Homeಅಂಕಣಗಳುಮನ ಮುಟ್ಟುವ ಪತ್ರಿಕೋದ್ಯಮದ ಹಾದಿಯಲ್ಲಿ ಇನ್ನೊಂದು ಹೆಜ್ಜೆ

ಮನ ಮುಟ್ಟುವ ಪತ್ರಿಕೋದ್ಯಮದ ಹಾದಿಯಲ್ಲಿ ಇನ್ನೊಂದು ಹೆಜ್ಜೆ

- Advertisement -
- Advertisement -

| ಸಂಪಾದಕೀಯ ತಂಡ |

ಮಾಧ್ಯಮಗಳು ಪ್ರಜಾತಂತ್ರದ ನಾಲ್ಕನೆಯ ಅಂಗವೆಂದು ಹೇಳುವುದು ಕೇವಲ ಕ್ಲೀಷೆಯಷ್ಟೇ ಅಲ್ಲ, ಅದೀಗ ಅಪಹಾಸ್ಯದ ವಸ್ತುವಾಗುತ್ತಿದೆ. ಒಂದೆಡೆ ನಿರ್ಭೀತ ಪತ್ರಕರ್ತರು ಅಲ್ಲಲ್ಲಿ ದಾಳಿಗೊಳಗಾಗಿ ಕೊಲೆಯಾಗುತ್ತಿದ್ದರೆ, ಇನ್ನೊಂದೆಡೆ ಕರ್ನಾಟಕದ ಕೆಲವು ಪತ್ರಕರ್ತರು ಬ್ಲಾಕ್‍ಮೇಲ್, ವಂಚನೆ ಇತ್ಯಾದಿ ಪ್ರಕರಣಗಳಲ್ಲಿ ಜೈಲು ಸೇರುತ್ತಿದ್ದಾರೆ. ರಾಜಕಾರಣಿಗಳನ್ನು ಓಲೈಸುವ ಸರಣಿ ಸರಣಿ ಕಾರ್ಯಕ್ರಮ ಮಾಡುವ ಪತ್ರಕರ್ತರು, ಐಸಿಯುಗೆ ನುಗ್ಗಿ ಮೆದುಳು ಜ್ವರ ಪೀಡಿತ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಮೇಲೆ ವಾಗ್ದಾಳಿ ನಡೆಸುತ್ತಾರೆ. ಕಾಲ ಸರಿಯುತ್ತಿದ್ದ ಹಾಗೆ, ಹೆಚ್ಚೆಚ್ಚು ಮಾಧ್ಯಮ ಸಂಸ್ಥೆಗಳು ಬೆರಳೆಣಿಕೆಯ ಕಾರ್ಪೋರೇಟ್ ಕುಳಗಳ ಆಸ್ತಿಗಳಾಗುತ್ತಿವೆ.
ದೇಶದ ಅತೀ ದೊಡ್ಡ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಟೈಮ್ಸ್ ಗುಂಪಿನ ಹಿರಿಯ ಸ್ಥಾನದಲ್ಲಿರುವ ವ್ಯಕ್ತಿ, ನೊಬೆಲ್ ಪುರಸ್ಕøತ ಅರ್ಥಶಾಸ್ತ್ರಜ್ಞ ಅಮತ್ರ್ಯಸೆನ್‍ರ ಕುರಿತ ಸುಳ್ಳುಗಳನ್ನು ಖುದ್ದು ಪ್ರಚಾರ ಮಾಡುತ್ತಾರೆ. ಅದರ ಕುರಿತು ಮಾತನಾಡಿದ ಸೆನ್, ಇಷ್ಟು ಪುಟ್ಟ ಲೇಖನದೊಳಗೆ ಅಷ್ಟೊಂದು ಸುಳ್ಳುಗಳನ್ನು ಪೇರಿಸಿರುವ ಅವರ ಸಾಮಥ್ರ್ಯವನ್ನು ಅಭಿನಂದಿಸಬೇಕು ಎಂದರಂತೆ. ಇನ್ನೂ ಯಾವ್ಯಾವ ಬಗೆಯ ಕಿರೀಟಗಳನ್ನು ದೇಶದ ಮಾಧ್ಯಮಗಳು ಪಡೆದುಕೊಳ್ಳುತ್ತವೋ ಗೊತ್ತಿಲ್ಲ.
ಪರಿಸ್ಥಿತಿ ಹೀಗಿರುವಾಗ, 2 ದಶಕಕ್ಕೂ ಹೆಚ್ಚು ಕಾಲ ದೆಹಲಿಯಲ್ಲಿದ್ದ ಕರ್ನಾಟಕದ ಪತ್ರಕರ್ತರೊಬ್ಬರು ನಮ್ಮಲ್ಲಿ ವಿಸ್ಮಯ ಮೂಡಿಸಿದರು. ಗೌರಿ ಲಂಕೇಶರ ಆಶಯಗಳ ಮುಂದುವರಿಕೆಯ ನ್ಯಾಯಪಥ ಪತ್ರಿಕೆಗೆ ಮಾರ್ಗದರ್ಶನ ಮಾಡಬೇಕೆಂದು ಅವರಲ್ಲಿ ಟ್ರಸ್ಟ್‍ನ ಹಿರಿಯರು ಮನವಿ ಮಾಡಿದರು. ಅದಕ್ಕೆ ಅವರು ವಿಧಿಸಿದ ಷರತ್ತುಗಳು ಆಶ್ಚರ್ಯಕರವಾಗಿತ್ತು. ಅದರಲ್ಲಿ ಮುಖ್ಯವಾದುದು, ತನ್ನ ಆಸ್ತಿ ವಿವರಗಳನ್ನು ಟ್ರಸ್ಟ್‍ನ ಹಿರಿಯರು ಖುದ್ದಾಗಿ ಕೇಳಿಸಿಕೊಳ್ಳಬೇಕು ಮತ್ತು ತಾನು ಇದುವರೆಗೆ ‘ಮಾಡಿರಬಹುದಾದ’ ತಪ್ಪುಗಳ ಕುರಿತ ವರದಿಯನ್ನು ಒಪ್ಪಿಸುತ್ತೇನೆ. ಆ ನಂತರ ಟ್ರಸ್ಟ್‍ಗೆ ಒಪ್ಪಿಗೆಯಿದ್ದರೆ, ಇದರೊಂದಿಗೆ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು. ಡಿ.ಉಮಾಪತಿಯವರನ್ನು ಬಲ್ಲ ಯಾರಿಗೂ ಇಂತಹ ವಿಚಾರಗಳಲ್ಲಿ ಯಾವ ಹುಳುಕೂ ಇರುವುದಿಲ್ಲ ಎಂಬ ಖಚಿತ ವಿಶ್ವಾಸವಿತ್ತು. ಆದರೂ ಅಪಾರ ಮುಜುಗರ, ಕಟು ಪ್ರಾಮಾಣಿಕತೆಯ ಅವರು ಸಂಪೂರ್ಣ ಪಾರದರ್ಶಕವಾಗಿ ತಮ್ಮ ಅನಿಸಿಕೆಗಳನ್ನು ಮುಂದಿಟ್ಟರು. ಅದು ಅವರ ಬಗ್ಗೆ ವಿಶ್ವಾಸ ಹೆಚ್ಚಿಸಿದ್ದಷ್ಟೇ ಅಲ್ಲದೇ, ಇತರರಿಗೂ ಒಂದು ಮಾದರಿ ನಿರ್ಮಾಣವಾದಂತಾಯಿತು.
ಈ ‘ಪ್ರಕ್ರಿಯೆ’ ಪೂರ್ಣಗೊಂಡ ನಂತರವೇ ಡಿ.ಉಮಾಪತಿಯವರು ಇದರ ‘ಕನ್ಸಲ್ಟಿಂಗ್ ಎಡಿಟರ್’ ಆಗಲು ಒಪ್ಪಿಕೊಂಡರು. ಹೊಸ ಕಾಲದ ಮತ್ತು ಹೊಸ ಬಗೆಯ ಮಾಧ್ಯಮದ ವಿದ್ಯಾರ್ಥಿಯೆನ್ನುವಷ್ಟು ವಿನಯವನ್ನೂ, ದೀರ್ಘಕಾಲದ ಪತ್ರಿಕೋದ್ಯಮದ ಅನುಭವವನ್ನೂ ಎಲ್ಲಕ್ಕಿಂತ ಮುಖ್ಯವಾಗಿ ಮೌಲ್ಯಗಳಿಗೆ ಬದ್ಧತೆ ಹಾಗೂ ಪ್ರಾಮಾಣಿಕತೆಗಳನ್ನು ಮೈಗೂಡಿಸಿಕೊಂಡಿರುವ ಅವರು ನಮ್ಮ ಸಂಪಾದಕೀಯ ತಂಡದ ಮಾರ್ಗದರ್ಶಕರಾಗಿರುವುದು ಹೆಮ್ಮೆಯ ಸಂಗತಿ. ಕರ್ನಾಟಕದ ಮೂರು ಪ್ರಮುಖ ದಿನಪತ್ರಿಕೆಗಳಲ್ಲಿ (ಕನ್ನಡಪ್ರಭ, ವಿಜಯಕರ್ನಾಟಕ ಮತ್ತು ಪ್ರಜಾವಾಣಿ) ದೆಹಲಿ ವರದಿಗಾರರಾಗಿ ಕೆಲಸ ಮಾಡಿರುವ ಉಮಾಪತಿಯವರು, ಕಳೆದ ಕೆಲ ಕಾಲದಿಂದ ಬರೆದ ಅಂಕಣ ಬರಹಗಳು ರಾಜ್ಯದ ಪ್ರಜ್ಞಾವಂತರನ್ನು ತಟ್ಟಿರುವ ಪರಿ ಅನನ್ಯವಾದುದು.
ಇದರೊಂದಿಗೆ, ಪತ್ರಿಕೆಯ ಜವಾಬ್ದಾರಿಯಲ್ಲಿ ಇನ್ನೂ ಕೆಲವು ಬದಲಾವಣೆಗಳು ಆಗುತ್ತಲಿವೆ. ಹಲವು ಹಿರಿಯರು ಬೇರೆ ಬೇರೆ ರೀತಿಯಲ್ಲಿ ಇದರ ಜೊತೆಗೂಡಲಿದ್ದಾರೆ. ಮುಂಬರುವ ಸಂಚಿಕೆಗಳಲ್ಲಿ ಅಧಿಕೃತವಾಗಿ ನಿಮ್ಮೊಂದಿಗೆ ಅದನ್ನು ವಿಸ್ತøತವಾಗಿ ಹಂಚಿಕೊಳ್ಳಲಿದ್ದೇವೆ.
ಹೊಸ ಕಾಲದ ಜನಪರ ಮಾಧ್ಯಮದ ಹಲವು ಪ್ರಯೋಗಗಳು ದೇಶಾದ್ಯಂತ ಜಾರಿಯಲ್ಲಿದೆ. ‘80ರ ದಶಕದಲ್ಲಿ ಕರ್ನಾಟಕದ ರಾಜಕಾರಣ, ಸಾಹಿತ್ಯ ಸಂಸ್ಕøತಿಗಳನ್ನು ಮತ್ತು ಯುವತಲೆಮಾರನ್ನು ಗಾಢವಾಗಿ ಪ್ರಭಾವಿಸಿದ ಲಂಕೇಶ್ ಪತ್ರಿಕೆಯು ಈ ನಾಡಿನ ವಿಶಿಷ್ಟ ಟ್ಯಾಬ್ಲಾಯ್ಡ್ ಆಗಿತ್ತು. ಇಂದು ಅದೇ ಬಗೆಯ ಟ್ಯಾಬ್ಲಾಯ್ಡ್ ಅದೇ ರೀತಿಯ ಪಾತ್ರ ನಿರ್ವಹಿಸಲಾರದು. ಮುದ್ರಣ ಮಾಧ್ಯಮದ ಸಾಧ್ಯತೆಗಳು ಇನ್ನೂ ಮುಗಿದು ಹೋಗಿಲ್ಲ; ಆದರೆ, ವೆಬ್ ಮೀಡಿಯಾದಲ್ಲಿ ಅಪಾರವಾದ ಸಾಧ್ಯತೆಗಳು ತೆರೆದುಕೊಂಡಿವೆ. ಇವೆಲ್ಲವನ್ನೂ ಬೆಸೆದು, ಹೊಸ ನುಡಿಗಟ್ಟು, ಭಾಷೆ-ಪರಿಭಾಷೆಗಳೊಂದಿಗೆ ಈ ಕಾಲದ ಯುವತಲೆಮಾರನ್ನು ಒಳಗೊಳ್ಳುವ ರೀತಿ-ನೀತಿಗಳನ್ನು ರೂಪಿಸುವ ಹಂತದಲ್ಲಿ ನಾವಿದ್ದೇವೆ. ಅದಕ್ಕಾಗಿ ಪ್ರಯೋಗಗಳು ನಡೆಯುತ್ತಿವೆ. ಇದರಲ್ಲಿ ನೀವೆಲ್ಲರೂ ಪಾಲುದಾರರು.
ಈ ಪತ್ರಿಕೆಯು ಒಂದು ಗುಂಪಿನ, ಒಂದು ಪಂಥದ, ಒಂದು ಸೈದ್ಧಾಂತಿಕ ಧಾರೆಯ ಮುಖವಾಣಿಯಲ್ಲ; ದೇಶ ಮತ್ತು ಜನಪರ ಹಿತಾಸಕ್ತಿಯ ಹೊರತಾಗಿ ಬೇರೆ ಆಸಕ್ತಿಗಳೂ ಇಲ್ಲ. ಪ್ರಜಾತಂತ್ರ ಮತ್ತು ಜೀವಪರತೆಯ ಆಶಯಗಳುಳ್ಳ ಎಲ್ಲ ಪಂಥಗಳೂ ಒಟ್ಟುಗೂಡಿ ಒಂದು ಪಂಥವಾಗಲಿ ಎಂಬ ಆಶಯವಷ್ಟೇ ನಮ್ಮದು.
ಇವತ್ತಿನ ಜಾಣಜಾಣೆಯರನ್ನು ಒಳಗೊಳ್ಳುವ ರಂಜನೆ, ಬೋಧನೆ, ಪ್ರಚೋದನೆಗಳು ಎಂದಿನಂತೆ ಪತ್ರಿಕೆಯ ಹೂರಣ ಹಾಗೂ ಸ್ವರೂಪವನ್ನು ನಿರ್ಧರಿಸಬೇಕು. ಹಾಗಾಗಿ ಪತ್ರಿಕೆಯು ನಿಮ್ಮೆಲ್ಲರ ಅಭಿವ್ಯಕ್ತಿಯ ವೇದಿಕೆಯೂ ಆಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...