Homeಮುಖಪುಟಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ಈ ನಿಮ್ಮ ಪತ್ರಿಕಾ ಧರ್ಮ, ಪವರ್ ಟಿವಿ ಮೇಲೆ ಸರ್ಕಾರ ಪ್ರಹಾರ ಮಾಡಿದಾಗ ಎಲ್ಲಿ ಹೋಗಿತ್ತು ಸಾರ್!? ಎಂದು ಕುಮಾರಸ್ವಾಮಿ ಎಂಬುವವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯವರನ್ನು ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ನಿನ್ನೆ ಬಂಧಿಸಿರುವುದು ಸರಿಯಷ್ಟೇ. ಅಲ್ಲದೇ ನ್ಯಾಯಾಲಯ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಹೈಕೋರ್ಟ್ ಸಹ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಈ ಸಂದರ್ಭದಲ್ಲಿ ದೇಶಾದ್ಯಂತ ಬಿಜೆಪಿ ಇದು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಖಂಡಿಸಿದೆ. ಅದೇ ರೀತಿಯಲ್ಲಿ ಎಡಿಟರ್ ಗಿಲ್ಡ್ ಆಫ್ ಬೆಂಗಳೂರು ಎಂಬ ಪತ್ರಕರ್ತರ ಸಂಘ ಅರ್ನಾಬ್ ಮೇಲಿನ ದಾಳಿ ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಟ್ರೋಲ್ ಗೊಳಗಾಗಿದೆ.

ಅರ್ನಾಬ್ ಗೋಸ್ವಾಮಿ ಬಂಧಿತನಾಗಿರುವುದು ಟಿವಿಯಲ್ಲಿ ಪ್ರಸಾರ ಮಾಡಿದ ಸ್ಟೋರಿಯ ಕಾರಣದಿಂದಲ್ಲ. ತನಗೆ ಕೆಲಸ ಮಾಡಿಕೊಟ್ಟ ವ್ಯಕ್ತಿಗೆ ಕೋಟ್ಯಾಂತರ ರೂ ವಂಚಿಸಿ, ಪ್ರಭಾವ ಬಳಸಿ ತಪ್ಪಿಸಿಕೊಂಡು, ಆತ್ಮಹತ್ಯೆಗೆ ಕಾರಣನಾದ ಕ್ರಿಮಿನಲ್ ಪ್ರಕರಣದಲ್ಲಿ… ಇಷ್ಟು ಗೊತ್ತಿಲ್ಲದ ಇವರೆಂಥ ಪತ್ರಕರ್ತರು ಎಂದು ಎಡಿಟರ್ ಗಿಲ್ಡ್‌ ವಿರುದ್ಧ ಟೀಕೆ ವ್ಯಕ್ತವಾಗಿದೆ.

ಈ Editors Guild of Bengaluru ನ ಸದಸ್ಯರು ನೋಡಿ!! ಭಾಜಪದ ವಿ.ಪ್ರ. ಸಭೆ ಇದ್ದಂಗಿದೆ. ಇವರು ಈ ಹಿಂದೆ ಪತ್ರಕರ್ತರ ಮೇಲೆ ಧಾಳಿ ಆದಾಗ, ಬಂಧನವಾದಾಗ ಉಸಿರೆತ್ತಿದ ದಾಖಲೆ ಇಲ್ಲ. ಈಗ ಈ ಗರ್ನಾಲ್ ಆಸಾಮಿ ತನ್ನ ಧೂರ್ತ ಹಣಕಾಸು ವ್ಯವಹಾರದ ಮೂಲಕ ವಾಸ್ತುಶಿಲ್ಪಯೊಬ್ಬನನ್ನು ಆತ್ಮಹತ್ಯೆಗೆ ದೂಡಿದ್ದು ಇವರಿಗೆ ಪತ್ರಿಕಾ ಸ್ವಾತಂತ್ರ್ಯತರ ಕಂಡಿದೆ!!! ಲಜ್ಜೆಗೆಟ್ಟು HMV ಆಗೋದು ಹೀಗೆ ಎಂದು ಸುರೇಶ್ ಕಂಜಾರ್ಪಣೆಯವರು ವ್ಯಂಗ್ಯವಾಡಿದ್ದಾರೆ.

ತಿಂಗಳ ಹಿಂದೆ ಪವರ್ ಟಿವಿ ಮೇಲೆ ದಾಳಿಯಾದಾಗ ಬೆಂಗಳೂರು ಎಡಿಟರ್ಸ್ ಗಿಲ್ಡ್ ಇಂತಹದೊಂದು ಪತ್ರಿಕಾ ಪ್ರಕಟಣೆ ಹೊರಡಿಸಿತ್ತಾ? ನನ್ನ ಗಮನಕ್ಕೆ ಬಂದಿಲ್ಲ. ಅಲ್ಲೂ ಹಳೆಯ‌ ಪ್ರಕರಣ ಸಂಬಂಧ ದಾಳಿ ನಡೆದಿತ್ತು. ಲೈವ್ ಕೊಡದಂತೆ ಚಾನೆಲ್ಲಿನ ಸರ್ವರ್‌ ಅನ್ನೇ ಸಿಸಿಬಿಯವರು ಕೊಂಡೊಯ್ದಿದ್ದರು.
ಅರ್ನಬ್ ನ ಬಂಧನ ಹಣವಂಚನೆ ಮತ್ತು ಆತ್ಮಹತ್ಯೆಗೆ ಪ್ರೇರಣೆ ನೀಡಿದ ಪ್ರಕರಣ. ಇದು ಯಾವ ಆ್ಯಂಗಲ್ ನಲ್ಲಿ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಹಲ್ಲೆ ಎಂಬುದನ್ನು ಬಹುಮಾನ್ಯ ಕನ್ನಡದ ಸಂಪಾದಕರು ಸಂಪಾದಕೀಯ ಬರೆದು ವಿವರಿಸಿದ್ರೆ ತಿಳಿದುಕೊಳ್ಳಬಹುದಿತ್ತು ಎಂದು ಪತ್ರಕರ್ತೆ ಹೇಮಾವತಿ ವೆಂಕಟ್ ಪ್ರಶ್ನಿಸಿದ್ದಾರೆ.

ಇನ್ನು ಗಿಲ್ಡ್‌ನ ಅಧ್ಯಕ್ಷರೆಂದು ಘೋಷಿಸಿಕೊಂಡಿರುವ ವಿಶ್ವೇಶ್ವರ ಭಟ್ ತಮ್ಮ ಫೇಸ್‌ಬುಕ್‌ನಲ್ಲಿ ಈ ಖಂಡನಾ ಪತ್ರವನ್ನು ಹಂಚಿಕೊಂಡಿದ್ದಾರೆ. ಅಲ್ಲಿ ನೂರಾರು ಜನ ಪ್ರತಿಕ್ರಿಯಿಸಿದ್ದು ಟ್ರೋಲ್ ಮಾಡಿದ್ದಾರೆ.

ಭಟ್ಟರೇ ಆರ್ನಬ್ ಸಹ ನಿನ್ನ ತರಹ ಒಂದು ಪಕ್ಷದ ಏಜೆಂಟ್, ಅಂತಹ ವ್ಯಕ್ತಿಯಿಂದ ನಾವು ಸಮಾಜಕ್ಕೆ ಏನನ್ನು ನಿರೀಕ್ಷಿಸಲು ಸಾಧ್ಯ, ಒಂದು ಪಕ್ಷಕ್ಕೆ ಯಾವುದೇ ವ್ಯಕ್ತಿ ಸೀಮಿತನಾಗಿದ್ದರೆ , ಅಥವಾ ಒಂದು ಪಕ್ಷದ ಓಲೈಕೆ ಮಾಡುತ್ತಿದ್ದರೆ ಅದು ಯಾವ ಪತ್ರಿಕಾ ಧರ್ಮ ಹೇಳುವಿರ? ಎಂದು ರವಿಶಂಕರ್ ಎಂಬುವವರ ಪ್ರಶ್ನಿಸಿದ್ದಾರೆ.

ಈ ನಿಮ್ಮ ಪತ್ರಿಕಾ ಧರ್ಮ, ಪವರ್ ಟಿವಿ ಮೇಲೆ ಸರ್ಕಾರ ಪ್ರಹಾರ ಮಾಡಿದಾಗ ಎಲ್ಲಿ ಹೋಗಿತ್ತು ಸಾರ್……..!? ಎಂದು ಕುಮಾರಸ್ವಾಮಿ ಎಂಬುವವರು ಪ್ರಶ್ನಿಸಿದ್ದಾರೆ.

ಈ ಖಂಡನಾ ಪತ್ರಕ್ಕೆ ಸಹಿ ಮಾಡಿದ ಸಂಪಾದಕರು ತಮ್ಮ ಪತ್ರಿಕೆಗಳಲ್ಲಿ ಇಲ್ಲಿ ಬಂದಿರುವ ಎಲ್ಲ ಪ್ರತಿಕ್ರಿಯೆಗಳನ್ನು ಪ್ರಕಟಿಸಲು ನಿಮಗೆ ಸಾಧ್ಯವಾಗುತ್ತದೆಯೇ? ಕುಶ್ವಂತ್ ಸಿಂಗ್ ಮತ್ತು ವಿನೋದ್ ಮೆಹ್ತಾ ಅವರಂತಹ ಸಂಪಾದಕರು ಇದನ್ನು ಮಾಡಿದ್ದಾರೆ. ಆಗ ಮಾತ್ರ ಪತ್ರಿಕೋದ್ಯಮದ ನಿಮ್ಮ ಬದ್ದತೆ ತಿಳಿಯುತ್ತದೆ ಎಂದು ವಿಠ್ಠಲ್ ಶೆಟ್ಟಿ ಎಂಬುವವರು ಸವಾಲು ಹಾಕಿದ್ದಾರೆ.

ಕರ್ನಾಟಕ ಎಡಿಟರ್ಸ್ ಗಿಲ್ಡ್‌ನವರು ಗೌರಿ ಲಂಕೇಶರ ಹತ್ಯೆಯನ್ನು ಖಂಡಿಸಿ ಇಂತಹ ಹೇಳಿಕೆಯನ್ನೇನಾದರೂ ಕೊಟ್ಟಿದ್ದರೆ? ಆಗ ಅದು ಅಸ್ತಿತ್ವದಲ್ಲಿ ಇತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಆ ಸಂದರ್ಭದಲ್ಲಿ ನೀಚ ಬರಹವನ್ನು ಬರೆದ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಇಂತಹ ಹೇಳಿಕೆ ನೀಡಲು ನಿಮಗೆ ಒಪ್ಪಿಗೆಯಿದೆಯಾ ಎಂದು ಮಿಕ್ಕವರನ್ನು ಕೇಳುವುದೂ ಇಲ್ಲ. ಆದರೆ ಪ್ರಜಾವಾಣಿಯ ಸಂಪಾದಕರಿಂದ ಅಂತಹದೊಂದು ಸ್ಪಷ್ಟೀಕರಣವನ್ನು ಕೇಳಬೇಕಿದೆ ಎಂದು ನ್ಯಾಯಪಥ ಪತ್ರಿಕೆಯ ಸಂಪಾದಕರಾದ ಡಾ.ಎಚ್.ವಿ ವಾಸುರವರು ಅಭಿಪ್ರಾಯಪಟ್ಟಿದ್ದಾರೆ.

ಇದರಲ್ಲಿ ಪತ್ರಿಕಾ ಸ್ವಾತಂತ್ರ್ಯದ ಹರಣ ಎಲ್ಲಿ ಬರುತ್ತೆ? ಕಳೆದಬಾರಿ ತನ್ನ ಪತ್ರಿಕೆಯಲ್ಲಿ ಈ ಹಿಂದೆ ಕೆಲಸ ಮಾಡುತಿದ್ದ ವರದಿಗಾರ ಸುನೀಲ್ ಹೆಗ್ಗರವಳಿ ಎಂಬವರ ಹತ್ಯೆಗೆ ಸುಫಾರಿ ನೀಡಿದ್ದಾರೆ ಎಂಬ ಆರೋಪದಡಿಯಲ್ಲಿ ರವಿ ಬೆಳಗೆರೆಯನ್ನು ಕರ್ನಾಟಕ ಪೋಲೀಸರು ಬಂಧಿಸಿದ್ದಿಲ್ವಾ? ಆವಾಗ ಯಾರಾದ್ರೂ ಅದು ಪತ್ರಕರ್ತರ ಮೇಲಿನ ಹಲ್ಲೆ, ಪತ್ರಿಕಾ ಸ್ವಾತಂತ್ರ್ಯದ ಹರಣ ಎಂದೆಲ್ಲಾ ಬೆಳಗೆರೆ ಪರ ನಿಂತಿದ್ದರೇ? ಟಿಆರ್ಪಿ ಕೇಸ್ ಬೇರೆಯದ್ದೇ. ಅದರಲ್ಲಿ ಏನಾಗುತ್ತದೆಯೆಂದು ಇನ್ನೂ ಗೊತ್ತಿಲ್ಲ. ಆದರೆ ಈಗಿರುವುದು ಕ್ರಿಮಿನಲ್ ಪ್ರಕರಣ. ವಂಚನೆ ಹಾಗೂ ಆತ್ಮಹತ್ಯೆಗೆ ಪ್ರೇರಣೆಯ ಆರೋಪ. ಆರೋಪವನ್ನು ಮಾಡಿದವರು ಆತ್ಮಹತ್ಯೆಗೈದ ವ್ಯಕ್ತಿಯ ಮಗಳು ಹಾಗೂ ಹೆಂಡತಿ. ಪ್ರಕರಣ ನಡೆದದ್ದು ಬಿಜೆಪಿ-ಶಿವಸೇನೆ ಸರಕಾರವಿದ್ದಾಗ. ಮೊದಲ ಎಫ್‍ಐ‍ಆರ್ ಆಗಿದ್ದೂ ಆವಾಗ್ಲೇ. ಆರು ತಿಂಗಳ ಹಿಂದೆ ಸಂತ್ರಸ್ತ ಕುಟುಂಬ ಪ್ರಕರಣವನ್ನು ಪುನಃ ತನಿಖೆ ಮಾಡಬೇಕೆಂದು ಕೇಳಿಕೊಂಡಿತ್ತು ಹಾಗೂ ಆಗಲೇ ಗೃಹಮಂತ್ರಿ ತನಿಖೆ ನಡೆಸುವುದಾಗಿಯೂ ಹೇಳಿದ್ದರು. ಇದರಲ್ಲಿ ಪತ್ರಿಕಾ ಸ್ವಾತಂತ್ರ್ಯ ಎಲ್ಲಿಂದ ಬಂತು? ಎಂದು ಅಲ್ಮೆಡ ಗ್ಲಾಡ್‌ಸನ್‌ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಅರ್ನಾಬ್ ಬಂಧನ: ಸಾಮಾಜಿಕ ಮಾಧ್ಯಮಗಳಲ್ಲಿ ಭುಗಿಲೆದ್ದ ಪರ-ವಿರೋಧದ ಚರ್ಚೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...