Homeಮುಖಪುಟಇದು ಕಾಶ್ಮೀರದ ಸಮಸ್ಯೆಯಲ್ಲ; ಭಾರತ ಒಕ್ಕೂಟದ ಸಮಸ್ಯೆ

ಇದು ಕಾಶ್ಮೀರದ ಸಮಸ್ಯೆಯಲ್ಲ; ಭಾರತ ಒಕ್ಕೂಟದ ಸಮಸ್ಯೆ

- Advertisement -
- Advertisement -

ಕಾಶ್ಮೀರವು ನಿಸ್ಸಂದೇಹವಾಗಿ ಭಾರತದ ಭಾಗ. ಈ ಮಾತನ್ನು ಹೇಳದೇ ಮುಂದುವರೆದರೆ ಕೆಲವರ ದಾಳಿಗೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಇದನ್ನು ಹೇಳುತ್ತಲೇ ಇಲ್ಲ. ಏಕೆಂದರೆ, ಇಡೀ ಲೇಖನ ಅಂಥವರ ನಿಲುವನ್ನು ಬಯಲುಗೊಳಿಸಲಿದೆ. ಆದರೆ, ಬಹುಮುಖಿ ಸಂಸ್ಕೃತಿಯನ್ನು ಒಳಗೊಂಡ ಅಪೂರ್ವವಾದ ಸಂಕರ ಸಂಸ್ಕೃತಿಯನ್ನು ಒಳಗೊಂಡಿದ್ದ ಕಾಶ್ಮೀರವು ಭಾರತಕ್ಕೆ ಶಿಖರಪ್ರಾಯವಾದ ಬದುಕನ್ನು ಹೊಂದಿತ್ತು. ಆ ದೃಷ್ಟಿಯಿಂದ ಅದಿಲ್ಲದೇ ಭಾರತವು ಅಪೂರ್ಣ ಎಂದು ಯಾರಾದರೂ ಹೇಳಿದರೆ ಅದಕ್ಕೆ ಅರ್ಥವಿದೆ.

ಎರಡನೆಯ ಸಂಗತಿ, ಕಾಶ್ಮೀರವನ್ನು ಒಂದು ಸಮಸ್ಯೆಯನ್ನಾಗಿ ಮಾಡುವುದರಲ್ಲಿ ನೆಹರೂ, ಇಂದಿರಾಗಾಂಧಿ ಮತ್ತು ರಾಜೀವ್‍ಗಾಂಧಿಯವರ ಪಾತ್ರ ದೊಡ್ಡದು. ಅದನ್ನು ಸೂಕ್ತವಾಗಿ ಬಗೆಹರಿಸಿದ್ದರೆ ಬಿಜೆಪಿ ಆರೆಸ್ಸೆಸ್‍ಗಾಗಲೀ, ಪಾಕಿಸ್ತಾನಕ್ಕಾಗಲೀ ಅದರಲ್ಲಿ ತಾವು ಇರುತ್ತಲೇ ಇರಲಿಲ್ಲ. ಈ ವಿವರಗಳು ಈ ಸಂಚಿಕೆಯ ಉಳಿದ ಲೇಖನಗಳಲ್ಲೂ ದೊರೆಯುವುದರಿಂದ ಅದರ ಬಗ್ಗೆ ಇಲ್ಲಿ ಹೇಳುವ ಅಗತ್ಯವಿಲ್ಲ.

ಆದರೆ, ಎರಡು ಸಂಗತಿಗಳನ್ನು ಇಲ್ಲಿ ಚರ್ಚಿಸಲೇಬೇಕಿದೆ. ಒಂದು ‘ಸ್ವಾಯತ್ತ’ ರಾಜ್ಯವಾಗಿದ್ದ ಕಾಶ್ಮೀರವನ್ನು ವಿಭಜಿಸಿ, ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಪ್ರಕ್ರಿಯೆಯನ್ನು ಆಗಗೊಳಿಸಲು ಒಕ್ಕೂಟ ಸರ್ಕಾರವು ಅನುಸರಿಸಿದ ವಿಧಾನ ಯಾವುದು? ಆ ವಿಧಾನವು ನಮಗೆ ಯಾವ ಸೂಚನೆಗಳನ್ನು ನೀಡುತ್ತದೆ? ತನ್ನ ಅವಿಭಾಜ್ಯ ಅಂಗವೆಂದು ವಿವಿಧ ಪಕ್ಷಗಳ ನೇತೃತ್ವದ ಎಲ್ಲಾ ಸರ್ಕಾರಗಳು ಹೇಳುತ್ತಾ ಬಂದ ಒಂದು ಭೂಭಾಗದ ಕುರಿತು ನಿರ್ಧಾರ ತೆಗೆದುಕೊಳ್ಳುವಾಗ, ಆ ಭೂಭಾಗದಲ್ಲಿ ವಾಸಿಸುತ್ತಿರುವ ಜನರ ಅಭಿಪ್ರಾಯ ಕೇಳುವ ಪ್ರಜಾತಾಂತ್ರಿಕ ಪ್ರಜ್ಞೆಯನ್ನು ತೋರಲಿಲ್ಲ ಎಂಬುದಷ್ಟೇ ಅಲ್ಲ. ಅವರನ್ನು ಕೇಳಿದರೆ ಆ ಭೂಭಾಗ ನಮ್ಮ ಜೊತೆಗೇ ಇರುವುದಿಲ್ಲ ಎಂಬ ಭಯ ಭಾರತದ ಆಳುವವರಿಗೆ ಇತ್ತೇ ಎಂಬುದು ಮುಖ್ಯವಾದ ಪ್ರಶ್ನೆ.

ಅಂತಹ ಭಯ ಇದ್ದುದರಿಂದಲೇ, ಈಗಾಗಲೇ ಅಲ್ಲಿದ್ದ ಅಸಂಖ್ಯಾತ ಸೇನೆ, ಅರೆಸೇನಾ ಪಡೆಗಳ ಜೊತೆಗೆ, ಸುಮಾರು 45 ಸಾವಿರ ಪಡೆಗಳನ್ನು ಒಂದು ವಾರದ ಮೊದಲು ಜಮಾವಣೆ ಮಾಡಲಾಯಿತು. ಕಾಶ್ಮೀರದ ಕುರಿತು ಸಂಸತ್ತಿನಲ್ಲಿ ಘೋಷಣೆ ಮಾಡುವ ದಿನ ಮತ್ತೆ 8 ಸಾವಿರ ಸೈನಿಕರನ್ನು ದೇಶದ ವಿವಿಧ ಭಾಗಗಳಿಂದ ವಿಮಾನಗಳಲ್ಲಿ ಕೊಂಡೊಯ್ದು ಇಳಿಸಲಾಯಿತು. ಆ ದಿನ ಕಾಶ್ಮೀರದಲ್ಲಿ ಇಂಟರ್‍ನೆಟ್, ಫೋನ್ ಇತ್ಯಾದಿ ಸಂಪರ್ಕ ಸಾಧನಗಳು ಇರಲಿಲ್ಲ. ಅಲ್ಲೇನು ನಡೆಯುತ್ತಿದೆ ಎಂಬ ಸುಳಿವು ಹೊರಜಗತ್ತಿಗೆ ಗೊತ್ತಾಗಲಿಲ್ಲ. ಆದರೆ, ಸೈನ್ಯದ ಸಂಪರ್ಕಕ್ಕೆ ಸೆಟಲೈಟ್ ಫೋನ್‍ಗಳನ್ನು ಒದಗಿಸಲಾಗಿತ್ತು.

ಅದಕ್ಕೆ ಹಿಂದಿನ ದಿನಗಳಲ್ಲಿ ಕಾಶ್ಮೀರದ ಕಣಿವೆಯಲ್ಲಿ ಭಯಗ್ರಸ್ತ ವಾತಾವರಣ ನಿರ್ಮಾಣವಾಗಿತ್ತು. ಕಳೆದ ಮೂರು ದಶಕಗಳಲ್ಲಿ ಕಫ್ರ್ಯೂ ವಾತಾವರಣವನ್ನು ಸಾಕಷ್ಟು ಅನುಭವಿಸಿ ಗೊತ್ತಿರುವ ಅವರು, ದಿನಗಟ್ಟಲೇ ಮನೆಯಿಂದ ಹೊರಗೆ ಬರದಿದ್ದರೂ ಬದುಕಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಲು ಪರದಾಡಿದರು. ದಿನ ತುಂಬಿದ ಗರ್ಭಿಣಿಯರ ಹೆರಿಗೆಗೆ ಏನು ಮಾಡಬೇಕೆಂದು ಕುಟುಂಬದವರು ಚಿಂತಾಕ್ರಾಂತರಾಗಿದ್ದರು.

ಆ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಮತ್ತು ಇಂದು ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಪಕ್ಷದ ಜೊತೆಗೇ ಹಿಂದೆ ಅಧಿಕಾರ ಹಂಚಿಕೊಂಡಿದ್ದ ಇಬ್ಬರನ್ನು ಗೃಹಬಂಧನದಲ್ಲಿರಿಸಲಾಗಿತ್ತು ಮತ್ತು ಘೋಷಣೆಯ ನಂತರ ಬಂಧಿಸಲಾಗಿತ್ತು. ಅವರಲ್ಲಿ ಒಬ್ಬರ ತಂದೆ (ಮುಫ್ತಿ ಮಹಮದ್ ಸಯೀದ್) ಈ ದೇಶದ ಗೃಹ ಸಚಿವರಾಗಿದ್ದರು. ಆ ಸಂದರ್ಭದಲ್ಲಿ ಭಯೋತ್ಪಾದಕರು ಅವರ ಮಗಳನ್ನು ಅಪಹರಿಸಿದ್ದರು. ಇನ್ನೊಬ್ಬರ ತಾತ (ಷೇಕ್ ಅಬ್ದುಲ್ಲಾ) ಒಬ್ಬ ಸೆಕ್ಯುಲರ್ ವ್ಯಕ್ತಿಯಾಗಿದ್ದು, ಕಾಶ್ಮೀರವು ಭಾರತದೊಂದಿಗೆ ಸೇರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆ ಹೊತ್ತಿನ ಕಾಶ್ಮೀರದ ಅತ್ಯಂತ ಜನಪ್ರಿಯ ನಾಯಕರಾಗಿದ್ದ ಅವರು ಶ್ರೀನಗರ ಲಾಲ್‍ಚೌಕ್‍ನಲ್ಲಿ ನೆಹರು ಪಕ್ಕ ನಿಂತು ತನ್ನ ಜನರಿಗೆ ಜನಮತಗಣನೆಯ ಭರವಸೆಯನ್ನು ಕೊಟ್ಟಿದ್ದರು. ಆ ಭರವಸೆಯನ್ನು ಸ್ವತಃ ನೆಹರೂ ಉಳಿಸಿಕೊಳ್ಳದೇ, ತನ್ನೀ ಸ್ನೇಹಿತನನ್ನು ಬಂಧಿಸಿ ದೂರದ ಊಟಿಯಲ್ಲಿಟ್ಟಿದ್ದರು.
ಇಂತಹ ಮೋಸಗಳನ್ನು ಅನುಭವಿಸಿದ ಕಾಶ್ಮೀರಿಗಳು ದಿನೇ ದಿನೇ ಭಾರತ ಸರ್ಕಾರದಿಂದ ದೂರ ಸರಿದಿದ್ದರು. ಆದರೆ, ಭಾರತದಿಂದ ಅಲ್ಲ.

ಕೆಲವೇ ತಿಂಗಳು ನಡೆಯುವ ಅಮರನಾಥ ಯಾತ್ರೆಯೊಂದರಿಂದಲೇ 50,000 ಕಾಶ್ಮೀರಿಗಳು ತಮ್ಮ ಇಡೀ ವರ್ಷದ ಬದುಕನ್ನು ನಡೆಸುತ್ತಾರೆ. ಭಾರತದ ಜೊತೆಗೆ ಅವರದ್ದು ಶತಮಾನಗಳ ಸಂಬಂಧ. ಅದನ್ನು ಮತ್ತಷ್ಟು ಬೆಸೆದುಕೊಂಡು ಪ್ರೀತಿಯಿಂದ ಅವರನ್ನು ಗೆಲ್ಲುವ ಪ್ರಯತ್ನವನ್ನು ಕಾಂಗ್ರೆಸ್ಸೂ ಮಾಡಲಿಲ್ಲ, ಬಿಜೆಪಿಯೂ ಮಾಡಲಿಲ್ಲ. ಇದ್ದುದರಲ್ಲಿ ವಿ.ಪಿ.ಸಿಂಗ್, ದೇವೇಗೌಡರು ಮತ್ತು ಬಿಜೆಪಿಯ ವಾಜಪೇಯಿ ಆ ಪ್ರಯತ್ನವನ್ನು ಒಂದು ಮಟ್ಟಿಗಾದರೂ ಮಾಡಿದ್ದರು.

ಅಳಿದುಳಿದಿದ್ದ ವಿಶ್ವಾಸವನ್ನು ಕಿತ್ತುಹಾಕುವ ಹಾಗೆ ಮೋದಿ – ಅಮಿತ್‍ಷಾ ಸರ್ಕಾರ ಕಾರ್ಯಾಚರಣೆ ನಡೆಸಿದೆ. ಆ ಕಾರ್ಯಾಚರಣೆಯ ರೀತಿಯು ಇಡೀ ದೇಶಕ್ಕೆ ಒಂದು ಸಂದೇಶ ನೀಡಿದೆ. ದೇಶದ ಯಾವ ಭೂಭಾಗವನ್ನು ಬೇಕಾದರೂ, ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ತಮ್ಮ ಅಧೀನಕ್ಕೆ ಒಳಪಡಿಸಿಕೊಳ್ಳಲು ತಾವು ಶಕ್ತರಾಗಿದ್ದೇವೆ ಎಂಬುದೇ ಆ ಸಂದೇಶ. ಅದಕ್ಕೆ ಬೇಕಿರುವುದು, ಆ ಭೂಭಾಗದ ಜನರನ್ನು ಉಳಿದವರ ಕಣ್ಣಿನಲ್ಲಿ ದುಷ್ಟರನ್ನಾಗಿಸುವುದು. ಅದಕ್ಕೆ ಪೂರಕವಾಗಿ ದುಡಿಯಲು ಭಾರೀ ದೊಡ್ಡ ಮಾಧ್ಯಮ ಶಕ್ತಿ ಅವರೊಂದಿಗಿರುವುದರಿಂದ ಸೈನ್ಯದ ಬಲ ಎರಡನೆಯ ಸುತ್ತಿನಲ್ಲಷ್ಟೇ ಬೇಕಾಗುತ್ತದೆ. ಭಾರತ ಒಕ್ಕೂಟದ ಮೂಲಭೂತ ಆಶಯಕ್ಕೆ ವಿರುದ್ಧವಾಗಿ ಈ ಕೆಲಸ ನಡೆಯುತ್ತಿದೆ ಎಂಬುದನ್ನು ದೇಶದ ಪ್ರತಿಯೊಂದು ರಾಜ್ಯದ ಜನರೂ ಅರಿಯಬೇಕಿದೆ.

ಕಾಶ್ಮೀರದ ಜನರನ್ನು ಪ್ರೀತಿಯಿಂದ ಗೆದ್ದು ಅವರನ್ನು ಭಾರತದ ಅವಿಭಾಜ್ಯ ಅಂಗವಾಗಿಸಿಕೊಳ್ಳುವ ಹೊಣೆ ಈಗ ಸಂಪೂರ್ಣ ಭಾರತದ ಜನರದ್ದೇ ಆಗಿದೆ.

  • ಡಾ. ವಾಸು ಎಚ್.ವಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...