Homeಮುಖಪುಟಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಆದೇಶ: ಎಡಿಟರ್ಸ್ ಗಿಲ್ಡ್ ಕಳವಳ

ಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಆದೇಶ: ಎಡಿಟರ್ಸ್ ಗಿಲ್ಡ್ ಕಳವಳ

- Advertisement -
- Advertisement -

ಅದಾನಿ ಕುರಿತ ವಿಷಯಗಳನ್ನು ತೆಗೆದು ಹಾಕುವಂತೆ ಮಾಧ್ಯಮ ಸಂಸ್ಥೆಗಳಿಗೆ ಆದೇಶ ನೀಡಿರುವ ಬಗ್ಗೆ ಪತ್ರಕರ್ತರ ಸಂಘಟನೆ ‘ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ’ ತೀವ್ರ ಕಳವಳ ವ್ಯಕ್ತಪಡಿಸಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಮಂಗಳವಾರ (ಸೆಪ್ಟೆಂಬರ್ 16) ಎರಡು ಮಾಧ್ಯಮ ಸಂಸ್ಥೆಗಳು ಮತ್ತು ಹಲವು ಯೂಟ್ಯೂಬ್ ಚಾನೆಲ್‌ಗಳಿಗೆ ನೋಟಿಸ್ ಜಾರಿ ಮಾಡಿದ್ದು, ಅದಾನಿ ಸಮೂಹವನ್ನು ಉಲ್ಲೇಖಿಸುವ ಒಟ್ಟು 138 ವಿಡಿಯೋಗಳು ಮತ್ತು 83 ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಆದೇಶಿಸಿದೆ ಎಂದು ವರದಿಯಾಗಿದೆ.

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ವಾಯುವ್ಯ ದೆಹಲಿ ಜಿಲ್ಲಾ ನ್ಯಾಯಾಲಯವು ಸೆಪ್ಟೆಂಬರ್ 6ರಂದು ಹೊರಡಿಸಿದ ಏಕಪಕ್ಷೀಯ ಆದೇಶವನ್ನು ಆಧರಿಸಿ ಈ ನಿರ್ದೇಶನ ನೀಡಲಾಗಿದೆ ಎಂದು ಮಂಗಳವಾರ ಬರೆದ ಪತ್ರದಲ್ಲಿ ಸಚಿವಾಲಯ ತಿಳಿಸಿರುವುದಾಗಿ ದಿ ವೈರ್ ವರದಿ ಮಾಡಿದೆ.

ಅಲ್ಲದೆ, ಗೌತಮ್ ಅದಾನಿ ಅವರ ಅದಾನಿ ಎಂಟರ್‌ಪ್ರೈಸಸ್ ಬಗ್ಗೆ ಮಾನನಷ್ಟಕರ ವಿಷಯಗಳನ್ನು ಪ್ರಕಟಿಸದಂತೆ ಪತ್ರಕರ್ತರಾದ ಪರಂಜೋಯ್ ಗುಹಾ ಠಾಕೂರ್ತಾ, ರವಿ ನಾಯರ್, ಅಬೀರ್ ದಾಸ್‌ಗುಪ್ತ, ಆಯಸ್ಕಾಂತ್ ದಾಸ್, ಆಯುಷ್ ಜೋಶಿ ಮತ್ತು ವೆಬ್‌ಸೈಟ್‌ಗಳಾದ ಪರಂಜೋಯ್ ಡಾಟ್ ಇನ್, ಅದಾನಿ ವಾಚ್ ಡಾಟ್ ಓಆರ್‌ಜಿ, ಮತ್ತು ಅದಾನಿ ಫೈಲ್ಸ್ ಡಾಟ್ ಕಾಮ್ ಡಾಟ್ ಎಯುಗೆ ಸೆಪ್ಟೆಂಬರ್ 6ರಂದು ನ್ಯಾಯಾಲಯ ನಿರ್ಬಂಧ ವಿಧಿಸಿದೆ ಎಂದು ಲೈವ್‌ಲಾ ವರದಿ ಮಾಡಿದೆ.

ದೆಹಲಿಯ ರೋಹಿಣಿ ನ್ಯಾಯಾಲಯದ ವಿಶೇಷ ಸಿವಿಲ್ ನ್ಯಾಯಾಧೀಶ ಅನುಜ್ ಕುಮಾರ್ ಸಿಂಗ್ ಅವರು ಅದಾನಿ ಎಂಟರ್‌ಪ್ರೈಸಸ್ ಪರವಾಗಿ ತಡೆಯಾಜ್ಞೆ ಹೊರಡಿಸಿದ್ದು, ಪ್ರತಿವಾದಿಗಳು ತಮ್ಮ ಲೇಖನಗಳು ಅಥವಾ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ವಿಷಯವನ್ನು ತೆಗೆದುಹಾಕುವಂತೆ ನಿರ್ದೇಶಿಸಿದ್ದಾರೆ ಎಂದಿದೆ.

ಮಂಗಳವಾರ ಪ್ರಕಟಣೆ ನೀಡಿರುವ ಎಡಿಟರ್ಸ್ ಗಿಲ್ಡ್, “ಅದಾನಿ ಎಂಟರ್‌ಪ್ರೈಸಸ್ Vs ಪರಂಜೋಯ್ ಗುಹಾ ಠಾಕೂರ್ತಾ ಮತ್ತು ಇತರರು ಪ್ರಕರಣದಲ್ಲಿ ರೋಹಿಣಿ ಜಿಲ್ಲಾ ನ್ಯಾಯಾಲಯವು ಇತ್ತೀಚೆಗೆ ನೀಡಿರುವ ಆದೇಶದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸುತ್ತಿದ್ದೇವೆ. ಈ ಆದೇಶವು ಒಂಬತ್ತು ಪತ್ರಕರ್ತರು, ಮಾಧ್ಯಮ ಸಂಸ್ಥೆಗಳು ಹಾಗೂ ಹೆಸರಿಸದ ಇತರರಿಗೆ ಕಂಪನಿಯ ಬಗ್ಗೆ ‘ಪರಿಶೀಲಿಸದ, ಆಧಾರರಹಿತ ಮತ್ತು ಮೇಲ್ನೋಟಕ್ಕೆ ಅವಹೇಳನಕಾರಿ’ ಎಂದು ಆರೋಪಿತ ವಿಷಯವನ್ನು ಪ್ರಕಟಿಸದಂತೆ ಅಥವಾ ಹಂಚಿಕೆ ಮಾಡದಂತೆ ‘ಜಾನ್ ಡೋ’ ಎಂಬ ತಡೆಯಾಜ್ಞೆಯನ್ನು ಏಕಪಕ್ಷೀಯವಾಗಿ ನೀಡಿದೆ” ಎಂದಿದೆ.

ಮುಂದುವರಿದು, “ಇದಕ್ಕಿಂತಲೂ ಗಂಭೀರವಾದ ವಿಷಯವೆಂದರೆ, ಈ ಆದೇಶವು ಕಾರ್ಪೊರೇಟ್ ಸಂಸ್ಥೆಗೆ (ಅದಾನಿ ಸಮೂಹ) ತಾನು ಅವಹೇಳನಕಾರಿ ಎಂದು ಭಾವಿಸುವ ಯಾವುದೇ ವಿಷಯದ ಯುಆರ್‌ಎಲ್‌ಗಳು ಮತ್ತು ಲಿಂಕ್‌ಗಳನ್ನು ಮಧ್ಯವರ್ತಿಗಳಿಗೆ ಅಥವಾ ಸರ್ಕಾರಿ ಸಂಸ್ಥೆಗಳಿಗೆ ಕಳುಹಿಸುವ ಅಧಿಕಾರವನ್ನು ನೀಡಿದೆ. ಅಂತಹ ವಿಷಯವನ್ನು 36 ಗಂಟೆಗಳ ಒಳಗೆ ತೆಗೆದುಹಾಕಲು ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳು ಕಡ್ಡಾಯವಾಗಿ ಬದ್ಧರಾಗಿರುತ್ತಾರೆ” ಎಂದು ವಿವರಿಸಿದೆ.

“ಇದೇ ರೀತಿಯ ಕಳವಳಕಾರಿ ವಿಷಯವೆಂದರೆ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯವು ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ವೇದಿಕೆಗಳಿಗೆ ನೋಟಿಸ್‌ ಜಾರಿಗೊಳಿಸಿದೆ, 138ಕ್ಕೂ ಹೆಚ್ಚು ಯೂಟ್ಯೂಬ್ ಲಿಂಕ್‌ಗಳನ್ನು ಮತ್ತು 83 ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳನ್ನು ತೆಗೆದುಹಾಕಲು ಆದೇಶಿಸಿದೆ. ಈ ಕಾರ್ಯನಿರ್ವಾಹಕ ಅಧಿಕಾರದ ವಿಸ್ತರಣೆಯು ಖಾಸಗಿ ಸಂಸ್ಥೆಗೆ ತಮ್ಮ ವ್ಯವಹಾರಕ್ಕೆ ಸಂಬಂಧಿಸಿದಂತೆ ಯಾವ ವಿಷಯವು ಅವಹೇಳನಕಾರಿ ಎಂದು ನಿರ್ಧರಿಸುವ ಅಧಿಕಾರವನ್ನು ಪರಿಣಾಮಕಾರಿಯಾಗಿ ನೀಡಿದೆ, ಇದು ವಿಷಯವನ್ನು ತೆಗೆದುಹಾಕಲು ಆದೇಶಿಸುವ ಅಧಿಕಾರವನ್ನು ವಿಸ್ತರಿಸುತ್ತದೆ” ಎಂದಿದೆ.

“ಒಂದು ಕಾರ್ಪೊರೇಟ್ ಸಂಸ್ಥೆಗೆ ಇಂತಹ ವ್ಯಾಪಕ ಅಧಿಕಾರ ನೀಡಿರುವುದು, ಜೊತೆಗೆ ಸಚಿವಾಲಯ ವಿಷಯವನ್ನು ತೆಗೆದುಹಾಕಲು ಆದೇಶ ನೀಡಿರುವುದು ಸೆನ್ಸಾರ್‌ಶಿಪ್‌ನತ್ತ ಒಂದು ಹೆಜ್ಜೆಯಾಗಿದೆ. ಇವು ಕಾನೂನುಬದ್ಧ ವರದಿಗಾರಿಕೆ, ವಿಮರ್ಶೆ ಮತ್ತು ವ್ಯಂಗ್ಯವನ್ನು ತಡೆಯುವ ಅಪಾಯವನ್ನು ಒಡ್ಡುತ್ತವೆ, ಹಾಗೂ ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ದುರ್ಬಲಗೊಳಿಸುತ್ತವೆ” ಎಂದು ಎಡಿಟರ್ಸ್ ಗಿಲ್ಡ್ ಕಳವಳ ವ್ಯಕ್ತಪಡಿಸಿದೆ.

“ಮಾನನಷ್ಟ ಆರೋಪಗಳನ್ನು ಸೂಕ್ತ ಕಾನೂನು ಪ್ರಕ್ರಿಯೆಯ ಮೂಲಕ ಪರಿಹರಿಸಬೇಕು, ಏಕಪಕ್ಷೀಯ ತಡೆಯಾಜ್ಞೆಗಳ ಮೂಲಕವಲ್ಲ. ಇವು ಪೂರ್ವ ನಿರ್ಬಂಧಕ್ಕೆ ಸಮಾನವಾಗಿರುತ್ತವೆ ಎಂದು ಎಡಿಟರ್ಸ್ ಗಿಲ್ಡ್ ನ್ಯಾಯಾಂಗಕ್ಕೆ ಮನವಿ ಮಾಡಿದೆ. ಇದಲ್ಲದೆ, ಖಾಸಗಿ ವ್ಯಾಜ್ಯಗಾರರಿಗೆ ಸಿವಿಲ್ ವಿವಾದಗಳಲ್ಲಿ ಕಾರ್ಯಗತಗೊಳಿಸುವ ಶಕ್ತಿಯಾಗಿ ಕಾರ್ಯನಿರ್ವಹಿಸದಂತೆ ಸರ್ಕಾರವು ಅತ್ಯಂತ ಸಂಯಮವನ್ನು ವಹಿಸಬೇಕೆಂದು ಗಿಲ್ಡ್ ಕರೆ ನೀಡಿದೆ.

“ಸ್ವತಂತ್ರ ಮತ್ತು ನಿರ್ಭೀತ ಪತ್ರಿಕಾ ವ್ಯವಸ್ಥೆಯು ಪ್ರಜಾಪ್ರಭುತ್ವಕ್ಕೆ ಅತ್ಯಗತ್ಯವಾಗಿದೆ. ಖಾಸಗಿ ಹಿತಾಸಕ್ತಿಗಳಿಗೆ ಏಕಪಕ್ಷೀಯವಾಗಿ ಟೀಕಾತ್ಮಕ ಅಥವಾ ಅನಾನುಕೂಲಕರ ಧ್ವನಿಗಳನ್ನು ಮೌನಗೊಳಿಸಲು ಅವಕಾಶ ನೀಡುವ ಯಾವುದೇ ವ್ಯವಸ್ಥೆಯು, ಸಾರ್ವಜನಿಕರಿಗೆ ತಿಳಿಯುವ ಹಕ್ಕಿಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆ” ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಹೇಳಿದೆ.

ಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...