Homeಅಂಕಣಗಳುಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?

ಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?

- Advertisement -
- Advertisement -

| ಡಾ. ವಾಸು ಎಚ್.ವಿ |

ಪತ್ರಿಕೆಯಲ್ಲಿ ಈ ದಿನ ಅಥವಾ ವಾರ ನೀವು ಯಾವುದರ ಮೇಲೆ ಕೇಂದ್ರೀಕರಿಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸುವುದು ಈ ಕಾಲದಲ್ಲಿ ಅಷ್ಟು ಸುಲಭವಲ್ಲ. ಏಕೆಂದರೆ ನಿಮ್ಮ ಗಮನ ಅಸಲೀ ಸಮಸ್ಯೆಯ ಮೇಲೆ ಹೋಗದಂತೆ ಮಾಡಲೆಂದೇ ಕೆಲವು ವಾಗ್ವಾದಗಳನ್ನು ತೇಲಿಬಿಟ್ಟಿರಬಹುದೆಂಬ ಅನುಮಾನ ಬಂದಿರುತ್ತದೆ. ಕೆಲವೊಮ್ಮೆ ಅವು ಕೇವಲ ವಾಗ್ವಾದಗಳಾಗಿರುವುದಿಲ್ಲ; ಯಾರದ್ದೋ ಬದುಕಿನ ಅತ್ಯಂತ ಜ್ವಲಂತ ಸಮಸ್ಯೆಯಾಗಿರುತ್ತದೆ. ಉದಾಹರಣೆಗೆ ಕಾಶ್ಮೀರ, ಎನ್‍ಆರ್‍ಸಿ ಇತ್ಯಾದಿ. ಕೆಲವು ಸಾರಿ ಅದು ಯಾರ ಬದುಕಿನ ತಕ್ಷಣದ ಕಾಡುವ ಸಮಸ್ಯೆಯೂ ಆಗಿರುವುದಿಲ್ಲ; ಆದರೆ ನಮ್ಮ ಇತಿಹಾಸದಲ್ಲಿ ಅಡಗಿರುವ ಸತ್ಯಗಳನ್ನು ಬುಡಮೇಲು ಮಾಡುವ ಕೆಲಸ ನಡೆದಿರುತ್ತದೆ. ಸಾವರ್ಕರ್‍ಗೆ ಭಾರತರತ್ನ ನೀಡುತ್ತೇವೆನ್ನುವುದನ್ನು ಬಿಜೆಪಿ ಪಕ್ಷವು ಮಹಾರಾಷ್ಟ್ರ ಚುನಾವಣೆಯ ಪ್ರಣಾಳಿಕೆಯಲ್ಲಿ ಸೇರಿಸಿದ್ದು ಅದಕ್ಕೆ ನಿದರ್ಶನ.

ಅಸಲೀ ಸಮಸ್ಯೆ ಮತ್ತು ಹೊಸದಾಗಿ ಸೃಷ್ಟಿಸಿದ ಇಶ್ಯೂ ಎರಡನ್ನೂ ಆಯ್ದುಕೊಂಡು, ಅವುಗಳನ್ನು ಸತ್ಯದ ಮುಖಾಂತರ ಎದುರಿಸಬೇಕಾದ್ದು ನಮ್ಮ ಜವಾಬ್ದಾರಿ. ಆದರೆ, ಎರಡರಲ್ಲಿ ಒಂದನ್ನು ಮಾತ್ರ ಆಯ್ದುಕೊಳ್ಳುವಂತೆ ಪರಿಸ್ಥಿತಿ ದೂಡುತ್ತದೆ. ಇದು ರಾಜಕೀಯ ಕಾರ್ಯಕರ್ತರಿಗೆ ಮಾತ್ರವಲ್ಲದೇ, ನಮ್ಮಂತಹ ಪತ್ರಿಕೆಗಳಿಗೂ ಇರುವ ಸಂದಿಗ್ಧ.

ದೇಶದ ಸಾರ್ವಭೌಮತೆಯನ್ನು ಮತ್ತಷ್ಟು ಕಿತ್ತುಕೊಳ್ಳುವ ಆರ್‍ಸಿಇಪಿ ಒಪ್ಪಂದದ ಕುರಿತು ರೈತಸಂಘಗಳು ಪ್ರತಿಭಟಿಸುತ್ತಿರುವಾಗ ಅದಕ್ಕೆ ಇಂಬು ಕೊಡುವುದು ನಮ್ಮ ಕರ್ತವ್ಯ; ಕರ್ನಾಟಕದ ಬರ-ನೆರೆ ಸಂಕಷ್ಟಕ್ಕೆ ಪರಿಹಾರವಾಗಿ 1 ಲಕ್ಷ ಕೋಟಿ ಪ್ಯಾಕೇಜ್‍ಅನ್ನು ರೈತರು ಕೇಳುತ್ತಿರುವಾಗಲೇ, ಮತ್ತೊಂದು ಮಳೆ ಇಡೀ ರಾಜ್ಯವನ್ನು ಆವರಿಸಿದೆ. ಉತ್ತರ ಕರ್ನಾಟಕಕ್ಕೆ ಮತ್ತೊಮ್ಮೆ ಅಪ್ಪಳಿಸಿದೆ. ಬಿಎಸ್‍ಎನ್‍ಎಲ್‍ಅನ್ನು ಮುಳುಗಿಸುವ ಕಾಂಗ್ರೆಸ್‍ನ ಹಳೆಯ ಪ್ಲಾನ್‍ಅನ್ನು ಬಿಜೆಪಿ ಯಶಸ್ವಿ ಮಾಡುವ ಎಲ್ಲಾ ಲಕ್ಷಣಗಳೂ ಕಾಣುತ್ತಿವೆ. ಹೀಗಿರುವಾಗ ಸಿ.ಟಿ.ರವಿಯ ಮನೆಹಾಳ ಮಾತು, ಸಾವರ್ಕರ್‍ಗೆ ಭಾರತರತ್ನ ಇತ್ಯಾದಿಗಳು ನಮ್ಮನ್ನು ಬೇರೆ ಕಡೆಗೆ ಎಳೆಯುತ್ತವೆ. ಅದನ್ನು ಮುಗಿಸಿ ಬರುವ ಹೊತ್ತಿಗೆ ಬಿಎಸ್‍ಎನ್‍ಎಲ್ ಮುಳುಗಿ ರೈಲ್ವೇ ಖಾಸಗೀಕರಣದ ಮಾತು ನಡೆಯುತ್ತಿರುತ್ತದೆ. ಅದರ ಬಗ್ಗೆ ಮಾತು ಆಡುವುದು ಸಾಧ್ಯವೇ ಆಗದಂತೆ ದೇಶದ ಪ್ರಮುಖ ಸ್ಥಾನದಲ್ಲಿರುವ ವ್ಯಕ್ತಿ ‘ಗೋಡ್ಸೆ ದೇಶಭಕ್ತ ಎಂಬುದನ್ನು ಅಲ್ಲಗಳೆಯಲಾಗುವುದಿಲ್ಲ’ ಎಂದು ಹೇಳುವ ಸಾಧ್ಯತೆ ಇರುತ್ತದೆ.

ಆ ವಾರ ನಿಮಗೆ ಲಭ್ಯವಿರುವ ಮೂರು ಪುಟಗಳಲ್ಲಿ ಗೋಡ್ಸೆಯ ಕುರಿತು ಎಷ್ಟು ಮಾತನಾಡುವಿರಿ, ರೈಲ್ವೇ ಖಾಸಗೀಕರಣದ ಕುರಿತು ಏನು ಹೇಳುವಿರಿ ಎಂಬ ಸಂದಿಗ್ಧ ಎದುರಾಗುತ್ತದೆ. ಇಂತಹ ಸಂದಿಗ್ಧದಿಂದ ಹೊರಬರುವುದು ಸಾಧ್ಯವಿಲ್ಲವೇ? ಸಂತ್ರಸ್ತರು, ಕಾಳಜಿಯುಳ್ಳವರು, ಪ್ರಜಾತಂತ್ರವಾದಿಗಳೆಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಅನಿಸಿಕೆ ಹೇಳಿ, ಟ್ವಿಟ್ಟರ್ ಟ್ರೆಂಡ್ ಮಾಡಿಬಿಟ್ಟರೆ ಸಾಕೇ?

ಖಂಡಿತಾ ಸಾಲದು. ಬೀದಿಯಲ್ಲಿ ಸಂತ್ರಸ್ತರು ಒಟ್ಟುಗೂಡಿ ಶಕ್ತಿಯುತವಾಗಿ ತಮ್ಮ ಅನಿಸಿಕೆಗಳನ್ನು ಮುಂದಿಡುವುದು, ಬುದ್ಧಿಜೀವಿಗಳು ಸರಿಯಾದ ಹತಾರಗಳೊಂದಿಗೆ ತಮ್ಮದೇ ಆದ ಮಾಧ್ಯಮಗಳನ್ನು ಹುಡುಕಿಕೊಂಡು ವಾಗ್ವಾದಕ್ಕಿಳಿಯುವುದು ಎರಡೂ ಆಗಬೇಕು. ಮಾಧ್ಯಮವು ಇವೆರಡಕ್ಕೂ ಸೂಕ್ತ ಅವಕಾಶ ಕಲ್ಪಿಸಿ ಅದನ್ನು ವ್ಯಾಪಕಗೊಳಿಸಬೇಕು; ಅಧಿಕಾರಸ್ಥರ ಮೇಲೆ ಒತ್ತಡ ತರಬೇಕು. ಆಗ ಪರಿಣಾಮ ಕಾಣತೊಡಗುತ್ತದೆ. ಆದರೆ, ಇಂದಿನ ಮಾಧ್ಯಮ ಇವೆರಡನ್ನೂ (ಬೀದಿಯಲ್ಲಿನ ಭಿನ್ನಮತ ಮತ್ತು ಬುದ್ಧಿಜೀವಿಗಳ ಅಭಿಮತ) ದಿಕ್ಕೆಡಿಸುವ ಕೆಲಸ ಮಾಡುತ್ತಿದೆ. ಅದರ ಫಲವಾಗಿ ಎಲ್ಲವೂ ದುರ್ಬಲವಾಗಿಬಿಟ್ಟಿವೆ. ಹಾಗಾದರೆ ದಾರಿಯೇನು? ದಾರಿಯಿಷ್ಟೇ; ಇವು ಮೂರೂ ಅಭಿನ್ನವಾಗಿ ಜೊತೆಗೂಡುವುದು. ಜೊತೆಗೂಡಿಸುವ ಕೆಲಸವನ್ನು ಮಾಧ್ಯಮ ಮಾಡಬೇಕು. ಮಿಕ್ಕೆರಡು ವಲಯಗಳು ಜೊತೆಗೂಡಿ ಮಾಧ್ಯಮವನ್ನು ಕಟ್ಟಿ ನಿಲ್ಲಿಸಬೇಕು. ಅದು ಮಾತ್ರವೇ ದಾರಿ.

ನ್ಯಾಯಪಥ ಮತ್ತು ನಮ್ಮ ವೆಬ್‍ಸೈಟ್‍ಗಳು ಮಾಡಹೊರಟಿರುವುದು ಅದನ್ನೇ. ಇದನ್ನೇ ಈ ವಾರದಲ್ಲಿ ನಡೆಯಲಿರುವ ಜಿಲ್ಲಾ ಸಭೆಗಳಲ್ಲೂ ಚರ್ಚಿಸಲಾಗುವುದು. ಹೊಸ ರೀತಿಯ ಮಾಧ್ಯಮವು ಬೀದಿಯಲ್ಲಿರುವ ಜನತೆ ಮತ್ತು ಹೊಸಕಾಲದ ಬುದ್ಧಿಜೀವಿಗಳನ್ನು ಬೆಸೆಯುತ್ತಾ, ಅವೆರಡರಿಂದ ಪ್ರತ್ಯೇಕವಾಗುಳಿಯದೇ ತಾನೂ ಜೊತೆಗೂಡುತ್ತದೆ.
– ಸಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...