Homeಮುಖಪುಟಇದು ಕಾಶ್ಮೀರದ ಸಮಸ್ಯೆಯಲ್ಲ; ಭಾರತ ಒಕ್ಕೂಟದ ಸಮಸ್ಯೆ

ಇದು ಕಾಶ್ಮೀರದ ಸಮಸ್ಯೆಯಲ್ಲ; ಭಾರತ ಒಕ್ಕೂಟದ ಸಮಸ್ಯೆ

- Advertisement -
- Advertisement -

ಕಾಶ್ಮೀರವು ನಿಸ್ಸಂದೇಹವಾಗಿ ಭಾರತದ ಭಾಗ. ಈ ಮಾತನ್ನು ಹೇಳದೇ ಮುಂದುವರೆದರೆ ಕೆಲವರ ದಾಳಿಗೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಇದನ್ನು ಹೇಳುತ್ತಲೇ ಇಲ್ಲ. ಏಕೆಂದರೆ, ಇಡೀ ಲೇಖನ ಅಂಥವರ ನಿಲುವನ್ನು ಬಯಲುಗೊಳಿಸಲಿದೆ. ಆದರೆ, ಬಹುಮುಖಿ ಸಂಸ್ಕೃತಿಯನ್ನು ಒಳಗೊಂಡ ಅಪೂರ್ವವಾದ ಸಂಕರ ಸಂಸ್ಕೃತಿಯನ್ನು ಒಳಗೊಂಡಿದ್ದ ಕಾಶ್ಮೀರವು ಭಾರತಕ್ಕೆ ಶಿಖರಪ್ರಾಯವಾದ ಬದುಕನ್ನು ಹೊಂದಿತ್ತು. ಆ ದೃಷ್ಟಿಯಿಂದ ಅದಿಲ್ಲದೇ ಭಾರತವು ಅಪೂರ್ಣ ಎಂದು ಯಾರಾದರೂ ಹೇಳಿದರೆ ಅದಕ್ಕೆ ಅರ್ಥವಿದೆ.

ಎರಡನೆಯ ಸಂಗತಿ, ಕಾಶ್ಮೀರವನ್ನು ಒಂದು ಸಮಸ್ಯೆಯನ್ನಾಗಿ ಮಾಡುವುದರಲ್ಲಿ ನೆಹರೂ, ಇಂದಿರಾಗಾಂಧಿ ಮತ್ತು ರಾಜೀವ್‍ಗಾಂಧಿಯವರ ಪಾತ್ರ ದೊಡ್ಡದು. ಅದನ್ನು ಸೂಕ್ತವಾಗಿ ಬಗೆಹರಿಸಿದ್ದರೆ ಬಿಜೆಪಿ ಆರೆಸ್ಸೆಸ್‍ಗಾಗಲೀ, ಪಾಕಿಸ್ತಾನಕ್ಕಾಗಲೀ ಅದರಲ್ಲಿ ತಾವು ಇರುತ್ತಲೇ ಇರಲಿಲ್ಲ. ಈ ವಿವರಗಳು ಈ ಸಂಚಿಕೆಯ ಉಳಿದ ಲೇಖನಗಳಲ್ಲೂ ದೊರೆಯುವುದರಿಂದ ಅದರ ಬಗ್ಗೆ ಇಲ್ಲಿ ಹೇಳುವ ಅಗತ್ಯವಿಲ್ಲ.

ಆದರೆ, ಎರಡು ಸಂಗತಿಗಳನ್ನು ಇಲ್ಲಿ ಚರ್ಚಿಸಲೇಬೇಕಿದೆ. ಒಂದು ‘ಸ್ವಾಯತ್ತ’ ರಾಜ್ಯವಾಗಿದ್ದ ಕಾಶ್ಮೀರವನ್ನು ವಿಭಜಿಸಿ, ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಪ್ರಕ್ರಿಯೆಯನ್ನು ಆಗಗೊಳಿಸಲು ಒಕ್ಕೂಟ ಸರ್ಕಾರವು ಅನುಸರಿಸಿದ ವಿಧಾನ ಯಾವುದು? ಆ ವಿಧಾನವು ನಮಗೆ ಯಾವ ಸೂಚನೆಗಳನ್ನು ನೀಡುತ್ತದೆ? ತನ್ನ ಅವಿಭಾಜ್ಯ ಅಂಗವೆಂದು ವಿವಿಧ ಪಕ್ಷಗಳ ನೇತೃತ್ವದ ಎಲ್ಲಾ ಸರ್ಕಾರಗಳು ಹೇಳುತ್ತಾ ಬಂದ ಒಂದು ಭೂಭಾಗದ ಕುರಿತು ನಿರ್ಧಾರ ತೆಗೆದುಕೊಳ್ಳುವಾಗ, ಆ ಭೂಭಾಗದಲ್ಲಿ ವಾಸಿಸುತ್ತಿರುವ ಜನರ ಅಭಿಪ್ರಾಯ ಕೇಳುವ ಪ್ರಜಾತಾಂತ್ರಿಕ ಪ್ರಜ್ಞೆಯನ್ನು ತೋರಲಿಲ್ಲ ಎಂಬುದಷ್ಟೇ ಅಲ್ಲ. ಅವರನ್ನು ಕೇಳಿದರೆ ಆ ಭೂಭಾಗ ನಮ್ಮ ಜೊತೆಗೇ ಇರುವುದಿಲ್ಲ ಎಂಬ ಭಯ ಭಾರತದ ಆಳುವವರಿಗೆ ಇತ್ತೇ ಎಂಬುದು ಮುಖ್ಯವಾದ ಪ್ರಶ್ನೆ.

ಅಂತಹ ಭಯ ಇದ್ದುದರಿಂದಲೇ, ಈಗಾಗಲೇ ಅಲ್ಲಿದ್ದ ಅಸಂಖ್ಯಾತ ಸೇನೆ, ಅರೆಸೇನಾ ಪಡೆಗಳ ಜೊತೆಗೆ, ಸುಮಾರು 45 ಸಾವಿರ ಪಡೆಗಳನ್ನು ಒಂದು ವಾರದ ಮೊದಲು ಜಮಾವಣೆ ಮಾಡಲಾಯಿತು. ಕಾಶ್ಮೀರದ ಕುರಿತು ಸಂಸತ್ತಿನಲ್ಲಿ ಘೋಷಣೆ ಮಾಡುವ ದಿನ ಮತ್ತೆ 8 ಸಾವಿರ ಸೈನಿಕರನ್ನು ದೇಶದ ವಿವಿಧ ಭಾಗಗಳಿಂದ ವಿಮಾನಗಳಲ್ಲಿ ಕೊಂಡೊಯ್ದು ಇಳಿಸಲಾಯಿತು. ಆ ದಿನ ಕಾಶ್ಮೀರದಲ್ಲಿ ಇಂಟರ್‍ನೆಟ್, ಫೋನ್ ಇತ್ಯಾದಿ ಸಂಪರ್ಕ ಸಾಧನಗಳು ಇರಲಿಲ್ಲ. ಅಲ್ಲೇನು ನಡೆಯುತ್ತಿದೆ ಎಂಬ ಸುಳಿವು ಹೊರಜಗತ್ತಿಗೆ ಗೊತ್ತಾಗಲಿಲ್ಲ. ಆದರೆ, ಸೈನ್ಯದ ಸಂಪರ್ಕಕ್ಕೆ ಸೆಟಲೈಟ್ ಫೋನ್‍ಗಳನ್ನು ಒದಗಿಸಲಾಗಿತ್ತು.

ಅದಕ್ಕೆ ಹಿಂದಿನ ದಿನಗಳಲ್ಲಿ ಕಾಶ್ಮೀರದ ಕಣಿವೆಯಲ್ಲಿ ಭಯಗ್ರಸ್ತ ವಾತಾವರಣ ನಿರ್ಮಾಣವಾಗಿತ್ತು. ಕಳೆದ ಮೂರು ದಶಕಗಳಲ್ಲಿ ಕಫ್ರ್ಯೂ ವಾತಾವರಣವನ್ನು ಸಾಕಷ್ಟು ಅನುಭವಿಸಿ ಗೊತ್ತಿರುವ ಅವರು, ದಿನಗಟ್ಟಲೇ ಮನೆಯಿಂದ ಹೊರಗೆ ಬರದಿದ್ದರೂ ಬದುಕಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಲು ಪರದಾಡಿದರು. ದಿನ ತುಂಬಿದ ಗರ್ಭಿಣಿಯರ ಹೆರಿಗೆಗೆ ಏನು ಮಾಡಬೇಕೆಂದು ಕುಟುಂಬದವರು ಚಿಂತಾಕ್ರಾಂತರಾಗಿದ್ದರು.

ಆ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಮತ್ತು ಇಂದು ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಪಕ್ಷದ ಜೊತೆಗೇ ಹಿಂದೆ ಅಧಿಕಾರ ಹಂಚಿಕೊಂಡಿದ್ದ ಇಬ್ಬರನ್ನು ಗೃಹಬಂಧನದಲ್ಲಿರಿಸಲಾಗಿತ್ತು ಮತ್ತು ಘೋಷಣೆಯ ನಂತರ ಬಂಧಿಸಲಾಗಿತ್ತು. ಅವರಲ್ಲಿ ಒಬ್ಬರ ತಂದೆ (ಮುಫ್ತಿ ಮಹಮದ್ ಸಯೀದ್) ಈ ದೇಶದ ಗೃಹ ಸಚಿವರಾಗಿದ್ದರು. ಆ ಸಂದರ್ಭದಲ್ಲಿ ಭಯೋತ್ಪಾದಕರು ಅವರ ಮಗಳನ್ನು ಅಪಹರಿಸಿದ್ದರು. ಇನ್ನೊಬ್ಬರ ತಾತ (ಷೇಕ್ ಅಬ್ದುಲ್ಲಾ) ಒಬ್ಬ ಸೆಕ್ಯುಲರ್ ವ್ಯಕ್ತಿಯಾಗಿದ್ದು, ಕಾಶ್ಮೀರವು ಭಾರತದೊಂದಿಗೆ ಸೇರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆ ಹೊತ್ತಿನ ಕಾಶ್ಮೀರದ ಅತ್ಯಂತ ಜನಪ್ರಿಯ ನಾಯಕರಾಗಿದ್ದ ಅವರು ಶ್ರೀನಗರ ಲಾಲ್‍ಚೌಕ್‍ನಲ್ಲಿ ನೆಹರು ಪಕ್ಕ ನಿಂತು ತನ್ನ ಜನರಿಗೆ ಜನಮತಗಣನೆಯ ಭರವಸೆಯನ್ನು ಕೊಟ್ಟಿದ್ದರು. ಆ ಭರವಸೆಯನ್ನು ಸ್ವತಃ ನೆಹರೂ ಉಳಿಸಿಕೊಳ್ಳದೇ, ತನ್ನೀ ಸ್ನೇಹಿತನನ್ನು ಬಂಧಿಸಿ ದೂರದ ಊಟಿಯಲ್ಲಿಟ್ಟಿದ್ದರು.
ಇಂತಹ ಮೋಸಗಳನ್ನು ಅನುಭವಿಸಿದ ಕಾಶ್ಮೀರಿಗಳು ದಿನೇ ದಿನೇ ಭಾರತ ಸರ್ಕಾರದಿಂದ ದೂರ ಸರಿದಿದ್ದರು. ಆದರೆ, ಭಾರತದಿಂದ ಅಲ್ಲ.

ಕೆಲವೇ ತಿಂಗಳು ನಡೆಯುವ ಅಮರನಾಥ ಯಾತ್ರೆಯೊಂದರಿಂದಲೇ 50,000 ಕಾಶ್ಮೀರಿಗಳು ತಮ್ಮ ಇಡೀ ವರ್ಷದ ಬದುಕನ್ನು ನಡೆಸುತ್ತಾರೆ. ಭಾರತದ ಜೊತೆಗೆ ಅವರದ್ದು ಶತಮಾನಗಳ ಸಂಬಂಧ. ಅದನ್ನು ಮತ್ತಷ್ಟು ಬೆಸೆದುಕೊಂಡು ಪ್ರೀತಿಯಿಂದ ಅವರನ್ನು ಗೆಲ್ಲುವ ಪ್ರಯತ್ನವನ್ನು ಕಾಂಗ್ರೆಸ್ಸೂ ಮಾಡಲಿಲ್ಲ, ಬಿಜೆಪಿಯೂ ಮಾಡಲಿಲ್ಲ. ಇದ್ದುದರಲ್ಲಿ ವಿ.ಪಿ.ಸಿಂಗ್, ದೇವೇಗೌಡರು ಮತ್ತು ಬಿಜೆಪಿಯ ವಾಜಪೇಯಿ ಆ ಪ್ರಯತ್ನವನ್ನು ಒಂದು ಮಟ್ಟಿಗಾದರೂ ಮಾಡಿದ್ದರು.

ಅಳಿದುಳಿದಿದ್ದ ವಿಶ್ವಾಸವನ್ನು ಕಿತ್ತುಹಾಕುವ ಹಾಗೆ ಮೋದಿ – ಅಮಿತ್‍ಷಾ ಸರ್ಕಾರ ಕಾರ್ಯಾಚರಣೆ ನಡೆಸಿದೆ. ಆ ಕಾರ್ಯಾಚರಣೆಯ ರೀತಿಯು ಇಡೀ ದೇಶಕ್ಕೆ ಒಂದು ಸಂದೇಶ ನೀಡಿದೆ. ದೇಶದ ಯಾವ ಭೂಭಾಗವನ್ನು ಬೇಕಾದರೂ, ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ತಮ್ಮ ಅಧೀನಕ್ಕೆ ಒಳಪಡಿಸಿಕೊಳ್ಳಲು ತಾವು ಶಕ್ತರಾಗಿದ್ದೇವೆ ಎಂಬುದೇ ಆ ಸಂದೇಶ. ಅದಕ್ಕೆ ಬೇಕಿರುವುದು, ಆ ಭೂಭಾಗದ ಜನರನ್ನು ಉಳಿದವರ ಕಣ್ಣಿನಲ್ಲಿ ದುಷ್ಟರನ್ನಾಗಿಸುವುದು. ಅದಕ್ಕೆ ಪೂರಕವಾಗಿ ದುಡಿಯಲು ಭಾರೀ ದೊಡ್ಡ ಮಾಧ್ಯಮ ಶಕ್ತಿ ಅವರೊಂದಿಗಿರುವುದರಿಂದ ಸೈನ್ಯದ ಬಲ ಎರಡನೆಯ ಸುತ್ತಿನಲ್ಲಷ್ಟೇ ಬೇಕಾಗುತ್ತದೆ. ಭಾರತ ಒಕ್ಕೂಟದ ಮೂಲಭೂತ ಆಶಯಕ್ಕೆ ವಿರುದ್ಧವಾಗಿ ಈ ಕೆಲಸ ನಡೆಯುತ್ತಿದೆ ಎಂಬುದನ್ನು ದೇಶದ ಪ್ರತಿಯೊಂದು ರಾಜ್ಯದ ಜನರೂ ಅರಿಯಬೇಕಿದೆ.

ಕಾಶ್ಮೀರದ ಜನರನ್ನು ಪ್ರೀತಿಯಿಂದ ಗೆದ್ದು ಅವರನ್ನು ಭಾರತದ ಅವಿಭಾಜ್ಯ ಅಂಗವಾಗಿಸಿಕೊಳ್ಳುವ ಹೊಣೆ ಈಗ ಸಂಪೂರ್ಣ ಭಾರತದ ಜನರದ್ದೇ ಆಗಿದೆ.

  • ಡಾ. ವಾಸು ಎಚ್.ವಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...