HomeUncategorizedಸಂಪಾದಕೀಯ / ಸಮಯ ಸಾಧಕ ಪಕ್ಷಗಳ ಮೇಲೆ ನಿರೀಕ್ಷೆ ಇಡಬಹುದೆ?

ಸಂಪಾದಕೀಯ / ಸಮಯ ಸಾಧಕ ಪಕ್ಷಗಳ ಮೇಲೆ ನಿರೀಕ್ಷೆ ಇಡಬಹುದೆ?

- Advertisement -
- Advertisement -

 

ಕರ್ನಾಟಕದ ಮಾಧ್ಯಮಗಳು ಕ್ಯಾಬಿನೆಟ್ ಹಂಚಿಕೆಯ ಇಕ್ಕಟ್ಟುಗಳನ್ನು ಭಾರೀ ಬಿಕ್ಕಟ್ಟು ಎಂಬಂತೆ ಬಿಂಬಿಸಿ, ಅಸಮಾಧಾನ ಹೊಂದಿರುವವರು ರಾಜೀನಾಮೆ ಕೊಟ್ಟೇಬಿಟ್ಟರು ಅಂತೆಲ್ಲಾ ಬೂಸಿ ಬಿಟ್ಟು, ಒಟ್ಟಾರೆ ಈ ಸರ್ಕಾರ ಜಾಸ್ತಿ ದಿನ ಬಾಳಿಕೆ ಬರೋಲ್ಲ ಎಂಬ ಅಭಿಪ್ರಾಯ ಬಿತ್ತಲು ಹೆಣಗಾಡುತ್ತಿರುವುದು ಅಸಹ್ಯ ಹುಟ್ಟಿಸುತ್ತಿದೆ.
ಆದರೆ ಇದೇ ಸಂದರ್ಭದಲ್ಲಿ ರಾಷ್ಟ್ರ ರಾಜಕಾರಣದಲ್ಲಿ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಸುತ್ತಲೂ ಬಹಳ ಮಹತ್ವದ ವಿದ್ಯಮಾನಗಳು ಘಟಿಸುತ್ತಿವೆ. ಸಹಜವಾಗಿಯೇ ನಮ್ಮ ಮಾಧ್ಯಮಗಳಿಗೆ ಈ ವಿಚಾರಗಳು ಮುಖ್ಯ ಎನಿಸಿಲ್ಲ. ಯಾಕೆಂದರೆ ಈಗಿನ ವಿದ್ಯಮಾನ ಮಾಧ್ಯಮ ದೊರೆಗಳಿಗೆ ಅಪ್ರಿಯವಾದುದು. ಅವರ ನೆಚ್ಚಿನ ಪ್ರಧಾನಿ ಹಾಗೂ ಬಿಜೆಪಿ ಪಕ್ಷ ರಾಷ್ಟ್ರ ರಾಜಕಾರಣದಲ್ಲಿ ಕಠಿಣ ಸವಾಲು ಎದುರಿಸುತ್ತಿದೆ ಎಂಬ ಕಟು ವಾಸ್ತವ ಅನಾವರಣಗೊಳ್ಳುತ್ತಿದೆ. ಒಂದೆಡೆ, ವಿರೋಧ ಪಕ್ಷಗಳು ಅಪೂರ್ವ ಒಗ್ಗಟ್ಟು ಪ್ರದರ್ಶಿಸಿ, ಉಪ ಚುನಾವಣೆಯಲ್ಲಿ ಬಿಜೆಪಿಗೆ ಹೊಡೆತ ನೀಡಿದ್ದು ಮಾತ್ರವಲ್ಲದೆ, ಮುಂಬರುವ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‍ಗಡ ವಿಧಾನಸಭಾ ಚುನಾವಣೆಗಳಲ್ಲೂ ಸಂಭಾವ್ಯ ಮೈತ್ರಿಗಳನ್ನು ಏರ್ಪಡಿಸಿಕೊಳ್ಳುವತ್ತ ಬಿರುಸಿನ ಹೆಜ್ಜೆ ಹಾಕಿವೆ. ಮುಖ್ಯವಾಗಿ ಕಾಂಗ್ರೆಸ್ ಮತ್ತು ಬಿಎಸ್‍ಪಿ ಪಕ್ಷಗಳು ಮುಂಬರುವ ಈ ವಿಧಾನಸಭಾ ಚುನಾವಣೆಗಳಲ್ಲಿ ಮೈತ್ರಿ ಘೋಷಿಸಿಕೊಂಡಿವೆ. ಇನ್ನಿತರೆ ಪಕ್ಷಗಳು ಕೂಡ ಕೈಜೋಡಿಸಲಿದ್ದು ಈ ಮೈತ್ರಿ ಬಲಿಷ್ಠಗೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ.
ಮತ್ತೊಂದೆಡೆ, ಉಪಚುನಾವಣೆಯ ಹೀನಾಯ ಸೋಲಿನ ನಂತರ ಆಡಳಿತಾರೂಡ ಬಿಜೆಪಿ ಪಕ್ಷದೊಳಗೆ ಮೋದಿ-ಶಾ ನಾಯಕತ್ವದ ಬಗ್ಗೆ ಅಪಸ್ವರಗಳು ಬಹಿರಂಗವಾಗಿಯೇ ವ್ಯಕ್ತವಾಗುತ್ತಿದೆ, ಎನ್‍ಡಿಎ ಒಕ್ಕೂಟದಲ್ಲಿದ್ದ ಬಿರುಕು ಹೆಚ್ಚಾಗುವ ಲಕ್ಷಣ ಕಾಣುತ್ತಿದೆ. ಬಿಜೆಪಿಯ ದುರಹಂಕಾರ ಮತ್ತು ದಾಷ್ಟ್ರ್ಯದ ನಡವಳಿಕೆಗಳಿಂದಾಗಿಯೇ ಮಿತ್ರ ಪಕ್ಷಗಳಾದ ತೆಲುಗು ದೇಶಂ, ಶಿವಸೇನಾ ಮುಂತಾದ ಪ್ರಾದೇಶಿಕ ಪಕ್ಷಗಳು ಬಿಜೆಪಿಯಿಂದ ಈಗಾಗಲೇ ದೂರವಾಗಿವೆ. ಸದ್ಯ ಜೊತೆಯಲ್ಲಿರುವ ಜೆಡಿಯು, ಲೋಕಜನಶಕ್ತಿ ಮುಂತಾದ ಪಾಲುದಾರರು ಈಗಾಗಲೇ ಬಾರಿ ಅಪಸ್ವರ ತೆಗೆದಿದ್ದು, ಗಾಳಿ ಬಂದ ಕಡೆ ತೂರಿಹೋಗುವ ಸೂಚನೆ ಕೊಟ್ಟಿವೆ.


ಕರ್ನಾಟಕದಿಂದ ಸಂಸದರಾಗಿದ್ದ ಯಡ್ಯೂರಪ್ಪ ಮತ್ತು ಶ್ರೀರಾಮುಲು ರಾಜೀನಾಮೆ ಕೊಟ್ಟ ಪರಿಣಾಮ ಎರಡು ಸ್ಥಾನಗಳು ಕಡಿಮೆಯಾಗಿ, ಇತ್ತೀಚಿನ ಉಪಚುನಾವಣೆಯಲ್ಲಿ ಕೆಲವು ಸೀಟುಗಳನ್ನು ಕಳೆದುಕೊಂಡ ಪರಿಣಾಮ ಈಗ ಬಿಜೆಪಿ ಪಕ್ಷದ ಸಂಖ್ಯೆ 272ಕ್ಕೆ ಇಳಿದಿದೆ. ಒಂದು ಸಂಖ್ಯೆ ಕಡಿಮೆಯಾದರೂ ಸ್ವಂತ ಬಲದ ಮೇಲೆ ಅಧಿಕಾರ ನಡೆಸಲು ಸಾಧ್ಯವಾಗದ ಸ್ಥಿತಿಯಿದು. ಈ ಬೆಳವಣಿಗೆಗಳು ಬಿಜೆಪಿ ನಾಯಕತ್ವವನ್ನು ಚಿಂತೆಗೀಡು ಮಾಡಿರುವುದಂತೂ ಸತ್ಯ. ಡ್ಯಾಮೇಜ್ ಕಂಟ್ರೋಲ್ ಕ್ರಮಗಳ ಭಾಗವಾಗಿ ಎನ್‍ಡಿಎಯಿಂದ ದೂರವಾಗಿರುವ ಮಿತ್ರ ಪಕ್ಷಗಳನ್ನು ಮತ್ತೆ ಒಲಿಸಿಕೊಳ್ಳುವ ಕಸರತ್ತು ಆರಂಭವಾಗಿದೆ.
ವಿರೋಧ ಪಕ್ಷಗಳು ಒಟ್ಟಾದರೆ ಪರಿಣಾಮ ಏನಾಗಬಹುದು ಎಂಬುದನ್ನು ಕಣ್ಣಾರೆ ಕಂಡುಂಡ ನಂತರ ಸ್ವತಃ ಅಮಿತ್‍ಶಾ ಅಖಾಡಕ್ಕಿಳಿದಿದ್ದಾರೆ. ಜೂನ್ 6 ರಂದು ಶಿವಸೇನಾ ನಾಯಕ ಉಧ್ಧವ್ ಠಾಕ್ರೆಯನ್ನು ಭೇಟಿಯಾಗಿ ಬೆಂಬಲ ಕೋರಲು, ಹಮ್ಮು ಬಿಮ್ಮು ಬದಿಗೊತ್ತಿ, ಸೀದಾ ಮುಂಬೈನ ಬಾಂದ್ರಾದಲ್ಲಿರುವ ಠಾಕ್ರೆ ಮನೆಗೆ ಭೇಟಿಕೊಟ್ಟು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಉತ್ತರಪ್ರದೇಶದ ನಂತರ ಅತಿಹೆಚ್ಚು, ಅಂದರೆ 48 ಸಂಸದರನ್ನು ಆರಿಸುವ ಮಹಾರಾಷ್ಟ್ರ ಬಿಜೆಪಿ ಪಾಲಿಗೆ ಬಹಳ ಮಹತ್ವದ್ದು. ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಕಳೆದ ಚುನಾವಣೆಯಲ್ಲಿ 42 ಸ್ಥಾನಗಳನ್ನು ಗಳಿಸಿದ್ದವು.
ಇತ್ತೀಚಿನ ದಿನಗಳಲ್ಲಿ ಇವರ ನಡುವೆ ವೈಮನಸ್ಯ ತಲೆದೋರಿದ್ದು, ಕಳೆದ ತಿಂಗಳಿನ ಉಪಚುನಾವಣೆಯಲ್ಲಿ ಎದುರಾಳಿಗಳಾಗಿ ಹೋರಾಡಿದ್ದವು. ವೈಮನಸ್ಯ ಯಾವ ಮಟ್ಟದಲ್ಲಿದೆಯೆಂದರೆ, ಅಮಿತ್ ಶಾ ಭೇಟಿಯಾದ ದಿನವೇ ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ‘ಬಿಜೆಪಿ ಪಕ್ಷ ನಮ್ಮ ಅತ್ಯಂತ ದೊಡ್ಡ ರಾಜಕೀಯ ಶತೃ’ ಎಂದು ಘೋಷಿಸಿದೆ. ‘ಬಿಜೆಪಿ ಪಕ್ಷಕ್ಕೆ ಮೈತ್ರಿ ಸಂಬಂಧಗಳೆಂದರೆ ಕೇವಲ ಲಾಭ ನಷ್ಟದ ಲೆಕ್ಕಾಚಾರವಷ್ಟೆ’ ಎಂದು ಜರೆದಿದೆ. ಸಂಬಂಧ ಇಷ್ಟು ಹಳಸಿರುವ ಸಂದರ್ಭದಲ್ಲೇ ಅಮಿತ್ ಶಾ ಸೀದಾ ಠಾಕ್ರೆ ಮನೆಗೆ ದಯಮಾಡಿಸಿ, ಶಿವಸೇನೆಯ ನಾಯಕರ ಬಿರುನುಡಿಗಳನ್ನು ಸಾವಧಾನವಾಗಿ ಆಲಿಸಿದ್ದಾರೆ. 21 ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಿರುವ, ‘ಎದುರಾಳಿಗಳೇ ಇಲ್ಲದ’ ಮೋದಿ-ಶಾ ಜೋಡಿಯ ಇಂದಿನ ವಾಸ್ತವ ಸ್ಥಿತಿ ಇದು.
‘37 ಸ್ಥಾನ ಪಡೆದ ದೇವೇಗೌಡರ ಪಕ್ಷಕ್ಕೆ ಶರಣಾದ ಕಾಂಗ್ರೆಸ್’, ‘ಸ್ವಾಭಿಮಾನವನ್ನೇ ಕಳೆದುಕೊಂಡು ಮಂಡಿಯೂರಿದ ಕಾಂಗ್ರೆಸ್’ ಮುಂತಾಗಿ ಹಗಲು ರಾತ್ರಿ ಚೀರಾಡುವ ಯಾವೊಬ್ಬ ಪತ್ರಕರ್ತರೂ ‘ಅಮಿತ್ ಶಾ ಅಹಂಕಾರಕ್ಕೆ ತಕ್ಕ ಶಾಸ್ತಿ’ ಅಥವ ‘ಶಿವಸೇನೆಗೆ ಶರಣಾದ ಚಾಣಕ್ಯ’ ಮುಂತಾದ ಯಾವುದೇ ಚರ್ಚೆ ನಡೆಸಿಲ್ಲ.
ಈ ‘ಚಾಣಕ್ಯ’ ಪ್ರವಾಸ ಇಲ್ಲಿಗೆ ನಿಲ್ಲುವುದಿಲ್ಲ; ಮರುದಿನವೇ ಪಂಜಾಬ್‍ಗೆ ತೆರಳಿ ಅಕಾಲಿ ನಾಯಕ ಬಾದಲ್ ಅವರನ್ನು ಭೇಟಿಯಾಗಲಿದ್ದಾರೆ. ನಂತರ ಬಿಹಾರಕ್ಕೆ ತೆರಳಿ ಜೆಡಿಯು ನಾಯಕ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗುವ ಯೋಜನೆಯಿದೆ. ಬಾಬಾ ರಾಮ್‍ದೇವ್, ರತನ್ ಟಾಟಾ, ಮಾಧುರಿ ದೀಕ್ಷಿತ್ ಮುಂತಾದ ವಿವಿಧ ಕ್ಷೇತ್ರಗಳ ಗಣ್ಯರನ್ನು ನಿನ್ನೆ ಮೊನ್ನೆಯಷ್ಟೇ ಭೇಟಿಯಾಗಿದ್ದು, ಬಾಂಧವ್ಯ ಗಟ್ಟಿಗೊಳಿಸಿಕೊಳ್ಳುವ ಪ್ರಯತ್ನ ನಡೆದಿದೆ.
ಈ ಎಲ್ಲ ಬೆಳವಣಿಗೆಗಳು ಏನನ್ನು ಸೂಚಿಸುತ್ತದೆ? ನಮ್ಮ ಅಶ್ವಮೇಧದ ಕುದುರೆಯನ್ನು ಕಟ್ಟಿಹಾಕುವವರೇ ಇಲ್ಲ ಎಂಬಂತೆ ಬಡಾಯಿ ಕೊಚ್ಚಿಕೊಳ್ಳುತ್ತಿರುವ ಬಿಜೆಪಿ ನಾಯಕತ್ವಕ್ಕೆ ತಾವು ದಿನೇದಿನೇ ದುರ್ಬಲಗೊಳ್ಳುತ್ತಿದ್ದಾರೆ ಎಂಬುದನ್ನು ತಾನೇ? ಈ ಕಟುವಾಸ್ತವದ ಅರಿವಾದದ್ದರಿಂದಲೇ ಅಮಿತ್ ಶಾ ಸಾಹೇಬರು ತಮ್ಮ ಮುಖದ ಮೇಲೆ ಒಂದಷ್ಟು ಬಲವಂತದ ಮುಗುಳ್ನಗು ತಂದುಕೊಂಡು ಮಿತ್ರ ಪಕ್ಷಗಳ ಮನೆಬಾಗಿಲಿಗೆ ಸುತ್ತುತ್ತಿದ್ದಾರೆ.
ಈ ವರ್ಷದ ಕೊನೆಯಲ್ಲಿ ಬರಲಿರುವ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‍ಗಡ ಚುನಾವಣೆಯಲ್ಲಿ ಈಗಾಗಲೇ ಆಡಳಿತ ವಿರೋಧಿ ಅಲೆ ಬಲವಾಗಿದೆ. ವಿರೋಧಿ ಪಕ್ಷಗಳು ಒಗ್ಗೂಡುತ್ತಿರುವುದು ಒಂದುಕಡೆಯಾದರೆ, ತೀವ್ರ ಸಂಕಷ್ಟದಲ್ಲಿರುವ ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಬೀದಿಗಿಳಿದಿದ್ದಾರೆ.
ವಿರೋಧ ಪಕ್ಷಗಳು ನಿರ್ದಿಷ್ಟ ಸೂತ್ರಗಳಿಗೆ ಬದ್ಧವಾಗಿ ಬಲಿಷ್ಠ ಮೈತ್ರಿ ರಚಿಸಿಕೊಂಡು ಚುನಾವಣೆ ಎದುರಿಸಿದಲ್ಲಿ, ಫ್ಯಾಸಿಸ್ಟ್ ಶಕ್ತಿಯಾಗಿ ಹೊಮ್ಮುತ್ತಿರುವ ಮೋದಿ-ಶಾ ಕೂಟ ಮತ್ತು ಅವರ ಬಿಜೆಪಿ ಪಕ್ಷವನ್ನು ಮೂಲೋತ್ಪಾಟನೆ ಮಾಡಲಾಗದಿದ್ದರೂ ಹದ್ದುಬಸ್ತಿನಲ್ಲಂತೂ ಇಡಬಹುದು. ಇದು ದೇಶದ ಸದ್ಯದ ರಾಜಕೀಯ ಸನ್ನಿವೇಶ.
ಆದರೆ ಸ್ವಾರ್ಥ, ಸಮಯಸಾಧಕತನಗಳನ್ನೇ ತಮ್ಮ ನೀತಿಯನ್ನಾಗಿಸಿಕೊಂಡಿರುವ ರಾಜಕೀಯ ಪಕ್ಷಗಳ ಬಗ್ಗೆ ನಾವು ಎಷ್ಟು ನಿರೀಕ್ಷೆ ಇಟ್ಟುಕೊಳ್ಳಬಹುದು ಎಂಬುದೇ ಅಸಲಿ ಪ್ರಶ್ನೆ.

ಸಂಪಾದಕೀಯ ತಂಡದ ಪರವಾಗಿ
ದೊಡ್ಡಿಪಾಳ್ಯ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...