Homeಚಳವಳಿಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?...

ಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?…

- Advertisement -
- Advertisement -

ಪತ್ರಿಕೆಯಲ್ಲಿ ಈ ದಿನ ಅಥವಾ ವಾರ ನೀವು ಯಾವುದರ ಮೇಲೆ ಕೇಂದ್ರೀಕರಿಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸುವುದು ಈ ಕಾಲದಲ್ಲಿ ಅಷ್ಟು ಸುಲಭವಲ್ಲ. ಏಕೆಂದರೆ ನಿಮ್ಮ ಗಮನ ಅಸಲೀ ಸಮಸ್ಯೆಯ ಮೇಲೆ ಹೋಗದಂತೆ ಮಾಡಲೆಂದೇ ಕೆಲವು ವಾಗ್ವಾದಗಳನ್ನು ತೇಲಿಬಿಟ್ಟಿರಬಹುದೆಂಬ ಅನುಮಾನ ಬಂದಿರುತ್ತದೆ. ಕೆಲವೊಮ್ಮೆ ಅವು ಕೇವಲ ವಾಗ್ವಾದಗಳಾಗಿರುವುದಿಲ್ಲ; ಯಾರದ್ದೋ ಬದುಕಿನ ಅತ್ಯಂತ ಜ್ವಲಂತ ಸಮಸ್ಯೆಯಾಗಿರುತ್ತದೆ. ಉದಾಹರಣೆಗೆ ಕಾಶ್ಮೀರ, ಎನ್‍ಆರ್‍ಸಿ ಇತ್ಯಾದಿ. ಕೆಲವು ಸಾರಿ ಅದು ಯಾರ ಬದುಕಿನ ತಕ್ಷಣದ ಕಾಡುವ ಸಮಸ್ಯೆಯೂ ಆಗಿರುವುದಿಲ್ಲ; ಆದರೆ ನಮ್ಮ ಇತಿಹಾಸದಲ್ಲಿ ಅಡಗಿರುವ ಸತ್ಯಗಳನ್ನು ಬುಡಮೇಲು ಮಾಡುವ ಕೆಲಸ ನಡೆದಿರುತ್ತದೆ. ಸಾವರ್ಕರ್‌ಗೆ ಭಾರತರತ್ನ ನೀಡುತ್ತೇವೆನ್ನುವುದನ್ನು ಬಿಜೆಪಿ ಪಕ್ಷವು ಮಹಾರಾಷ್ಟ್ರ ಚುನಾವಣೆಯ ಪ್ರಣಾಳಿಕೆಯಲ್ಲಿ ಸೇರಿಸಿದ್ದು ಅದಕ್ಕೆ ನಿದರ್ಶನ.

ಅಸಲೀ ಸಮಸ್ಯೆ ಮತ್ತು ಹೊಸದಾಗಿ ಸೃಷ್ಟಿಸಿದ ಇಶ್ಯೂ ಎರಡನ್ನೂ ಆಯ್ದುಕೊಂಡು, ಅವುಗಳನ್ನು ಸತ್ಯದ ಮುಖಾಂತರ ಎದುರಿಸಬೇಕಾದ್ದು ನಮ್ಮ ಜವಾಬ್ದಾರಿ. ಆದರೆ, ಎರಡರಲ್ಲಿ ಒಂದನ್ನು ಮಾತ್ರ ಆಯ್ದುಕೊಳ್ಳುವಂತೆ ಪರಿಸ್ಥಿತಿ ದೂಡುತ್ತದೆ. ಇದು ರಾಜಕೀಯ ಕಾರ್ಯಕರ್ತರಿಗೆ ಮಾತ್ರವಲ್ಲದೇ, ನಮ್ಮಂತಹ ಪತ್ರಿಕೆಗಳಿಗೂ ಇರುವ ಸಂದಿಗ್ಧ.

ದೇಶದ ಸಾರ್ವಭೌಮತೆಯನ್ನು ಮತ್ತಷ್ಟು ಕಿತ್ತುಕೊಳ್ಳುವ ಆರ್‍ಸಿಇಪಿ ಒಪ್ಪಂದದ ಕುರಿತು ರೈತಸಂಘಗಳು ಪ್ರತಿಭಟಿಸುತ್ತಿರುವಾಗ ಅದಕ್ಕೆ ಇಂಬು ಕೊಡುವುದು ನಮ್ಮ ಕರ್ತವ್ಯ; ಕರ್ನಾಟಕದ ಬರ-ನೆರೆ ಸಂಕಷ್ಟಕ್ಕೆ ಪರಿಹಾರವಾಗಿ 1 ಲಕ್ಷ ಕೋಟಿ ಪ್ಯಾಕೇಜ್‍ಅನ್ನು ರೈತರು ಕೇಳುತ್ತಿರುವಾಗಲೇ, ಮತ್ತೊಂದು ಮಳೆ ಇಡೀ ರಾಜ್ಯವನ್ನು ಆವರಿಸಿದೆ. ಉತ್ತರ ಕರ್ನಾಟಕಕ್ಕೆ ಮತ್ತೊಮ್ಮೆ ಅಪ್ಪಳಿಸಿದೆ. ಬಿಎಸ್‍ಎನ್‍ಎಲ್‍ಅನ್ನು ಮುಳುಗಿಸುವ ಕಾಂಗ್ರೆಸ್‍ನ ಹಳೆಯ ಪ್ಲಾನ್‍ಅನ್ನು ಬಿಜೆಪಿ ಯಶಸ್ವಿ ಮಾಡುವ ಎಲ್ಲಾ ಲಕ್ಷಣಗಳೂ ಕಾಣುತ್ತಿವೆ. ಹೀಗಿರುವಾಗ ಸಿ.ಟಿ.ರವಿಯ ಮನೆಹಾಳ ಮಾತು, ಸಾವರ್ಕರ್‍ಗೆ ಭಾರತರತ್ನ ಇತ್ಯಾದಿಗಳು ನಮ್ಮನ್ನು ಬೇರೆ ಕಡೆಗೆ ಎಳೆಯುತ್ತವೆ. ಅದನ್ನು ಮುಗಿಸಿ ಬರುವ ಹೊತ್ತಿಗೆ ಬಿಎಸ್‍ಎನ್‍ಎಲ್ ಮುಳುಗಿ ರೈಲ್ವೇ ಖಾಸಗೀಕರಣದ ಮಾತು ನಡೆಯುತ್ತಿರುತ್ತದೆ. ಅದರ ಬಗ್ಗೆ ಮಾತು ಆಡುವುದು ಸಾಧ್ಯವೇ ಆಗದಂತೆ ದೇಶದ ಪ್ರಮುಖ ಸ್ಥಾನದಲ್ಲಿರುವ ವ್ಯಕ್ತಿ ‘ಗೋಡ್ಸೆ ದೇಶಭಕ್ತ ಎಂಬುದನ್ನು ಅಲ್ಲಗಳೆಯಲಾಗುವುದಿಲ್ಲ’ ಎಂದು ಹೇಳುವ ಸಾಧ್ಯತೆ ಇರುತ್ತದೆ.

ಆ ವಾರ ನಿಮಗೆ ಲಭ್ಯವಿರುವ ಮೂರು ಪುಟಗಳಲ್ಲಿ ಗೋಡ್ಸೆಯ ಕುರಿತು ಎಷ್ಟು ಮಾತನಾಡುವಿರಿ, ರೈಲ್ವೇ ಖಾಸಗೀಕರಣದ ಕುರಿತು ಏನು ಹೇಳುವಿರಿ ಎಂಬ ಸಂದಿಗ್ಧ ಎದುರಾಗುತ್ತದೆ. ಇಂತಹ ಸಂದಿಗ್ಧದಿಂದ ಹೊರಬರುವುದು ಸಾಧ್ಯವಿಲ್ಲವೇ? ಸಂತ್ರಸ್ತರು, ಕಾಳಜಿಯುಳ್ಳವರು, ಪ್ರಜಾತಂತ್ರವಾದಿಗಳೆಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಅನಿಸಿಕೆ ಹೇಳಿ, ಟ್ವಿಟ್ಟರ್ ಟ್ರೆಂಡ್ ಮಾಡಿಬಿಟ್ಟರೆ ಸಾಕೇ?

ಖಂಡಿತಾ ಸಾಲದು. ಬೀದಿಯಲ್ಲಿ ಸಂತ್ರಸ್ತರು ಒಟ್ಟುಗೂಡಿ ಶಕ್ತಿಯುತವಾಗಿ ತಮ್ಮ ಅನಿಸಿಕೆಗಳನ್ನು ಮುಂದಿಡುವುದು, ಬುದ್ಧಿಜೀವಿಗಳು ಸರಿಯಾದ ಹತಾರಗಳೊಂದಿಗೆ ತಮ್ಮದೇ ಆದ ಮಾಧ್ಯಮಗಳನ್ನು ಹುಡುಕಿಕೊಂಡು ವಾಗ್ವಾದಕ್ಕಿಳಿಯುವುದು ಎರಡೂ ಆಗಬೇಕು. ಮಾಧ್ಯಮವು ಇವೆರಡಕ್ಕೂ ಸೂಕ್ತ ಅವಕಾಶ ಕಲ್ಪಿಸಿ ಅದನ್ನು ವ್ಯಾಪಕಗೊಳಿಸಬೇಕು; ಅಧಿಕಾರಸ್ಥರ ಮೇಲೆ ಒತ್ತಡ ತರಬೇಕು. ಆಗ ಪರಿಣಾಮ ಕಾಣತೊಡಗುತ್ತದೆ. ಆದರೆ, ಇಂದಿನ ಮಾಧ್ಯಮ ಇವೆರಡನ್ನೂ (ಬೀದಿಯಲ್ಲಿನ ಭಿನ್ನಮತ ಮತ್ತು ಬುದ್ಧಿಜೀವಿಗಳ ಅಭಿಮತ) ದಿಕ್ಕೆಡಿಸುವ ಕೆಲಸ ಮಾಡುತ್ತಿದೆ. ಅದರ ಫಲವಾಗಿ ಎಲ್ಲವೂ ದುರ್ಬಲವಾಗಿಬಿಟ್ಟಿವೆ. ಹಾಗಾದರೆ ದಾರಿಯೇನು? ದಾರಿಯಿಷ್ಟೇ; ಇವು ಮೂರೂ ಅಭಿನ್ನವಾಗಿ ಜೊತೆಗೂಡುವುದು. ಜೊತೆಗೂಡಿಸುವ ಕೆಲಸವನ್ನು ಮಾಧ್ಯಮ ಮಾಡಬೇಕು. ಮಿಕ್ಕೆರಡು ವಲಯಗಳು ಜೊತೆಗೂಡಿ ಮಾಧ್ಯಮವನ್ನು ಕಟ್ಟಿ ನಿಲ್ಲಿಸಬೇಕು. ಅದು ಮಾತ್ರವೇ ದಾರಿ.

ನ್ಯಾಯಪಥ ಮತ್ತು ನಮ್ಮ ವೆಬ್‍ಸೈಟ್‍ಗಳು ಮಾಡಹೊರಟಿರುವುದು ಅದನ್ನೇ. ಇದನ್ನೇ ಈ ವಾರದಲ್ಲಿ ನಡೆಯಲಿರುವ ಜಿಲ್ಲಾ ಸಭೆಗಳಲ್ಲೂ ಚರ್ಚಿಸಲಾಗುವುದು. ಹೊಸ ರೀತಿಯ ಮಾಧ್ಯಮವು ಬೀದಿಯಲ್ಲಿರುವ ಜನತೆ ಮತ್ತು ಹೊಸಕಾಲದ ಬುದ್ಧಿಜೀವಿಗಳನ್ನು ಬೆಸೆಯುತ್ತಾ, ಅವೆರಡರಿಂದ ಪ್ರತ್ಯೇಕವಾಗುಳಿಯದೇ ತಾನೂ ಜೊತೆಗೂಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...