Homeಮುಖಪುಟಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಆದೇಶ: ಎಡಿಟರ್ಸ್ ಗಿಲ್ಡ್ ಕಳವಳ

ಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಆದೇಶ: ಎಡಿಟರ್ಸ್ ಗಿಲ್ಡ್ ಕಳವಳ

- Advertisement -
- Advertisement -

ಅದಾನಿ ಕುರಿತ ವಿಷಯಗಳನ್ನು ತೆಗೆದು ಹಾಕುವಂತೆ ಮಾಧ್ಯಮ ಸಂಸ್ಥೆಗಳಿಗೆ ಆದೇಶ ನೀಡಿರುವ ಬಗ್ಗೆ ಪತ್ರಕರ್ತರ ಸಂಘಟನೆ ‘ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ’ ತೀವ್ರ ಕಳವಳ ವ್ಯಕ್ತಪಡಿಸಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಮಂಗಳವಾರ (ಸೆಪ್ಟೆಂಬರ್ 16) ಎರಡು ಮಾಧ್ಯಮ ಸಂಸ್ಥೆಗಳು ಮತ್ತು ಹಲವು ಯೂಟ್ಯೂಬ್ ಚಾನೆಲ್‌ಗಳಿಗೆ ನೋಟಿಸ್ ಜಾರಿ ಮಾಡಿದ್ದು, ಅದಾನಿ ಸಮೂಹವನ್ನು ಉಲ್ಲೇಖಿಸುವ ಒಟ್ಟು 138 ವಿಡಿಯೋಗಳು ಮತ್ತು 83 ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಆದೇಶಿಸಿದೆ ಎಂದು ವರದಿಯಾಗಿದೆ.

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ವಾಯುವ್ಯ ದೆಹಲಿ ಜಿಲ್ಲಾ ನ್ಯಾಯಾಲಯವು ಸೆಪ್ಟೆಂಬರ್ 6ರಂದು ಹೊರಡಿಸಿದ ಏಕಪಕ್ಷೀಯ ಆದೇಶವನ್ನು ಆಧರಿಸಿ ಈ ನಿರ್ದೇಶನ ನೀಡಲಾಗಿದೆ ಎಂದು ಮಂಗಳವಾರ ಬರೆದ ಪತ್ರದಲ್ಲಿ ಸಚಿವಾಲಯ ತಿಳಿಸಿರುವುದಾಗಿ ದಿ ವೈರ್ ವರದಿ ಮಾಡಿದೆ.

ಅಲ್ಲದೆ, ಗೌತಮ್ ಅದಾನಿ ಅವರ ಅದಾನಿ ಎಂಟರ್‌ಪ್ರೈಸಸ್ ಬಗ್ಗೆ ಮಾನನಷ್ಟಕರ ವಿಷಯಗಳನ್ನು ಪ್ರಕಟಿಸದಂತೆ ಪತ್ರಕರ್ತರಾದ ಪರಂಜೋಯ್ ಗುಹಾ ಠಾಕೂರ್ತಾ, ರವಿ ನಾಯರ್, ಅಬೀರ್ ದಾಸ್‌ಗುಪ್ತ, ಆಯಸ್ಕಾಂತ್ ದಾಸ್, ಆಯುಷ್ ಜೋಶಿ ಮತ್ತು ವೆಬ್‌ಸೈಟ್‌ಗಳಾದ ಪರಂಜೋಯ್ ಡಾಟ್ ಇನ್, ಅದಾನಿ ವಾಚ್ ಡಾಟ್ ಓಆರ್‌ಜಿ, ಮತ್ತು ಅದಾನಿ ಫೈಲ್ಸ್ ಡಾಟ್ ಕಾಮ್ ಡಾಟ್ ಎಯುಗೆ ಸೆಪ್ಟೆಂಬರ್ 6ರಂದು ನ್ಯಾಯಾಲಯ ನಿರ್ಬಂಧ ವಿಧಿಸಿದೆ ಎಂದು ಲೈವ್‌ಲಾ ವರದಿ ಮಾಡಿದೆ.

ದೆಹಲಿಯ ರೋಹಿಣಿ ನ್ಯಾಯಾಲಯದ ವಿಶೇಷ ಸಿವಿಲ್ ನ್ಯಾಯಾಧೀಶ ಅನುಜ್ ಕುಮಾರ್ ಸಿಂಗ್ ಅವರು ಅದಾನಿ ಎಂಟರ್‌ಪ್ರೈಸಸ್ ಪರವಾಗಿ ತಡೆಯಾಜ್ಞೆ ಹೊರಡಿಸಿದ್ದು, ಪ್ರತಿವಾದಿಗಳು ತಮ್ಮ ಲೇಖನಗಳು ಅಥವಾ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ವಿಷಯವನ್ನು ತೆಗೆದುಹಾಕುವಂತೆ ನಿರ್ದೇಶಿಸಿದ್ದಾರೆ ಎಂದಿದೆ.

ಮಂಗಳವಾರ ಪ್ರಕಟಣೆ ನೀಡಿರುವ ಎಡಿಟರ್ಸ್ ಗಿಲ್ಡ್, “ಅದಾನಿ ಎಂಟರ್‌ಪ್ರೈಸಸ್ Vs ಪರಂಜೋಯ್ ಗುಹಾ ಠಾಕೂರ್ತಾ ಮತ್ತು ಇತರರು ಪ್ರಕರಣದಲ್ಲಿ ರೋಹಿಣಿ ಜಿಲ್ಲಾ ನ್ಯಾಯಾಲಯವು ಇತ್ತೀಚೆಗೆ ನೀಡಿರುವ ಆದೇಶದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸುತ್ತಿದ್ದೇವೆ. ಈ ಆದೇಶವು ಒಂಬತ್ತು ಪತ್ರಕರ್ತರು, ಮಾಧ್ಯಮ ಸಂಸ್ಥೆಗಳು ಹಾಗೂ ಹೆಸರಿಸದ ಇತರರಿಗೆ ಕಂಪನಿಯ ಬಗ್ಗೆ ‘ಪರಿಶೀಲಿಸದ, ಆಧಾರರಹಿತ ಮತ್ತು ಮೇಲ್ನೋಟಕ್ಕೆ ಅವಹೇಳನಕಾರಿ’ ಎಂದು ಆರೋಪಿತ ವಿಷಯವನ್ನು ಪ್ರಕಟಿಸದಂತೆ ಅಥವಾ ಹಂಚಿಕೆ ಮಾಡದಂತೆ ‘ಜಾನ್ ಡೋ’ ಎಂಬ ತಡೆಯಾಜ್ಞೆಯನ್ನು ಏಕಪಕ್ಷೀಯವಾಗಿ ನೀಡಿದೆ” ಎಂದಿದೆ.

ಮುಂದುವರಿದು, “ಇದಕ್ಕಿಂತಲೂ ಗಂಭೀರವಾದ ವಿಷಯವೆಂದರೆ, ಈ ಆದೇಶವು ಕಾರ್ಪೊರೇಟ್ ಸಂಸ್ಥೆಗೆ (ಅದಾನಿ ಸಮೂಹ) ತಾನು ಅವಹೇಳನಕಾರಿ ಎಂದು ಭಾವಿಸುವ ಯಾವುದೇ ವಿಷಯದ ಯುಆರ್‌ಎಲ್‌ಗಳು ಮತ್ತು ಲಿಂಕ್‌ಗಳನ್ನು ಮಧ್ಯವರ್ತಿಗಳಿಗೆ ಅಥವಾ ಸರ್ಕಾರಿ ಸಂಸ್ಥೆಗಳಿಗೆ ಕಳುಹಿಸುವ ಅಧಿಕಾರವನ್ನು ನೀಡಿದೆ. ಅಂತಹ ವಿಷಯವನ್ನು 36 ಗಂಟೆಗಳ ಒಳಗೆ ತೆಗೆದುಹಾಕಲು ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳು ಕಡ್ಡಾಯವಾಗಿ ಬದ್ಧರಾಗಿರುತ್ತಾರೆ” ಎಂದು ವಿವರಿಸಿದೆ.

“ಇದೇ ರೀತಿಯ ಕಳವಳಕಾರಿ ವಿಷಯವೆಂದರೆ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯವು ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ವೇದಿಕೆಗಳಿಗೆ ನೋಟಿಸ್‌ ಜಾರಿಗೊಳಿಸಿದೆ, 138ಕ್ಕೂ ಹೆಚ್ಚು ಯೂಟ್ಯೂಬ್ ಲಿಂಕ್‌ಗಳನ್ನು ಮತ್ತು 83 ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳನ್ನು ತೆಗೆದುಹಾಕಲು ಆದೇಶಿಸಿದೆ. ಈ ಕಾರ್ಯನಿರ್ವಾಹಕ ಅಧಿಕಾರದ ವಿಸ್ತರಣೆಯು ಖಾಸಗಿ ಸಂಸ್ಥೆಗೆ ತಮ್ಮ ವ್ಯವಹಾರಕ್ಕೆ ಸಂಬಂಧಿಸಿದಂತೆ ಯಾವ ವಿಷಯವು ಅವಹೇಳನಕಾರಿ ಎಂದು ನಿರ್ಧರಿಸುವ ಅಧಿಕಾರವನ್ನು ಪರಿಣಾಮಕಾರಿಯಾಗಿ ನೀಡಿದೆ, ಇದು ವಿಷಯವನ್ನು ತೆಗೆದುಹಾಕಲು ಆದೇಶಿಸುವ ಅಧಿಕಾರವನ್ನು ವಿಸ್ತರಿಸುತ್ತದೆ” ಎಂದಿದೆ.

“ಒಂದು ಕಾರ್ಪೊರೇಟ್ ಸಂಸ್ಥೆಗೆ ಇಂತಹ ವ್ಯಾಪಕ ಅಧಿಕಾರ ನೀಡಿರುವುದು, ಜೊತೆಗೆ ಸಚಿವಾಲಯ ವಿಷಯವನ್ನು ತೆಗೆದುಹಾಕಲು ಆದೇಶ ನೀಡಿರುವುದು ಸೆನ್ಸಾರ್‌ಶಿಪ್‌ನತ್ತ ಒಂದು ಹೆಜ್ಜೆಯಾಗಿದೆ. ಇವು ಕಾನೂನುಬದ್ಧ ವರದಿಗಾರಿಕೆ, ವಿಮರ್ಶೆ ಮತ್ತು ವ್ಯಂಗ್ಯವನ್ನು ತಡೆಯುವ ಅಪಾಯವನ್ನು ಒಡ್ಡುತ್ತವೆ, ಹಾಗೂ ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ದುರ್ಬಲಗೊಳಿಸುತ್ತವೆ” ಎಂದು ಎಡಿಟರ್ಸ್ ಗಿಲ್ಡ್ ಕಳವಳ ವ್ಯಕ್ತಪಡಿಸಿದೆ.

“ಮಾನನಷ್ಟ ಆರೋಪಗಳನ್ನು ಸೂಕ್ತ ಕಾನೂನು ಪ್ರಕ್ರಿಯೆಯ ಮೂಲಕ ಪರಿಹರಿಸಬೇಕು, ಏಕಪಕ್ಷೀಯ ತಡೆಯಾಜ್ಞೆಗಳ ಮೂಲಕವಲ್ಲ. ಇವು ಪೂರ್ವ ನಿರ್ಬಂಧಕ್ಕೆ ಸಮಾನವಾಗಿರುತ್ತವೆ ಎಂದು ಎಡಿಟರ್ಸ್ ಗಿಲ್ಡ್ ನ್ಯಾಯಾಂಗಕ್ಕೆ ಮನವಿ ಮಾಡಿದೆ. ಇದಲ್ಲದೆ, ಖಾಸಗಿ ವ್ಯಾಜ್ಯಗಾರರಿಗೆ ಸಿವಿಲ್ ವಿವಾದಗಳಲ್ಲಿ ಕಾರ್ಯಗತಗೊಳಿಸುವ ಶಕ್ತಿಯಾಗಿ ಕಾರ್ಯನಿರ್ವಹಿಸದಂತೆ ಸರ್ಕಾರವು ಅತ್ಯಂತ ಸಂಯಮವನ್ನು ವಹಿಸಬೇಕೆಂದು ಗಿಲ್ಡ್ ಕರೆ ನೀಡಿದೆ.

“ಸ್ವತಂತ್ರ ಮತ್ತು ನಿರ್ಭೀತ ಪತ್ರಿಕಾ ವ್ಯವಸ್ಥೆಯು ಪ್ರಜಾಪ್ರಭುತ್ವಕ್ಕೆ ಅತ್ಯಗತ್ಯವಾಗಿದೆ. ಖಾಸಗಿ ಹಿತಾಸಕ್ತಿಗಳಿಗೆ ಏಕಪಕ್ಷೀಯವಾಗಿ ಟೀಕಾತ್ಮಕ ಅಥವಾ ಅನಾನುಕೂಲಕರ ಧ್ವನಿಗಳನ್ನು ಮೌನಗೊಳಿಸಲು ಅವಕಾಶ ನೀಡುವ ಯಾವುದೇ ವ್ಯವಸ್ಥೆಯು, ಸಾರ್ವಜನಿಕರಿಗೆ ತಿಳಿಯುವ ಹಕ್ಕಿಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆ” ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಹೇಳಿದೆ.

ಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....