Homeಮುಖಪುಟಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ಈ ನಿಮ್ಮ ಪತ್ರಿಕಾ ಧರ್ಮ, ಪವರ್ ಟಿವಿ ಮೇಲೆ ಸರ್ಕಾರ ಪ್ರಹಾರ ಮಾಡಿದಾಗ ಎಲ್ಲಿ ಹೋಗಿತ್ತು ಸಾರ್!? ಎಂದು ಕುಮಾರಸ್ವಾಮಿ ಎಂಬುವವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯವರನ್ನು ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ನಿನ್ನೆ ಬಂಧಿಸಿರುವುದು ಸರಿಯಷ್ಟೇ. ಅಲ್ಲದೇ ನ್ಯಾಯಾಲಯ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಹೈಕೋರ್ಟ್ ಸಹ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಈ ಸಂದರ್ಭದಲ್ಲಿ ದೇಶಾದ್ಯಂತ ಬಿಜೆಪಿ ಇದು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಖಂಡಿಸಿದೆ. ಅದೇ ರೀತಿಯಲ್ಲಿ ಎಡಿಟರ್ ಗಿಲ್ಡ್ ಆಫ್ ಬೆಂಗಳೂರು ಎಂಬ ಪತ್ರಕರ್ತರ ಸಂಘ ಅರ್ನಾಬ್ ಮೇಲಿನ ದಾಳಿ ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಟ್ರೋಲ್ ಗೊಳಗಾಗಿದೆ.

ಅರ್ನಾಬ್ ಗೋಸ್ವಾಮಿ ಬಂಧಿತನಾಗಿರುವುದು ಟಿವಿಯಲ್ಲಿ ಪ್ರಸಾರ ಮಾಡಿದ ಸ್ಟೋರಿಯ ಕಾರಣದಿಂದಲ್ಲ. ತನಗೆ ಕೆಲಸ ಮಾಡಿಕೊಟ್ಟ ವ್ಯಕ್ತಿಗೆ ಕೋಟ್ಯಾಂತರ ರೂ ವಂಚಿಸಿ, ಪ್ರಭಾವ ಬಳಸಿ ತಪ್ಪಿಸಿಕೊಂಡು, ಆತ್ಮಹತ್ಯೆಗೆ ಕಾರಣನಾದ ಕ್ರಿಮಿನಲ್ ಪ್ರಕರಣದಲ್ಲಿ… ಇಷ್ಟು ಗೊತ್ತಿಲ್ಲದ ಇವರೆಂಥ ಪತ್ರಕರ್ತರು ಎಂದು ಎಡಿಟರ್ ಗಿಲ್ಡ್‌ ವಿರುದ್ಧ ಟೀಕೆ ವ್ಯಕ್ತವಾಗಿದೆ.

ಈ Editors Guild of Bengaluru ನ ಸದಸ್ಯರು ನೋಡಿ!! ಭಾಜಪದ ವಿ.ಪ್ರ. ಸಭೆ ಇದ್ದಂಗಿದೆ. ಇವರು ಈ ಹಿಂದೆ ಪತ್ರಕರ್ತರ ಮೇಲೆ ಧಾಳಿ ಆದಾಗ, ಬಂಧನವಾದಾಗ ಉಸಿರೆತ್ತಿದ ದಾಖಲೆ ಇಲ್ಲ. ಈಗ ಈ ಗರ್ನಾಲ್ ಆಸಾಮಿ ತನ್ನ ಧೂರ್ತ ಹಣಕಾಸು ವ್ಯವಹಾರದ ಮೂಲಕ ವಾಸ್ತುಶಿಲ್ಪಯೊಬ್ಬನನ್ನು ಆತ್ಮಹತ್ಯೆಗೆ ದೂಡಿದ್ದು ಇವರಿಗೆ ಪತ್ರಿಕಾ ಸ್ವಾತಂತ್ರ್ಯತರ ಕಂಡಿದೆ!!! ಲಜ್ಜೆಗೆಟ್ಟು HMV ಆಗೋದು ಹೀಗೆ ಎಂದು ಸುರೇಶ್ ಕಂಜಾರ್ಪಣೆಯವರು ವ್ಯಂಗ್ಯವಾಡಿದ್ದಾರೆ.

ತಿಂಗಳ ಹಿಂದೆ ಪವರ್ ಟಿವಿ ಮೇಲೆ ದಾಳಿಯಾದಾಗ ಬೆಂಗಳೂರು ಎಡಿಟರ್ಸ್ ಗಿಲ್ಡ್ ಇಂತಹದೊಂದು ಪತ್ರಿಕಾ ಪ್ರಕಟಣೆ ಹೊರಡಿಸಿತ್ತಾ? ನನ್ನ ಗಮನಕ್ಕೆ ಬಂದಿಲ್ಲ. ಅಲ್ಲೂ ಹಳೆಯ‌ ಪ್ರಕರಣ ಸಂಬಂಧ ದಾಳಿ ನಡೆದಿತ್ತು. ಲೈವ್ ಕೊಡದಂತೆ ಚಾನೆಲ್ಲಿನ ಸರ್ವರ್‌ ಅನ್ನೇ ಸಿಸಿಬಿಯವರು ಕೊಂಡೊಯ್ದಿದ್ದರು.
ಅರ್ನಬ್ ನ ಬಂಧನ ಹಣವಂಚನೆ ಮತ್ತು ಆತ್ಮಹತ್ಯೆಗೆ ಪ್ರೇರಣೆ ನೀಡಿದ ಪ್ರಕರಣ. ಇದು ಯಾವ ಆ್ಯಂಗಲ್ ನಲ್ಲಿ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಹಲ್ಲೆ ಎಂಬುದನ್ನು ಬಹುಮಾನ್ಯ ಕನ್ನಡದ ಸಂಪಾದಕರು ಸಂಪಾದಕೀಯ ಬರೆದು ವಿವರಿಸಿದ್ರೆ ತಿಳಿದುಕೊಳ್ಳಬಹುದಿತ್ತು ಎಂದು ಪತ್ರಕರ್ತೆ ಹೇಮಾವತಿ ವೆಂಕಟ್ ಪ್ರಶ್ನಿಸಿದ್ದಾರೆ.

ಇನ್ನು ಗಿಲ್ಡ್‌ನ ಅಧ್ಯಕ್ಷರೆಂದು ಘೋಷಿಸಿಕೊಂಡಿರುವ ವಿಶ್ವೇಶ್ವರ ಭಟ್ ತಮ್ಮ ಫೇಸ್‌ಬುಕ್‌ನಲ್ಲಿ ಈ ಖಂಡನಾ ಪತ್ರವನ್ನು ಹಂಚಿಕೊಂಡಿದ್ದಾರೆ. ಅಲ್ಲಿ ನೂರಾರು ಜನ ಪ್ರತಿಕ್ರಿಯಿಸಿದ್ದು ಟ್ರೋಲ್ ಮಾಡಿದ್ದಾರೆ.

ಭಟ್ಟರೇ ಆರ್ನಬ್ ಸಹ ನಿನ್ನ ತರಹ ಒಂದು ಪಕ್ಷದ ಏಜೆಂಟ್, ಅಂತಹ ವ್ಯಕ್ತಿಯಿಂದ ನಾವು ಸಮಾಜಕ್ಕೆ ಏನನ್ನು ನಿರೀಕ್ಷಿಸಲು ಸಾಧ್ಯ, ಒಂದು ಪಕ್ಷಕ್ಕೆ ಯಾವುದೇ ವ್ಯಕ್ತಿ ಸೀಮಿತನಾಗಿದ್ದರೆ , ಅಥವಾ ಒಂದು ಪಕ್ಷದ ಓಲೈಕೆ ಮಾಡುತ್ತಿದ್ದರೆ ಅದು ಯಾವ ಪತ್ರಿಕಾ ಧರ್ಮ ಹೇಳುವಿರ? ಎಂದು ರವಿಶಂಕರ್ ಎಂಬುವವರ ಪ್ರಶ್ನಿಸಿದ್ದಾರೆ.

ಈ ನಿಮ್ಮ ಪತ್ರಿಕಾ ಧರ್ಮ, ಪವರ್ ಟಿವಿ ಮೇಲೆ ಸರ್ಕಾರ ಪ್ರಹಾರ ಮಾಡಿದಾಗ ಎಲ್ಲಿ ಹೋಗಿತ್ತು ಸಾರ್……..!? ಎಂದು ಕುಮಾರಸ್ವಾಮಿ ಎಂಬುವವರು ಪ್ರಶ್ನಿಸಿದ್ದಾರೆ.

ಈ ಖಂಡನಾ ಪತ್ರಕ್ಕೆ ಸಹಿ ಮಾಡಿದ ಸಂಪಾದಕರು ತಮ್ಮ ಪತ್ರಿಕೆಗಳಲ್ಲಿ ಇಲ್ಲಿ ಬಂದಿರುವ ಎಲ್ಲ ಪ್ರತಿಕ್ರಿಯೆಗಳನ್ನು ಪ್ರಕಟಿಸಲು ನಿಮಗೆ ಸಾಧ್ಯವಾಗುತ್ತದೆಯೇ? ಕುಶ್ವಂತ್ ಸಿಂಗ್ ಮತ್ತು ವಿನೋದ್ ಮೆಹ್ತಾ ಅವರಂತಹ ಸಂಪಾದಕರು ಇದನ್ನು ಮಾಡಿದ್ದಾರೆ. ಆಗ ಮಾತ್ರ ಪತ್ರಿಕೋದ್ಯಮದ ನಿಮ್ಮ ಬದ್ದತೆ ತಿಳಿಯುತ್ತದೆ ಎಂದು ವಿಠ್ಠಲ್ ಶೆಟ್ಟಿ ಎಂಬುವವರು ಸವಾಲು ಹಾಕಿದ್ದಾರೆ.

ಕರ್ನಾಟಕ ಎಡಿಟರ್ಸ್ ಗಿಲ್ಡ್‌ನವರು ಗೌರಿ ಲಂಕೇಶರ ಹತ್ಯೆಯನ್ನು ಖಂಡಿಸಿ ಇಂತಹ ಹೇಳಿಕೆಯನ್ನೇನಾದರೂ ಕೊಟ್ಟಿದ್ದರೆ? ಆಗ ಅದು ಅಸ್ತಿತ್ವದಲ್ಲಿ ಇತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಆ ಸಂದರ್ಭದಲ್ಲಿ ನೀಚ ಬರಹವನ್ನು ಬರೆದ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಇಂತಹ ಹೇಳಿಕೆ ನೀಡಲು ನಿಮಗೆ ಒಪ್ಪಿಗೆಯಿದೆಯಾ ಎಂದು ಮಿಕ್ಕವರನ್ನು ಕೇಳುವುದೂ ಇಲ್ಲ. ಆದರೆ ಪ್ರಜಾವಾಣಿಯ ಸಂಪಾದಕರಿಂದ ಅಂತಹದೊಂದು ಸ್ಪಷ್ಟೀಕರಣವನ್ನು ಕೇಳಬೇಕಿದೆ ಎಂದು ನ್ಯಾಯಪಥ ಪತ್ರಿಕೆಯ ಸಂಪಾದಕರಾದ ಡಾ.ಎಚ್.ವಿ ವಾಸುರವರು ಅಭಿಪ್ರಾಯಪಟ್ಟಿದ್ದಾರೆ.

ಇದರಲ್ಲಿ ಪತ್ರಿಕಾ ಸ್ವಾತಂತ್ರ್ಯದ ಹರಣ ಎಲ್ಲಿ ಬರುತ್ತೆ? ಕಳೆದಬಾರಿ ತನ್ನ ಪತ್ರಿಕೆಯಲ್ಲಿ ಈ ಹಿಂದೆ ಕೆಲಸ ಮಾಡುತಿದ್ದ ವರದಿಗಾರ ಸುನೀಲ್ ಹೆಗ್ಗರವಳಿ ಎಂಬವರ ಹತ್ಯೆಗೆ ಸುಫಾರಿ ನೀಡಿದ್ದಾರೆ ಎಂಬ ಆರೋಪದಡಿಯಲ್ಲಿ ರವಿ ಬೆಳಗೆರೆಯನ್ನು ಕರ್ನಾಟಕ ಪೋಲೀಸರು ಬಂಧಿಸಿದ್ದಿಲ್ವಾ? ಆವಾಗ ಯಾರಾದ್ರೂ ಅದು ಪತ್ರಕರ್ತರ ಮೇಲಿನ ಹಲ್ಲೆ, ಪತ್ರಿಕಾ ಸ್ವಾತಂತ್ರ್ಯದ ಹರಣ ಎಂದೆಲ್ಲಾ ಬೆಳಗೆರೆ ಪರ ನಿಂತಿದ್ದರೇ? ಟಿಆರ್ಪಿ ಕೇಸ್ ಬೇರೆಯದ್ದೇ. ಅದರಲ್ಲಿ ಏನಾಗುತ್ತದೆಯೆಂದು ಇನ್ನೂ ಗೊತ್ತಿಲ್ಲ. ಆದರೆ ಈಗಿರುವುದು ಕ್ರಿಮಿನಲ್ ಪ್ರಕರಣ. ವಂಚನೆ ಹಾಗೂ ಆತ್ಮಹತ್ಯೆಗೆ ಪ್ರೇರಣೆಯ ಆರೋಪ. ಆರೋಪವನ್ನು ಮಾಡಿದವರು ಆತ್ಮಹತ್ಯೆಗೈದ ವ್ಯಕ್ತಿಯ ಮಗಳು ಹಾಗೂ ಹೆಂಡತಿ. ಪ್ರಕರಣ ನಡೆದದ್ದು ಬಿಜೆಪಿ-ಶಿವಸೇನೆ ಸರಕಾರವಿದ್ದಾಗ. ಮೊದಲ ಎಫ್‍ಐ‍ಆರ್ ಆಗಿದ್ದೂ ಆವಾಗ್ಲೇ. ಆರು ತಿಂಗಳ ಹಿಂದೆ ಸಂತ್ರಸ್ತ ಕುಟುಂಬ ಪ್ರಕರಣವನ್ನು ಪುನಃ ತನಿಖೆ ಮಾಡಬೇಕೆಂದು ಕೇಳಿಕೊಂಡಿತ್ತು ಹಾಗೂ ಆಗಲೇ ಗೃಹಮಂತ್ರಿ ತನಿಖೆ ನಡೆಸುವುದಾಗಿಯೂ ಹೇಳಿದ್ದರು. ಇದರಲ್ಲಿ ಪತ್ರಿಕಾ ಸ್ವಾತಂತ್ರ್ಯ ಎಲ್ಲಿಂದ ಬಂತು? ಎಂದು ಅಲ್ಮೆಡ ಗ್ಲಾಡ್‌ಸನ್‌ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಅರ್ನಾಬ್ ಬಂಧನ: ಸಾಮಾಜಿಕ ಮಾಧ್ಯಮಗಳಲ್ಲಿ ಭುಗಿಲೆದ್ದ ಪರ-ವಿರೋಧದ ಚರ್ಚೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...