Homeಮುಖಪುಟಲಖಿಂಪುರ್‌‌ ಘಟನೆಯಲ್ಲಿ ಪತ್ರಕರ್ತನ ಹತ್ಯೆ: ನ್ಯಾಯಾಂಗ ತನಿಖೆಗೆ ಎಡಿಟರ್ಸ್‌ ಗಿಲ್ಡ್‌ ಆಗ್ರಹ

ಲಖಿಂಪುರ್‌‌ ಘಟನೆಯಲ್ಲಿ ಪತ್ರಕರ್ತನ ಹತ್ಯೆ: ನ್ಯಾಯಾಂಗ ತನಿಖೆಗೆ ಎಡಿಟರ್ಸ್‌ ಗಿಲ್ಡ್‌ ಆಗ್ರಹ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ಖೇರಿಯಲ್ಲಿ ರೈತರ ಮೇಲೆ ಸಚಿವರ ಪುತ್ರ ಹಾಗೂ ಆತನ ಗೂಂಡಾಪಡೆ ವಾಹನಗಳನ್ನು ಹತ್ತಿಸಿ ಕೊಲ್ಲುವ ವೇಳೆ ಓರ್ವ ಪತ್ರಕರ್ತನೂ ಹತ್ಯೆಗೀಡಾಗಿದ್ದಾನೆ.

ವರದಿಗಾರಿಕೆಗೆ ತೆರಳಿದ್ದ ಪತ್ರಕರ್ತ ರಮಣ್‌ ಕಶ್ಯಪ್‌ ಅವರು ಭಾನುವಾರ ನಡೆದ ಘಟನೆಯಲ್ಲಿ ಸಾವಿಗೀಡಾಗಿದ್ದಾರೆ. ಪತ್ರಕರ್ತನ ಸಾವಿನ ತನಿಖೆಗೆ ನ್ಯಾಯಾಂಗ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚಿಸಬೇಕು ಎಂದು ಭಾರತದ ಎಡಿಟರ್ಸ್ ಗಿಲ್ಡ್‌ ಒತ್ತಾಯಿಸಿದೆ.

ಘಟನೆಯ ತನಿಖೆ ನಡೆಸಲು ಕಶ್ಯಪ್‌ ಅವರ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಪಡೆದುಕೊಳ್ಳಬೇಕು ಎಂದು ಪತ್ರಕರ್ತರ ಸಂಘ ಒತ್ತಾಯಿಸಿದೆ.

“ಭಯೋತ್ಪಾದಕರ ದಾಳಿ ಎಂದರೆ ರೈತರಲ್ಲಿ ಭಯವನ್ನು ಹುಟ್ಟಿಸುವುದು ಎಂದರ್ಥ. ಪತ್ರಕರ್ತ ಕಶ್ಯಪ್‌ ಅವರ ಕೊಲೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ” ಎಂದು ಗಿಲ್ಡ್‌ ಹೇಳಿಕೆ ನೀಡಿದೆ.

ಕಶ್ಯಪ್‌ ಅವರ ಸಾವಿನ ಕುರಿತು ವಿವಿಧ ಅಭಿಪ್ರಾಯಗಳಿವೆ. “ಸ್ಪಷ್ಟವಾಗುವ ಸಂಗತಿ ಎಂದರೆ ಪ್ರತಿಭಟನೆಗೆ ತೆರಳಿದ್ದ ರೈತರ ಮೇಲೆ ವಾಹನಗಳು ಹರಿದಾಗ, ರೈತರೊಂದಿಗೆ ತಪ್ಪಿಸಿಕೊಳ್ಳಲು ಯತ್ನಿಸುವಾಗ ಕಶ್ಯಪ್‌ ಅವರನ್ನೂ ಕೊಲ್ಲಲಾಗಿದೆ” ಎಂದು ಗಿಲ್ಡ್‌ ಅಭಿಪ್ರಾಯಪಟ್ಟಿದೆ.

ಕಶ್ಯಪ್‌ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವ ಜೊತೆಗೆ, ಕಶ್ಯಪ್‌ ಅವರ ಪತ್ನಿಗೆ ಸರ್ಕಾರ ಉದ್ಯೋಗವನ್ನು ನೀಡಬೇಕು ಎಂದು ಲಿಖಿಂಪುರ್‌ ಖೇರಿಯ ಪತ್ರಕರ್ತರು ಒತ್ತಾಯಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿರಿ: ಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಸಚಿವರ ಪುತ್ರ ಕೃತ್ಯದಲ್ಲಿ ಭಾಗಿ: ಗಾಯಾಳು ರೈತ ಹೇಳಿಕೆ

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ ಎರಡು ದಿನಗಳ ನಂತರ ಗಾಯಾಳು ರೈತ ಮುಖಂಡ ಹೇಳಿಕೆ ನೀಡಿದ್ದು, ಪ್ರತಿಭಟನಾಕಾರರ ಮೇಲೆ ಹರಿದ ಕಾರನ್ನು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಚಾಲನೆ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ದೆಹಲಿಯ ಮೇದಂತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ರೈತ ಮುಖಂಡ ತೇಜಿಂದರ್ ಸಿಂಗ್ ವಿರ್ಕ್, 72 ಗಂಟೆಗಳ ನಂತರವೂ ಆರೋಪಿಗಳನ್ನು ಬಂಧಿಸದಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.

ಭಾನುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಭೇಟಿ ಮತ್ತು ಉಪಮುಖ್ಯಮಂತ್ರಿ ಕೇಶವ್ ಶರ್ಮಾ ವಿರುದ್ಧ ನಡೆದ ಪ್ರತಿಭಟನೆಯನ್ನು ರೈತ ಮುಖಂಡ ಮತ್ತು ಎಸ್‌ಕೆಎಂ ಸದಸ್ಯ ತೇಜಿಂದರ್ ಸಿಂಗ್ ವಿರ್ಕ್ ಆಯೋಜಿಸಿದ್ದರು.

ಜೊತೆಗೆ ಮಾತನಾಡಿರುವ ತೇಜಿಂದರ್ ವಿರ್ಕ್, “ಇದು ನಮ್ಮನ್ನು ಕೊಲ್ಲುವ ಪಿತೂರಿಯಾಗಿತ್ತು. ಅಜಯ್ ಮಿಶ್ರಾ ಅವರು ಲಖಿಂಪುರವನ್ನು ಬಿಟ್ಟು ಉತ್ತರ ಪ್ರದೇಶದಲ್ಲಿ ರೈತರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತಿದ್ದೆವು. ನಾವು ಪೊಲೀಸರು ಮತ್ತು ಆಡಳಿತದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೆವು. ಅವರ ಮೇಲೆ ಕಪ್ಪು ಬಾವುಟ ಬೀಸಲು ಮಾರ್ಗದುದ್ದಕ್ಕೂ ನಿಂತಿದ್ದೆವು” ಎಂದಿದ್ದಾರೆ.

“ಅವರ ಮಾರ್ಗ ಬದಲಾಗಿದೆ ಎಂದು ನಮಗೆ ಮಧ್ಯಾಹ್ನ 3 ಗಂಟೆಗೆ ತಿಳಿಯಿತು. ನಾವು ಶಾಂತಿಯುತವಾಗಿ ಹಿಂತಿರುಗಲಾರಂಭಿಸಿದೆವು. ಇದ್ದಕ್ಕಿದ್ದಂತೆ, ವೇಗವಾಗಿ ಬಂದ ಕಾರುಗಳು ನಮಗೆ ಹಿಂದಿನಿಂದ ಡಿಕ್ಕಿ ಹೊಡೆದವು. ಕಾರು ಗಂಟೆಗೆ 100 ಕಿಮೀ ವೇಗದಲ್ಲಿತ್ತು. ಅವರು ಉದ್ದೇಶಪೂರ್ವಕವಾಗಿ ನಮ್ಮ ಮೇಲೆ ಕಾರು ಹರಿಸಿದರು. ಅಜಯ್ ಮಿಶ್ರಾ ಅವರ ಮಗ ಮತ್ತು ಅವನ ಸಹಚರರು ಕಾರಿನಲ್ಲಿದ್ದರು. ಆಗ ನನಗೆ ಪ್ರಜ್ಞೆ ತಪ್ಪಿತು” ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿರುವ ರೈತ ಮುಖಂಡ, “ನಾನು ಸಾಕ್ಷಿ ಹೇಳಲು ಸಿದ್ಧನಿದ್ದೇನೆ. ಯೋಗಿ ಆದಿತ್ಯನಾಥ್ ಸರ್ಕಾರ ದಾಳಿಕೋರರಿಗೆ ಸಹಾಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಭಾನುವಾರದ ಹಿಂಸಾಚಾರದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯ ತೇಜಿಂದರ್ ಸಿಂಗ್ ವಿರ್ಕ್ ಸದ್ಯ ದೆಹಲಿಯ ಮೇದಂತದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಲು ವಕೀಲರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...