Homeಅಂಕಣಗಳುಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?

ಬಹುಮುಖಿ ದಾಳಿಯನ್ನು ಎದುರಿಸುವುದು ಸಾಧ್ಯವೇ?

- Advertisement -
- Advertisement -

| ಡಾ. ವಾಸು ಎಚ್.ವಿ |

ಪತ್ರಿಕೆಯಲ್ಲಿ ಈ ದಿನ ಅಥವಾ ವಾರ ನೀವು ಯಾವುದರ ಮೇಲೆ ಕೇಂದ್ರೀಕರಿಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸುವುದು ಈ ಕಾಲದಲ್ಲಿ ಅಷ್ಟು ಸುಲಭವಲ್ಲ. ಏಕೆಂದರೆ ನಿಮ್ಮ ಗಮನ ಅಸಲೀ ಸಮಸ್ಯೆಯ ಮೇಲೆ ಹೋಗದಂತೆ ಮಾಡಲೆಂದೇ ಕೆಲವು ವಾಗ್ವಾದಗಳನ್ನು ತೇಲಿಬಿಟ್ಟಿರಬಹುದೆಂಬ ಅನುಮಾನ ಬಂದಿರುತ್ತದೆ. ಕೆಲವೊಮ್ಮೆ ಅವು ಕೇವಲ ವಾಗ್ವಾದಗಳಾಗಿರುವುದಿಲ್ಲ; ಯಾರದ್ದೋ ಬದುಕಿನ ಅತ್ಯಂತ ಜ್ವಲಂತ ಸಮಸ್ಯೆಯಾಗಿರುತ್ತದೆ. ಉದಾಹರಣೆಗೆ ಕಾಶ್ಮೀರ, ಎನ್‍ಆರ್‍ಸಿ ಇತ್ಯಾದಿ. ಕೆಲವು ಸಾರಿ ಅದು ಯಾರ ಬದುಕಿನ ತಕ್ಷಣದ ಕಾಡುವ ಸಮಸ್ಯೆಯೂ ಆಗಿರುವುದಿಲ್ಲ; ಆದರೆ ನಮ್ಮ ಇತಿಹಾಸದಲ್ಲಿ ಅಡಗಿರುವ ಸತ್ಯಗಳನ್ನು ಬುಡಮೇಲು ಮಾಡುವ ಕೆಲಸ ನಡೆದಿರುತ್ತದೆ. ಸಾವರ್ಕರ್‍ಗೆ ಭಾರತರತ್ನ ನೀಡುತ್ತೇವೆನ್ನುವುದನ್ನು ಬಿಜೆಪಿ ಪಕ್ಷವು ಮಹಾರಾಷ್ಟ್ರ ಚುನಾವಣೆಯ ಪ್ರಣಾಳಿಕೆಯಲ್ಲಿ ಸೇರಿಸಿದ್ದು ಅದಕ್ಕೆ ನಿದರ್ಶನ.

ಅಸಲೀ ಸಮಸ್ಯೆ ಮತ್ತು ಹೊಸದಾಗಿ ಸೃಷ್ಟಿಸಿದ ಇಶ್ಯೂ ಎರಡನ್ನೂ ಆಯ್ದುಕೊಂಡು, ಅವುಗಳನ್ನು ಸತ್ಯದ ಮುಖಾಂತರ ಎದುರಿಸಬೇಕಾದ್ದು ನಮ್ಮ ಜವಾಬ್ದಾರಿ. ಆದರೆ, ಎರಡರಲ್ಲಿ ಒಂದನ್ನು ಮಾತ್ರ ಆಯ್ದುಕೊಳ್ಳುವಂತೆ ಪರಿಸ್ಥಿತಿ ದೂಡುತ್ತದೆ. ಇದು ರಾಜಕೀಯ ಕಾರ್ಯಕರ್ತರಿಗೆ ಮಾತ್ರವಲ್ಲದೇ, ನಮ್ಮಂತಹ ಪತ್ರಿಕೆಗಳಿಗೂ ಇರುವ ಸಂದಿಗ್ಧ.

ದೇಶದ ಸಾರ್ವಭೌಮತೆಯನ್ನು ಮತ್ತಷ್ಟು ಕಿತ್ತುಕೊಳ್ಳುವ ಆರ್‍ಸಿಇಪಿ ಒಪ್ಪಂದದ ಕುರಿತು ರೈತಸಂಘಗಳು ಪ್ರತಿಭಟಿಸುತ್ತಿರುವಾಗ ಅದಕ್ಕೆ ಇಂಬು ಕೊಡುವುದು ನಮ್ಮ ಕರ್ತವ್ಯ; ಕರ್ನಾಟಕದ ಬರ-ನೆರೆ ಸಂಕಷ್ಟಕ್ಕೆ ಪರಿಹಾರವಾಗಿ 1 ಲಕ್ಷ ಕೋಟಿ ಪ್ಯಾಕೇಜ್‍ಅನ್ನು ರೈತರು ಕೇಳುತ್ತಿರುವಾಗಲೇ, ಮತ್ತೊಂದು ಮಳೆ ಇಡೀ ರಾಜ್ಯವನ್ನು ಆವರಿಸಿದೆ. ಉತ್ತರ ಕರ್ನಾಟಕಕ್ಕೆ ಮತ್ತೊಮ್ಮೆ ಅಪ್ಪಳಿಸಿದೆ. ಬಿಎಸ್‍ಎನ್‍ಎಲ್‍ಅನ್ನು ಮುಳುಗಿಸುವ ಕಾಂಗ್ರೆಸ್‍ನ ಹಳೆಯ ಪ್ಲಾನ್‍ಅನ್ನು ಬಿಜೆಪಿ ಯಶಸ್ವಿ ಮಾಡುವ ಎಲ್ಲಾ ಲಕ್ಷಣಗಳೂ ಕಾಣುತ್ತಿವೆ. ಹೀಗಿರುವಾಗ ಸಿ.ಟಿ.ರವಿಯ ಮನೆಹಾಳ ಮಾತು, ಸಾವರ್ಕರ್‍ಗೆ ಭಾರತರತ್ನ ಇತ್ಯಾದಿಗಳು ನಮ್ಮನ್ನು ಬೇರೆ ಕಡೆಗೆ ಎಳೆಯುತ್ತವೆ. ಅದನ್ನು ಮುಗಿಸಿ ಬರುವ ಹೊತ್ತಿಗೆ ಬಿಎಸ್‍ಎನ್‍ಎಲ್ ಮುಳುಗಿ ರೈಲ್ವೇ ಖಾಸಗೀಕರಣದ ಮಾತು ನಡೆಯುತ್ತಿರುತ್ತದೆ. ಅದರ ಬಗ್ಗೆ ಮಾತು ಆಡುವುದು ಸಾಧ್ಯವೇ ಆಗದಂತೆ ದೇಶದ ಪ್ರಮುಖ ಸ್ಥಾನದಲ್ಲಿರುವ ವ್ಯಕ್ತಿ ‘ಗೋಡ್ಸೆ ದೇಶಭಕ್ತ ಎಂಬುದನ್ನು ಅಲ್ಲಗಳೆಯಲಾಗುವುದಿಲ್ಲ’ ಎಂದು ಹೇಳುವ ಸಾಧ್ಯತೆ ಇರುತ್ತದೆ.

ಆ ವಾರ ನಿಮಗೆ ಲಭ್ಯವಿರುವ ಮೂರು ಪುಟಗಳಲ್ಲಿ ಗೋಡ್ಸೆಯ ಕುರಿತು ಎಷ್ಟು ಮಾತನಾಡುವಿರಿ, ರೈಲ್ವೇ ಖಾಸಗೀಕರಣದ ಕುರಿತು ಏನು ಹೇಳುವಿರಿ ಎಂಬ ಸಂದಿಗ್ಧ ಎದುರಾಗುತ್ತದೆ. ಇಂತಹ ಸಂದಿಗ್ಧದಿಂದ ಹೊರಬರುವುದು ಸಾಧ್ಯವಿಲ್ಲವೇ? ಸಂತ್ರಸ್ತರು, ಕಾಳಜಿಯುಳ್ಳವರು, ಪ್ರಜಾತಂತ್ರವಾದಿಗಳೆಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಅನಿಸಿಕೆ ಹೇಳಿ, ಟ್ವಿಟ್ಟರ್ ಟ್ರೆಂಡ್ ಮಾಡಿಬಿಟ್ಟರೆ ಸಾಕೇ?

ಖಂಡಿತಾ ಸಾಲದು. ಬೀದಿಯಲ್ಲಿ ಸಂತ್ರಸ್ತರು ಒಟ್ಟುಗೂಡಿ ಶಕ್ತಿಯುತವಾಗಿ ತಮ್ಮ ಅನಿಸಿಕೆಗಳನ್ನು ಮುಂದಿಡುವುದು, ಬುದ್ಧಿಜೀವಿಗಳು ಸರಿಯಾದ ಹತಾರಗಳೊಂದಿಗೆ ತಮ್ಮದೇ ಆದ ಮಾಧ್ಯಮಗಳನ್ನು ಹುಡುಕಿಕೊಂಡು ವಾಗ್ವಾದಕ್ಕಿಳಿಯುವುದು ಎರಡೂ ಆಗಬೇಕು. ಮಾಧ್ಯಮವು ಇವೆರಡಕ್ಕೂ ಸೂಕ್ತ ಅವಕಾಶ ಕಲ್ಪಿಸಿ ಅದನ್ನು ವ್ಯಾಪಕಗೊಳಿಸಬೇಕು; ಅಧಿಕಾರಸ್ಥರ ಮೇಲೆ ಒತ್ತಡ ತರಬೇಕು. ಆಗ ಪರಿಣಾಮ ಕಾಣತೊಡಗುತ್ತದೆ. ಆದರೆ, ಇಂದಿನ ಮಾಧ್ಯಮ ಇವೆರಡನ್ನೂ (ಬೀದಿಯಲ್ಲಿನ ಭಿನ್ನಮತ ಮತ್ತು ಬುದ್ಧಿಜೀವಿಗಳ ಅಭಿಮತ) ದಿಕ್ಕೆಡಿಸುವ ಕೆಲಸ ಮಾಡುತ್ತಿದೆ. ಅದರ ಫಲವಾಗಿ ಎಲ್ಲವೂ ದುರ್ಬಲವಾಗಿಬಿಟ್ಟಿವೆ. ಹಾಗಾದರೆ ದಾರಿಯೇನು? ದಾರಿಯಿಷ್ಟೇ; ಇವು ಮೂರೂ ಅಭಿನ್ನವಾಗಿ ಜೊತೆಗೂಡುವುದು. ಜೊತೆಗೂಡಿಸುವ ಕೆಲಸವನ್ನು ಮಾಧ್ಯಮ ಮಾಡಬೇಕು. ಮಿಕ್ಕೆರಡು ವಲಯಗಳು ಜೊತೆಗೂಡಿ ಮಾಧ್ಯಮವನ್ನು ಕಟ್ಟಿ ನಿಲ್ಲಿಸಬೇಕು. ಅದು ಮಾತ್ರವೇ ದಾರಿ.

ನ್ಯಾಯಪಥ ಮತ್ತು ನಮ್ಮ ವೆಬ್‍ಸೈಟ್‍ಗಳು ಮಾಡಹೊರಟಿರುವುದು ಅದನ್ನೇ. ಇದನ್ನೇ ಈ ವಾರದಲ್ಲಿ ನಡೆಯಲಿರುವ ಜಿಲ್ಲಾ ಸಭೆಗಳಲ್ಲೂ ಚರ್ಚಿಸಲಾಗುವುದು. ಹೊಸ ರೀತಿಯ ಮಾಧ್ಯಮವು ಬೀದಿಯಲ್ಲಿರುವ ಜನತೆ ಮತ್ತು ಹೊಸಕಾಲದ ಬುದ್ಧಿಜೀವಿಗಳನ್ನು ಬೆಸೆಯುತ್ತಾ, ಅವೆರಡರಿಂದ ಪ್ರತ್ಯೇಕವಾಗುಳಿಯದೇ ತಾನೂ ಜೊತೆಗೂಡುತ್ತದೆ.
– ಸಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....