HomeUncategorizedಸಂಪಾದಕೀಯ / ಸಮಯ ಸಾಧಕ ಪಕ್ಷಗಳ ಮೇಲೆ ನಿರೀಕ್ಷೆ ಇಡಬಹುದೆ?

ಸಂಪಾದಕೀಯ / ಸಮಯ ಸಾಧಕ ಪಕ್ಷಗಳ ಮೇಲೆ ನಿರೀಕ್ಷೆ ಇಡಬಹುದೆ?

- Advertisement -
- Advertisement -

 

ಕರ್ನಾಟಕದ ಮಾಧ್ಯಮಗಳು ಕ್ಯಾಬಿನೆಟ್ ಹಂಚಿಕೆಯ ಇಕ್ಕಟ್ಟುಗಳನ್ನು ಭಾರೀ ಬಿಕ್ಕಟ್ಟು ಎಂಬಂತೆ ಬಿಂಬಿಸಿ, ಅಸಮಾಧಾನ ಹೊಂದಿರುವವರು ರಾಜೀನಾಮೆ ಕೊಟ್ಟೇಬಿಟ್ಟರು ಅಂತೆಲ್ಲಾ ಬೂಸಿ ಬಿಟ್ಟು, ಒಟ್ಟಾರೆ ಈ ಸರ್ಕಾರ ಜಾಸ್ತಿ ದಿನ ಬಾಳಿಕೆ ಬರೋಲ್ಲ ಎಂಬ ಅಭಿಪ್ರಾಯ ಬಿತ್ತಲು ಹೆಣಗಾಡುತ್ತಿರುವುದು ಅಸಹ್ಯ ಹುಟ್ಟಿಸುತ್ತಿದೆ.
ಆದರೆ ಇದೇ ಸಂದರ್ಭದಲ್ಲಿ ರಾಷ್ಟ್ರ ರಾಜಕಾರಣದಲ್ಲಿ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಸುತ್ತಲೂ ಬಹಳ ಮಹತ್ವದ ವಿದ್ಯಮಾನಗಳು ಘಟಿಸುತ್ತಿವೆ. ಸಹಜವಾಗಿಯೇ ನಮ್ಮ ಮಾಧ್ಯಮಗಳಿಗೆ ಈ ವಿಚಾರಗಳು ಮುಖ್ಯ ಎನಿಸಿಲ್ಲ. ಯಾಕೆಂದರೆ ಈಗಿನ ವಿದ್ಯಮಾನ ಮಾಧ್ಯಮ ದೊರೆಗಳಿಗೆ ಅಪ್ರಿಯವಾದುದು. ಅವರ ನೆಚ್ಚಿನ ಪ್ರಧಾನಿ ಹಾಗೂ ಬಿಜೆಪಿ ಪಕ್ಷ ರಾಷ್ಟ್ರ ರಾಜಕಾರಣದಲ್ಲಿ ಕಠಿಣ ಸವಾಲು ಎದುರಿಸುತ್ತಿದೆ ಎಂಬ ಕಟು ವಾಸ್ತವ ಅನಾವರಣಗೊಳ್ಳುತ್ತಿದೆ. ಒಂದೆಡೆ, ವಿರೋಧ ಪಕ್ಷಗಳು ಅಪೂರ್ವ ಒಗ್ಗಟ್ಟು ಪ್ರದರ್ಶಿಸಿ, ಉಪ ಚುನಾವಣೆಯಲ್ಲಿ ಬಿಜೆಪಿಗೆ ಹೊಡೆತ ನೀಡಿದ್ದು ಮಾತ್ರವಲ್ಲದೆ, ಮುಂಬರುವ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‍ಗಡ ವಿಧಾನಸಭಾ ಚುನಾವಣೆಗಳಲ್ಲೂ ಸಂಭಾವ್ಯ ಮೈತ್ರಿಗಳನ್ನು ಏರ್ಪಡಿಸಿಕೊಳ್ಳುವತ್ತ ಬಿರುಸಿನ ಹೆಜ್ಜೆ ಹಾಕಿವೆ. ಮುಖ್ಯವಾಗಿ ಕಾಂಗ್ರೆಸ್ ಮತ್ತು ಬಿಎಸ್‍ಪಿ ಪಕ್ಷಗಳು ಮುಂಬರುವ ಈ ವಿಧಾನಸಭಾ ಚುನಾವಣೆಗಳಲ್ಲಿ ಮೈತ್ರಿ ಘೋಷಿಸಿಕೊಂಡಿವೆ. ಇನ್ನಿತರೆ ಪಕ್ಷಗಳು ಕೂಡ ಕೈಜೋಡಿಸಲಿದ್ದು ಈ ಮೈತ್ರಿ ಬಲಿಷ್ಠಗೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ.
ಮತ್ತೊಂದೆಡೆ, ಉಪಚುನಾವಣೆಯ ಹೀನಾಯ ಸೋಲಿನ ನಂತರ ಆಡಳಿತಾರೂಡ ಬಿಜೆಪಿ ಪಕ್ಷದೊಳಗೆ ಮೋದಿ-ಶಾ ನಾಯಕತ್ವದ ಬಗ್ಗೆ ಅಪಸ್ವರಗಳು ಬಹಿರಂಗವಾಗಿಯೇ ವ್ಯಕ್ತವಾಗುತ್ತಿದೆ, ಎನ್‍ಡಿಎ ಒಕ್ಕೂಟದಲ್ಲಿದ್ದ ಬಿರುಕು ಹೆಚ್ಚಾಗುವ ಲಕ್ಷಣ ಕಾಣುತ್ತಿದೆ. ಬಿಜೆಪಿಯ ದುರಹಂಕಾರ ಮತ್ತು ದಾಷ್ಟ್ರ್ಯದ ನಡವಳಿಕೆಗಳಿಂದಾಗಿಯೇ ಮಿತ್ರ ಪಕ್ಷಗಳಾದ ತೆಲುಗು ದೇಶಂ, ಶಿವಸೇನಾ ಮುಂತಾದ ಪ್ರಾದೇಶಿಕ ಪಕ್ಷಗಳು ಬಿಜೆಪಿಯಿಂದ ಈಗಾಗಲೇ ದೂರವಾಗಿವೆ. ಸದ್ಯ ಜೊತೆಯಲ್ಲಿರುವ ಜೆಡಿಯು, ಲೋಕಜನಶಕ್ತಿ ಮುಂತಾದ ಪಾಲುದಾರರು ಈಗಾಗಲೇ ಬಾರಿ ಅಪಸ್ವರ ತೆಗೆದಿದ್ದು, ಗಾಳಿ ಬಂದ ಕಡೆ ತೂರಿಹೋಗುವ ಸೂಚನೆ ಕೊಟ್ಟಿವೆ.


ಕರ್ನಾಟಕದಿಂದ ಸಂಸದರಾಗಿದ್ದ ಯಡ್ಯೂರಪ್ಪ ಮತ್ತು ಶ್ರೀರಾಮುಲು ರಾಜೀನಾಮೆ ಕೊಟ್ಟ ಪರಿಣಾಮ ಎರಡು ಸ್ಥಾನಗಳು ಕಡಿಮೆಯಾಗಿ, ಇತ್ತೀಚಿನ ಉಪಚುನಾವಣೆಯಲ್ಲಿ ಕೆಲವು ಸೀಟುಗಳನ್ನು ಕಳೆದುಕೊಂಡ ಪರಿಣಾಮ ಈಗ ಬಿಜೆಪಿ ಪಕ್ಷದ ಸಂಖ್ಯೆ 272ಕ್ಕೆ ಇಳಿದಿದೆ. ಒಂದು ಸಂಖ್ಯೆ ಕಡಿಮೆಯಾದರೂ ಸ್ವಂತ ಬಲದ ಮೇಲೆ ಅಧಿಕಾರ ನಡೆಸಲು ಸಾಧ್ಯವಾಗದ ಸ್ಥಿತಿಯಿದು. ಈ ಬೆಳವಣಿಗೆಗಳು ಬಿಜೆಪಿ ನಾಯಕತ್ವವನ್ನು ಚಿಂತೆಗೀಡು ಮಾಡಿರುವುದಂತೂ ಸತ್ಯ. ಡ್ಯಾಮೇಜ್ ಕಂಟ್ರೋಲ್ ಕ್ರಮಗಳ ಭಾಗವಾಗಿ ಎನ್‍ಡಿಎಯಿಂದ ದೂರವಾಗಿರುವ ಮಿತ್ರ ಪಕ್ಷಗಳನ್ನು ಮತ್ತೆ ಒಲಿಸಿಕೊಳ್ಳುವ ಕಸರತ್ತು ಆರಂಭವಾಗಿದೆ.
ವಿರೋಧ ಪಕ್ಷಗಳು ಒಟ್ಟಾದರೆ ಪರಿಣಾಮ ಏನಾಗಬಹುದು ಎಂಬುದನ್ನು ಕಣ್ಣಾರೆ ಕಂಡುಂಡ ನಂತರ ಸ್ವತಃ ಅಮಿತ್‍ಶಾ ಅಖಾಡಕ್ಕಿಳಿದಿದ್ದಾರೆ. ಜೂನ್ 6 ರಂದು ಶಿವಸೇನಾ ನಾಯಕ ಉಧ್ಧವ್ ಠಾಕ್ರೆಯನ್ನು ಭೇಟಿಯಾಗಿ ಬೆಂಬಲ ಕೋರಲು, ಹಮ್ಮು ಬಿಮ್ಮು ಬದಿಗೊತ್ತಿ, ಸೀದಾ ಮುಂಬೈನ ಬಾಂದ್ರಾದಲ್ಲಿರುವ ಠಾಕ್ರೆ ಮನೆಗೆ ಭೇಟಿಕೊಟ್ಟು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಉತ್ತರಪ್ರದೇಶದ ನಂತರ ಅತಿಹೆಚ್ಚು, ಅಂದರೆ 48 ಸಂಸದರನ್ನು ಆರಿಸುವ ಮಹಾರಾಷ್ಟ್ರ ಬಿಜೆಪಿ ಪಾಲಿಗೆ ಬಹಳ ಮಹತ್ವದ್ದು. ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಕಳೆದ ಚುನಾವಣೆಯಲ್ಲಿ 42 ಸ್ಥಾನಗಳನ್ನು ಗಳಿಸಿದ್ದವು.
ಇತ್ತೀಚಿನ ದಿನಗಳಲ್ಲಿ ಇವರ ನಡುವೆ ವೈಮನಸ್ಯ ತಲೆದೋರಿದ್ದು, ಕಳೆದ ತಿಂಗಳಿನ ಉಪಚುನಾವಣೆಯಲ್ಲಿ ಎದುರಾಳಿಗಳಾಗಿ ಹೋರಾಡಿದ್ದವು. ವೈಮನಸ್ಯ ಯಾವ ಮಟ್ಟದಲ್ಲಿದೆಯೆಂದರೆ, ಅಮಿತ್ ಶಾ ಭೇಟಿಯಾದ ದಿನವೇ ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ‘ಬಿಜೆಪಿ ಪಕ್ಷ ನಮ್ಮ ಅತ್ಯಂತ ದೊಡ್ಡ ರಾಜಕೀಯ ಶತೃ’ ಎಂದು ಘೋಷಿಸಿದೆ. ‘ಬಿಜೆಪಿ ಪಕ್ಷಕ್ಕೆ ಮೈತ್ರಿ ಸಂಬಂಧಗಳೆಂದರೆ ಕೇವಲ ಲಾಭ ನಷ್ಟದ ಲೆಕ್ಕಾಚಾರವಷ್ಟೆ’ ಎಂದು ಜರೆದಿದೆ. ಸಂಬಂಧ ಇಷ್ಟು ಹಳಸಿರುವ ಸಂದರ್ಭದಲ್ಲೇ ಅಮಿತ್ ಶಾ ಸೀದಾ ಠಾಕ್ರೆ ಮನೆಗೆ ದಯಮಾಡಿಸಿ, ಶಿವಸೇನೆಯ ನಾಯಕರ ಬಿರುನುಡಿಗಳನ್ನು ಸಾವಧಾನವಾಗಿ ಆಲಿಸಿದ್ದಾರೆ. 21 ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಿರುವ, ‘ಎದುರಾಳಿಗಳೇ ಇಲ್ಲದ’ ಮೋದಿ-ಶಾ ಜೋಡಿಯ ಇಂದಿನ ವಾಸ್ತವ ಸ್ಥಿತಿ ಇದು.
‘37 ಸ್ಥಾನ ಪಡೆದ ದೇವೇಗೌಡರ ಪಕ್ಷಕ್ಕೆ ಶರಣಾದ ಕಾಂಗ್ರೆಸ್’, ‘ಸ್ವಾಭಿಮಾನವನ್ನೇ ಕಳೆದುಕೊಂಡು ಮಂಡಿಯೂರಿದ ಕಾಂಗ್ರೆಸ್’ ಮುಂತಾಗಿ ಹಗಲು ರಾತ್ರಿ ಚೀರಾಡುವ ಯಾವೊಬ್ಬ ಪತ್ರಕರ್ತರೂ ‘ಅಮಿತ್ ಶಾ ಅಹಂಕಾರಕ್ಕೆ ತಕ್ಕ ಶಾಸ್ತಿ’ ಅಥವ ‘ಶಿವಸೇನೆಗೆ ಶರಣಾದ ಚಾಣಕ್ಯ’ ಮುಂತಾದ ಯಾವುದೇ ಚರ್ಚೆ ನಡೆಸಿಲ್ಲ.
ಈ ‘ಚಾಣಕ್ಯ’ ಪ್ರವಾಸ ಇಲ್ಲಿಗೆ ನಿಲ್ಲುವುದಿಲ್ಲ; ಮರುದಿನವೇ ಪಂಜಾಬ್‍ಗೆ ತೆರಳಿ ಅಕಾಲಿ ನಾಯಕ ಬಾದಲ್ ಅವರನ್ನು ಭೇಟಿಯಾಗಲಿದ್ದಾರೆ. ನಂತರ ಬಿಹಾರಕ್ಕೆ ತೆರಳಿ ಜೆಡಿಯು ನಾಯಕ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗುವ ಯೋಜನೆಯಿದೆ. ಬಾಬಾ ರಾಮ್‍ದೇವ್, ರತನ್ ಟಾಟಾ, ಮಾಧುರಿ ದೀಕ್ಷಿತ್ ಮುಂತಾದ ವಿವಿಧ ಕ್ಷೇತ್ರಗಳ ಗಣ್ಯರನ್ನು ನಿನ್ನೆ ಮೊನ್ನೆಯಷ್ಟೇ ಭೇಟಿಯಾಗಿದ್ದು, ಬಾಂಧವ್ಯ ಗಟ್ಟಿಗೊಳಿಸಿಕೊಳ್ಳುವ ಪ್ರಯತ್ನ ನಡೆದಿದೆ.
ಈ ಎಲ್ಲ ಬೆಳವಣಿಗೆಗಳು ಏನನ್ನು ಸೂಚಿಸುತ್ತದೆ? ನಮ್ಮ ಅಶ್ವಮೇಧದ ಕುದುರೆಯನ್ನು ಕಟ್ಟಿಹಾಕುವವರೇ ಇಲ್ಲ ಎಂಬಂತೆ ಬಡಾಯಿ ಕೊಚ್ಚಿಕೊಳ್ಳುತ್ತಿರುವ ಬಿಜೆಪಿ ನಾಯಕತ್ವಕ್ಕೆ ತಾವು ದಿನೇದಿನೇ ದುರ್ಬಲಗೊಳ್ಳುತ್ತಿದ್ದಾರೆ ಎಂಬುದನ್ನು ತಾನೇ? ಈ ಕಟುವಾಸ್ತವದ ಅರಿವಾದದ್ದರಿಂದಲೇ ಅಮಿತ್ ಶಾ ಸಾಹೇಬರು ತಮ್ಮ ಮುಖದ ಮೇಲೆ ಒಂದಷ್ಟು ಬಲವಂತದ ಮುಗುಳ್ನಗು ತಂದುಕೊಂಡು ಮಿತ್ರ ಪಕ್ಷಗಳ ಮನೆಬಾಗಿಲಿಗೆ ಸುತ್ತುತ್ತಿದ್ದಾರೆ.
ಈ ವರ್ಷದ ಕೊನೆಯಲ್ಲಿ ಬರಲಿರುವ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‍ಗಡ ಚುನಾವಣೆಯಲ್ಲಿ ಈಗಾಗಲೇ ಆಡಳಿತ ವಿರೋಧಿ ಅಲೆ ಬಲವಾಗಿದೆ. ವಿರೋಧಿ ಪಕ್ಷಗಳು ಒಗ್ಗೂಡುತ್ತಿರುವುದು ಒಂದುಕಡೆಯಾದರೆ, ತೀವ್ರ ಸಂಕಷ್ಟದಲ್ಲಿರುವ ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಬೀದಿಗಿಳಿದಿದ್ದಾರೆ.
ವಿರೋಧ ಪಕ್ಷಗಳು ನಿರ್ದಿಷ್ಟ ಸೂತ್ರಗಳಿಗೆ ಬದ್ಧವಾಗಿ ಬಲಿಷ್ಠ ಮೈತ್ರಿ ರಚಿಸಿಕೊಂಡು ಚುನಾವಣೆ ಎದುರಿಸಿದಲ್ಲಿ, ಫ್ಯಾಸಿಸ್ಟ್ ಶಕ್ತಿಯಾಗಿ ಹೊಮ್ಮುತ್ತಿರುವ ಮೋದಿ-ಶಾ ಕೂಟ ಮತ್ತು ಅವರ ಬಿಜೆಪಿ ಪಕ್ಷವನ್ನು ಮೂಲೋತ್ಪಾಟನೆ ಮಾಡಲಾಗದಿದ್ದರೂ ಹದ್ದುಬಸ್ತಿನಲ್ಲಂತೂ ಇಡಬಹುದು. ಇದು ದೇಶದ ಸದ್ಯದ ರಾಜಕೀಯ ಸನ್ನಿವೇಶ.
ಆದರೆ ಸ್ವಾರ್ಥ, ಸಮಯಸಾಧಕತನಗಳನ್ನೇ ತಮ್ಮ ನೀತಿಯನ್ನಾಗಿಸಿಕೊಂಡಿರುವ ರಾಜಕೀಯ ಪಕ್ಷಗಳ ಬಗ್ಗೆ ನಾವು ಎಷ್ಟು ನಿರೀಕ್ಷೆ ಇಟ್ಟುಕೊಳ್ಳಬಹುದು ಎಂಬುದೇ ಅಸಲಿ ಪ್ರಶ್ನೆ.

ಸಂಪಾದಕೀಯ ತಂಡದ ಪರವಾಗಿ
ದೊಡ್ಡಿಪಾಳ್ಯ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...