಕರ್ನಾಟಕದ ಬರ-ನೆರೆ ಸಂಕಷ್ಟಕ್ಕೆ ಪರಿಹಾರವಾಗಿ 1 ಲಕ್ಷ ಕೋಟಿ ಪ್ಯಾಕೇಜ್‍ಅನ್ನು ರೈತರು ಕೇಳುತ್ತಿರುವಾಗಲೇ, ಮತ್ತೊಂದು ಮಳೆ ಇಡೀ ರಾಜ್ಯವನ್ನು ಆವರಿಸಿದೆ. ಉತ್ತರ ಕರ್ನಾಟಕಕ್ಕೆ ಮತ್ತೊಮ್ಮೆ ಅಪ್ಪಳಿಸಿದೆ. ಬಿಎಸ್‍ಎನ್‍ಎಲ್‍ಅನ್ನು ಮುಳುಗಿಸುವ ಕಾಂಗ್ರೆಸ್‍ನ ಹಳೆಯ ಪ್ಲಾನ್‍ಅನ್ನು ಬಿಜೆಪಿ ಯಶಸ್ವಿ ಮಾಡುವ ಎಲ್ಲಾ ಲಕ್ಷಣಗಳೂ ಕಾಣುತ್ತಿವೆ. ಹೀಗಿರುವಾಗ ಸಿ.ಟಿ.ರವಿಯ ಮನೆಹಾಳ ಮಾತು, ಸಾವರ್ಕರ್‍ಗೆ ಭಾರತರತ್ನ ಇತ್ಯಾದಿಗಳು ನಮ್ಮನ್ನು ಬೇರೆ ಕಡೆಗೆ ಎಳೆಯುತ್ತವೆ. ಅದನ್ನು ಮುಗಿಸಿ ಬರುವ ಹೊತ್ತಿಗೆ ಬಿಎಸ್‍ಎನ್‍ಎಲ್ ಮುಳುಗಿ ರೈಲ್ವೇ ಖಾಸಗೀಕರಣದ ಮಾತು ನಡೆಯುತ್ತಿರುತ್ತದೆ. ಅದರ ಬಗ್ಗೆ ಮಾತು ಆಡುವುದು ಸಾಧ್ಯವೇ ಆಗದಂತೆ ದೇಶದ ಪ್ರಮುಖ ಸ್ಥಾನದಲ್ಲಿರುವ ವ್ಯಕ್ತಿ ‘ಗೋಡ್ಸೆ ದೇಶಭಕ್ತ ಎಂಬುದನ್ನು ಅಲ್ಲಗಳೆಯಲಾಗುವುದಿಲ್ಲ’ ಎಂದು ಹೇಳುವ ಸಾಧ್ಯತೆ ಇರುತ್ತದೆ.

ಆ ವಾರ ನಿಮಗೆ ಲಭ್ಯವಿರುವ ಮೂರು ಪುಟಗಳಲ್ಲಿ ಗೋಡ್ಸೆಯ ಕುರಿತು ಎಷ್ಟು ಮಾತನಾಡುವಿರಿ, ರೈಲ್ವೇ ಖಾಸಗೀಕರಣದ ಕುರಿತು ಏನು ಹೇಳುವಿರಿ ಎಂಬ ಸಂದಿಗ್ಧ ಎದುರಾಗುತ್ತದೆ. ಇಂತಹ ಸಂದಿಗ್ಧದಿಂದ ಹೊರಬರುವುದು ಸಾಧ್ಯವಿಲ್ಲವೇ? ಸಂತ್ರಸ್ತರು, ಕಾಳಜಿಯುಳ್ಳವರು, ಪ್ರಜಾತಂತ್ರವಾದಿಗಳೆಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಅನಿಸಿಕೆ ಹೇಳಿ, ಟ್ವಿಟ್ಟರ್ ಟ್ರೆಂಡ್ ಮಾಡಿಬಿಟ್ಟರೆ ಸಾಕೇ?

ಖಂಡಿತಾ ಸಾಲದು. ಬೀದಿಯಲ್ಲಿ ಸಂತ್ರಸ್ತರು ಒಟ್ಟುಗೂಡಿ ಶಕ್ತಿಯುತವಾಗಿ ತಮ್ಮ ಅನಿಸಿಕೆಗಳನ್ನು ಮುಂದಿಡುವುದು, ಬುದ್ಧಿಜೀವಿಗಳು ಸರಿಯಾದ ಹತಾರಗಳೊಂದಿಗೆ ತಮ್ಮದೇ ಆದ ಮಾಧ್ಯಮಗಳನ್ನು ಹುಡುಕಿಕೊಂಡು ವಾಗ್ವಾದಕ್ಕಿಳಿಯುವುದು ಎರಡೂ ಆಗಬೇಕು. ಮಾಧ್ಯಮವು ಇವೆರಡಕ್ಕೂ ಸೂಕ್ತ ಅವಕಾಶ ಕಲ್ಪಿಸಿ ಅದನ್ನು ವ್ಯಾಪಕಗೊಳಿಸಬೇಕು; ಅಧಿಕಾರಸ್ಥರ ಮೇಲೆ ಒತ್ತಡ ತರಬೇಕು. ಆಗ ಪರಿಣಾಮ ಕಾಣತೊಡಗುತ್ತದೆ. ಆದರೆ, ಇಂದಿನ ಮಾಧ್ಯಮ ಇವೆರಡನ್ನೂ (ಬೀದಿಯಲ್ಲಿನ ಭಿನ್ನಮತ ಮತ್ತು ಬುದ್ಧಿಜೀವಿಗಳ ಅಭಿಮತ) ದಿಕ್ಕೆಡಿಸುವ ಕೆಲಸ ಮಾಡುತ್ತಿದೆ. ಅದರ ಫಲವಾಗಿ ಎಲ್ಲವೂ ದುರ್ಬಲವಾಗಿಬಿಟ್ಟಿವೆ. ಹಾಗಾದರೆ ದಾರಿಯೇನು? ದಾರಿಯಿಷ್ಟೇ; ಇವು ಮೂರೂ ಅಭಿನ್ನವಾಗಿ ಜೊತೆಗೂಡುವುದು. ಜೊತೆಗೂಡಿಸುವ ಕೆಲಸವನ್ನು ಮಾಧ್ಯಮ ಮಾಡಬೇಕು. ಮಿಕ್ಕೆರಡು ವಲಯಗಳು ಜೊತೆಗೂಡಿ ಮಾಧ್ಯಮವನ್ನು ಕಟ್ಟಿ ನಿಲ್ಲಿಸಬೇಕು. ಅದು ಮಾತ್ರವೇ ದಾರಿ.

ನ್ಯಾಯಪಥ ಮತ್ತು ನಮ್ಮ ವೆಬ್‍ಸೈಟ್‍ಗಳು ಮಾಡಹೊರಟಿರುವುದು ಅದನ್ನೇ. ಇದನ್ನೇ ಈ ವಾರದಲ್ಲಿ ನಡೆಯಲಿರುವ ಜಿಲ್ಲಾ ಸಭೆಗಳಲ್ಲೂ ಚರ್ಚಿಸಲಾಗುವುದು. ಹೊಸ ರೀತಿಯ ಮಾಧ್ಯಮವು ಬೀದಿಯಲ್ಲಿರುವ ಜನತೆ ಮತ್ತು ಹೊಸಕಾಲದ ಬುದ್ಧಿಜೀವಿಗಳನ್ನು ಬೆಸೆಯುತ್ತಾ, ಅವೆರಡರಿಂದ ಪ್ರತ್ಯೇಕವಾಗುಳಿಯದೇ ತಾನೂ ಜೊತೆಗೂಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...