Homeಚಳವಳಿಪತ್ರಕರ್ತ ಜುಬೇರ್‌ ಬಂಧನವನ್ನು ಖಂಡಿಸಿ, ಬಿಡುಗಡೆ ಮಾಡುವಂತೆ ಒತ್ತಾಯಿಸಿದ ಎಡಿಟರ್ಸ್ ಗಿಲ್ಡ್

ಪತ್ರಕರ್ತ ಜುಬೇರ್‌ ಬಂಧನವನ್ನು ಖಂಡಿಸಿ, ಬಿಡುಗಡೆ ಮಾಡುವಂತೆ ಒತ್ತಾಯಿಸಿದ ಎಡಿಟರ್ಸ್ ಗಿಲ್ಡ್

ಡಿಜಿಟಲ್ ಸುದ್ದಿ ಮಾಧ್ಯಮ ಸಂಸ್ಥೆಗಳ ಸಂಘಟನೆ DIGIPUB ಕೂಡ ಜುಬೇರ್‌ ಬಂಧನವನ್ನು ಖಂಡಿಸಿದೆ.

- Advertisement -
- Advertisement -

2018ರ ಟ್ವೀಟ್ ಒಂದಕ್ಕೆ ಸಂಬಂಧಿಸಿ ದಿಟ್ಟ ಪತ್ರಕರ್ತ, ಆಲ್ಟ್‌ನ್ಯೂಸ್ ಸಹ ಸಂಪಾದಕ ಮೊಹಮ್ಮದ್ ಜುಬೇರ್‌ರನ್ನು ಬಂಧಿಸಿರುವ ದೆಹಲಿ ಪೊಲೀಸರ ಕ್ರಮಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಕೂಡ ಜುಬೇರ್‍ ಬಂಧನವನ್ನು ಖಂಡಿಸಿದ್ದು, ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿದೆ.

ಮಂಗಳವಾರ ಹೇಳಿಕೆ ಬಿಡುಗಡೆ ಮಾಡಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ’ಆಲ್ಟ್‌ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರನ್ನು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಆರೋಪದ ಮೇಲೆ ಬಂಧಿಸಿರುವುದು “ಅತ್ಯಂತ ಗೊಂದಲದ ಸಂಗತಿ” ಎಂದಿದೆ. ಜೊತೆಗೆ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದೆ.

“ಸಮಾಜದಲ್ಲಿ ಅಶಾಂತಿಗೆ ಮತ್ತು ರಾಷ್ಟ್ರೀಯತಾವಾದಿ ಭಾವನೆಗಳನ್ನು ಕೆರಳಿಸುವ ಸಾಧನವಾಗಿ ತಪ್ಪು ಮಾಹಿತಿಯನ್ನು ಬಳಸುವವರ ವಿರುದ್ಧ ಆಲ್ಟ್‌ನ್ಯೂಸ್‌ ಎಚ್ಚರಿಕೆಯನ್ನು ಮೂಡಿಸಿದೆ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಎಡಿಟರ್ಸ್ ಗಿಲ್ಡ್ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಒಂದು ದಿನದ ಪೊಲೀಸ್ ಕಸ್ಟಡಿಗೆ ಜುಬೇರ್‌: ಬಂಧನಕ್ಕೆ ಕಾರಣವಾದ ಟ್ವೀಟ್, ದೂರುದಾರರು ಯಾರು?

ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಹರಡುವ ಆರೋಪದ ಮೇಲೆ ಜುಬೇರ್ ಮೇಲೆ ಪ್ರಕರಣ ದಾಖಲಾಗಿದೆ. 2020ರ ಪ್ರಕರಣದ ವಿಚಾರಣೆಗೆಂದು ಅವರನ್ನು ದೆಹಲಿ ಪೊಲೀಸರು ಕರೆಸಿದ್ದರು. ಆ ಪ್ರಕರಣದಲ್ಲಿ ಜುಬೇರ್ ಬಂಧನದಿಂದ ರಕ್ಷಣೆ ಪಡೆದಿದ್ದರು. ಆನಂತರ ಪೊಲೀಸರು 2018ರ ಟ್ವೀಟ್‌ ಆಧರಿಸಿ ಬಂಧಿಸಿದ್ದೇವೆ ಎಂದಿದ್ದಾರೆ.

“ಜುಬೇರ್ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಮತ್ತು 295 ರ ಅಡಿಯಲ್ಲಿ ಬಂಧಿಸಲಾಗಿದೆ. ಇದು ಅತ್ಯಂತ ಗೊಂದಲದ ಸಂಗತಿಯಾಗಿದೆ ಏಕೆಂದರೆ ಜುಬೇರ್ ಮತ್ತು ಅವರ ವೆಬ್‌ಸೈಟ್ ಆಲ್ಟ್‌ನ್ಯೂಸ್ ಕಳೆದ ಕೆಲವು ವರ್ಷಗಳಿಂದ ವಸ್ತುನಿಷ್ಠ ಮತ್ತು ವಾಸ್ತವಿಕ ರೀತಿಯಲ್ಲಿ, ನಕಲಿ ಸುದ್ದಿಗಳನ್ನು ಗುರುತಿಸುವಲ್ಲಿ ಮತ್ತು ತಪ್ಪು ಮಾಹಿತಿಯ ಪ್ರಚಾರಗಳನ್ನು ಹೊರಗೆಳೆದು ಅನುಕರಣೀಯ ಕೆಲಸಗಳನ್ನು ಮಾಡಿವೆ” ಎಂದಿದೆ. ಕೂಡಲೇ ದೆಹಲಿ ಪೊಲೀಸರು ಮೊಹಮ್ಮದ್ ಜುಬೇರ್‌ ಅವರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ಇದಕ್ಕೂ ಮೊದಲು, ಡಿಜಿಟಲ್ ಸುದ್ದಿ ಮಾಧ್ಯಮ ಸಂಸ್ಥೆಗಳ ಸಂಘಟನೆ DIGIPUB ಜುಬೇರ್‌ ಬಂಧನವನ್ನು ಖಂಡಿಸಿ, ಅವರ ವಿರುದ್ಧದ ಪ್ರಕರಣವನ್ನು ತಕ್ಷಣವೇ ಹಿಂಪಡೆಯುವಂತೆ ದೆಹಲಿ ಪೊಲೀಸರಿಗೆ ಒತ್ತಾಯಿಸಿದೆ.

“ಪ್ರಜಾಪ್ರಭುತ್ವದಲ್ಲಿ, ಪ್ರತಿಯೊಬ್ಬ ವ್ಯಕ್ತಿಯು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಚಲಾಯಿಸುವ ಹಕ್ಕನ್ನು ಹೊಂದಿರುವಾಗ, ಇಂತಹ ಕಠಿಣ ಕಾನೂನುಗಳನ್ನು ಪತ್ರಕರ್ತರ ವಿರುದ್ಧ ಸಾಧನವಾಗಿ ಬಳಸುತ್ತಿರುವುದು ಅಸಹನೀಯವಾಗಿದೆ. ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವೆಂದು ಪರಿಗಣಿಸಲ್ಪಟ್ಟಿರುವ ಪತ್ರಕರ್ತರ ವಿರುದ್ಧ ಇಂತಹ ಕಠಿಣ ಕಾನೂನುಗಳನ್ನು ಸಾಧನವಾಗಿ ಬಳಸುವುದನ್ನು ನಿಲ್ಲಿಸಬೇಕು. ನಾವು ಜುಬೇರ್ ಜೊತೆ ನಿಲ್ಲುತ್ತೇವೆ” ಎಂದು DIGIPUB ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಗಲಭೆಗಳಿಗೆ ಪ್ರಚೋದನೆ ಆರೋಪ: ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...