Homeಮುಖಪುಟಇದು ಕಾಶ್ಮೀರದ ಸಮಸ್ಯೆಯಲ್ಲ; ಭಾರತ ಒಕ್ಕೂಟದ ಸಮಸ್ಯೆ

ಇದು ಕಾಶ್ಮೀರದ ಸಮಸ್ಯೆಯಲ್ಲ; ಭಾರತ ಒಕ್ಕೂಟದ ಸಮಸ್ಯೆ

- Advertisement -
- Advertisement -

ಕಾಶ್ಮೀರವು ನಿಸ್ಸಂದೇಹವಾಗಿ ಭಾರತದ ಭಾಗ. ಈ ಮಾತನ್ನು ಹೇಳದೇ ಮುಂದುವರೆದರೆ ಕೆಲವರ ದಾಳಿಗೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಇದನ್ನು ಹೇಳುತ್ತಲೇ ಇಲ್ಲ. ಏಕೆಂದರೆ, ಇಡೀ ಲೇಖನ ಅಂಥವರ ನಿಲುವನ್ನು ಬಯಲುಗೊಳಿಸಲಿದೆ. ಆದರೆ, ಬಹುಮುಖಿ ಸಂಸ್ಕೃತಿಯನ್ನು ಒಳಗೊಂಡ ಅಪೂರ್ವವಾದ ಸಂಕರ ಸಂಸ್ಕೃತಿಯನ್ನು ಒಳಗೊಂಡಿದ್ದ ಕಾಶ್ಮೀರವು ಭಾರತಕ್ಕೆ ಶಿಖರಪ್ರಾಯವಾದ ಬದುಕನ್ನು ಹೊಂದಿತ್ತು. ಆ ದೃಷ್ಟಿಯಿಂದ ಅದಿಲ್ಲದೇ ಭಾರತವು ಅಪೂರ್ಣ ಎಂದು ಯಾರಾದರೂ ಹೇಳಿದರೆ ಅದಕ್ಕೆ ಅರ್ಥವಿದೆ.

ಎರಡನೆಯ ಸಂಗತಿ, ಕಾಶ್ಮೀರವನ್ನು ಒಂದು ಸಮಸ್ಯೆಯನ್ನಾಗಿ ಮಾಡುವುದರಲ್ಲಿ ನೆಹರೂ, ಇಂದಿರಾಗಾಂಧಿ ಮತ್ತು ರಾಜೀವ್‍ಗಾಂಧಿಯವರ ಪಾತ್ರ ದೊಡ್ಡದು. ಅದನ್ನು ಸೂಕ್ತವಾಗಿ ಬಗೆಹರಿಸಿದ್ದರೆ ಬಿಜೆಪಿ ಆರೆಸ್ಸೆಸ್‍ಗಾಗಲೀ, ಪಾಕಿಸ್ತಾನಕ್ಕಾಗಲೀ ಅದರಲ್ಲಿ ತಾವು ಇರುತ್ತಲೇ ಇರಲಿಲ್ಲ. ಈ ವಿವರಗಳು ಈ ಸಂಚಿಕೆಯ ಉಳಿದ ಲೇಖನಗಳಲ್ಲೂ ದೊರೆಯುವುದರಿಂದ ಅದರ ಬಗ್ಗೆ ಇಲ್ಲಿ ಹೇಳುವ ಅಗತ್ಯವಿಲ್ಲ.

ಆದರೆ, ಎರಡು ಸಂಗತಿಗಳನ್ನು ಇಲ್ಲಿ ಚರ್ಚಿಸಲೇಬೇಕಿದೆ. ಒಂದು ‘ಸ್ವಾಯತ್ತ’ ರಾಜ್ಯವಾಗಿದ್ದ ಕಾಶ್ಮೀರವನ್ನು ವಿಭಜಿಸಿ, ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಪ್ರಕ್ರಿಯೆಯನ್ನು ಆಗಗೊಳಿಸಲು ಒಕ್ಕೂಟ ಸರ್ಕಾರವು ಅನುಸರಿಸಿದ ವಿಧಾನ ಯಾವುದು? ಆ ವಿಧಾನವು ನಮಗೆ ಯಾವ ಸೂಚನೆಗಳನ್ನು ನೀಡುತ್ತದೆ? ತನ್ನ ಅವಿಭಾಜ್ಯ ಅಂಗವೆಂದು ವಿವಿಧ ಪಕ್ಷಗಳ ನೇತೃತ್ವದ ಎಲ್ಲಾ ಸರ್ಕಾರಗಳು ಹೇಳುತ್ತಾ ಬಂದ ಒಂದು ಭೂಭಾಗದ ಕುರಿತು ನಿರ್ಧಾರ ತೆಗೆದುಕೊಳ್ಳುವಾಗ, ಆ ಭೂಭಾಗದಲ್ಲಿ ವಾಸಿಸುತ್ತಿರುವ ಜನರ ಅಭಿಪ್ರಾಯ ಕೇಳುವ ಪ್ರಜಾತಾಂತ್ರಿಕ ಪ್ರಜ್ಞೆಯನ್ನು ತೋರಲಿಲ್ಲ ಎಂಬುದಷ್ಟೇ ಅಲ್ಲ. ಅವರನ್ನು ಕೇಳಿದರೆ ಆ ಭೂಭಾಗ ನಮ್ಮ ಜೊತೆಗೇ ಇರುವುದಿಲ್ಲ ಎಂಬ ಭಯ ಭಾರತದ ಆಳುವವರಿಗೆ ಇತ್ತೇ ಎಂಬುದು ಮುಖ್ಯವಾದ ಪ್ರಶ್ನೆ.

ಅಂತಹ ಭಯ ಇದ್ದುದರಿಂದಲೇ, ಈಗಾಗಲೇ ಅಲ್ಲಿದ್ದ ಅಸಂಖ್ಯಾತ ಸೇನೆ, ಅರೆಸೇನಾ ಪಡೆಗಳ ಜೊತೆಗೆ, ಸುಮಾರು 45 ಸಾವಿರ ಪಡೆಗಳನ್ನು ಒಂದು ವಾರದ ಮೊದಲು ಜಮಾವಣೆ ಮಾಡಲಾಯಿತು. ಕಾಶ್ಮೀರದ ಕುರಿತು ಸಂಸತ್ತಿನಲ್ಲಿ ಘೋಷಣೆ ಮಾಡುವ ದಿನ ಮತ್ತೆ 8 ಸಾವಿರ ಸೈನಿಕರನ್ನು ದೇಶದ ವಿವಿಧ ಭಾಗಗಳಿಂದ ವಿಮಾನಗಳಲ್ಲಿ ಕೊಂಡೊಯ್ದು ಇಳಿಸಲಾಯಿತು. ಆ ದಿನ ಕಾಶ್ಮೀರದಲ್ಲಿ ಇಂಟರ್‍ನೆಟ್, ಫೋನ್ ಇತ್ಯಾದಿ ಸಂಪರ್ಕ ಸಾಧನಗಳು ಇರಲಿಲ್ಲ. ಅಲ್ಲೇನು ನಡೆಯುತ್ತಿದೆ ಎಂಬ ಸುಳಿವು ಹೊರಜಗತ್ತಿಗೆ ಗೊತ್ತಾಗಲಿಲ್ಲ. ಆದರೆ, ಸೈನ್ಯದ ಸಂಪರ್ಕಕ್ಕೆ ಸೆಟಲೈಟ್ ಫೋನ್‍ಗಳನ್ನು ಒದಗಿಸಲಾಗಿತ್ತು.

ಅದಕ್ಕೆ ಹಿಂದಿನ ದಿನಗಳಲ್ಲಿ ಕಾಶ್ಮೀರದ ಕಣಿವೆಯಲ್ಲಿ ಭಯಗ್ರಸ್ತ ವಾತಾವರಣ ನಿರ್ಮಾಣವಾಗಿತ್ತು. ಕಳೆದ ಮೂರು ದಶಕಗಳಲ್ಲಿ ಕಫ್ರ್ಯೂ ವಾತಾವರಣವನ್ನು ಸಾಕಷ್ಟು ಅನುಭವಿಸಿ ಗೊತ್ತಿರುವ ಅವರು, ದಿನಗಟ್ಟಲೇ ಮನೆಯಿಂದ ಹೊರಗೆ ಬರದಿದ್ದರೂ ಬದುಕಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಲು ಪರದಾಡಿದರು. ದಿನ ತುಂಬಿದ ಗರ್ಭಿಣಿಯರ ಹೆರಿಗೆಗೆ ಏನು ಮಾಡಬೇಕೆಂದು ಕುಟುಂಬದವರು ಚಿಂತಾಕ್ರಾಂತರಾಗಿದ್ದರು.

ಆ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಮತ್ತು ಇಂದು ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಪಕ್ಷದ ಜೊತೆಗೇ ಹಿಂದೆ ಅಧಿಕಾರ ಹಂಚಿಕೊಂಡಿದ್ದ ಇಬ್ಬರನ್ನು ಗೃಹಬಂಧನದಲ್ಲಿರಿಸಲಾಗಿತ್ತು ಮತ್ತು ಘೋಷಣೆಯ ನಂತರ ಬಂಧಿಸಲಾಗಿತ್ತು. ಅವರಲ್ಲಿ ಒಬ್ಬರ ತಂದೆ (ಮುಫ್ತಿ ಮಹಮದ್ ಸಯೀದ್) ಈ ದೇಶದ ಗೃಹ ಸಚಿವರಾಗಿದ್ದರು. ಆ ಸಂದರ್ಭದಲ್ಲಿ ಭಯೋತ್ಪಾದಕರು ಅವರ ಮಗಳನ್ನು ಅಪಹರಿಸಿದ್ದರು. ಇನ್ನೊಬ್ಬರ ತಾತ (ಷೇಕ್ ಅಬ್ದುಲ್ಲಾ) ಒಬ್ಬ ಸೆಕ್ಯುಲರ್ ವ್ಯಕ್ತಿಯಾಗಿದ್ದು, ಕಾಶ್ಮೀರವು ಭಾರತದೊಂದಿಗೆ ಸೇರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆ ಹೊತ್ತಿನ ಕಾಶ್ಮೀರದ ಅತ್ಯಂತ ಜನಪ್ರಿಯ ನಾಯಕರಾಗಿದ್ದ ಅವರು ಶ್ರೀನಗರ ಲಾಲ್‍ಚೌಕ್‍ನಲ್ಲಿ ನೆಹರು ಪಕ್ಕ ನಿಂತು ತನ್ನ ಜನರಿಗೆ ಜನಮತಗಣನೆಯ ಭರವಸೆಯನ್ನು ಕೊಟ್ಟಿದ್ದರು. ಆ ಭರವಸೆಯನ್ನು ಸ್ವತಃ ನೆಹರೂ ಉಳಿಸಿಕೊಳ್ಳದೇ, ತನ್ನೀ ಸ್ನೇಹಿತನನ್ನು ಬಂಧಿಸಿ ದೂರದ ಊಟಿಯಲ್ಲಿಟ್ಟಿದ್ದರು.
ಇಂತಹ ಮೋಸಗಳನ್ನು ಅನುಭವಿಸಿದ ಕಾಶ್ಮೀರಿಗಳು ದಿನೇ ದಿನೇ ಭಾರತ ಸರ್ಕಾರದಿಂದ ದೂರ ಸರಿದಿದ್ದರು. ಆದರೆ, ಭಾರತದಿಂದ ಅಲ್ಲ.

ಕೆಲವೇ ತಿಂಗಳು ನಡೆಯುವ ಅಮರನಾಥ ಯಾತ್ರೆಯೊಂದರಿಂದಲೇ 50,000 ಕಾಶ್ಮೀರಿಗಳು ತಮ್ಮ ಇಡೀ ವರ್ಷದ ಬದುಕನ್ನು ನಡೆಸುತ್ತಾರೆ. ಭಾರತದ ಜೊತೆಗೆ ಅವರದ್ದು ಶತಮಾನಗಳ ಸಂಬಂಧ. ಅದನ್ನು ಮತ್ತಷ್ಟು ಬೆಸೆದುಕೊಂಡು ಪ್ರೀತಿಯಿಂದ ಅವರನ್ನು ಗೆಲ್ಲುವ ಪ್ರಯತ್ನವನ್ನು ಕಾಂಗ್ರೆಸ್ಸೂ ಮಾಡಲಿಲ್ಲ, ಬಿಜೆಪಿಯೂ ಮಾಡಲಿಲ್ಲ. ಇದ್ದುದರಲ್ಲಿ ವಿ.ಪಿ.ಸಿಂಗ್, ದೇವೇಗೌಡರು ಮತ್ತು ಬಿಜೆಪಿಯ ವಾಜಪೇಯಿ ಆ ಪ್ರಯತ್ನವನ್ನು ಒಂದು ಮಟ್ಟಿಗಾದರೂ ಮಾಡಿದ್ದರು.

ಅಳಿದುಳಿದಿದ್ದ ವಿಶ್ವಾಸವನ್ನು ಕಿತ್ತುಹಾಕುವ ಹಾಗೆ ಮೋದಿ – ಅಮಿತ್‍ಷಾ ಸರ್ಕಾರ ಕಾರ್ಯಾಚರಣೆ ನಡೆಸಿದೆ. ಆ ಕಾರ್ಯಾಚರಣೆಯ ರೀತಿಯು ಇಡೀ ದೇಶಕ್ಕೆ ಒಂದು ಸಂದೇಶ ನೀಡಿದೆ. ದೇಶದ ಯಾವ ಭೂಭಾಗವನ್ನು ಬೇಕಾದರೂ, ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ತಮ್ಮ ಅಧೀನಕ್ಕೆ ಒಳಪಡಿಸಿಕೊಳ್ಳಲು ತಾವು ಶಕ್ತರಾಗಿದ್ದೇವೆ ಎಂಬುದೇ ಆ ಸಂದೇಶ. ಅದಕ್ಕೆ ಬೇಕಿರುವುದು, ಆ ಭೂಭಾಗದ ಜನರನ್ನು ಉಳಿದವರ ಕಣ್ಣಿನಲ್ಲಿ ದುಷ್ಟರನ್ನಾಗಿಸುವುದು. ಅದಕ್ಕೆ ಪೂರಕವಾಗಿ ದುಡಿಯಲು ಭಾರೀ ದೊಡ್ಡ ಮಾಧ್ಯಮ ಶಕ್ತಿ ಅವರೊಂದಿಗಿರುವುದರಿಂದ ಸೈನ್ಯದ ಬಲ ಎರಡನೆಯ ಸುತ್ತಿನಲ್ಲಷ್ಟೇ ಬೇಕಾಗುತ್ತದೆ. ಭಾರತ ಒಕ್ಕೂಟದ ಮೂಲಭೂತ ಆಶಯಕ್ಕೆ ವಿರುದ್ಧವಾಗಿ ಈ ಕೆಲಸ ನಡೆಯುತ್ತಿದೆ ಎಂಬುದನ್ನು ದೇಶದ ಪ್ರತಿಯೊಂದು ರಾಜ್ಯದ ಜನರೂ ಅರಿಯಬೇಕಿದೆ.

ಕಾಶ್ಮೀರದ ಜನರನ್ನು ಪ್ರೀತಿಯಿಂದ ಗೆದ್ದು ಅವರನ್ನು ಭಾರತದ ಅವಿಭಾಜ್ಯ ಅಂಗವಾಗಿಸಿಕೊಳ್ಳುವ ಹೊಣೆ ಈಗ ಸಂಪೂರ್ಣ ಭಾರತದ ಜನರದ್ದೇ ಆಗಿದೆ.

  • ಡಾ. ವಾಸು ಎಚ್.ವಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...