Homeಅಂಕಣಗಳುಮನ ಮುಟ್ಟುವ ಪತ್ರಿಕೋದ್ಯಮದ ಹಾದಿಯಲ್ಲಿ ಇನ್ನೊಂದು ಹೆಜ್ಜೆ

ಮನ ಮುಟ್ಟುವ ಪತ್ರಿಕೋದ್ಯಮದ ಹಾದಿಯಲ್ಲಿ ಇನ್ನೊಂದು ಹೆಜ್ಜೆ

- Advertisement -
- Advertisement -

| ಸಂಪಾದಕೀಯ ತಂಡ |

ಮಾಧ್ಯಮಗಳು ಪ್ರಜಾತಂತ್ರದ ನಾಲ್ಕನೆಯ ಅಂಗವೆಂದು ಹೇಳುವುದು ಕೇವಲ ಕ್ಲೀಷೆಯಷ್ಟೇ ಅಲ್ಲ, ಅದೀಗ ಅಪಹಾಸ್ಯದ ವಸ್ತುವಾಗುತ್ತಿದೆ. ಒಂದೆಡೆ ನಿರ್ಭೀತ ಪತ್ರಕರ್ತರು ಅಲ್ಲಲ್ಲಿ ದಾಳಿಗೊಳಗಾಗಿ ಕೊಲೆಯಾಗುತ್ತಿದ್ದರೆ, ಇನ್ನೊಂದೆಡೆ ಕರ್ನಾಟಕದ ಕೆಲವು ಪತ್ರಕರ್ತರು ಬ್ಲಾಕ್‍ಮೇಲ್, ವಂಚನೆ ಇತ್ಯಾದಿ ಪ್ರಕರಣಗಳಲ್ಲಿ ಜೈಲು ಸೇರುತ್ತಿದ್ದಾರೆ. ರಾಜಕಾರಣಿಗಳನ್ನು ಓಲೈಸುವ ಸರಣಿ ಸರಣಿ ಕಾರ್ಯಕ್ರಮ ಮಾಡುವ ಪತ್ರಕರ್ತರು, ಐಸಿಯುಗೆ ನುಗ್ಗಿ ಮೆದುಳು ಜ್ವರ ಪೀಡಿತ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಮೇಲೆ ವಾಗ್ದಾಳಿ ನಡೆಸುತ್ತಾರೆ. ಕಾಲ ಸರಿಯುತ್ತಿದ್ದ ಹಾಗೆ, ಹೆಚ್ಚೆಚ್ಚು ಮಾಧ್ಯಮ ಸಂಸ್ಥೆಗಳು ಬೆರಳೆಣಿಕೆಯ ಕಾರ್ಪೋರೇಟ್ ಕುಳಗಳ ಆಸ್ತಿಗಳಾಗುತ್ತಿವೆ.
ದೇಶದ ಅತೀ ದೊಡ್ಡ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಟೈಮ್ಸ್ ಗುಂಪಿನ ಹಿರಿಯ ಸ್ಥಾನದಲ್ಲಿರುವ ವ್ಯಕ್ತಿ, ನೊಬೆಲ್ ಪುರಸ್ಕøತ ಅರ್ಥಶಾಸ್ತ್ರಜ್ಞ ಅಮತ್ರ್ಯಸೆನ್‍ರ ಕುರಿತ ಸುಳ್ಳುಗಳನ್ನು ಖುದ್ದು ಪ್ರಚಾರ ಮಾಡುತ್ತಾರೆ. ಅದರ ಕುರಿತು ಮಾತನಾಡಿದ ಸೆನ್, ಇಷ್ಟು ಪುಟ್ಟ ಲೇಖನದೊಳಗೆ ಅಷ್ಟೊಂದು ಸುಳ್ಳುಗಳನ್ನು ಪೇರಿಸಿರುವ ಅವರ ಸಾಮಥ್ರ್ಯವನ್ನು ಅಭಿನಂದಿಸಬೇಕು ಎಂದರಂತೆ. ಇನ್ನೂ ಯಾವ್ಯಾವ ಬಗೆಯ ಕಿರೀಟಗಳನ್ನು ದೇಶದ ಮಾಧ್ಯಮಗಳು ಪಡೆದುಕೊಳ್ಳುತ್ತವೋ ಗೊತ್ತಿಲ್ಲ.
ಪರಿಸ್ಥಿತಿ ಹೀಗಿರುವಾಗ, 2 ದಶಕಕ್ಕೂ ಹೆಚ್ಚು ಕಾಲ ದೆಹಲಿಯಲ್ಲಿದ್ದ ಕರ್ನಾಟಕದ ಪತ್ರಕರ್ತರೊಬ್ಬರು ನಮ್ಮಲ್ಲಿ ವಿಸ್ಮಯ ಮೂಡಿಸಿದರು. ಗೌರಿ ಲಂಕೇಶರ ಆಶಯಗಳ ಮುಂದುವರಿಕೆಯ ನ್ಯಾಯಪಥ ಪತ್ರಿಕೆಗೆ ಮಾರ್ಗದರ್ಶನ ಮಾಡಬೇಕೆಂದು ಅವರಲ್ಲಿ ಟ್ರಸ್ಟ್‍ನ ಹಿರಿಯರು ಮನವಿ ಮಾಡಿದರು. ಅದಕ್ಕೆ ಅವರು ವಿಧಿಸಿದ ಷರತ್ತುಗಳು ಆಶ್ಚರ್ಯಕರವಾಗಿತ್ತು. ಅದರಲ್ಲಿ ಮುಖ್ಯವಾದುದು, ತನ್ನ ಆಸ್ತಿ ವಿವರಗಳನ್ನು ಟ್ರಸ್ಟ್‍ನ ಹಿರಿಯರು ಖುದ್ದಾಗಿ ಕೇಳಿಸಿಕೊಳ್ಳಬೇಕು ಮತ್ತು ತಾನು ಇದುವರೆಗೆ ‘ಮಾಡಿರಬಹುದಾದ’ ತಪ್ಪುಗಳ ಕುರಿತ ವರದಿಯನ್ನು ಒಪ್ಪಿಸುತ್ತೇನೆ. ಆ ನಂತರ ಟ್ರಸ್ಟ್‍ಗೆ ಒಪ್ಪಿಗೆಯಿದ್ದರೆ, ಇದರೊಂದಿಗೆ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು. ಡಿ.ಉಮಾಪತಿಯವರನ್ನು ಬಲ್ಲ ಯಾರಿಗೂ ಇಂತಹ ವಿಚಾರಗಳಲ್ಲಿ ಯಾವ ಹುಳುಕೂ ಇರುವುದಿಲ್ಲ ಎಂಬ ಖಚಿತ ವಿಶ್ವಾಸವಿತ್ತು. ಆದರೂ ಅಪಾರ ಮುಜುಗರ, ಕಟು ಪ್ರಾಮಾಣಿಕತೆಯ ಅವರು ಸಂಪೂರ್ಣ ಪಾರದರ್ಶಕವಾಗಿ ತಮ್ಮ ಅನಿಸಿಕೆಗಳನ್ನು ಮುಂದಿಟ್ಟರು. ಅದು ಅವರ ಬಗ್ಗೆ ವಿಶ್ವಾಸ ಹೆಚ್ಚಿಸಿದ್ದಷ್ಟೇ ಅಲ್ಲದೇ, ಇತರರಿಗೂ ಒಂದು ಮಾದರಿ ನಿರ್ಮಾಣವಾದಂತಾಯಿತು.
ಈ ‘ಪ್ರಕ್ರಿಯೆ’ ಪೂರ್ಣಗೊಂಡ ನಂತರವೇ ಡಿ.ಉಮಾಪತಿಯವರು ಇದರ ‘ಕನ್ಸಲ್ಟಿಂಗ್ ಎಡಿಟರ್’ ಆಗಲು ಒಪ್ಪಿಕೊಂಡರು. ಹೊಸ ಕಾಲದ ಮತ್ತು ಹೊಸ ಬಗೆಯ ಮಾಧ್ಯಮದ ವಿದ್ಯಾರ್ಥಿಯೆನ್ನುವಷ್ಟು ವಿನಯವನ್ನೂ, ದೀರ್ಘಕಾಲದ ಪತ್ರಿಕೋದ್ಯಮದ ಅನುಭವವನ್ನೂ ಎಲ್ಲಕ್ಕಿಂತ ಮುಖ್ಯವಾಗಿ ಮೌಲ್ಯಗಳಿಗೆ ಬದ್ಧತೆ ಹಾಗೂ ಪ್ರಾಮಾಣಿಕತೆಗಳನ್ನು ಮೈಗೂಡಿಸಿಕೊಂಡಿರುವ ಅವರು ನಮ್ಮ ಸಂಪಾದಕೀಯ ತಂಡದ ಮಾರ್ಗದರ್ಶಕರಾಗಿರುವುದು ಹೆಮ್ಮೆಯ ಸಂಗತಿ. ಕರ್ನಾಟಕದ ಮೂರು ಪ್ರಮುಖ ದಿನಪತ್ರಿಕೆಗಳಲ್ಲಿ (ಕನ್ನಡಪ್ರಭ, ವಿಜಯಕರ್ನಾಟಕ ಮತ್ತು ಪ್ರಜಾವಾಣಿ) ದೆಹಲಿ ವರದಿಗಾರರಾಗಿ ಕೆಲಸ ಮಾಡಿರುವ ಉಮಾಪತಿಯವರು, ಕಳೆದ ಕೆಲ ಕಾಲದಿಂದ ಬರೆದ ಅಂಕಣ ಬರಹಗಳು ರಾಜ್ಯದ ಪ್ರಜ್ಞಾವಂತರನ್ನು ತಟ್ಟಿರುವ ಪರಿ ಅನನ್ಯವಾದುದು.
ಇದರೊಂದಿಗೆ, ಪತ್ರಿಕೆಯ ಜವಾಬ್ದಾರಿಯಲ್ಲಿ ಇನ್ನೂ ಕೆಲವು ಬದಲಾವಣೆಗಳು ಆಗುತ್ತಲಿವೆ. ಹಲವು ಹಿರಿಯರು ಬೇರೆ ಬೇರೆ ರೀತಿಯಲ್ಲಿ ಇದರ ಜೊತೆಗೂಡಲಿದ್ದಾರೆ. ಮುಂಬರುವ ಸಂಚಿಕೆಗಳಲ್ಲಿ ಅಧಿಕೃತವಾಗಿ ನಿಮ್ಮೊಂದಿಗೆ ಅದನ್ನು ವಿಸ್ತøತವಾಗಿ ಹಂಚಿಕೊಳ್ಳಲಿದ್ದೇವೆ.
ಹೊಸ ಕಾಲದ ಜನಪರ ಮಾಧ್ಯಮದ ಹಲವು ಪ್ರಯೋಗಗಳು ದೇಶಾದ್ಯಂತ ಜಾರಿಯಲ್ಲಿದೆ. ‘80ರ ದಶಕದಲ್ಲಿ ಕರ್ನಾಟಕದ ರಾಜಕಾರಣ, ಸಾಹಿತ್ಯ ಸಂಸ್ಕøತಿಗಳನ್ನು ಮತ್ತು ಯುವತಲೆಮಾರನ್ನು ಗಾಢವಾಗಿ ಪ್ರಭಾವಿಸಿದ ಲಂಕೇಶ್ ಪತ್ರಿಕೆಯು ಈ ನಾಡಿನ ವಿಶಿಷ್ಟ ಟ್ಯಾಬ್ಲಾಯ್ಡ್ ಆಗಿತ್ತು. ಇಂದು ಅದೇ ಬಗೆಯ ಟ್ಯಾಬ್ಲಾಯ್ಡ್ ಅದೇ ರೀತಿಯ ಪಾತ್ರ ನಿರ್ವಹಿಸಲಾರದು. ಮುದ್ರಣ ಮಾಧ್ಯಮದ ಸಾಧ್ಯತೆಗಳು ಇನ್ನೂ ಮುಗಿದು ಹೋಗಿಲ್ಲ; ಆದರೆ, ವೆಬ್ ಮೀಡಿಯಾದಲ್ಲಿ ಅಪಾರವಾದ ಸಾಧ್ಯತೆಗಳು ತೆರೆದುಕೊಂಡಿವೆ. ಇವೆಲ್ಲವನ್ನೂ ಬೆಸೆದು, ಹೊಸ ನುಡಿಗಟ್ಟು, ಭಾಷೆ-ಪರಿಭಾಷೆಗಳೊಂದಿಗೆ ಈ ಕಾಲದ ಯುವತಲೆಮಾರನ್ನು ಒಳಗೊಳ್ಳುವ ರೀತಿ-ನೀತಿಗಳನ್ನು ರೂಪಿಸುವ ಹಂತದಲ್ಲಿ ನಾವಿದ್ದೇವೆ. ಅದಕ್ಕಾಗಿ ಪ್ರಯೋಗಗಳು ನಡೆಯುತ್ತಿವೆ. ಇದರಲ್ಲಿ ನೀವೆಲ್ಲರೂ ಪಾಲುದಾರರು.
ಈ ಪತ್ರಿಕೆಯು ಒಂದು ಗುಂಪಿನ, ಒಂದು ಪಂಥದ, ಒಂದು ಸೈದ್ಧಾಂತಿಕ ಧಾರೆಯ ಮುಖವಾಣಿಯಲ್ಲ; ದೇಶ ಮತ್ತು ಜನಪರ ಹಿತಾಸಕ್ತಿಯ ಹೊರತಾಗಿ ಬೇರೆ ಆಸಕ್ತಿಗಳೂ ಇಲ್ಲ. ಪ್ರಜಾತಂತ್ರ ಮತ್ತು ಜೀವಪರತೆಯ ಆಶಯಗಳುಳ್ಳ ಎಲ್ಲ ಪಂಥಗಳೂ ಒಟ್ಟುಗೂಡಿ ಒಂದು ಪಂಥವಾಗಲಿ ಎಂಬ ಆಶಯವಷ್ಟೇ ನಮ್ಮದು.
ಇವತ್ತಿನ ಜಾಣಜಾಣೆಯರನ್ನು ಒಳಗೊಳ್ಳುವ ರಂಜನೆ, ಬೋಧನೆ, ಪ್ರಚೋದನೆಗಳು ಎಂದಿನಂತೆ ಪತ್ರಿಕೆಯ ಹೂರಣ ಹಾಗೂ ಸ್ವರೂಪವನ್ನು ನಿರ್ಧರಿಸಬೇಕು. ಹಾಗಾಗಿ ಪತ್ರಿಕೆಯು ನಿಮ್ಮೆಲ್ಲರ ಅಭಿವ್ಯಕ್ತಿಯ ವೇದಿಕೆಯೂ ಆಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...