HomeUncategorizedಸಂಪಾದಕೀಯ / ಸಮಯ ಸಾಧಕ ಪಕ್ಷಗಳ ಮೇಲೆ ನಿರೀಕ್ಷೆ ಇಡಬಹುದೆ?

ಸಂಪಾದಕೀಯ / ಸಮಯ ಸಾಧಕ ಪಕ್ಷಗಳ ಮೇಲೆ ನಿರೀಕ್ಷೆ ಇಡಬಹುದೆ?

- Advertisement -
- Advertisement -

 

ಕರ್ನಾಟಕದ ಮಾಧ್ಯಮಗಳು ಕ್ಯಾಬಿನೆಟ್ ಹಂಚಿಕೆಯ ಇಕ್ಕಟ್ಟುಗಳನ್ನು ಭಾರೀ ಬಿಕ್ಕಟ್ಟು ಎಂಬಂತೆ ಬಿಂಬಿಸಿ, ಅಸಮಾಧಾನ ಹೊಂದಿರುವವರು ರಾಜೀನಾಮೆ ಕೊಟ್ಟೇಬಿಟ್ಟರು ಅಂತೆಲ್ಲಾ ಬೂಸಿ ಬಿಟ್ಟು, ಒಟ್ಟಾರೆ ಈ ಸರ್ಕಾರ ಜಾಸ್ತಿ ದಿನ ಬಾಳಿಕೆ ಬರೋಲ್ಲ ಎಂಬ ಅಭಿಪ್ರಾಯ ಬಿತ್ತಲು ಹೆಣಗಾಡುತ್ತಿರುವುದು ಅಸಹ್ಯ ಹುಟ್ಟಿಸುತ್ತಿದೆ.
ಆದರೆ ಇದೇ ಸಂದರ್ಭದಲ್ಲಿ ರಾಷ್ಟ್ರ ರಾಜಕಾರಣದಲ್ಲಿ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಸುತ್ತಲೂ ಬಹಳ ಮಹತ್ವದ ವಿದ್ಯಮಾನಗಳು ಘಟಿಸುತ್ತಿವೆ. ಸಹಜವಾಗಿಯೇ ನಮ್ಮ ಮಾಧ್ಯಮಗಳಿಗೆ ಈ ವಿಚಾರಗಳು ಮುಖ್ಯ ಎನಿಸಿಲ್ಲ. ಯಾಕೆಂದರೆ ಈಗಿನ ವಿದ್ಯಮಾನ ಮಾಧ್ಯಮ ದೊರೆಗಳಿಗೆ ಅಪ್ರಿಯವಾದುದು. ಅವರ ನೆಚ್ಚಿನ ಪ್ರಧಾನಿ ಹಾಗೂ ಬಿಜೆಪಿ ಪಕ್ಷ ರಾಷ್ಟ್ರ ರಾಜಕಾರಣದಲ್ಲಿ ಕಠಿಣ ಸವಾಲು ಎದುರಿಸುತ್ತಿದೆ ಎಂಬ ಕಟು ವಾಸ್ತವ ಅನಾವರಣಗೊಳ್ಳುತ್ತಿದೆ. ಒಂದೆಡೆ, ವಿರೋಧ ಪಕ್ಷಗಳು ಅಪೂರ್ವ ಒಗ್ಗಟ್ಟು ಪ್ರದರ್ಶಿಸಿ, ಉಪ ಚುನಾವಣೆಯಲ್ಲಿ ಬಿಜೆಪಿಗೆ ಹೊಡೆತ ನೀಡಿದ್ದು ಮಾತ್ರವಲ್ಲದೆ, ಮುಂಬರುವ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‍ಗಡ ವಿಧಾನಸಭಾ ಚುನಾವಣೆಗಳಲ್ಲೂ ಸಂಭಾವ್ಯ ಮೈತ್ರಿಗಳನ್ನು ಏರ್ಪಡಿಸಿಕೊಳ್ಳುವತ್ತ ಬಿರುಸಿನ ಹೆಜ್ಜೆ ಹಾಕಿವೆ. ಮುಖ್ಯವಾಗಿ ಕಾಂಗ್ರೆಸ್ ಮತ್ತು ಬಿಎಸ್‍ಪಿ ಪಕ್ಷಗಳು ಮುಂಬರುವ ಈ ವಿಧಾನಸಭಾ ಚುನಾವಣೆಗಳಲ್ಲಿ ಮೈತ್ರಿ ಘೋಷಿಸಿಕೊಂಡಿವೆ. ಇನ್ನಿತರೆ ಪಕ್ಷಗಳು ಕೂಡ ಕೈಜೋಡಿಸಲಿದ್ದು ಈ ಮೈತ್ರಿ ಬಲಿಷ್ಠಗೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ.
ಮತ್ತೊಂದೆಡೆ, ಉಪಚುನಾವಣೆಯ ಹೀನಾಯ ಸೋಲಿನ ನಂತರ ಆಡಳಿತಾರೂಡ ಬಿಜೆಪಿ ಪಕ್ಷದೊಳಗೆ ಮೋದಿ-ಶಾ ನಾಯಕತ್ವದ ಬಗ್ಗೆ ಅಪಸ್ವರಗಳು ಬಹಿರಂಗವಾಗಿಯೇ ವ್ಯಕ್ತವಾಗುತ್ತಿದೆ, ಎನ್‍ಡಿಎ ಒಕ್ಕೂಟದಲ್ಲಿದ್ದ ಬಿರುಕು ಹೆಚ್ಚಾಗುವ ಲಕ್ಷಣ ಕಾಣುತ್ತಿದೆ. ಬಿಜೆಪಿಯ ದುರಹಂಕಾರ ಮತ್ತು ದಾಷ್ಟ್ರ್ಯದ ನಡವಳಿಕೆಗಳಿಂದಾಗಿಯೇ ಮಿತ್ರ ಪಕ್ಷಗಳಾದ ತೆಲುಗು ದೇಶಂ, ಶಿವಸೇನಾ ಮುಂತಾದ ಪ್ರಾದೇಶಿಕ ಪಕ್ಷಗಳು ಬಿಜೆಪಿಯಿಂದ ಈಗಾಗಲೇ ದೂರವಾಗಿವೆ. ಸದ್ಯ ಜೊತೆಯಲ್ಲಿರುವ ಜೆಡಿಯು, ಲೋಕಜನಶಕ್ತಿ ಮುಂತಾದ ಪಾಲುದಾರರು ಈಗಾಗಲೇ ಬಾರಿ ಅಪಸ್ವರ ತೆಗೆದಿದ್ದು, ಗಾಳಿ ಬಂದ ಕಡೆ ತೂರಿಹೋಗುವ ಸೂಚನೆ ಕೊಟ್ಟಿವೆ.


ಕರ್ನಾಟಕದಿಂದ ಸಂಸದರಾಗಿದ್ದ ಯಡ್ಯೂರಪ್ಪ ಮತ್ತು ಶ್ರೀರಾಮುಲು ರಾಜೀನಾಮೆ ಕೊಟ್ಟ ಪರಿಣಾಮ ಎರಡು ಸ್ಥಾನಗಳು ಕಡಿಮೆಯಾಗಿ, ಇತ್ತೀಚಿನ ಉಪಚುನಾವಣೆಯಲ್ಲಿ ಕೆಲವು ಸೀಟುಗಳನ್ನು ಕಳೆದುಕೊಂಡ ಪರಿಣಾಮ ಈಗ ಬಿಜೆಪಿ ಪಕ್ಷದ ಸಂಖ್ಯೆ 272ಕ್ಕೆ ಇಳಿದಿದೆ. ಒಂದು ಸಂಖ್ಯೆ ಕಡಿಮೆಯಾದರೂ ಸ್ವಂತ ಬಲದ ಮೇಲೆ ಅಧಿಕಾರ ನಡೆಸಲು ಸಾಧ್ಯವಾಗದ ಸ್ಥಿತಿಯಿದು. ಈ ಬೆಳವಣಿಗೆಗಳು ಬಿಜೆಪಿ ನಾಯಕತ್ವವನ್ನು ಚಿಂತೆಗೀಡು ಮಾಡಿರುವುದಂತೂ ಸತ್ಯ. ಡ್ಯಾಮೇಜ್ ಕಂಟ್ರೋಲ್ ಕ್ರಮಗಳ ಭಾಗವಾಗಿ ಎನ್‍ಡಿಎಯಿಂದ ದೂರವಾಗಿರುವ ಮಿತ್ರ ಪಕ್ಷಗಳನ್ನು ಮತ್ತೆ ಒಲಿಸಿಕೊಳ್ಳುವ ಕಸರತ್ತು ಆರಂಭವಾಗಿದೆ.
ವಿರೋಧ ಪಕ್ಷಗಳು ಒಟ್ಟಾದರೆ ಪರಿಣಾಮ ಏನಾಗಬಹುದು ಎಂಬುದನ್ನು ಕಣ್ಣಾರೆ ಕಂಡುಂಡ ನಂತರ ಸ್ವತಃ ಅಮಿತ್‍ಶಾ ಅಖಾಡಕ್ಕಿಳಿದಿದ್ದಾರೆ. ಜೂನ್ 6 ರಂದು ಶಿವಸೇನಾ ನಾಯಕ ಉಧ್ಧವ್ ಠಾಕ್ರೆಯನ್ನು ಭೇಟಿಯಾಗಿ ಬೆಂಬಲ ಕೋರಲು, ಹಮ್ಮು ಬಿಮ್ಮು ಬದಿಗೊತ್ತಿ, ಸೀದಾ ಮುಂಬೈನ ಬಾಂದ್ರಾದಲ್ಲಿರುವ ಠಾಕ್ರೆ ಮನೆಗೆ ಭೇಟಿಕೊಟ್ಟು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಉತ್ತರಪ್ರದೇಶದ ನಂತರ ಅತಿಹೆಚ್ಚು, ಅಂದರೆ 48 ಸಂಸದರನ್ನು ಆರಿಸುವ ಮಹಾರಾಷ್ಟ್ರ ಬಿಜೆಪಿ ಪಾಲಿಗೆ ಬಹಳ ಮಹತ್ವದ್ದು. ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಕಳೆದ ಚುನಾವಣೆಯಲ್ಲಿ 42 ಸ್ಥಾನಗಳನ್ನು ಗಳಿಸಿದ್ದವು.
ಇತ್ತೀಚಿನ ದಿನಗಳಲ್ಲಿ ಇವರ ನಡುವೆ ವೈಮನಸ್ಯ ತಲೆದೋರಿದ್ದು, ಕಳೆದ ತಿಂಗಳಿನ ಉಪಚುನಾವಣೆಯಲ್ಲಿ ಎದುರಾಳಿಗಳಾಗಿ ಹೋರಾಡಿದ್ದವು. ವೈಮನಸ್ಯ ಯಾವ ಮಟ್ಟದಲ್ಲಿದೆಯೆಂದರೆ, ಅಮಿತ್ ಶಾ ಭೇಟಿಯಾದ ದಿನವೇ ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ‘ಬಿಜೆಪಿ ಪಕ್ಷ ನಮ್ಮ ಅತ್ಯಂತ ದೊಡ್ಡ ರಾಜಕೀಯ ಶತೃ’ ಎಂದು ಘೋಷಿಸಿದೆ. ‘ಬಿಜೆಪಿ ಪಕ್ಷಕ್ಕೆ ಮೈತ್ರಿ ಸಂಬಂಧಗಳೆಂದರೆ ಕೇವಲ ಲಾಭ ನಷ್ಟದ ಲೆಕ್ಕಾಚಾರವಷ್ಟೆ’ ಎಂದು ಜರೆದಿದೆ. ಸಂಬಂಧ ಇಷ್ಟು ಹಳಸಿರುವ ಸಂದರ್ಭದಲ್ಲೇ ಅಮಿತ್ ಶಾ ಸೀದಾ ಠಾಕ್ರೆ ಮನೆಗೆ ದಯಮಾಡಿಸಿ, ಶಿವಸೇನೆಯ ನಾಯಕರ ಬಿರುನುಡಿಗಳನ್ನು ಸಾವಧಾನವಾಗಿ ಆಲಿಸಿದ್ದಾರೆ. 21 ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಿರುವ, ‘ಎದುರಾಳಿಗಳೇ ಇಲ್ಲದ’ ಮೋದಿ-ಶಾ ಜೋಡಿಯ ಇಂದಿನ ವಾಸ್ತವ ಸ್ಥಿತಿ ಇದು.
‘37 ಸ್ಥಾನ ಪಡೆದ ದೇವೇಗೌಡರ ಪಕ್ಷಕ್ಕೆ ಶರಣಾದ ಕಾಂಗ್ರೆಸ್’, ‘ಸ್ವಾಭಿಮಾನವನ್ನೇ ಕಳೆದುಕೊಂಡು ಮಂಡಿಯೂರಿದ ಕಾಂಗ್ರೆಸ್’ ಮುಂತಾಗಿ ಹಗಲು ರಾತ್ರಿ ಚೀರಾಡುವ ಯಾವೊಬ್ಬ ಪತ್ರಕರ್ತರೂ ‘ಅಮಿತ್ ಶಾ ಅಹಂಕಾರಕ್ಕೆ ತಕ್ಕ ಶಾಸ್ತಿ’ ಅಥವ ‘ಶಿವಸೇನೆಗೆ ಶರಣಾದ ಚಾಣಕ್ಯ’ ಮುಂತಾದ ಯಾವುದೇ ಚರ್ಚೆ ನಡೆಸಿಲ್ಲ.
ಈ ‘ಚಾಣಕ್ಯ’ ಪ್ರವಾಸ ಇಲ್ಲಿಗೆ ನಿಲ್ಲುವುದಿಲ್ಲ; ಮರುದಿನವೇ ಪಂಜಾಬ್‍ಗೆ ತೆರಳಿ ಅಕಾಲಿ ನಾಯಕ ಬಾದಲ್ ಅವರನ್ನು ಭೇಟಿಯಾಗಲಿದ್ದಾರೆ. ನಂತರ ಬಿಹಾರಕ್ಕೆ ತೆರಳಿ ಜೆಡಿಯು ನಾಯಕ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗುವ ಯೋಜನೆಯಿದೆ. ಬಾಬಾ ರಾಮ್‍ದೇವ್, ರತನ್ ಟಾಟಾ, ಮಾಧುರಿ ದೀಕ್ಷಿತ್ ಮುಂತಾದ ವಿವಿಧ ಕ್ಷೇತ್ರಗಳ ಗಣ್ಯರನ್ನು ನಿನ್ನೆ ಮೊನ್ನೆಯಷ್ಟೇ ಭೇಟಿಯಾಗಿದ್ದು, ಬಾಂಧವ್ಯ ಗಟ್ಟಿಗೊಳಿಸಿಕೊಳ್ಳುವ ಪ್ರಯತ್ನ ನಡೆದಿದೆ.
ಈ ಎಲ್ಲ ಬೆಳವಣಿಗೆಗಳು ಏನನ್ನು ಸೂಚಿಸುತ್ತದೆ? ನಮ್ಮ ಅಶ್ವಮೇಧದ ಕುದುರೆಯನ್ನು ಕಟ್ಟಿಹಾಕುವವರೇ ಇಲ್ಲ ಎಂಬಂತೆ ಬಡಾಯಿ ಕೊಚ್ಚಿಕೊಳ್ಳುತ್ತಿರುವ ಬಿಜೆಪಿ ನಾಯಕತ್ವಕ್ಕೆ ತಾವು ದಿನೇದಿನೇ ದುರ್ಬಲಗೊಳ್ಳುತ್ತಿದ್ದಾರೆ ಎಂಬುದನ್ನು ತಾನೇ? ಈ ಕಟುವಾಸ್ತವದ ಅರಿವಾದದ್ದರಿಂದಲೇ ಅಮಿತ್ ಶಾ ಸಾಹೇಬರು ತಮ್ಮ ಮುಖದ ಮೇಲೆ ಒಂದಷ್ಟು ಬಲವಂತದ ಮುಗುಳ್ನಗು ತಂದುಕೊಂಡು ಮಿತ್ರ ಪಕ್ಷಗಳ ಮನೆಬಾಗಿಲಿಗೆ ಸುತ್ತುತ್ತಿದ್ದಾರೆ.
ಈ ವರ್ಷದ ಕೊನೆಯಲ್ಲಿ ಬರಲಿರುವ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‍ಗಡ ಚುನಾವಣೆಯಲ್ಲಿ ಈಗಾಗಲೇ ಆಡಳಿತ ವಿರೋಧಿ ಅಲೆ ಬಲವಾಗಿದೆ. ವಿರೋಧಿ ಪಕ್ಷಗಳು ಒಗ್ಗೂಡುತ್ತಿರುವುದು ಒಂದುಕಡೆಯಾದರೆ, ತೀವ್ರ ಸಂಕಷ್ಟದಲ್ಲಿರುವ ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಬೀದಿಗಿಳಿದಿದ್ದಾರೆ.
ವಿರೋಧ ಪಕ್ಷಗಳು ನಿರ್ದಿಷ್ಟ ಸೂತ್ರಗಳಿಗೆ ಬದ್ಧವಾಗಿ ಬಲಿಷ್ಠ ಮೈತ್ರಿ ರಚಿಸಿಕೊಂಡು ಚುನಾವಣೆ ಎದುರಿಸಿದಲ್ಲಿ, ಫ್ಯಾಸಿಸ್ಟ್ ಶಕ್ತಿಯಾಗಿ ಹೊಮ್ಮುತ್ತಿರುವ ಮೋದಿ-ಶಾ ಕೂಟ ಮತ್ತು ಅವರ ಬಿಜೆಪಿ ಪಕ್ಷವನ್ನು ಮೂಲೋತ್ಪಾಟನೆ ಮಾಡಲಾಗದಿದ್ದರೂ ಹದ್ದುಬಸ್ತಿನಲ್ಲಂತೂ ಇಡಬಹುದು. ಇದು ದೇಶದ ಸದ್ಯದ ರಾಜಕೀಯ ಸನ್ನಿವೇಶ.
ಆದರೆ ಸ್ವಾರ್ಥ, ಸಮಯಸಾಧಕತನಗಳನ್ನೇ ತಮ್ಮ ನೀತಿಯನ್ನಾಗಿಸಿಕೊಂಡಿರುವ ರಾಜಕೀಯ ಪಕ್ಷಗಳ ಬಗ್ಗೆ ನಾವು ಎಷ್ಟು ನಿರೀಕ್ಷೆ ಇಟ್ಟುಕೊಳ್ಳಬಹುದು ಎಂಬುದೇ ಅಸಲಿ ಪ್ರಶ್ನೆ.

ಸಂಪಾದಕೀಯ ತಂಡದ ಪರವಾಗಿ
ದೊಡ್ಡಿಪಾಳ್ಯ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...