Homeಚಳವಳಿಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?...

ಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?…

- Advertisement -
- Advertisement -

ಪತ್ರಿಕೆಯಲ್ಲಿ ಈ ದಿನ ಅಥವಾ ವಾರ ನೀವು ಯಾವುದರ ಮೇಲೆ ಕೇಂದ್ರೀಕರಿಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸುವುದು ಈ ಕಾಲದಲ್ಲಿ ಅಷ್ಟು ಸುಲಭವಲ್ಲ. ಏಕೆಂದರೆ ನಿಮ್ಮ ಗಮನ ಅಸಲೀ ಸಮಸ್ಯೆಯ ಮೇಲೆ ಹೋಗದಂತೆ ಮಾಡಲೆಂದೇ ಕೆಲವು ವಾಗ್ವಾದಗಳನ್ನು ತೇಲಿಬಿಟ್ಟಿರಬಹುದೆಂಬ ಅನುಮಾನ ಬಂದಿರುತ್ತದೆ. ಕೆಲವೊಮ್ಮೆ ಅವು ಕೇವಲ ವಾಗ್ವಾದಗಳಾಗಿರುವುದಿಲ್ಲ; ಯಾರದ್ದೋ ಬದುಕಿನ ಅತ್ಯಂತ ಜ್ವಲಂತ ಸಮಸ್ಯೆಯಾಗಿರುತ್ತದೆ. ಉದಾಹರಣೆಗೆ ಕಾಶ್ಮೀರ, ಎನ್‍ಆರ್‍ಸಿ ಇತ್ಯಾದಿ. ಕೆಲವು ಸಾರಿ ಅದು ಯಾರ ಬದುಕಿನ ತಕ್ಷಣದ ಕಾಡುವ ಸಮಸ್ಯೆಯೂ ಆಗಿರುವುದಿಲ್ಲ; ಆದರೆ ನಮ್ಮ ಇತಿಹಾಸದಲ್ಲಿ ಅಡಗಿರುವ ಸತ್ಯಗಳನ್ನು ಬುಡಮೇಲು ಮಾಡುವ ಕೆಲಸ ನಡೆದಿರುತ್ತದೆ. ಸಾವರ್ಕರ್‌ಗೆ ಭಾರತರತ್ನ ನೀಡುತ್ತೇವೆನ್ನುವುದನ್ನು ಬಿಜೆಪಿ ಪಕ್ಷವು ಮಹಾರಾಷ್ಟ್ರ ಚುನಾವಣೆಯ ಪ್ರಣಾಳಿಕೆಯಲ್ಲಿ ಸೇರಿಸಿದ್ದು ಅದಕ್ಕೆ ನಿದರ್ಶನ.

ಅಸಲೀ ಸಮಸ್ಯೆ ಮತ್ತು ಹೊಸದಾಗಿ ಸೃಷ್ಟಿಸಿದ ಇಶ್ಯೂ ಎರಡನ್ನೂ ಆಯ್ದುಕೊಂಡು, ಅವುಗಳನ್ನು ಸತ್ಯದ ಮುಖಾಂತರ ಎದುರಿಸಬೇಕಾದ್ದು ನಮ್ಮ ಜವಾಬ್ದಾರಿ. ಆದರೆ, ಎರಡರಲ್ಲಿ ಒಂದನ್ನು ಮಾತ್ರ ಆಯ್ದುಕೊಳ್ಳುವಂತೆ ಪರಿಸ್ಥಿತಿ ದೂಡುತ್ತದೆ. ಇದು ರಾಜಕೀಯ ಕಾರ್ಯಕರ್ತರಿಗೆ ಮಾತ್ರವಲ್ಲದೇ, ನಮ್ಮಂತಹ ಪತ್ರಿಕೆಗಳಿಗೂ ಇರುವ ಸಂದಿಗ್ಧ.

ದೇಶದ ಸಾರ್ವಭೌಮತೆಯನ್ನು ಮತ್ತಷ್ಟು ಕಿತ್ತುಕೊಳ್ಳುವ ಆರ್‍ಸಿಇಪಿ ಒಪ್ಪಂದದ ಕುರಿತು ರೈತಸಂಘಗಳು ಪ್ರತಿಭಟಿಸುತ್ತಿರುವಾಗ ಅದಕ್ಕೆ ಇಂಬು ಕೊಡುವುದು ನಮ್ಮ ಕರ್ತವ್ಯ; ಕರ್ನಾಟಕದ ಬರ-ನೆರೆ ಸಂಕಷ್ಟಕ್ಕೆ ಪರಿಹಾರವಾಗಿ 1 ಲಕ್ಷ ಕೋಟಿ ಪ್ಯಾಕೇಜ್‍ಅನ್ನು ರೈತರು ಕೇಳುತ್ತಿರುವಾಗಲೇ, ಮತ್ತೊಂದು ಮಳೆ ಇಡೀ ರಾಜ್ಯವನ್ನು ಆವರಿಸಿದೆ. ಉತ್ತರ ಕರ್ನಾಟಕಕ್ಕೆ ಮತ್ತೊಮ್ಮೆ ಅಪ್ಪಳಿಸಿದೆ. ಬಿಎಸ್‍ಎನ್‍ಎಲ್‍ಅನ್ನು ಮುಳುಗಿಸುವ ಕಾಂಗ್ರೆಸ್‍ನ ಹಳೆಯ ಪ್ಲಾನ್‍ಅನ್ನು ಬಿಜೆಪಿ ಯಶಸ್ವಿ ಮಾಡುವ ಎಲ್ಲಾ ಲಕ್ಷಣಗಳೂ ಕಾಣುತ್ತಿವೆ. ಹೀಗಿರುವಾಗ ಸಿ.ಟಿ.ರವಿಯ ಮನೆಹಾಳ ಮಾತು, ಸಾವರ್ಕರ್‍ಗೆ ಭಾರತರತ್ನ ಇತ್ಯಾದಿಗಳು ನಮ್ಮನ್ನು ಬೇರೆ ಕಡೆಗೆ ಎಳೆಯುತ್ತವೆ. ಅದನ್ನು ಮುಗಿಸಿ ಬರುವ ಹೊತ್ತಿಗೆ ಬಿಎಸ್‍ಎನ್‍ಎಲ್ ಮುಳುಗಿ ರೈಲ್ವೇ ಖಾಸಗೀಕರಣದ ಮಾತು ನಡೆಯುತ್ತಿರುತ್ತದೆ. ಅದರ ಬಗ್ಗೆ ಮಾತು ಆಡುವುದು ಸಾಧ್ಯವೇ ಆಗದಂತೆ ದೇಶದ ಪ್ರಮುಖ ಸ್ಥಾನದಲ್ಲಿರುವ ವ್ಯಕ್ತಿ ‘ಗೋಡ್ಸೆ ದೇಶಭಕ್ತ ಎಂಬುದನ್ನು ಅಲ್ಲಗಳೆಯಲಾಗುವುದಿಲ್ಲ’ ಎಂದು ಹೇಳುವ ಸಾಧ್ಯತೆ ಇರುತ್ತದೆ.

ಆ ವಾರ ನಿಮಗೆ ಲಭ್ಯವಿರುವ ಮೂರು ಪುಟಗಳಲ್ಲಿ ಗೋಡ್ಸೆಯ ಕುರಿತು ಎಷ್ಟು ಮಾತನಾಡುವಿರಿ, ರೈಲ್ವೇ ಖಾಸಗೀಕರಣದ ಕುರಿತು ಏನು ಹೇಳುವಿರಿ ಎಂಬ ಸಂದಿಗ್ಧ ಎದುರಾಗುತ್ತದೆ. ಇಂತಹ ಸಂದಿಗ್ಧದಿಂದ ಹೊರಬರುವುದು ಸಾಧ್ಯವಿಲ್ಲವೇ? ಸಂತ್ರಸ್ತರು, ಕಾಳಜಿಯುಳ್ಳವರು, ಪ್ರಜಾತಂತ್ರವಾದಿಗಳೆಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಅನಿಸಿಕೆ ಹೇಳಿ, ಟ್ವಿಟ್ಟರ್ ಟ್ರೆಂಡ್ ಮಾಡಿಬಿಟ್ಟರೆ ಸಾಕೇ?

ಖಂಡಿತಾ ಸಾಲದು. ಬೀದಿಯಲ್ಲಿ ಸಂತ್ರಸ್ತರು ಒಟ್ಟುಗೂಡಿ ಶಕ್ತಿಯುತವಾಗಿ ತಮ್ಮ ಅನಿಸಿಕೆಗಳನ್ನು ಮುಂದಿಡುವುದು, ಬುದ್ಧಿಜೀವಿಗಳು ಸರಿಯಾದ ಹತಾರಗಳೊಂದಿಗೆ ತಮ್ಮದೇ ಆದ ಮಾಧ್ಯಮಗಳನ್ನು ಹುಡುಕಿಕೊಂಡು ವಾಗ್ವಾದಕ್ಕಿಳಿಯುವುದು ಎರಡೂ ಆಗಬೇಕು. ಮಾಧ್ಯಮವು ಇವೆರಡಕ್ಕೂ ಸೂಕ್ತ ಅವಕಾಶ ಕಲ್ಪಿಸಿ ಅದನ್ನು ವ್ಯಾಪಕಗೊಳಿಸಬೇಕು; ಅಧಿಕಾರಸ್ಥರ ಮೇಲೆ ಒತ್ತಡ ತರಬೇಕು. ಆಗ ಪರಿಣಾಮ ಕಾಣತೊಡಗುತ್ತದೆ. ಆದರೆ, ಇಂದಿನ ಮಾಧ್ಯಮ ಇವೆರಡನ್ನೂ (ಬೀದಿಯಲ್ಲಿನ ಭಿನ್ನಮತ ಮತ್ತು ಬುದ್ಧಿಜೀವಿಗಳ ಅಭಿಮತ) ದಿಕ್ಕೆಡಿಸುವ ಕೆಲಸ ಮಾಡುತ್ತಿದೆ. ಅದರ ಫಲವಾಗಿ ಎಲ್ಲವೂ ದುರ್ಬಲವಾಗಿಬಿಟ್ಟಿವೆ. ಹಾಗಾದರೆ ದಾರಿಯೇನು? ದಾರಿಯಿಷ್ಟೇ; ಇವು ಮೂರೂ ಅಭಿನ್ನವಾಗಿ ಜೊತೆಗೂಡುವುದು. ಜೊತೆಗೂಡಿಸುವ ಕೆಲಸವನ್ನು ಮಾಧ್ಯಮ ಮಾಡಬೇಕು. ಮಿಕ್ಕೆರಡು ವಲಯಗಳು ಜೊತೆಗೂಡಿ ಮಾಧ್ಯಮವನ್ನು ಕಟ್ಟಿ ನಿಲ್ಲಿಸಬೇಕು. ಅದು ಮಾತ್ರವೇ ದಾರಿ.

ನ್ಯಾಯಪಥ ಮತ್ತು ನಮ್ಮ ವೆಬ್‍ಸೈಟ್‍ಗಳು ಮಾಡಹೊರಟಿರುವುದು ಅದನ್ನೇ. ಇದನ್ನೇ ಈ ವಾರದಲ್ಲಿ ನಡೆಯಲಿರುವ ಜಿಲ್ಲಾ ಸಭೆಗಳಲ್ಲೂ ಚರ್ಚಿಸಲಾಗುವುದು. ಹೊಸ ರೀತಿಯ ಮಾಧ್ಯಮವು ಬೀದಿಯಲ್ಲಿರುವ ಜನತೆ ಮತ್ತು ಹೊಸಕಾಲದ ಬುದ್ಧಿಜೀವಿಗಳನ್ನು ಬೆಸೆಯುತ್ತಾ, ಅವೆರಡರಿಂದ ಪ್ರತ್ಯೇಕವಾಗುಳಿಯದೇ ತಾನೂ ಜೊತೆಗೂಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....