Homeಮುಖಪುಟಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ಈ ನಿಮ್ಮ ಪತ್ರಿಕಾ ಧರ್ಮ, ಪವರ್ ಟಿವಿ ಮೇಲೆ ಸರ್ಕಾರ ಪ್ರಹಾರ ಮಾಡಿದಾಗ ಎಲ್ಲಿ ಹೋಗಿತ್ತು ಸಾರ್!? ಎಂದು ಕುಮಾರಸ್ವಾಮಿ ಎಂಬುವವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯವರನ್ನು ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ನಿನ್ನೆ ಬಂಧಿಸಿರುವುದು ಸರಿಯಷ್ಟೇ. ಅಲ್ಲದೇ ನ್ಯಾಯಾಲಯ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಹೈಕೋರ್ಟ್ ಸಹ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಈ ಸಂದರ್ಭದಲ್ಲಿ ದೇಶಾದ್ಯಂತ ಬಿಜೆಪಿ ಇದು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಖಂಡಿಸಿದೆ. ಅದೇ ರೀತಿಯಲ್ಲಿ ಎಡಿಟರ್ ಗಿಲ್ಡ್ ಆಫ್ ಬೆಂಗಳೂರು ಎಂಬ ಪತ್ರಕರ್ತರ ಸಂಘ ಅರ್ನಾಬ್ ಮೇಲಿನ ದಾಳಿ ಖಂಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಟ್ರೋಲ್ ಗೊಳಗಾಗಿದೆ.

ಅರ್ನಾಬ್ ಗೋಸ್ವಾಮಿ ಬಂಧಿತನಾಗಿರುವುದು ಟಿವಿಯಲ್ಲಿ ಪ್ರಸಾರ ಮಾಡಿದ ಸ್ಟೋರಿಯ ಕಾರಣದಿಂದಲ್ಲ. ತನಗೆ ಕೆಲಸ ಮಾಡಿಕೊಟ್ಟ ವ್ಯಕ್ತಿಗೆ ಕೋಟ್ಯಾಂತರ ರೂ ವಂಚಿಸಿ, ಪ್ರಭಾವ ಬಳಸಿ ತಪ್ಪಿಸಿಕೊಂಡು, ಆತ್ಮಹತ್ಯೆಗೆ ಕಾರಣನಾದ ಕ್ರಿಮಿನಲ್ ಪ್ರಕರಣದಲ್ಲಿ… ಇಷ್ಟು ಗೊತ್ತಿಲ್ಲದ ಇವರೆಂಥ ಪತ್ರಕರ್ತರು ಎಂದು ಎಡಿಟರ್ ಗಿಲ್ಡ್‌ ವಿರುದ್ಧ ಟೀಕೆ ವ್ಯಕ್ತವಾಗಿದೆ.

ಈ Editors Guild of Bengaluru ನ ಸದಸ್ಯರು ನೋಡಿ!! ಭಾಜಪದ ವಿ.ಪ್ರ. ಸಭೆ ಇದ್ದಂಗಿದೆ. ಇವರು ಈ ಹಿಂದೆ ಪತ್ರಕರ್ತರ ಮೇಲೆ ಧಾಳಿ ಆದಾಗ, ಬಂಧನವಾದಾಗ ಉಸಿರೆತ್ತಿದ ದಾಖಲೆ ಇಲ್ಲ. ಈಗ ಈ ಗರ್ನಾಲ್ ಆಸಾಮಿ ತನ್ನ ಧೂರ್ತ ಹಣಕಾಸು ವ್ಯವಹಾರದ ಮೂಲಕ ವಾಸ್ತುಶಿಲ್ಪಯೊಬ್ಬನನ್ನು ಆತ್ಮಹತ್ಯೆಗೆ ದೂಡಿದ್ದು ಇವರಿಗೆ ಪತ್ರಿಕಾ ಸ್ವಾತಂತ್ರ್ಯತರ ಕಂಡಿದೆ!!! ಲಜ್ಜೆಗೆಟ್ಟು HMV ಆಗೋದು ಹೀಗೆ ಎಂದು ಸುರೇಶ್ ಕಂಜಾರ್ಪಣೆಯವರು ವ್ಯಂಗ್ಯವಾಡಿದ್ದಾರೆ.

ತಿಂಗಳ ಹಿಂದೆ ಪವರ್ ಟಿವಿ ಮೇಲೆ ದಾಳಿಯಾದಾಗ ಬೆಂಗಳೂರು ಎಡಿಟರ್ಸ್ ಗಿಲ್ಡ್ ಇಂತಹದೊಂದು ಪತ್ರಿಕಾ ಪ್ರಕಟಣೆ ಹೊರಡಿಸಿತ್ತಾ? ನನ್ನ ಗಮನಕ್ಕೆ ಬಂದಿಲ್ಲ. ಅಲ್ಲೂ ಹಳೆಯ‌ ಪ್ರಕರಣ ಸಂಬಂಧ ದಾಳಿ ನಡೆದಿತ್ತು. ಲೈವ್ ಕೊಡದಂತೆ ಚಾನೆಲ್ಲಿನ ಸರ್ವರ್‌ ಅನ್ನೇ ಸಿಸಿಬಿಯವರು ಕೊಂಡೊಯ್ದಿದ್ದರು.
ಅರ್ನಬ್ ನ ಬಂಧನ ಹಣವಂಚನೆ ಮತ್ತು ಆತ್ಮಹತ್ಯೆಗೆ ಪ್ರೇರಣೆ ನೀಡಿದ ಪ್ರಕರಣ. ಇದು ಯಾವ ಆ್ಯಂಗಲ್ ನಲ್ಲಿ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಹಲ್ಲೆ ಎಂಬುದನ್ನು ಬಹುಮಾನ್ಯ ಕನ್ನಡದ ಸಂಪಾದಕರು ಸಂಪಾದಕೀಯ ಬರೆದು ವಿವರಿಸಿದ್ರೆ ತಿಳಿದುಕೊಳ್ಳಬಹುದಿತ್ತು ಎಂದು ಪತ್ರಕರ್ತೆ ಹೇಮಾವತಿ ವೆಂಕಟ್ ಪ್ರಶ್ನಿಸಿದ್ದಾರೆ.

ಇನ್ನು ಗಿಲ್ಡ್‌ನ ಅಧ್ಯಕ್ಷರೆಂದು ಘೋಷಿಸಿಕೊಂಡಿರುವ ವಿಶ್ವೇಶ್ವರ ಭಟ್ ತಮ್ಮ ಫೇಸ್‌ಬುಕ್‌ನಲ್ಲಿ ಈ ಖಂಡನಾ ಪತ್ರವನ್ನು ಹಂಚಿಕೊಂಡಿದ್ದಾರೆ. ಅಲ್ಲಿ ನೂರಾರು ಜನ ಪ್ರತಿಕ್ರಿಯಿಸಿದ್ದು ಟ್ರೋಲ್ ಮಾಡಿದ್ದಾರೆ.

ಭಟ್ಟರೇ ಆರ್ನಬ್ ಸಹ ನಿನ್ನ ತರಹ ಒಂದು ಪಕ್ಷದ ಏಜೆಂಟ್, ಅಂತಹ ವ್ಯಕ್ತಿಯಿಂದ ನಾವು ಸಮಾಜಕ್ಕೆ ಏನನ್ನು ನಿರೀಕ್ಷಿಸಲು ಸಾಧ್ಯ, ಒಂದು ಪಕ್ಷಕ್ಕೆ ಯಾವುದೇ ವ್ಯಕ್ತಿ ಸೀಮಿತನಾಗಿದ್ದರೆ , ಅಥವಾ ಒಂದು ಪಕ್ಷದ ಓಲೈಕೆ ಮಾಡುತ್ತಿದ್ದರೆ ಅದು ಯಾವ ಪತ್ರಿಕಾ ಧರ್ಮ ಹೇಳುವಿರ? ಎಂದು ರವಿಶಂಕರ್ ಎಂಬುವವರ ಪ್ರಶ್ನಿಸಿದ್ದಾರೆ.

ಈ ನಿಮ್ಮ ಪತ್ರಿಕಾ ಧರ್ಮ, ಪವರ್ ಟಿವಿ ಮೇಲೆ ಸರ್ಕಾರ ಪ್ರಹಾರ ಮಾಡಿದಾಗ ಎಲ್ಲಿ ಹೋಗಿತ್ತು ಸಾರ್……..!? ಎಂದು ಕುಮಾರಸ್ವಾಮಿ ಎಂಬುವವರು ಪ್ರಶ್ನಿಸಿದ್ದಾರೆ.

ಈ ಖಂಡನಾ ಪತ್ರಕ್ಕೆ ಸಹಿ ಮಾಡಿದ ಸಂಪಾದಕರು ತಮ್ಮ ಪತ್ರಿಕೆಗಳಲ್ಲಿ ಇಲ್ಲಿ ಬಂದಿರುವ ಎಲ್ಲ ಪ್ರತಿಕ್ರಿಯೆಗಳನ್ನು ಪ್ರಕಟಿಸಲು ನಿಮಗೆ ಸಾಧ್ಯವಾಗುತ್ತದೆಯೇ? ಕುಶ್ವಂತ್ ಸಿಂಗ್ ಮತ್ತು ವಿನೋದ್ ಮೆಹ್ತಾ ಅವರಂತಹ ಸಂಪಾದಕರು ಇದನ್ನು ಮಾಡಿದ್ದಾರೆ. ಆಗ ಮಾತ್ರ ಪತ್ರಿಕೋದ್ಯಮದ ನಿಮ್ಮ ಬದ್ದತೆ ತಿಳಿಯುತ್ತದೆ ಎಂದು ವಿಠ್ಠಲ್ ಶೆಟ್ಟಿ ಎಂಬುವವರು ಸವಾಲು ಹಾಕಿದ್ದಾರೆ.

ಕರ್ನಾಟಕ ಎಡಿಟರ್ಸ್ ಗಿಲ್ಡ್‌ನವರು ಗೌರಿ ಲಂಕೇಶರ ಹತ್ಯೆಯನ್ನು ಖಂಡಿಸಿ ಇಂತಹ ಹೇಳಿಕೆಯನ್ನೇನಾದರೂ ಕೊಟ್ಟಿದ್ದರೆ? ಆಗ ಅದು ಅಸ್ತಿತ್ವದಲ್ಲಿ ಇತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಆ ಸಂದರ್ಭದಲ್ಲಿ ನೀಚ ಬರಹವನ್ನು ಬರೆದ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಇಂತಹ ಹೇಳಿಕೆ ನೀಡಲು ನಿಮಗೆ ಒಪ್ಪಿಗೆಯಿದೆಯಾ ಎಂದು ಮಿಕ್ಕವರನ್ನು ಕೇಳುವುದೂ ಇಲ್ಲ. ಆದರೆ ಪ್ರಜಾವಾಣಿಯ ಸಂಪಾದಕರಿಂದ ಅಂತಹದೊಂದು ಸ್ಪಷ್ಟೀಕರಣವನ್ನು ಕೇಳಬೇಕಿದೆ ಎಂದು ನ್ಯಾಯಪಥ ಪತ್ರಿಕೆಯ ಸಂಪಾದಕರಾದ ಡಾ.ಎಚ್.ವಿ ವಾಸುರವರು ಅಭಿಪ್ರಾಯಪಟ್ಟಿದ್ದಾರೆ.

ಇದರಲ್ಲಿ ಪತ್ರಿಕಾ ಸ್ವಾತಂತ್ರ್ಯದ ಹರಣ ಎಲ್ಲಿ ಬರುತ್ತೆ? ಕಳೆದಬಾರಿ ತನ್ನ ಪತ್ರಿಕೆಯಲ್ಲಿ ಈ ಹಿಂದೆ ಕೆಲಸ ಮಾಡುತಿದ್ದ ವರದಿಗಾರ ಸುನೀಲ್ ಹೆಗ್ಗರವಳಿ ಎಂಬವರ ಹತ್ಯೆಗೆ ಸುಫಾರಿ ನೀಡಿದ್ದಾರೆ ಎಂಬ ಆರೋಪದಡಿಯಲ್ಲಿ ರವಿ ಬೆಳಗೆರೆಯನ್ನು ಕರ್ನಾಟಕ ಪೋಲೀಸರು ಬಂಧಿಸಿದ್ದಿಲ್ವಾ? ಆವಾಗ ಯಾರಾದ್ರೂ ಅದು ಪತ್ರಕರ್ತರ ಮೇಲಿನ ಹಲ್ಲೆ, ಪತ್ರಿಕಾ ಸ್ವಾತಂತ್ರ್ಯದ ಹರಣ ಎಂದೆಲ್ಲಾ ಬೆಳಗೆರೆ ಪರ ನಿಂತಿದ್ದರೇ? ಟಿಆರ್ಪಿ ಕೇಸ್ ಬೇರೆಯದ್ದೇ. ಅದರಲ್ಲಿ ಏನಾಗುತ್ತದೆಯೆಂದು ಇನ್ನೂ ಗೊತ್ತಿಲ್ಲ. ಆದರೆ ಈಗಿರುವುದು ಕ್ರಿಮಿನಲ್ ಪ್ರಕರಣ. ವಂಚನೆ ಹಾಗೂ ಆತ್ಮಹತ್ಯೆಗೆ ಪ್ರೇರಣೆಯ ಆರೋಪ. ಆರೋಪವನ್ನು ಮಾಡಿದವರು ಆತ್ಮಹತ್ಯೆಗೈದ ವ್ಯಕ್ತಿಯ ಮಗಳು ಹಾಗೂ ಹೆಂಡತಿ. ಪ್ರಕರಣ ನಡೆದದ್ದು ಬಿಜೆಪಿ-ಶಿವಸೇನೆ ಸರಕಾರವಿದ್ದಾಗ. ಮೊದಲ ಎಫ್‍ಐ‍ಆರ್ ಆಗಿದ್ದೂ ಆವಾಗ್ಲೇ. ಆರು ತಿಂಗಳ ಹಿಂದೆ ಸಂತ್ರಸ್ತ ಕುಟುಂಬ ಪ್ರಕರಣವನ್ನು ಪುನಃ ತನಿಖೆ ಮಾಡಬೇಕೆಂದು ಕೇಳಿಕೊಂಡಿತ್ತು ಹಾಗೂ ಆಗಲೇ ಗೃಹಮಂತ್ರಿ ತನಿಖೆ ನಡೆಸುವುದಾಗಿಯೂ ಹೇಳಿದ್ದರು. ಇದರಲ್ಲಿ ಪತ್ರಿಕಾ ಸ್ವಾತಂತ್ರ್ಯ ಎಲ್ಲಿಂದ ಬಂತು? ಎಂದು ಅಲ್ಮೆಡ ಗ್ಲಾಡ್‌ಸನ್‌ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಅರ್ನಾಬ್ ಬಂಧನ: ಸಾಮಾಜಿಕ ಮಾಧ್ಯಮಗಳಲ್ಲಿ ಭುಗಿಲೆದ್ದ ಪರ-ವಿರೋಧದ ಚರ್ಚೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...