Homeಅಂಕಣಗಳುಮನ ಮುಟ್ಟುವ ಪತ್ರಿಕೋದ್ಯಮದ ಹಾದಿಯಲ್ಲಿ ಇನ್ನೊಂದು ಹೆಜ್ಜೆ

ಮನ ಮುಟ್ಟುವ ಪತ್ರಿಕೋದ್ಯಮದ ಹಾದಿಯಲ್ಲಿ ಇನ್ನೊಂದು ಹೆಜ್ಜೆ

- Advertisement -
- Advertisement -

| ಸಂಪಾದಕೀಯ ತಂಡ |

ಮಾಧ್ಯಮಗಳು ಪ್ರಜಾತಂತ್ರದ ನಾಲ್ಕನೆಯ ಅಂಗವೆಂದು ಹೇಳುವುದು ಕೇವಲ ಕ್ಲೀಷೆಯಷ್ಟೇ ಅಲ್ಲ, ಅದೀಗ ಅಪಹಾಸ್ಯದ ವಸ್ತುವಾಗುತ್ತಿದೆ. ಒಂದೆಡೆ ನಿರ್ಭೀತ ಪತ್ರಕರ್ತರು ಅಲ್ಲಲ್ಲಿ ದಾಳಿಗೊಳಗಾಗಿ ಕೊಲೆಯಾಗುತ್ತಿದ್ದರೆ, ಇನ್ನೊಂದೆಡೆ ಕರ್ನಾಟಕದ ಕೆಲವು ಪತ್ರಕರ್ತರು ಬ್ಲಾಕ್‍ಮೇಲ್, ವಂಚನೆ ಇತ್ಯಾದಿ ಪ್ರಕರಣಗಳಲ್ಲಿ ಜೈಲು ಸೇರುತ್ತಿದ್ದಾರೆ. ರಾಜಕಾರಣಿಗಳನ್ನು ಓಲೈಸುವ ಸರಣಿ ಸರಣಿ ಕಾರ್ಯಕ್ರಮ ಮಾಡುವ ಪತ್ರಕರ್ತರು, ಐಸಿಯುಗೆ ನುಗ್ಗಿ ಮೆದುಳು ಜ್ವರ ಪೀಡಿತ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಮೇಲೆ ವಾಗ್ದಾಳಿ ನಡೆಸುತ್ತಾರೆ. ಕಾಲ ಸರಿಯುತ್ತಿದ್ದ ಹಾಗೆ, ಹೆಚ್ಚೆಚ್ಚು ಮಾಧ್ಯಮ ಸಂಸ್ಥೆಗಳು ಬೆರಳೆಣಿಕೆಯ ಕಾರ್ಪೋರೇಟ್ ಕುಳಗಳ ಆಸ್ತಿಗಳಾಗುತ್ತಿವೆ.
ದೇಶದ ಅತೀ ದೊಡ್ಡ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಟೈಮ್ಸ್ ಗುಂಪಿನ ಹಿರಿಯ ಸ್ಥಾನದಲ್ಲಿರುವ ವ್ಯಕ್ತಿ, ನೊಬೆಲ್ ಪುರಸ್ಕøತ ಅರ್ಥಶಾಸ್ತ್ರಜ್ಞ ಅಮತ್ರ್ಯಸೆನ್‍ರ ಕುರಿತ ಸುಳ್ಳುಗಳನ್ನು ಖುದ್ದು ಪ್ರಚಾರ ಮಾಡುತ್ತಾರೆ. ಅದರ ಕುರಿತು ಮಾತನಾಡಿದ ಸೆನ್, ಇಷ್ಟು ಪುಟ್ಟ ಲೇಖನದೊಳಗೆ ಅಷ್ಟೊಂದು ಸುಳ್ಳುಗಳನ್ನು ಪೇರಿಸಿರುವ ಅವರ ಸಾಮಥ್ರ್ಯವನ್ನು ಅಭಿನಂದಿಸಬೇಕು ಎಂದರಂತೆ. ಇನ್ನೂ ಯಾವ್ಯಾವ ಬಗೆಯ ಕಿರೀಟಗಳನ್ನು ದೇಶದ ಮಾಧ್ಯಮಗಳು ಪಡೆದುಕೊಳ್ಳುತ್ತವೋ ಗೊತ್ತಿಲ್ಲ.
ಪರಿಸ್ಥಿತಿ ಹೀಗಿರುವಾಗ, 2 ದಶಕಕ್ಕೂ ಹೆಚ್ಚು ಕಾಲ ದೆಹಲಿಯಲ್ಲಿದ್ದ ಕರ್ನಾಟಕದ ಪತ್ರಕರ್ತರೊಬ್ಬರು ನಮ್ಮಲ್ಲಿ ವಿಸ್ಮಯ ಮೂಡಿಸಿದರು. ಗೌರಿ ಲಂಕೇಶರ ಆಶಯಗಳ ಮುಂದುವರಿಕೆಯ ನ್ಯಾಯಪಥ ಪತ್ರಿಕೆಗೆ ಮಾರ್ಗದರ್ಶನ ಮಾಡಬೇಕೆಂದು ಅವರಲ್ಲಿ ಟ್ರಸ್ಟ್‍ನ ಹಿರಿಯರು ಮನವಿ ಮಾಡಿದರು. ಅದಕ್ಕೆ ಅವರು ವಿಧಿಸಿದ ಷರತ್ತುಗಳು ಆಶ್ಚರ್ಯಕರವಾಗಿತ್ತು. ಅದರಲ್ಲಿ ಮುಖ್ಯವಾದುದು, ತನ್ನ ಆಸ್ತಿ ವಿವರಗಳನ್ನು ಟ್ರಸ್ಟ್‍ನ ಹಿರಿಯರು ಖುದ್ದಾಗಿ ಕೇಳಿಸಿಕೊಳ್ಳಬೇಕು ಮತ್ತು ತಾನು ಇದುವರೆಗೆ ‘ಮಾಡಿರಬಹುದಾದ’ ತಪ್ಪುಗಳ ಕುರಿತ ವರದಿಯನ್ನು ಒಪ್ಪಿಸುತ್ತೇನೆ. ಆ ನಂತರ ಟ್ರಸ್ಟ್‍ಗೆ ಒಪ್ಪಿಗೆಯಿದ್ದರೆ, ಇದರೊಂದಿಗೆ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು. ಡಿ.ಉಮಾಪತಿಯವರನ್ನು ಬಲ್ಲ ಯಾರಿಗೂ ಇಂತಹ ವಿಚಾರಗಳಲ್ಲಿ ಯಾವ ಹುಳುಕೂ ಇರುವುದಿಲ್ಲ ಎಂಬ ಖಚಿತ ವಿಶ್ವಾಸವಿತ್ತು. ಆದರೂ ಅಪಾರ ಮುಜುಗರ, ಕಟು ಪ್ರಾಮಾಣಿಕತೆಯ ಅವರು ಸಂಪೂರ್ಣ ಪಾರದರ್ಶಕವಾಗಿ ತಮ್ಮ ಅನಿಸಿಕೆಗಳನ್ನು ಮುಂದಿಟ್ಟರು. ಅದು ಅವರ ಬಗ್ಗೆ ವಿಶ್ವಾಸ ಹೆಚ್ಚಿಸಿದ್ದಷ್ಟೇ ಅಲ್ಲದೇ, ಇತರರಿಗೂ ಒಂದು ಮಾದರಿ ನಿರ್ಮಾಣವಾದಂತಾಯಿತು.
ಈ ‘ಪ್ರಕ್ರಿಯೆ’ ಪೂರ್ಣಗೊಂಡ ನಂತರವೇ ಡಿ.ಉಮಾಪತಿಯವರು ಇದರ ‘ಕನ್ಸಲ್ಟಿಂಗ್ ಎಡಿಟರ್’ ಆಗಲು ಒಪ್ಪಿಕೊಂಡರು. ಹೊಸ ಕಾಲದ ಮತ್ತು ಹೊಸ ಬಗೆಯ ಮಾಧ್ಯಮದ ವಿದ್ಯಾರ್ಥಿಯೆನ್ನುವಷ್ಟು ವಿನಯವನ್ನೂ, ದೀರ್ಘಕಾಲದ ಪತ್ರಿಕೋದ್ಯಮದ ಅನುಭವವನ್ನೂ ಎಲ್ಲಕ್ಕಿಂತ ಮುಖ್ಯವಾಗಿ ಮೌಲ್ಯಗಳಿಗೆ ಬದ್ಧತೆ ಹಾಗೂ ಪ್ರಾಮಾಣಿಕತೆಗಳನ್ನು ಮೈಗೂಡಿಸಿಕೊಂಡಿರುವ ಅವರು ನಮ್ಮ ಸಂಪಾದಕೀಯ ತಂಡದ ಮಾರ್ಗದರ್ಶಕರಾಗಿರುವುದು ಹೆಮ್ಮೆಯ ಸಂಗತಿ. ಕರ್ನಾಟಕದ ಮೂರು ಪ್ರಮುಖ ದಿನಪತ್ರಿಕೆಗಳಲ್ಲಿ (ಕನ್ನಡಪ್ರಭ, ವಿಜಯಕರ್ನಾಟಕ ಮತ್ತು ಪ್ರಜಾವಾಣಿ) ದೆಹಲಿ ವರದಿಗಾರರಾಗಿ ಕೆಲಸ ಮಾಡಿರುವ ಉಮಾಪತಿಯವರು, ಕಳೆದ ಕೆಲ ಕಾಲದಿಂದ ಬರೆದ ಅಂಕಣ ಬರಹಗಳು ರಾಜ್ಯದ ಪ್ರಜ್ಞಾವಂತರನ್ನು ತಟ್ಟಿರುವ ಪರಿ ಅನನ್ಯವಾದುದು.
ಇದರೊಂದಿಗೆ, ಪತ್ರಿಕೆಯ ಜವಾಬ್ದಾರಿಯಲ್ಲಿ ಇನ್ನೂ ಕೆಲವು ಬದಲಾವಣೆಗಳು ಆಗುತ್ತಲಿವೆ. ಹಲವು ಹಿರಿಯರು ಬೇರೆ ಬೇರೆ ರೀತಿಯಲ್ಲಿ ಇದರ ಜೊತೆಗೂಡಲಿದ್ದಾರೆ. ಮುಂಬರುವ ಸಂಚಿಕೆಗಳಲ್ಲಿ ಅಧಿಕೃತವಾಗಿ ನಿಮ್ಮೊಂದಿಗೆ ಅದನ್ನು ವಿಸ್ತøತವಾಗಿ ಹಂಚಿಕೊಳ್ಳಲಿದ್ದೇವೆ.
ಹೊಸ ಕಾಲದ ಜನಪರ ಮಾಧ್ಯಮದ ಹಲವು ಪ್ರಯೋಗಗಳು ದೇಶಾದ್ಯಂತ ಜಾರಿಯಲ್ಲಿದೆ. ‘80ರ ದಶಕದಲ್ಲಿ ಕರ್ನಾಟಕದ ರಾಜಕಾರಣ, ಸಾಹಿತ್ಯ ಸಂಸ್ಕøತಿಗಳನ್ನು ಮತ್ತು ಯುವತಲೆಮಾರನ್ನು ಗಾಢವಾಗಿ ಪ್ರಭಾವಿಸಿದ ಲಂಕೇಶ್ ಪತ್ರಿಕೆಯು ಈ ನಾಡಿನ ವಿಶಿಷ್ಟ ಟ್ಯಾಬ್ಲಾಯ್ಡ್ ಆಗಿತ್ತು. ಇಂದು ಅದೇ ಬಗೆಯ ಟ್ಯಾಬ್ಲಾಯ್ಡ್ ಅದೇ ರೀತಿಯ ಪಾತ್ರ ನಿರ್ವಹಿಸಲಾರದು. ಮುದ್ರಣ ಮಾಧ್ಯಮದ ಸಾಧ್ಯತೆಗಳು ಇನ್ನೂ ಮುಗಿದು ಹೋಗಿಲ್ಲ; ಆದರೆ, ವೆಬ್ ಮೀಡಿಯಾದಲ್ಲಿ ಅಪಾರವಾದ ಸಾಧ್ಯತೆಗಳು ತೆರೆದುಕೊಂಡಿವೆ. ಇವೆಲ್ಲವನ್ನೂ ಬೆಸೆದು, ಹೊಸ ನುಡಿಗಟ್ಟು, ಭಾಷೆ-ಪರಿಭಾಷೆಗಳೊಂದಿಗೆ ಈ ಕಾಲದ ಯುವತಲೆಮಾರನ್ನು ಒಳಗೊಳ್ಳುವ ರೀತಿ-ನೀತಿಗಳನ್ನು ರೂಪಿಸುವ ಹಂತದಲ್ಲಿ ನಾವಿದ್ದೇವೆ. ಅದಕ್ಕಾಗಿ ಪ್ರಯೋಗಗಳು ನಡೆಯುತ್ತಿವೆ. ಇದರಲ್ಲಿ ನೀವೆಲ್ಲರೂ ಪಾಲುದಾರರು.
ಈ ಪತ್ರಿಕೆಯು ಒಂದು ಗುಂಪಿನ, ಒಂದು ಪಂಥದ, ಒಂದು ಸೈದ್ಧಾಂತಿಕ ಧಾರೆಯ ಮುಖವಾಣಿಯಲ್ಲ; ದೇಶ ಮತ್ತು ಜನಪರ ಹಿತಾಸಕ್ತಿಯ ಹೊರತಾಗಿ ಬೇರೆ ಆಸಕ್ತಿಗಳೂ ಇಲ್ಲ. ಪ್ರಜಾತಂತ್ರ ಮತ್ತು ಜೀವಪರತೆಯ ಆಶಯಗಳುಳ್ಳ ಎಲ್ಲ ಪಂಥಗಳೂ ಒಟ್ಟುಗೂಡಿ ಒಂದು ಪಂಥವಾಗಲಿ ಎಂಬ ಆಶಯವಷ್ಟೇ ನಮ್ಮದು.
ಇವತ್ತಿನ ಜಾಣಜಾಣೆಯರನ್ನು ಒಳಗೊಳ್ಳುವ ರಂಜನೆ, ಬೋಧನೆ, ಪ್ರಚೋದನೆಗಳು ಎಂದಿನಂತೆ ಪತ್ರಿಕೆಯ ಹೂರಣ ಹಾಗೂ ಸ್ವರೂಪವನ್ನು ನಿರ್ಧರಿಸಬೇಕು. ಹಾಗಾಗಿ ಪತ್ರಿಕೆಯು ನಿಮ್ಮೆಲ್ಲರ ಅಭಿವ್ಯಕ್ತಿಯ ವೇದಿಕೆಯೂ ಆಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...