Homeಅಂಕಣಗಳುಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?

ಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?

- Advertisement -
- Advertisement -

| ಡಾ. ವಾಸು ಎಚ್.ವಿ |

ಪತ್ರಿಕೆಯಲ್ಲಿ ಈ ದಿನ ಅಥವಾ ವಾರ ನೀವು ಯಾವುದರ ಮೇಲೆ ಕೇಂದ್ರೀಕರಿಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸುವುದು ಈ ಕಾಲದಲ್ಲಿ ಅಷ್ಟು ಸುಲಭವಲ್ಲ. ಏಕೆಂದರೆ ನಿಮ್ಮ ಗಮನ ಅಸಲೀ ಸಮಸ್ಯೆಯ ಮೇಲೆ ಹೋಗದಂತೆ ಮಾಡಲೆಂದೇ ಕೆಲವು ವಾಗ್ವಾದಗಳನ್ನು ತೇಲಿಬಿಟ್ಟಿರಬಹುದೆಂಬ ಅನುಮಾನ ಬಂದಿರುತ್ತದೆ. ಕೆಲವೊಮ್ಮೆ ಅವು ಕೇವಲ ವಾಗ್ವಾದಗಳಾಗಿರುವುದಿಲ್ಲ; ಯಾರದ್ದೋ ಬದುಕಿನ ಅತ್ಯಂತ ಜ್ವಲಂತ ಸಮಸ್ಯೆಯಾಗಿರುತ್ತದೆ. ಉದಾಹರಣೆಗೆ ಕಾಶ್ಮೀರ, ಎನ್‍ಆರ್‍ಸಿ ಇತ್ಯಾದಿ. ಕೆಲವು ಸಾರಿ ಅದು ಯಾರ ಬದುಕಿನ ತಕ್ಷಣದ ಕಾಡುವ ಸಮಸ್ಯೆಯೂ ಆಗಿರುವುದಿಲ್ಲ; ಆದರೆ ನಮ್ಮ ಇತಿಹಾಸದಲ್ಲಿ ಅಡಗಿರುವ ಸತ್ಯಗಳನ್ನು ಬುಡಮೇಲು ಮಾಡುವ ಕೆಲಸ ನಡೆದಿರುತ್ತದೆ. ಸಾವರ್ಕರ್‍ಗೆ ಭಾರತರತ್ನ ನೀಡುತ್ತೇವೆನ್ನುವುದನ್ನು ಬಿಜೆಪಿ ಪಕ್ಷವು ಮಹಾರಾಷ್ಟ್ರ ಚುನಾವಣೆಯ ಪ್ರಣಾಳಿಕೆಯಲ್ಲಿ ಸೇರಿಸಿದ್ದು ಅದಕ್ಕೆ ನಿದರ್ಶನ.

ಅಸಲೀ ಸಮಸ್ಯೆ ಮತ್ತು ಹೊಸದಾಗಿ ಸೃಷ್ಟಿಸಿದ ಇಶ್ಯೂ ಎರಡನ್ನೂ ಆಯ್ದುಕೊಂಡು, ಅವುಗಳನ್ನು ಸತ್ಯದ ಮುಖಾಂತರ ಎದುರಿಸಬೇಕಾದ್ದು ನಮ್ಮ ಜವಾಬ್ದಾರಿ. ಆದರೆ, ಎರಡರಲ್ಲಿ ಒಂದನ್ನು ಮಾತ್ರ ಆಯ್ದುಕೊಳ್ಳುವಂತೆ ಪರಿಸ್ಥಿತಿ ದೂಡುತ್ತದೆ. ಇದು ರಾಜಕೀಯ ಕಾರ್ಯಕರ್ತರಿಗೆ ಮಾತ್ರವಲ್ಲದೇ, ನಮ್ಮಂತಹ ಪತ್ರಿಕೆಗಳಿಗೂ ಇರುವ ಸಂದಿಗ್ಧ.

ದೇಶದ ಸಾರ್ವಭೌಮತೆಯನ್ನು ಮತ್ತಷ್ಟು ಕಿತ್ತುಕೊಳ್ಳುವ ಆರ್‍ಸಿಇಪಿ ಒಪ್ಪಂದದ ಕುರಿತು ರೈತಸಂಘಗಳು ಪ್ರತಿಭಟಿಸುತ್ತಿರುವಾಗ ಅದಕ್ಕೆ ಇಂಬು ಕೊಡುವುದು ನಮ್ಮ ಕರ್ತವ್ಯ; ಕರ್ನಾಟಕದ ಬರ-ನೆರೆ ಸಂಕಷ್ಟಕ್ಕೆ ಪರಿಹಾರವಾಗಿ 1 ಲಕ್ಷ ಕೋಟಿ ಪ್ಯಾಕೇಜ್‍ಅನ್ನು ರೈತರು ಕೇಳುತ್ತಿರುವಾಗಲೇ, ಮತ್ತೊಂದು ಮಳೆ ಇಡೀ ರಾಜ್ಯವನ್ನು ಆವರಿಸಿದೆ. ಉತ್ತರ ಕರ್ನಾಟಕಕ್ಕೆ ಮತ್ತೊಮ್ಮೆ ಅಪ್ಪಳಿಸಿದೆ. ಬಿಎಸ್‍ಎನ್‍ಎಲ್‍ಅನ್ನು ಮುಳುಗಿಸುವ ಕಾಂಗ್ರೆಸ್‍ನ ಹಳೆಯ ಪ್ಲಾನ್‍ಅನ್ನು ಬಿಜೆಪಿ ಯಶಸ್ವಿ ಮಾಡುವ ಎಲ್ಲಾ ಲಕ್ಷಣಗಳೂ ಕಾಣುತ್ತಿವೆ. ಹೀಗಿರುವಾಗ ಸಿ.ಟಿ.ರವಿಯ ಮನೆಹಾಳ ಮಾತು, ಸಾವರ್ಕರ್‍ಗೆ ಭಾರತರತ್ನ ಇತ್ಯಾದಿಗಳು ನಮ್ಮನ್ನು ಬೇರೆ ಕಡೆಗೆ ಎಳೆಯುತ್ತವೆ. ಅದನ್ನು ಮುಗಿಸಿ ಬರುವ ಹೊತ್ತಿಗೆ ಬಿಎಸ್‍ಎನ್‍ಎಲ್ ಮುಳುಗಿ ರೈಲ್ವೇ ಖಾಸಗೀಕರಣದ ಮಾತು ನಡೆಯುತ್ತಿರುತ್ತದೆ. ಅದರ ಬಗ್ಗೆ ಮಾತು ಆಡುವುದು ಸಾಧ್ಯವೇ ಆಗದಂತೆ ದೇಶದ ಪ್ರಮುಖ ಸ್ಥಾನದಲ್ಲಿರುವ ವ್ಯಕ್ತಿ ‘ಗೋಡ್ಸೆ ದೇಶಭಕ್ತ ಎಂಬುದನ್ನು ಅಲ್ಲಗಳೆಯಲಾಗುವುದಿಲ್ಲ’ ಎಂದು ಹೇಳುವ ಸಾಧ್ಯತೆ ಇರುತ್ತದೆ.

ಆ ವಾರ ನಿಮಗೆ ಲಭ್ಯವಿರುವ ಮೂರು ಪುಟಗಳಲ್ಲಿ ಗೋಡ್ಸೆಯ ಕುರಿತು ಎಷ್ಟು ಮಾತನಾಡುವಿರಿ, ರೈಲ್ವೇ ಖಾಸಗೀಕರಣದ ಕುರಿತು ಏನು ಹೇಳುವಿರಿ ಎಂಬ ಸಂದಿಗ್ಧ ಎದುರಾಗುತ್ತದೆ. ಇಂತಹ ಸಂದಿಗ್ಧದಿಂದ ಹೊರಬರುವುದು ಸಾಧ್ಯವಿಲ್ಲವೇ? ಸಂತ್ರಸ್ತರು, ಕಾಳಜಿಯುಳ್ಳವರು, ಪ್ರಜಾತಂತ್ರವಾದಿಗಳೆಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಅನಿಸಿಕೆ ಹೇಳಿ, ಟ್ವಿಟ್ಟರ್ ಟ್ರೆಂಡ್ ಮಾಡಿಬಿಟ್ಟರೆ ಸಾಕೇ?

ಖಂಡಿತಾ ಸಾಲದು. ಬೀದಿಯಲ್ಲಿ ಸಂತ್ರಸ್ತರು ಒಟ್ಟುಗೂಡಿ ಶಕ್ತಿಯುತವಾಗಿ ತಮ್ಮ ಅನಿಸಿಕೆಗಳನ್ನು ಮುಂದಿಡುವುದು, ಬುದ್ಧಿಜೀವಿಗಳು ಸರಿಯಾದ ಹತಾರಗಳೊಂದಿಗೆ ತಮ್ಮದೇ ಆದ ಮಾಧ್ಯಮಗಳನ್ನು ಹುಡುಕಿಕೊಂಡು ವಾಗ್ವಾದಕ್ಕಿಳಿಯುವುದು ಎರಡೂ ಆಗಬೇಕು. ಮಾಧ್ಯಮವು ಇವೆರಡಕ್ಕೂ ಸೂಕ್ತ ಅವಕಾಶ ಕಲ್ಪಿಸಿ ಅದನ್ನು ವ್ಯಾಪಕಗೊಳಿಸಬೇಕು; ಅಧಿಕಾರಸ್ಥರ ಮೇಲೆ ಒತ್ತಡ ತರಬೇಕು. ಆಗ ಪರಿಣಾಮ ಕಾಣತೊಡಗುತ್ತದೆ. ಆದರೆ, ಇಂದಿನ ಮಾಧ್ಯಮ ಇವೆರಡನ್ನೂ (ಬೀದಿಯಲ್ಲಿನ ಭಿನ್ನಮತ ಮತ್ತು ಬುದ್ಧಿಜೀವಿಗಳ ಅಭಿಮತ) ದಿಕ್ಕೆಡಿಸುವ ಕೆಲಸ ಮಾಡುತ್ತಿದೆ. ಅದರ ಫಲವಾಗಿ ಎಲ್ಲವೂ ದುರ್ಬಲವಾಗಿಬಿಟ್ಟಿವೆ. ಹಾಗಾದರೆ ದಾರಿಯೇನು? ದಾರಿಯಿಷ್ಟೇ; ಇವು ಮೂರೂ ಅಭಿನ್ನವಾಗಿ ಜೊತೆಗೂಡುವುದು. ಜೊತೆಗೂಡಿಸುವ ಕೆಲಸವನ್ನು ಮಾಧ್ಯಮ ಮಾಡಬೇಕು. ಮಿಕ್ಕೆರಡು ವಲಯಗಳು ಜೊತೆಗೂಡಿ ಮಾಧ್ಯಮವನ್ನು ಕಟ್ಟಿ ನಿಲ್ಲಿಸಬೇಕು. ಅದು ಮಾತ್ರವೇ ದಾರಿ.

ನ್ಯಾಯಪಥ ಮತ್ತು ನಮ್ಮ ವೆಬ್‍ಸೈಟ್‍ಗಳು ಮಾಡಹೊರಟಿರುವುದು ಅದನ್ನೇ. ಇದನ್ನೇ ಈ ವಾರದಲ್ಲಿ ನಡೆಯಲಿರುವ ಜಿಲ್ಲಾ ಸಭೆಗಳಲ್ಲೂ ಚರ್ಚಿಸಲಾಗುವುದು. ಹೊಸ ರೀತಿಯ ಮಾಧ್ಯಮವು ಬೀದಿಯಲ್ಲಿರುವ ಜನತೆ ಮತ್ತು ಹೊಸಕಾಲದ ಬುದ್ಧಿಜೀವಿಗಳನ್ನು ಬೆಸೆಯುತ್ತಾ, ಅವೆರಡರಿಂದ ಪ್ರತ್ಯೇಕವಾಗುಳಿಯದೇ ತಾನೂ ಜೊತೆಗೂಡುತ್ತದೆ.
– ಸಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...