Homeಮುಖಪುಟಇದು ಕಾಶ್ಮೀರದ ಸಮಸ್ಯೆಯಲ್ಲ; ಭಾರತ ಒಕ್ಕೂಟದ ಸಮಸ್ಯೆ

ಇದು ಕಾಶ್ಮೀರದ ಸಮಸ್ಯೆಯಲ್ಲ; ಭಾರತ ಒಕ್ಕೂಟದ ಸಮಸ್ಯೆ

- Advertisement -
- Advertisement -

ಕಾಶ್ಮೀರವು ನಿಸ್ಸಂದೇಹವಾಗಿ ಭಾರತದ ಭಾಗ. ಈ ಮಾತನ್ನು ಹೇಳದೇ ಮುಂದುವರೆದರೆ ಕೆಲವರ ದಾಳಿಗೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಇದನ್ನು ಹೇಳುತ್ತಲೇ ಇಲ್ಲ. ಏಕೆಂದರೆ, ಇಡೀ ಲೇಖನ ಅಂಥವರ ನಿಲುವನ್ನು ಬಯಲುಗೊಳಿಸಲಿದೆ. ಆದರೆ, ಬಹುಮುಖಿ ಸಂಸ್ಕೃತಿಯನ್ನು ಒಳಗೊಂಡ ಅಪೂರ್ವವಾದ ಸಂಕರ ಸಂಸ್ಕೃತಿಯನ್ನು ಒಳಗೊಂಡಿದ್ದ ಕಾಶ್ಮೀರವು ಭಾರತಕ್ಕೆ ಶಿಖರಪ್ರಾಯವಾದ ಬದುಕನ್ನು ಹೊಂದಿತ್ತು. ಆ ದೃಷ್ಟಿಯಿಂದ ಅದಿಲ್ಲದೇ ಭಾರತವು ಅಪೂರ್ಣ ಎಂದು ಯಾರಾದರೂ ಹೇಳಿದರೆ ಅದಕ್ಕೆ ಅರ್ಥವಿದೆ.

ಎರಡನೆಯ ಸಂಗತಿ, ಕಾಶ್ಮೀರವನ್ನು ಒಂದು ಸಮಸ್ಯೆಯನ್ನಾಗಿ ಮಾಡುವುದರಲ್ಲಿ ನೆಹರೂ, ಇಂದಿರಾಗಾಂಧಿ ಮತ್ತು ರಾಜೀವ್‍ಗಾಂಧಿಯವರ ಪಾತ್ರ ದೊಡ್ಡದು. ಅದನ್ನು ಸೂಕ್ತವಾಗಿ ಬಗೆಹರಿಸಿದ್ದರೆ ಬಿಜೆಪಿ ಆರೆಸ್ಸೆಸ್‍ಗಾಗಲೀ, ಪಾಕಿಸ್ತಾನಕ್ಕಾಗಲೀ ಅದರಲ್ಲಿ ತಾವು ಇರುತ್ತಲೇ ಇರಲಿಲ್ಲ. ಈ ವಿವರಗಳು ಈ ಸಂಚಿಕೆಯ ಉಳಿದ ಲೇಖನಗಳಲ್ಲೂ ದೊರೆಯುವುದರಿಂದ ಅದರ ಬಗ್ಗೆ ಇಲ್ಲಿ ಹೇಳುವ ಅಗತ್ಯವಿಲ್ಲ.

ಆದರೆ, ಎರಡು ಸಂಗತಿಗಳನ್ನು ಇಲ್ಲಿ ಚರ್ಚಿಸಲೇಬೇಕಿದೆ. ಒಂದು ‘ಸ್ವಾಯತ್ತ’ ರಾಜ್ಯವಾಗಿದ್ದ ಕಾಶ್ಮೀರವನ್ನು ವಿಭಜಿಸಿ, ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಪ್ರಕ್ರಿಯೆಯನ್ನು ಆಗಗೊಳಿಸಲು ಒಕ್ಕೂಟ ಸರ್ಕಾರವು ಅನುಸರಿಸಿದ ವಿಧಾನ ಯಾವುದು? ಆ ವಿಧಾನವು ನಮಗೆ ಯಾವ ಸೂಚನೆಗಳನ್ನು ನೀಡುತ್ತದೆ? ತನ್ನ ಅವಿಭಾಜ್ಯ ಅಂಗವೆಂದು ವಿವಿಧ ಪಕ್ಷಗಳ ನೇತೃತ್ವದ ಎಲ್ಲಾ ಸರ್ಕಾರಗಳು ಹೇಳುತ್ತಾ ಬಂದ ಒಂದು ಭೂಭಾಗದ ಕುರಿತು ನಿರ್ಧಾರ ತೆಗೆದುಕೊಳ್ಳುವಾಗ, ಆ ಭೂಭಾಗದಲ್ಲಿ ವಾಸಿಸುತ್ತಿರುವ ಜನರ ಅಭಿಪ್ರಾಯ ಕೇಳುವ ಪ್ರಜಾತಾಂತ್ರಿಕ ಪ್ರಜ್ಞೆಯನ್ನು ತೋರಲಿಲ್ಲ ಎಂಬುದಷ್ಟೇ ಅಲ್ಲ. ಅವರನ್ನು ಕೇಳಿದರೆ ಆ ಭೂಭಾಗ ನಮ್ಮ ಜೊತೆಗೇ ಇರುವುದಿಲ್ಲ ಎಂಬ ಭಯ ಭಾರತದ ಆಳುವವರಿಗೆ ಇತ್ತೇ ಎಂಬುದು ಮುಖ್ಯವಾದ ಪ್ರಶ್ನೆ.

ಅಂತಹ ಭಯ ಇದ್ದುದರಿಂದಲೇ, ಈಗಾಗಲೇ ಅಲ್ಲಿದ್ದ ಅಸಂಖ್ಯಾತ ಸೇನೆ, ಅರೆಸೇನಾ ಪಡೆಗಳ ಜೊತೆಗೆ, ಸುಮಾರು 45 ಸಾವಿರ ಪಡೆಗಳನ್ನು ಒಂದು ವಾರದ ಮೊದಲು ಜಮಾವಣೆ ಮಾಡಲಾಯಿತು. ಕಾಶ್ಮೀರದ ಕುರಿತು ಸಂಸತ್ತಿನಲ್ಲಿ ಘೋಷಣೆ ಮಾಡುವ ದಿನ ಮತ್ತೆ 8 ಸಾವಿರ ಸೈನಿಕರನ್ನು ದೇಶದ ವಿವಿಧ ಭಾಗಗಳಿಂದ ವಿಮಾನಗಳಲ್ಲಿ ಕೊಂಡೊಯ್ದು ಇಳಿಸಲಾಯಿತು. ಆ ದಿನ ಕಾಶ್ಮೀರದಲ್ಲಿ ಇಂಟರ್‍ನೆಟ್, ಫೋನ್ ಇತ್ಯಾದಿ ಸಂಪರ್ಕ ಸಾಧನಗಳು ಇರಲಿಲ್ಲ. ಅಲ್ಲೇನು ನಡೆಯುತ್ತಿದೆ ಎಂಬ ಸುಳಿವು ಹೊರಜಗತ್ತಿಗೆ ಗೊತ್ತಾಗಲಿಲ್ಲ. ಆದರೆ, ಸೈನ್ಯದ ಸಂಪರ್ಕಕ್ಕೆ ಸೆಟಲೈಟ್ ಫೋನ್‍ಗಳನ್ನು ಒದಗಿಸಲಾಗಿತ್ತು.

ಅದಕ್ಕೆ ಹಿಂದಿನ ದಿನಗಳಲ್ಲಿ ಕಾಶ್ಮೀರದ ಕಣಿವೆಯಲ್ಲಿ ಭಯಗ್ರಸ್ತ ವಾತಾವರಣ ನಿರ್ಮಾಣವಾಗಿತ್ತು. ಕಳೆದ ಮೂರು ದಶಕಗಳಲ್ಲಿ ಕಫ್ರ್ಯೂ ವಾತಾವರಣವನ್ನು ಸಾಕಷ್ಟು ಅನುಭವಿಸಿ ಗೊತ್ತಿರುವ ಅವರು, ದಿನಗಟ್ಟಲೇ ಮನೆಯಿಂದ ಹೊರಗೆ ಬರದಿದ್ದರೂ ಬದುಕಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಲು ಪರದಾಡಿದರು. ದಿನ ತುಂಬಿದ ಗರ್ಭಿಣಿಯರ ಹೆರಿಗೆಗೆ ಏನು ಮಾಡಬೇಕೆಂದು ಕುಟುಂಬದವರು ಚಿಂತಾಕ್ರಾಂತರಾಗಿದ್ದರು.

ಆ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಮತ್ತು ಇಂದು ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಪಕ್ಷದ ಜೊತೆಗೇ ಹಿಂದೆ ಅಧಿಕಾರ ಹಂಚಿಕೊಂಡಿದ್ದ ಇಬ್ಬರನ್ನು ಗೃಹಬಂಧನದಲ್ಲಿರಿಸಲಾಗಿತ್ತು ಮತ್ತು ಘೋಷಣೆಯ ನಂತರ ಬಂಧಿಸಲಾಗಿತ್ತು. ಅವರಲ್ಲಿ ಒಬ್ಬರ ತಂದೆ (ಮುಫ್ತಿ ಮಹಮದ್ ಸಯೀದ್) ಈ ದೇಶದ ಗೃಹ ಸಚಿವರಾಗಿದ್ದರು. ಆ ಸಂದರ್ಭದಲ್ಲಿ ಭಯೋತ್ಪಾದಕರು ಅವರ ಮಗಳನ್ನು ಅಪಹರಿಸಿದ್ದರು. ಇನ್ನೊಬ್ಬರ ತಾತ (ಷೇಕ್ ಅಬ್ದುಲ್ಲಾ) ಒಬ್ಬ ಸೆಕ್ಯುಲರ್ ವ್ಯಕ್ತಿಯಾಗಿದ್ದು, ಕಾಶ್ಮೀರವು ಭಾರತದೊಂದಿಗೆ ಸೇರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆ ಹೊತ್ತಿನ ಕಾಶ್ಮೀರದ ಅತ್ಯಂತ ಜನಪ್ರಿಯ ನಾಯಕರಾಗಿದ್ದ ಅವರು ಶ್ರೀನಗರ ಲಾಲ್‍ಚೌಕ್‍ನಲ್ಲಿ ನೆಹರು ಪಕ್ಕ ನಿಂತು ತನ್ನ ಜನರಿಗೆ ಜನಮತಗಣನೆಯ ಭರವಸೆಯನ್ನು ಕೊಟ್ಟಿದ್ದರು. ಆ ಭರವಸೆಯನ್ನು ಸ್ವತಃ ನೆಹರೂ ಉಳಿಸಿಕೊಳ್ಳದೇ, ತನ್ನೀ ಸ್ನೇಹಿತನನ್ನು ಬಂಧಿಸಿ ದೂರದ ಊಟಿಯಲ್ಲಿಟ್ಟಿದ್ದರು.
ಇಂತಹ ಮೋಸಗಳನ್ನು ಅನುಭವಿಸಿದ ಕಾಶ್ಮೀರಿಗಳು ದಿನೇ ದಿನೇ ಭಾರತ ಸರ್ಕಾರದಿಂದ ದೂರ ಸರಿದಿದ್ದರು. ಆದರೆ, ಭಾರತದಿಂದ ಅಲ್ಲ.

ಕೆಲವೇ ತಿಂಗಳು ನಡೆಯುವ ಅಮರನಾಥ ಯಾತ್ರೆಯೊಂದರಿಂದಲೇ 50,000 ಕಾಶ್ಮೀರಿಗಳು ತಮ್ಮ ಇಡೀ ವರ್ಷದ ಬದುಕನ್ನು ನಡೆಸುತ್ತಾರೆ. ಭಾರತದ ಜೊತೆಗೆ ಅವರದ್ದು ಶತಮಾನಗಳ ಸಂಬಂಧ. ಅದನ್ನು ಮತ್ತಷ್ಟು ಬೆಸೆದುಕೊಂಡು ಪ್ರೀತಿಯಿಂದ ಅವರನ್ನು ಗೆಲ್ಲುವ ಪ್ರಯತ್ನವನ್ನು ಕಾಂಗ್ರೆಸ್ಸೂ ಮಾಡಲಿಲ್ಲ, ಬಿಜೆಪಿಯೂ ಮಾಡಲಿಲ್ಲ. ಇದ್ದುದರಲ್ಲಿ ವಿ.ಪಿ.ಸಿಂಗ್, ದೇವೇಗೌಡರು ಮತ್ತು ಬಿಜೆಪಿಯ ವಾಜಪೇಯಿ ಆ ಪ್ರಯತ್ನವನ್ನು ಒಂದು ಮಟ್ಟಿಗಾದರೂ ಮಾಡಿದ್ದರು.

ಅಳಿದುಳಿದಿದ್ದ ವಿಶ್ವಾಸವನ್ನು ಕಿತ್ತುಹಾಕುವ ಹಾಗೆ ಮೋದಿ – ಅಮಿತ್‍ಷಾ ಸರ್ಕಾರ ಕಾರ್ಯಾಚರಣೆ ನಡೆಸಿದೆ. ಆ ಕಾರ್ಯಾಚರಣೆಯ ರೀತಿಯು ಇಡೀ ದೇಶಕ್ಕೆ ಒಂದು ಸಂದೇಶ ನೀಡಿದೆ. ದೇಶದ ಯಾವ ಭೂಭಾಗವನ್ನು ಬೇಕಾದರೂ, ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ತಮ್ಮ ಅಧೀನಕ್ಕೆ ಒಳಪಡಿಸಿಕೊಳ್ಳಲು ತಾವು ಶಕ್ತರಾಗಿದ್ದೇವೆ ಎಂಬುದೇ ಆ ಸಂದೇಶ. ಅದಕ್ಕೆ ಬೇಕಿರುವುದು, ಆ ಭೂಭಾಗದ ಜನರನ್ನು ಉಳಿದವರ ಕಣ್ಣಿನಲ್ಲಿ ದುಷ್ಟರನ್ನಾಗಿಸುವುದು. ಅದಕ್ಕೆ ಪೂರಕವಾಗಿ ದುಡಿಯಲು ಭಾರೀ ದೊಡ್ಡ ಮಾಧ್ಯಮ ಶಕ್ತಿ ಅವರೊಂದಿಗಿರುವುದರಿಂದ ಸೈನ್ಯದ ಬಲ ಎರಡನೆಯ ಸುತ್ತಿನಲ್ಲಷ್ಟೇ ಬೇಕಾಗುತ್ತದೆ. ಭಾರತ ಒಕ್ಕೂಟದ ಮೂಲಭೂತ ಆಶಯಕ್ಕೆ ವಿರುದ್ಧವಾಗಿ ಈ ಕೆಲಸ ನಡೆಯುತ್ತಿದೆ ಎಂಬುದನ್ನು ದೇಶದ ಪ್ರತಿಯೊಂದು ರಾಜ್ಯದ ಜನರೂ ಅರಿಯಬೇಕಿದೆ.

ಕಾಶ್ಮೀರದ ಜನರನ್ನು ಪ್ರೀತಿಯಿಂದ ಗೆದ್ದು ಅವರನ್ನು ಭಾರತದ ಅವಿಭಾಜ್ಯ ಅಂಗವಾಗಿಸಿಕೊಳ್ಳುವ ಹೊಣೆ ಈಗ ಸಂಪೂರ್ಣ ಭಾರತದ ಜನರದ್ದೇ ಆಗಿದೆ.

  • ಡಾ. ವಾಸು ಎಚ್.ವಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...