HomeUncategorizedಸಂಪಾದಕೀಯ / ಸಮಯ ಸಾಧಕ ಪಕ್ಷಗಳ ಮೇಲೆ ನಿರೀಕ್ಷೆ ಇಡಬಹುದೆ?

ಸಂಪಾದಕೀಯ / ಸಮಯ ಸಾಧಕ ಪಕ್ಷಗಳ ಮೇಲೆ ನಿರೀಕ್ಷೆ ಇಡಬಹುದೆ?

- Advertisement -
- Advertisement -

 

ಕರ್ನಾಟಕದ ಮಾಧ್ಯಮಗಳು ಕ್ಯಾಬಿನೆಟ್ ಹಂಚಿಕೆಯ ಇಕ್ಕಟ್ಟುಗಳನ್ನು ಭಾರೀ ಬಿಕ್ಕಟ್ಟು ಎಂಬಂತೆ ಬಿಂಬಿಸಿ, ಅಸಮಾಧಾನ ಹೊಂದಿರುವವರು ರಾಜೀನಾಮೆ ಕೊಟ್ಟೇಬಿಟ್ಟರು ಅಂತೆಲ್ಲಾ ಬೂಸಿ ಬಿಟ್ಟು, ಒಟ್ಟಾರೆ ಈ ಸರ್ಕಾರ ಜಾಸ್ತಿ ದಿನ ಬಾಳಿಕೆ ಬರೋಲ್ಲ ಎಂಬ ಅಭಿಪ್ರಾಯ ಬಿತ್ತಲು ಹೆಣಗಾಡುತ್ತಿರುವುದು ಅಸಹ್ಯ ಹುಟ್ಟಿಸುತ್ತಿದೆ.
ಆದರೆ ಇದೇ ಸಂದರ್ಭದಲ್ಲಿ ರಾಷ್ಟ್ರ ರಾಜಕಾರಣದಲ್ಲಿ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಸುತ್ತಲೂ ಬಹಳ ಮಹತ್ವದ ವಿದ್ಯಮಾನಗಳು ಘಟಿಸುತ್ತಿವೆ. ಸಹಜವಾಗಿಯೇ ನಮ್ಮ ಮಾಧ್ಯಮಗಳಿಗೆ ಈ ವಿಚಾರಗಳು ಮುಖ್ಯ ಎನಿಸಿಲ್ಲ. ಯಾಕೆಂದರೆ ಈಗಿನ ವಿದ್ಯಮಾನ ಮಾಧ್ಯಮ ದೊರೆಗಳಿಗೆ ಅಪ್ರಿಯವಾದುದು. ಅವರ ನೆಚ್ಚಿನ ಪ್ರಧಾನಿ ಹಾಗೂ ಬಿಜೆಪಿ ಪಕ್ಷ ರಾಷ್ಟ್ರ ರಾಜಕಾರಣದಲ್ಲಿ ಕಠಿಣ ಸವಾಲು ಎದುರಿಸುತ್ತಿದೆ ಎಂಬ ಕಟು ವಾಸ್ತವ ಅನಾವರಣಗೊಳ್ಳುತ್ತಿದೆ. ಒಂದೆಡೆ, ವಿರೋಧ ಪಕ್ಷಗಳು ಅಪೂರ್ವ ಒಗ್ಗಟ್ಟು ಪ್ರದರ್ಶಿಸಿ, ಉಪ ಚುನಾವಣೆಯಲ್ಲಿ ಬಿಜೆಪಿಗೆ ಹೊಡೆತ ನೀಡಿದ್ದು ಮಾತ್ರವಲ್ಲದೆ, ಮುಂಬರುವ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‍ಗಡ ವಿಧಾನಸಭಾ ಚುನಾವಣೆಗಳಲ್ಲೂ ಸಂಭಾವ್ಯ ಮೈತ್ರಿಗಳನ್ನು ಏರ್ಪಡಿಸಿಕೊಳ್ಳುವತ್ತ ಬಿರುಸಿನ ಹೆಜ್ಜೆ ಹಾಕಿವೆ. ಮುಖ್ಯವಾಗಿ ಕಾಂಗ್ರೆಸ್ ಮತ್ತು ಬಿಎಸ್‍ಪಿ ಪಕ್ಷಗಳು ಮುಂಬರುವ ಈ ವಿಧಾನಸಭಾ ಚುನಾವಣೆಗಳಲ್ಲಿ ಮೈತ್ರಿ ಘೋಷಿಸಿಕೊಂಡಿವೆ. ಇನ್ನಿತರೆ ಪಕ್ಷಗಳು ಕೂಡ ಕೈಜೋಡಿಸಲಿದ್ದು ಈ ಮೈತ್ರಿ ಬಲಿಷ್ಠಗೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ.
ಮತ್ತೊಂದೆಡೆ, ಉಪಚುನಾವಣೆಯ ಹೀನಾಯ ಸೋಲಿನ ನಂತರ ಆಡಳಿತಾರೂಡ ಬಿಜೆಪಿ ಪಕ್ಷದೊಳಗೆ ಮೋದಿ-ಶಾ ನಾಯಕತ್ವದ ಬಗ್ಗೆ ಅಪಸ್ವರಗಳು ಬಹಿರಂಗವಾಗಿಯೇ ವ್ಯಕ್ತವಾಗುತ್ತಿದೆ, ಎನ್‍ಡಿಎ ಒಕ್ಕೂಟದಲ್ಲಿದ್ದ ಬಿರುಕು ಹೆಚ್ಚಾಗುವ ಲಕ್ಷಣ ಕಾಣುತ್ತಿದೆ. ಬಿಜೆಪಿಯ ದುರಹಂಕಾರ ಮತ್ತು ದಾಷ್ಟ್ರ್ಯದ ನಡವಳಿಕೆಗಳಿಂದಾಗಿಯೇ ಮಿತ್ರ ಪಕ್ಷಗಳಾದ ತೆಲುಗು ದೇಶಂ, ಶಿವಸೇನಾ ಮುಂತಾದ ಪ್ರಾದೇಶಿಕ ಪಕ್ಷಗಳು ಬಿಜೆಪಿಯಿಂದ ಈಗಾಗಲೇ ದೂರವಾಗಿವೆ. ಸದ್ಯ ಜೊತೆಯಲ್ಲಿರುವ ಜೆಡಿಯು, ಲೋಕಜನಶಕ್ತಿ ಮುಂತಾದ ಪಾಲುದಾರರು ಈಗಾಗಲೇ ಬಾರಿ ಅಪಸ್ವರ ತೆಗೆದಿದ್ದು, ಗಾಳಿ ಬಂದ ಕಡೆ ತೂರಿಹೋಗುವ ಸೂಚನೆ ಕೊಟ್ಟಿವೆ.


ಕರ್ನಾಟಕದಿಂದ ಸಂಸದರಾಗಿದ್ದ ಯಡ್ಯೂರಪ್ಪ ಮತ್ತು ಶ್ರೀರಾಮುಲು ರಾಜೀನಾಮೆ ಕೊಟ್ಟ ಪರಿಣಾಮ ಎರಡು ಸ್ಥಾನಗಳು ಕಡಿಮೆಯಾಗಿ, ಇತ್ತೀಚಿನ ಉಪಚುನಾವಣೆಯಲ್ಲಿ ಕೆಲವು ಸೀಟುಗಳನ್ನು ಕಳೆದುಕೊಂಡ ಪರಿಣಾಮ ಈಗ ಬಿಜೆಪಿ ಪಕ್ಷದ ಸಂಖ್ಯೆ 272ಕ್ಕೆ ಇಳಿದಿದೆ. ಒಂದು ಸಂಖ್ಯೆ ಕಡಿಮೆಯಾದರೂ ಸ್ವಂತ ಬಲದ ಮೇಲೆ ಅಧಿಕಾರ ನಡೆಸಲು ಸಾಧ್ಯವಾಗದ ಸ್ಥಿತಿಯಿದು. ಈ ಬೆಳವಣಿಗೆಗಳು ಬಿಜೆಪಿ ನಾಯಕತ್ವವನ್ನು ಚಿಂತೆಗೀಡು ಮಾಡಿರುವುದಂತೂ ಸತ್ಯ. ಡ್ಯಾಮೇಜ್ ಕಂಟ್ರೋಲ್ ಕ್ರಮಗಳ ಭಾಗವಾಗಿ ಎನ್‍ಡಿಎಯಿಂದ ದೂರವಾಗಿರುವ ಮಿತ್ರ ಪಕ್ಷಗಳನ್ನು ಮತ್ತೆ ಒಲಿಸಿಕೊಳ್ಳುವ ಕಸರತ್ತು ಆರಂಭವಾಗಿದೆ.
ವಿರೋಧ ಪಕ್ಷಗಳು ಒಟ್ಟಾದರೆ ಪರಿಣಾಮ ಏನಾಗಬಹುದು ಎಂಬುದನ್ನು ಕಣ್ಣಾರೆ ಕಂಡುಂಡ ನಂತರ ಸ್ವತಃ ಅಮಿತ್‍ಶಾ ಅಖಾಡಕ್ಕಿಳಿದಿದ್ದಾರೆ. ಜೂನ್ 6 ರಂದು ಶಿವಸೇನಾ ನಾಯಕ ಉಧ್ಧವ್ ಠಾಕ್ರೆಯನ್ನು ಭೇಟಿಯಾಗಿ ಬೆಂಬಲ ಕೋರಲು, ಹಮ್ಮು ಬಿಮ್ಮು ಬದಿಗೊತ್ತಿ, ಸೀದಾ ಮುಂಬೈನ ಬಾಂದ್ರಾದಲ್ಲಿರುವ ಠಾಕ್ರೆ ಮನೆಗೆ ಭೇಟಿಕೊಟ್ಟು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಉತ್ತರಪ್ರದೇಶದ ನಂತರ ಅತಿಹೆಚ್ಚು, ಅಂದರೆ 48 ಸಂಸದರನ್ನು ಆರಿಸುವ ಮಹಾರಾಷ್ಟ್ರ ಬಿಜೆಪಿ ಪಾಲಿಗೆ ಬಹಳ ಮಹತ್ವದ್ದು. ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಕಳೆದ ಚುನಾವಣೆಯಲ್ಲಿ 42 ಸ್ಥಾನಗಳನ್ನು ಗಳಿಸಿದ್ದವು.
ಇತ್ತೀಚಿನ ದಿನಗಳಲ್ಲಿ ಇವರ ನಡುವೆ ವೈಮನಸ್ಯ ತಲೆದೋರಿದ್ದು, ಕಳೆದ ತಿಂಗಳಿನ ಉಪಚುನಾವಣೆಯಲ್ಲಿ ಎದುರಾಳಿಗಳಾಗಿ ಹೋರಾಡಿದ್ದವು. ವೈಮನಸ್ಯ ಯಾವ ಮಟ್ಟದಲ್ಲಿದೆಯೆಂದರೆ, ಅಮಿತ್ ಶಾ ಭೇಟಿಯಾದ ದಿನವೇ ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ‘ಬಿಜೆಪಿ ಪಕ್ಷ ನಮ್ಮ ಅತ್ಯಂತ ದೊಡ್ಡ ರಾಜಕೀಯ ಶತೃ’ ಎಂದು ಘೋಷಿಸಿದೆ. ‘ಬಿಜೆಪಿ ಪಕ್ಷಕ್ಕೆ ಮೈತ್ರಿ ಸಂಬಂಧಗಳೆಂದರೆ ಕೇವಲ ಲಾಭ ನಷ್ಟದ ಲೆಕ್ಕಾಚಾರವಷ್ಟೆ’ ಎಂದು ಜರೆದಿದೆ. ಸಂಬಂಧ ಇಷ್ಟು ಹಳಸಿರುವ ಸಂದರ್ಭದಲ್ಲೇ ಅಮಿತ್ ಶಾ ಸೀದಾ ಠಾಕ್ರೆ ಮನೆಗೆ ದಯಮಾಡಿಸಿ, ಶಿವಸೇನೆಯ ನಾಯಕರ ಬಿರುನುಡಿಗಳನ್ನು ಸಾವಧಾನವಾಗಿ ಆಲಿಸಿದ್ದಾರೆ. 21 ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಿರುವ, ‘ಎದುರಾಳಿಗಳೇ ಇಲ್ಲದ’ ಮೋದಿ-ಶಾ ಜೋಡಿಯ ಇಂದಿನ ವಾಸ್ತವ ಸ್ಥಿತಿ ಇದು.
‘37 ಸ್ಥಾನ ಪಡೆದ ದೇವೇಗೌಡರ ಪಕ್ಷಕ್ಕೆ ಶರಣಾದ ಕಾಂಗ್ರೆಸ್’, ‘ಸ್ವಾಭಿಮಾನವನ್ನೇ ಕಳೆದುಕೊಂಡು ಮಂಡಿಯೂರಿದ ಕಾಂಗ್ರೆಸ್’ ಮುಂತಾಗಿ ಹಗಲು ರಾತ್ರಿ ಚೀರಾಡುವ ಯಾವೊಬ್ಬ ಪತ್ರಕರ್ತರೂ ‘ಅಮಿತ್ ಶಾ ಅಹಂಕಾರಕ್ಕೆ ತಕ್ಕ ಶಾಸ್ತಿ’ ಅಥವ ‘ಶಿವಸೇನೆಗೆ ಶರಣಾದ ಚಾಣಕ್ಯ’ ಮುಂತಾದ ಯಾವುದೇ ಚರ್ಚೆ ನಡೆಸಿಲ್ಲ.
ಈ ‘ಚಾಣಕ್ಯ’ ಪ್ರವಾಸ ಇಲ್ಲಿಗೆ ನಿಲ್ಲುವುದಿಲ್ಲ; ಮರುದಿನವೇ ಪಂಜಾಬ್‍ಗೆ ತೆರಳಿ ಅಕಾಲಿ ನಾಯಕ ಬಾದಲ್ ಅವರನ್ನು ಭೇಟಿಯಾಗಲಿದ್ದಾರೆ. ನಂತರ ಬಿಹಾರಕ್ಕೆ ತೆರಳಿ ಜೆಡಿಯು ನಾಯಕ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗುವ ಯೋಜನೆಯಿದೆ. ಬಾಬಾ ರಾಮ್‍ದೇವ್, ರತನ್ ಟಾಟಾ, ಮಾಧುರಿ ದೀಕ್ಷಿತ್ ಮುಂತಾದ ವಿವಿಧ ಕ್ಷೇತ್ರಗಳ ಗಣ್ಯರನ್ನು ನಿನ್ನೆ ಮೊನ್ನೆಯಷ್ಟೇ ಭೇಟಿಯಾಗಿದ್ದು, ಬಾಂಧವ್ಯ ಗಟ್ಟಿಗೊಳಿಸಿಕೊಳ್ಳುವ ಪ್ರಯತ್ನ ನಡೆದಿದೆ.
ಈ ಎಲ್ಲ ಬೆಳವಣಿಗೆಗಳು ಏನನ್ನು ಸೂಚಿಸುತ್ತದೆ? ನಮ್ಮ ಅಶ್ವಮೇಧದ ಕುದುರೆಯನ್ನು ಕಟ್ಟಿಹಾಕುವವರೇ ಇಲ್ಲ ಎಂಬಂತೆ ಬಡಾಯಿ ಕೊಚ್ಚಿಕೊಳ್ಳುತ್ತಿರುವ ಬಿಜೆಪಿ ನಾಯಕತ್ವಕ್ಕೆ ತಾವು ದಿನೇದಿನೇ ದುರ್ಬಲಗೊಳ್ಳುತ್ತಿದ್ದಾರೆ ಎಂಬುದನ್ನು ತಾನೇ? ಈ ಕಟುವಾಸ್ತವದ ಅರಿವಾದದ್ದರಿಂದಲೇ ಅಮಿತ್ ಶಾ ಸಾಹೇಬರು ತಮ್ಮ ಮುಖದ ಮೇಲೆ ಒಂದಷ್ಟು ಬಲವಂತದ ಮುಗುಳ್ನಗು ತಂದುಕೊಂಡು ಮಿತ್ರ ಪಕ್ಷಗಳ ಮನೆಬಾಗಿಲಿಗೆ ಸುತ್ತುತ್ತಿದ್ದಾರೆ.
ಈ ವರ್ಷದ ಕೊನೆಯಲ್ಲಿ ಬರಲಿರುವ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‍ಗಡ ಚುನಾವಣೆಯಲ್ಲಿ ಈಗಾಗಲೇ ಆಡಳಿತ ವಿರೋಧಿ ಅಲೆ ಬಲವಾಗಿದೆ. ವಿರೋಧಿ ಪಕ್ಷಗಳು ಒಗ್ಗೂಡುತ್ತಿರುವುದು ಒಂದುಕಡೆಯಾದರೆ, ತೀವ್ರ ಸಂಕಷ್ಟದಲ್ಲಿರುವ ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಬೀದಿಗಿಳಿದಿದ್ದಾರೆ.
ವಿರೋಧ ಪಕ್ಷಗಳು ನಿರ್ದಿಷ್ಟ ಸೂತ್ರಗಳಿಗೆ ಬದ್ಧವಾಗಿ ಬಲಿಷ್ಠ ಮೈತ್ರಿ ರಚಿಸಿಕೊಂಡು ಚುನಾವಣೆ ಎದುರಿಸಿದಲ್ಲಿ, ಫ್ಯಾಸಿಸ್ಟ್ ಶಕ್ತಿಯಾಗಿ ಹೊಮ್ಮುತ್ತಿರುವ ಮೋದಿ-ಶಾ ಕೂಟ ಮತ್ತು ಅವರ ಬಿಜೆಪಿ ಪಕ್ಷವನ್ನು ಮೂಲೋತ್ಪಾಟನೆ ಮಾಡಲಾಗದಿದ್ದರೂ ಹದ್ದುಬಸ್ತಿನಲ್ಲಂತೂ ಇಡಬಹುದು. ಇದು ದೇಶದ ಸದ್ಯದ ರಾಜಕೀಯ ಸನ್ನಿವೇಶ.
ಆದರೆ ಸ್ವಾರ್ಥ, ಸಮಯಸಾಧಕತನಗಳನ್ನೇ ತಮ್ಮ ನೀತಿಯನ್ನಾಗಿಸಿಕೊಂಡಿರುವ ರಾಜಕೀಯ ಪಕ್ಷಗಳ ಬಗ್ಗೆ ನಾವು ಎಷ್ಟು ನಿರೀಕ್ಷೆ ಇಟ್ಟುಕೊಳ್ಳಬಹುದು ಎಂಬುದೇ ಅಸಲಿ ಪ್ರಶ್ನೆ.

ಸಂಪಾದಕೀಯ ತಂಡದ ಪರವಾಗಿ
ದೊಡ್ಡಿಪಾಳ್ಯ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...