Homeಅಂಕಣಗಳುಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?

ಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?

- Advertisement -
- Advertisement -

| ಡಾ. ವಾಸು ಎಚ್.ವಿ |

ಪತ್ರಿಕೆಯಲ್ಲಿ ಈ ದಿನ ಅಥವಾ ವಾರ ನೀವು ಯಾವುದರ ಮೇಲೆ ಕೇಂದ್ರೀಕರಿಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸುವುದು ಈ ಕಾಲದಲ್ಲಿ ಅಷ್ಟು ಸುಲಭವಲ್ಲ. ಏಕೆಂದರೆ ನಿಮ್ಮ ಗಮನ ಅಸಲೀ ಸಮಸ್ಯೆಯ ಮೇಲೆ ಹೋಗದಂತೆ ಮಾಡಲೆಂದೇ ಕೆಲವು ವಾಗ್ವಾದಗಳನ್ನು ತೇಲಿಬಿಟ್ಟಿರಬಹುದೆಂಬ ಅನುಮಾನ ಬಂದಿರುತ್ತದೆ. ಕೆಲವೊಮ್ಮೆ ಅವು ಕೇವಲ ವಾಗ್ವಾದಗಳಾಗಿರುವುದಿಲ್ಲ; ಯಾರದ್ದೋ ಬದುಕಿನ ಅತ್ಯಂತ ಜ್ವಲಂತ ಸಮಸ್ಯೆಯಾಗಿರುತ್ತದೆ. ಉದಾಹರಣೆಗೆ ಕಾಶ್ಮೀರ, ಎನ್‍ಆರ್‍ಸಿ ಇತ್ಯಾದಿ. ಕೆಲವು ಸಾರಿ ಅದು ಯಾರ ಬದುಕಿನ ತಕ್ಷಣದ ಕಾಡುವ ಸಮಸ್ಯೆಯೂ ಆಗಿರುವುದಿಲ್ಲ; ಆದರೆ ನಮ್ಮ ಇತಿಹಾಸದಲ್ಲಿ ಅಡಗಿರುವ ಸತ್ಯಗಳನ್ನು ಬುಡಮೇಲು ಮಾಡುವ ಕೆಲಸ ನಡೆದಿರುತ್ತದೆ. ಸಾವರ್ಕರ್‍ಗೆ ಭಾರತರತ್ನ ನೀಡುತ್ತೇವೆನ್ನುವುದನ್ನು ಬಿಜೆಪಿ ಪಕ್ಷವು ಮಹಾರಾಷ್ಟ್ರ ಚುನಾವಣೆಯ ಪ್ರಣಾಳಿಕೆಯಲ್ಲಿ ಸೇರಿಸಿದ್ದು ಅದಕ್ಕೆ ನಿದರ್ಶನ.

ಅಸಲೀ ಸಮಸ್ಯೆ ಮತ್ತು ಹೊಸದಾಗಿ ಸೃಷ್ಟಿಸಿದ ಇಶ್ಯೂ ಎರಡನ್ನೂ ಆಯ್ದುಕೊಂಡು, ಅವುಗಳನ್ನು ಸತ್ಯದ ಮುಖಾಂತರ ಎದುರಿಸಬೇಕಾದ್ದು ನಮ್ಮ ಜವಾಬ್ದಾರಿ. ಆದರೆ, ಎರಡರಲ್ಲಿ ಒಂದನ್ನು ಮಾತ್ರ ಆಯ್ದುಕೊಳ್ಳುವಂತೆ ಪರಿಸ್ಥಿತಿ ದೂಡುತ್ತದೆ. ಇದು ರಾಜಕೀಯ ಕಾರ್ಯಕರ್ತರಿಗೆ ಮಾತ್ರವಲ್ಲದೇ, ನಮ್ಮಂತಹ ಪತ್ರಿಕೆಗಳಿಗೂ ಇರುವ ಸಂದಿಗ್ಧ.

ದೇಶದ ಸಾರ್ವಭೌಮತೆಯನ್ನು ಮತ್ತಷ್ಟು ಕಿತ್ತುಕೊಳ್ಳುವ ಆರ್‍ಸಿಇಪಿ ಒಪ್ಪಂದದ ಕುರಿತು ರೈತಸಂಘಗಳು ಪ್ರತಿಭಟಿಸುತ್ತಿರುವಾಗ ಅದಕ್ಕೆ ಇಂಬು ಕೊಡುವುದು ನಮ್ಮ ಕರ್ತವ್ಯ; ಕರ್ನಾಟಕದ ಬರ-ನೆರೆ ಸಂಕಷ್ಟಕ್ಕೆ ಪರಿಹಾರವಾಗಿ 1 ಲಕ್ಷ ಕೋಟಿ ಪ್ಯಾಕೇಜ್‍ಅನ್ನು ರೈತರು ಕೇಳುತ್ತಿರುವಾಗಲೇ, ಮತ್ತೊಂದು ಮಳೆ ಇಡೀ ರಾಜ್ಯವನ್ನು ಆವರಿಸಿದೆ. ಉತ್ತರ ಕರ್ನಾಟಕಕ್ಕೆ ಮತ್ತೊಮ್ಮೆ ಅಪ್ಪಳಿಸಿದೆ. ಬಿಎಸ್‍ಎನ್‍ಎಲ್‍ಅನ್ನು ಮುಳುಗಿಸುವ ಕಾಂಗ್ರೆಸ್‍ನ ಹಳೆಯ ಪ್ಲಾನ್‍ಅನ್ನು ಬಿಜೆಪಿ ಯಶಸ್ವಿ ಮಾಡುವ ಎಲ್ಲಾ ಲಕ್ಷಣಗಳೂ ಕಾಣುತ್ತಿವೆ. ಹೀಗಿರುವಾಗ ಸಿ.ಟಿ.ರವಿಯ ಮನೆಹಾಳ ಮಾತು, ಸಾವರ್ಕರ್‍ಗೆ ಭಾರತರತ್ನ ಇತ್ಯಾದಿಗಳು ನಮ್ಮನ್ನು ಬೇರೆ ಕಡೆಗೆ ಎಳೆಯುತ್ತವೆ. ಅದನ್ನು ಮುಗಿಸಿ ಬರುವ ಹೊತ್ತಿಗೆ ಬಿಎಸ್‍ಎನ್‍ಎಲ್ ಮುಳುಗಿ ರೈಲ್ವೇ ಖಾಸಗೀಕರಣದ ಮಾತು ನಡೆಯುತ್ತಿರುತ್ತದೆ. ಅದರ ಬಗ್ಗೆ ಮಾತು ಆಡುವುದು ಸಾಧ್ಯವೇ ಆಗದಂತೆ ದೇಶದ ಪ್ರಮುಖ ಸ್ಥಾನದಲ್ಲಿರುವ ವ್ಯಕ್ತಿ ‘ಗೋಡ್ಸೆ ದೇಶಭಕ್ತ ಎಂಬುದನ್ನು ಅಲ್ಲಗಳೆಯಲಾಗುವುದಿಲ್ಲ’ ಎಂದು ಹೇಳುವ ಸಾಧ್ಯತೆ ಇರುತ್ತದೆ.

ಆ ವಾರ ನಿಮಗೆ ಲಭ್ಯವಿರುವ ಮೂರು ಪುಟಗಳಲ್ಲಿ ಗೋಡ್ಸೆಯ ಕುರಿತು ಎಷ್ಟು ಮಾತನಾಡುವಿರಿ, ರೈಲ್ವೇ ಖಾಸಗೀಕರಣದ ಕುರಿತು ಏನು ಹೇಳುವಿರಿ ಎಂಬ ಸಂದಿಗ್ಧ ಎದುರಾಗುತ್ತದೆ. ಇಂತಹ ಸಂದಿಗ್ಧದಿಂದ ಹೊರಬರುವುದು ಸಾಧ್ಯವಿಲ್ಲವೇ? ಸಂತ್ರಸ್ತರು, ಕಾಳಜಿಯುಳ್ಳವರು, ಪ್ರಜಾತಂತ್ರವಾದಿಗಳೆಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಅನಿಸಿಕೆ ಹೇಳಿ, ಟ್ವಿಟ್ಟರ್ ಟ್ರೆಂಡ್ ಮಾಡಿಬಿಟ್ಟರೆ ಸಾಕೇ?

ಖಂಡಿತಾ ಸಾಲದು. ಬೀದಿಯಲ್ಲಿ ಸಂತ್ರಸ್ತರು ಒಟ್ಟುಗೂಡಿ ಶಕ್ತಿಯುತವಾಗಿ ತಮ್ಮ ಅನಿಸಿಕೆಗಳನ್ನು ಮುಂದಿಡುವುದು, ಬುದ್ಧಿಜೀವಿಗಳು ಸರಿಯಾದ ಹತಾರಗಳೊಂದಿಗೆ ತಮ್ಮದೇ ಆದ ಮಾಧ್ಯಮಗಳನ್ನು ಹುಡುಕಿಕೊಂಡು ವಾಗ್ವಾದಕ್ಕಿಳಿಯುವುದು ಎರಡೂ ಆಗಬೇಕು. ಮಾಧ್ಯಮವು ಇವೆರಡಕ್ಕೂ ಸೂಕ್ತ ಅವಕಾಶ ಕಲ್ಪಿಸಿ ಅದನ್ನು ವ್ಯಾಪಕಗೊಳಿಸಬೇಕು; ಅಧಿಕಾರಸ್ಥರ ಮೇಲೆ ಒತ್ತಡ ತರಬೇಕು. ಆಗ ಪರಿಣಾಮ ಕಾಣತೊಡಗುತ್ತದೆ. ಆದರೆ, ಇಂದಿನ ಮಾಧ್ಯಮ ಇವೆರಡನ್ನೂ (ಬೀದಿಯಲ್ಲಿನ ಭಿನ್ನಮತ ಮತ್ತು ಬುದ್ಧಿಜೀವಿಗಳ ಅಭಿಮತ) ದಿಕ್ಕೆಡಿಸುವ ಕೆಲಸ ಮಾಡುತ್ತಿದೆ. ಅದರ ಫಲವಾಗಿ ಎಲ್ಲವೂ ದುರ್ಬಲವಾಗಿಬಿಟ್ಟಿವೆ. ಹಾಗಾದರೆ ದಾರಿಯೇನು? ದಾರಿಯಿಷ್ಟೇ; ಇವು ಮೂರೂ ಅಭಿನ್ನವಾಗಿ ಜೊತೆಗೂಡುವುದು. ಜೊತೆಗೂಡಿಸುವ ಕೆಲಸವನ್ನು ಮಾಧ್ಯಮ ಮಾಡಬೇಕು. ಮಿಕ್ಕೆರಡು ವಲಯಗಳು ಜೊತೆಗೂಡಿ ಮಾಧ್ಯಮವನ್ನು ಕಟ್ಟಿ ನಿಲ್ಲಿಸಬೇಕು. ಅದು ಮಾತ್ರವೇ ದಾರಿ.

ನ್ಯಾಯಪಥ ಮತ್ತು ನಮ್ಮ ವೆಬ್‍ಸೈಟ್‍ಗಳು ಮಾಡಹೊರಟಿರುವುದು ಅದನ್ನೇ. ಇದನ್ನೇ ಈ ವಾರದಲ್ಲಿ ನಡೆಯಲಿರುವ ಜಿಲ್ಲಾ ಸಭೆಗಳಲ್ಲೂ ಚರ್ಚಿಸಲಾಗುವುದು. ಹೊಸ ರೀತಿಯ ಮಾಧ್ಯಮವು ಬೀದಿಯಲ್ಲಿರುವ ಜನತೆ ಮತ್ತು ಹೊಸಕಾಲದ ಬುದ್ಧಿಜೀವಿಗಳನ್ನು ಬೆಸೆಯುತ್ತಾ, ಅವೆರಡರಿಂದ ಪ್ರತ್ಯೇಕವಾಗುಳಿಯದೇ ತಾನೂ ಜೊತೆಗೂಡುತ್ತದೆ.
– ಸಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...