Homeಚಳವಳಿಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?...

ಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?…

- Advertisement -
- Advertisement -

ಪತ್ರಿಕೆಯಲ್ಲಿ ಈ ದಿನ ಅಥವಾ ವಾರ ನೀವು ಯಾವುದರ ಮೇಲೆ ಕೇಂದ್ರೀಕರಿಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸುವುದು ಈ ಕಾಲದಲ್ಲಿ ಅಷ್ಟು ಸುಲಭವಲ್ಲ. ಏಕೆಂದರೆ ನಿಮ್ಮ ಗಮನ ಅಸಲೀ ಸಮಸ್ಯೆಯ ಮೇಲೆ ಹೋಗದಂತೆ ಮಾಡಲೆಂದೇ ಕೆಲವು ವಾಗ್ವಾದಗಳನ್ನು ತೇಲಿಬಿಟ್ಟಿರಬಹುದೆಂಬ ಅನುಮಾನ ಬಂದಿರುತ್ತದೆ. ಕೆಲವೊಮ್ಮೆ ಅವು ಕೇವಲ ವಾಗ್ವಾದಗಳಾಗಿರುವುದಿಲ್ಲ; ಯಾರದ್ದೋ ಬದುಕಿನ ಅತ್ಯಂತ ಜ್ವಲಂತ ಸಮಸ್ಯೆಯಾಗಿರುತ್ತದೆ. ಉದಾಹರಣೆಗೆ ಕಾಶ್ಮೀರ, ಎನ್‍ಆರ್‍ಸಿ ಇತ್ಯಾದಿ. ಕೆಲವು ಸಾರಿ ಅದು ಯಾರ ಬದುಕಿನ ತಕ್ಷಣದ ಕಾಡುವ ಸಮಸ್ಯೆಯೂ ಆಗಿರುವುದಿಲ್ಲ; ಆದರೆ ನಮ್ಮ ಇತಿಹಾಸದಲ್ಲಿ ಅಡಗಿರುವ ಸತ್ಯಗಳನ್ನು ಬುಡಮೇಲು ಮಾಡುವ ಕೆಲಸ ನಡೆದಿರುತ್ತದೆ. ಸಾವರ್ಕರ್‌ಗೆ ಭಾರತರತ್ನ ನೀಡುತ್ತೇವೆನ್ನುವುದನ್ನು ಬಿಜೆಪಿ ಪಕ್ಷವು ಮಹಾರಾಷ್ಟ್ರ ಚುನಾವಣೆಯ ಪ್ರಣಾಳಿಕೆಯಲ್ಲಿ ಸೇರಿಸಿದ್ದು ಅದಕ್ಕೆ ನಿದರ್ಶನ.

ಅಸಲೀ ಸಮಸ್ಯೆ ಮತ್ತು ಹೊಸದಾಗಿ ಸೃಷ್ಟಿಸಿದ ಇಶ್ಯೂ ಎರಡನ್ನೂ ಆಯ್ದುಕೊಂಡು, ಅವುಗಳನ್ನು ಸತ್ಯದ ಮುಖಾಂತರ ಎದುರಿಸಬೇಕಾದ್ದು ನಮ್ಮ ಜವಾಬ್ದಾರಿ. ಆದರೆ, ಎರಡರಲ್ಲಿ ಒಂದನ್ನು ಮಾತ್ರ ಆಯ್ದುಕೊಳ್ಳುವಂತೆ ಪರಿಸ್ಥಿತಿ ದೂಡುತ್ತದೆ. ಇದು ರಾಜಕೀಯ ಕಾರ್ಯಕರ್ತರಿಗೆ ಮಾತ್ರವಲ್ಲದೇ, ನಮ್ಮಂತಹ ಪತ್ರಿಕೆಗಳಿಗೂ ಇರುವ ಸಂದಿಗ್ಧ.

ದೇಶದ ಸಾರ್ವಭೌಮತೆಯನ್ನು ಮತ್ತಷ್ಟು ಕಿತ್ತುಕೊಳ್ಳುವ ಆರ್‍ಸಿಇಪಿ ಒಪ್ಪಂದದ ಕುರಿತು ರೈತಸಂಘಗಳು ಪ್ರತಿಭಟಿಸುತ್ತಿರುವಾಗ ಅದಕ್ಕೆ ಇಂಬು ಕೊಡುವುದು ನಮ್ಮ ಕರ್ತವ್ಯ; ಕರ್ನಾಟಕದ ಬರ-ನೆರೆ ಸಂಕಷ್ಟಕ್ಕೆ ಪರಿಹಾರವಾಗಿ 1 ಲಕ್ಷ ಕೋಟಿ ಪ್ಯಾಕೇಜ್‍ಅನ್ನು ರೈತರು ಕೇಳುತ್ತಿರುವಾಗಲೇ, ಮತ್ತೊಂದು ಮಳೆ ಇಡೀ ರಾಜ್ಯವನ್ನು ಆವರಿಸಿದೆ. ಉತ್ತರ ಕರ್ನಾಟಕಕ್ಕೆ ಮತ್ತೊಮ್ಮೆ ಅಪ್ಪಳಿಸಿದೆ. ಬಿಎಸ್‍ಎನ್‍ಎಲ್‍ಅನ್ನು ಮುಳುಗಿಸುವ ಕಾಂಗ್ರೆಸ್‍ನ ಹಳೆಯ ಪ್ಲಾನ್‍ಅನ್ನು ಬಿಜೆಪಿ ಯಶಸ್ವಿ ಮಾಡುವ ಎಲ್ಲಾ ಲಕ್ಷಣಗಳೂ ಕಾಣುತ್ತಿವೆ. ಹೀಗಿರುವಾಗ ಸಿ.ಟಿ.ರವಿಯ ಮನೆಹಾಳ ಮಾತು, ಸಾವರ್ಕರ್‍ಗೆ ಭಾರತರತ್ನ ಇತ್ಯಾದಿಗಳು ನಮ್ಮನ್ನು ಬೇರೆ ಕಡೆಗೆ ಎಳೆಯುತ್ತವೆ. ಅದನ್ನು ಮುಗಿಸಿ ಬರುವ ಹೊತ್ತಿಗೆ ಬಿಎಸ್‍ಎನ್‍ಎಲ್ ಮುಳುಗಿ ರೈಲ್ವೇ ಖಾಸಗೀಕರಣದ ಮಾತು ನಡೆಯುತ್ತಿರುತ್ತದೆ. ಅದರ ಬಗ್ಗೆ ಮಾತು ಆಡುವುದು ಸಾಧ್ಯವೇ ಆಗದಂತೆ ದೇಶದ ಪ್ರಮುಖ ಸ್ಥಾನದಲ್ಲಿರುವ ವ್ಯಕ್ತಿ ‘ಗೋಡ್ಸೆ ದೇಶಭಕ್ತ ಎಂಬುದನ್ನು ಅಲ್ಲಗಳೆಯಲಾಗುವುದಿಲ್ಲ’ ಎಂದು ಹೇಳುವ ಸಾಧ್ಯತೆ ಇರುತ್ತದೆ.

ಆ ವಾರ ನಿಮಗೆ ಲಭ್ಯವಿರುವ ಮೂರು ಪುಟಗಳಲ್ಲಿ ಗೋಡ್ಸೆಯ ಕುರಿತು ಎಷ್ಟು ಮಾತನಾಡುವಿರಿ, ರೈಲ್ವೇ ಖಾಸಗೀಕರಣದ ಕುರಿತು ಏನು ಹೇಳುವಿರಿ ಎಂಬ ಸಂದಿಗ್ಧ ಎದುರಾಗುತ್ತದೆ. ಇಂತಹ ಸಂದಿಗ್ಧದಿಂದ ಹೊರಬರುವುದು ಸಾಧ್ಯವಿಲ್ಲವೇ? ಸಂತ್ರಸ್ತರು, ಕಾಳಜಿಯುಳ್ಳವರು, ಪ್ರಜಾತಂತ್ರವಾದಿಗಳೆಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಅನಿಸಿಕೆ ಹೇಳಿ, ಟ್ವಿಟ್ಟರ್ ಟ್ರೆಂಡ್ ಮಾಡಿಬಿಟ್ಟರೆ ಸಾಕೇ?

ಖಂಡಿತಾ ಸಾಲದು. ಬೀದಿಯಲ್ಲಿ ಸಂತ್ರಸ್ತರು ಒಟ್ಟುಗೂಡಿ ಶಕ್ತಿಯುತವಾಗಿ ತಮ್ಮ ಅನಿಸಿಕೆಗಳನ್ನು ಮುಂದಿಡುವುದು, ಬುದ್ಧಿಜೀವಿಗಳು ಸರಿಯಾದ ಹತಾರಗಳೊಂದಿಗೆ ತಮ್ಮದೇ ಆದ ಮಾಧ್ಯಮಗಳನ್ನು ಹುಡುಕಿಕೊಂಡು ವಾಗ್ವಾದಕ್ಕಿಳಿಯುವುದು ಎರಡೂ ಆಗಬೇಕು. ಮಾಧ್ಯಮವು ಇವೆರಡಕ್ಕೂ ಸೂಕ್ತ ಅವಕಾಶ ಕಲ್ಪಿಸಿ ಅದನ್ನು ವ್ಯಾಪಕಗೊಳಿಸಬೇಕು; ಅಧಿಕಾರಸ್ಥರ ಮೇಲೆ ಒತ್ತಡ ತರಬೇಕು. ಆಗ ಪರಿಣಾಮ ಕಾಣತೊಡಗುತ್ತದೆ. ಆದರೆ, ಇಂದಿನ ಮಾಧ್ಯಮ ಇವೆರಡನ್ನೂ (ಬೀದಿಯಲ್ಲಿನ ಭಿನ್ನಮತ ಮತ್ತು ಬುದ್ಧಿಜೀವಿಗಳ ಅಭಿಮತ) ದಿಕ್ಕೆಡಿಸುವ ಕೆಲಸ ಮಾಡುತ್ತಿದೆ. ಅದರ ಫಲವಾಗಿ ಎಲ್ಲವೂ ದುರ್ಬಲವಾಗಿಬಿಟ್ಟಿವೆ. ಹಾಗಾದರೆ ದಾರಿಯೇನು? ದಾರಿಯಿಷ್ಟೇ; ಇವು ಮೂರೂ ಅಭಿನ್ನವಾಗಿ ಜೊತೆಗೂಡುವುದು. ಜೊತೆಗೂಡಿಸುವ ಕೆಲಸವನ್ನು ಮಾಧ್ಯಮ ಮಾಡಬೇಕು. ಮಿಕ್ಕೆರಡು ವಲಯಗಳು ಜೊತೆಗೂಡಿ ಮಾಧ್ಯಮವನ್ನು ಕಟ್ಟಿ ನಿಲ್ಲಿಸಬೇಕು. ಅದು ಮಾತ್ರವೇ ದಾರಿ.

ನ್ಯಾಯಪಥ ಮತ್ತು ನಮ್ಮ ವೆಬ್‍ಸೈಟ್‍ಗಳು ಮಾಡಹೊರಟಿರುವುದು ಅದನ್ನೇ. ಇದನ್ನೇ ಈ ವಾರದಲ್ಲಿ ನಡೆಯಲಿರುವ ಜಿಲ್ಲಾ ಸಭೆಗಳಲ್ಲೂ ಚರ್ಚಿಸಲಾಗುವುದು. ಹೊಸ ರೀತಿಯ ಮಾಧ್ಯಮವು ಬೀದಿಯಲ್ಲಿರುವ ಜನತೆ ಮತ್ತು ಹೊಸಕಾಲದ ಬುದ್ಧಿಜೀವಿಗಳನ್ನು ಬೆಸೆಯುತ್ತಾ, ಅವೆರಡರಿಂದ ಪ್ರತ್ಯೇಕವಾಗುಳಿಯದೇ ತಾನೂ ಜೊತೆಗೂಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...