Homeಮುಖಪುಟಲಖಿಂಪುರ್‌‌ ಘಟನೆಯಲ್ಲಿ ಪತ್ರಕರ್ತನ ಹತ್ಯೆ: ನ್ಯಾಯಾಂಗ ತನಿಖೆಗೆ ಎಡಿಟರ್ಸ್‌ ಗಿಲ್ಡ್‌ ಆಗ್ರಹ

ಲಖಿಂಪುರ್‌‌ ಘಟನೆಯಲ್ಲಿ ಪತ್ರಕರ್ತನ ಹತ್ಯೆ: ನ್ಯಾಯಾಂಗ ತನಿಖೆಗೆ ಎಡಿಟರ್ಸ್‌ ಗಿಲ್ಡ್‌ ಆಗ್ರಹ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ಖೇರಿಯಲ್ಲಿ ರೈತರ ಮೇಲೆ ಸಚಿವರ ಪುತ್ರ ಹಾಗೂ ಆತನ ಗೂಂಡಾಪಡೆ ವಾಹನಗಳನ್ನು ಹತ್ತಿಸಿ ಕೊಲ್ಲುವ ವೇಳೆ ಓರ್ವ ಪತ್ರಕರ್ತನೂ ಹತ್ಯೆಗೀಡಾಗಿದ್ದಾನೆ.

ವರದಿಗಾರಿಕೆಗೆ ತೆರಳಿದ್ದ ಪತ್ರಕರ್ತ ರಮಣ್‌ ಕಶ್ಯಪ್‌ ಅವರು ಭಾನುವಾರ ನಡೆದ ಘಟನೆಯಲ್ಲಿ ಸಾವಿಗೀಡಾಗಿದ್ದಾರೆ. ಪತ್ರಕರ್ತನ ಸಾವಿನ ತನಿಖೆಗೆ ನ್ಯಾಯಾಂಗ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚಿಸಬೇಕು ಎಂದು ಭಾರತದ ಎಡಿಟರ್ಸ್ ಗಿಲ್ಡ್‌ ಒತ್ತಾಯಿಸಿದೆ.

ಘಟನೆಯ ತನಿಖೆ ನಡೆಸಲು ಕಶ್ಯಪ್‌ ಅವರ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಪಡೆದುಕೊಳ್ಳಬೇಕು ಎಂದು ಪತ್ರಕರ್ತರ ಸಂಘ ಒತ್ತಾಯಿಸಿದೆ.

“ಭಯೋತ್ಪಾದಕರ ದಾಳಿ ಎಂದರೆ ರೈತರಲ್ಲಿ ಭಯವನ್ನು ಹುಟ್ಟಿಸುವುದು ಎಂದರ್ಥ. ಪತ್ರಕರ್ತ ಕಶ್ಯಪ್‌ ಅವರ ಕೊಲೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ” ಎಂದು ಗಿಲ್ಡ್‌ ಹೇಳಿಕೆ ನೀಡಿದೆ.

ಕಶ್ಯಪ್‌ ಅವರ ಸಾವಿನ ಕುರಿತು ವಿವಿಧ ಅಭಿಪ್ರಾಯಗಳಿವೆ. “ಸ್ಪಷ್ಟವಾಗುವ ಸಂಗತಿ ಎಂದರೆ ಪ್ರತಿಭಟನೆಗೆ ತೆರಳಿದ್ದ ರೈತರ ಮೇಲೆ ವಾಹನಗಳು ಹರಿದಾಗ, ರೈತರೊಂದಿಗೆ ತಪ್ಪಿಸಿಕೊಳ್ಳಲು ಯತ್ನಿಸುವಾಗ ಕಶ್ಯಪ್‌ ಅವರನ್ನೂ ಕೊಲ್ಲಲಾಗಿದೆ” ಎಂದು ಗಿಲ್ಡ್‌ ಅಭಿಪ್ರಾಯಪಟ್ಟಿದೆ.

ಕಶ್ಯಪ್‌ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವ ಜೊತೆಗೆ, ಕಶ್ಯಪ್‌ ಅವರ ಪತ್ನಿಗೆ ಸರ್ಕಾರ ಉದ್ಯೋಗವನ್ನು ನೀಡಬೇಕು ಎಂದು ಲಿಖಿಂಪುರ್‌ ಖೇರಿಯ ಪತ್ರಕರ್ತರು ಒತ್ತಾಯಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿರಿ: ಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಸಚಿವರ ಪುತ್ರ ಕೃತ್ಯದಲ್ಲಿ ಭಾಗಿ: ಗಾಯಾಳು ರೈತ ಹೇಳಿಕೆ

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ ಎರಡು ದಿನಗಳ ನಂತರ ಗಾಯಾಳು ರೈತ ಮುಖಂಡ ಹೇಳಿಕೆ ನೀಡಿದ್ದು, ಪ್ರತಿಭಟನಾಕಾರರ ಮೇಲೆ ಹರಿದ ಕಾರನ್ನು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಚಾಲನೆ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ದೆಹಲಿಯ ಮೇದಂತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ರೈತ ಮುಖಂಡ ತೇಜಿಂದರ್ ಸಿಂಗ್ ವಿರ್ಕ್, 72 ಗಂಟೆಗಳ ನಂತರವೂ ಆರೋಪಿಗಳನ್ನು ಬಂಧಿಸದಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.

ಭಾನುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಭೇಟಿ ಮತ್ತು ಉಪಮುಖ್ಯಮಂತ್ರಿ ಕೇಶವ್ ಶರ್ಮಾ ವಿರುದ್ಧ ನಡೆದ ಪ್ರತಿಭಟನೆಯನ್ನು ರೈತ ಮುಖಂಡ ಮತ್ತು ಎಸ್‌ಕೆಎಂ ಸದಸ್ಯ ತೇಜಿಂದರ್ ಸಿಂಗ್ ವಿರ್ಕ್ ಆಯೋಜಿಸಿದ್ದರು.

ಜೊತೆಗೆ ಮಾತನಾಡಿರುವ ತೇಜಿಂದರ್ ವಿರ್ಕ್, “ಇದು ನಮ್ಮನ್ನು ಕೊಲ್ಲುವ ಪಿತೂರಿಯಾಗಿತ್ತು. ಅಜಯ್ ಮಿಶ್ರಾ ಅವರು ಲಖಿಂಪುರವನ್ನು ಬಿಟ್ಟು ಉತ್ತರ ಪ್ರದೇಶದಲ್ಲಿ ರೈತರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತಿದ್ದೆವು. ನಾವು ಪೊಲೀಸರು ಮತ್ತು ಆಡಳಿತದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೆವು. ಅವರ ಮೇಲೆ ಕಪ್ಪು ಬಾವುಟ ಬೀಸಲು ಮಾರ್ಗದುದ್ದಕ್ಕೂ ನಿಂತಿದ್ದೆವು” ಎಂದಿದ್ದಾರೆ.

“ಅವರ ಮಾರ್ಗ ಬದಲಾಗಿದೆ ಎಂದು ನಮಗೆ ಮಧ್ಯಾಹ್ನ 3 ಗಂಟೆಗೆ ತಿಳಿಯಿತು. ನಾವು ಶಾಂತಿಯುತವಾಗಿ ಹಿಂತಿರುಗಲಾರಂಭಿಸಿದೆವು. ಇದ್ದಕ್ಕಿದ್ದಂತೆ, ವೇಗವಾಗಿ ಬಂದ ಕಾರುಗಳು ನಮಗೆ ಹಿಂದಿನಿಂದ ಡಿಕ್ಕಿ ಹೊಡೆದವು. ಕಾರು ಗಂಟೆಗೆ 100 ಕಿಮೀ ವೇಗದಲ್ಲಿತ್ತು. ಅವರು ಉದ್ದೇಶಪೂರ್ವಕವಾಗಿ ನಮ್ಮ ಮೇಲೆ ಕಾರು ಹರಿಸಿದರು. ಅಜಯ್ ಮಿಶ್ರಾ ಅವರ ಮಗ ಮತ್ತು ಅವನ ಸಹಚರರು ಕಾರಿನಲ್ಲಿದ್ದರು. ಆಗ ನನಗೆ ಪ್ರಜ್ಞೆ ತಪ್ಪಿತು” ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿರುವ ರೈತ ಮುಖಂಡ, “ನಾನು ಸಾಕ್ಷಿ ಹೇಳಲು ಸಿದ್ಧನಿದ್ದೇನೆ. ಯೋಗಿ ಆದಿತ್ಯನಾಥ್ ಸರ್ಕಾರ ದಾಳಿಕೋರರಿಗೆ ಸಹಾಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಭಾನುವಾರದ ಹಿಂಸಾಚಾರದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯ ತೇಜಿಂದರ್ ಸಿಂಗ್ ವಿರ್ಕ್ ಸದ್ಯ ದೆಹಲಿಯ ಮೇದಂತದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಲು ವಕೀಲರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...