Homeಮುಖಪುಟಲಖಿಂಪುರ್‌‌ ಘಟನೆಯಲ್ಲಿ ಪತ್ರಕರ್ತನ ಹತ್ಯೆ: ನ್ಯಾಯಾಂಗ ತನಿಖೆಗೆ ಎಡಿಟರ್ಸ್‌ ಗಿಲ್ಡ್‌ ಆಗ್ರಹ

ಲಖಿಂಪುರ್‌‌ ಘಟನೆಯಲ್ಲಿ ಪತ್ರಕರ್ತನ ಹತ್ಯೆ: ನ್ಯಾಯಾಂಗ ತನಿಖೆಗೆ ಎಡಿಟರ್ಸ್‌ ಗಿಲ್ಡ್‌ ಆಗ್ರಹ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ಖೇರಿಯಲ್ಲಿ ರೈತರ ಮೇಲೆ ಸಚಿವರ ಪುತ್ರ ಹಾಗೂ ಆತನ ಗೂಂಡಾಪಡೆ ವಾಹನಗಳನ್ನು ಹತ್ತಿಸಿ ಕೊಲ್ಲುವ ವೇಳೆ ಓರ್ವ ಪತ್ರಕರ್ತನೂ ಹತ್ಯೆಗೀಡಾಗಿದ್ದಾನೆ.

ವರದಿಗಾರಿಕೆಗೆ ತೆರಳಿದ್ದ ಪತ್ರಕರ್ತ ರಮಣ್‌ ಕಶ್ಯಪ್‌ ಅವರು ಭಾನುವಾರ ನಡೆದ ಘಟನೆಯಲ್ಲಿ ಸಾವಿಗೀಡಾಗಿದ್ದಾರೆ. ಪತ್ರಕರ್ತನ ಸಾವಿನ ತನಿಖೆಗೆ ನ್ಯಾಯಾಂಗ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚಿಸಬೇಕು ಎಂದು ಭಾರತದ ಎಡಿಟರ್ಸ್ ಗಿಲ್ಡ್‌ ಒತ್ತಾಯಿಸಿದೆ.

ಘಟನೆಯ ತನಿಖೆ ನಡೆಸಲು ಕಶ್ಯಪ್‌ ಅವರ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಪಡೆದುಕೊಳ್ಳಬೇಕು ಎಂದು ಪತ್ರಕರ್ತರ ಸಂಘ ಒತ್ತಾಯಿಸಿದೆ.

“ಭಯೋತ್ಪಾದಕರ ದಾಳಿ ಎಂದರೆ ರೈತರಲ್ಲಿ ಭಯವನ್ನು ಹುಟ್ಟಿಸುವುದು ಎಂದರ್ಥ. ಪತ್ರಕರ್ತ ಕಶ್ಯಪ್‌ ಅವರ ಕೊಲೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ” ಎಂದು ಗಿಲ್ಡ್‌ ಹೇಳಿಕೆ ನೀಡಿದೆ.

ಕಶ್ಯಪ್‌ ಅವರ ಸಾವಿನ ಕುರಿತು ವಿವಿಧ ಅಭಿಪ್ರಾಯಗಳಿವೆ. “ಸ್ಪಷ್ಟವಾಗುವ ಸಂಗತಿ ಎಂದರೆ ಪ್ರತಿಭಟನೆಗೆ ತೆರಳಿದ್ದ ರೈತರ ಮೇಲೆ ವಾಹನಗಳು ಹರಿದಾಗ, ರೈತರೊಂದಿಗೆ ತಪ್ಪಿಸಿಕೊಳ್ಳಲು ಯತ್ನಿಸುವಾಗ ಕಶ್ಯಪ್‌ ಅವರನ್ನೂ ಕೊಲ್ಲಲಾಗಿದೆ” ಎಂದು ಗಿಲ್ಡ್‌ ಅಭಿಪ್ರಾಯಪಟ್ಟಿದೆ.

ಕಶ್ಯಪ್‌ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವ ಜೊತೆಗೆ, ಕಶ್ಯಪ್‌ ಅವರ ಪತ್ನಿಗೆ ಸರ್ಕಾರ ಉದ್ಯೋಗವನ್ನು ನೀಡಬೇಕು ಎಂದು ಲಿಖಿಂಪುರ್‌ ಖೇರಿಯ ಪತ್ರಕರ್ತರು ಒತ್ತಾಯಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿರಿ: ಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಸಚಿವರ ಪುತ್ರ ಕೃತ್ಯದಲ್ಲಿ ಭಾಗಿ: ಗಾಯಾಳು ರೈತ ಹೇಳಿಕೆ

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ ಎರಡು ದಿನಗಳ ನಂತರ ಗಾಯಾಳು ರೈತ ಮುಖಂಡ ಹೇಳಿಕೆ ನೀಡಿದ್ದು, ಪ್ರತಿಭಟನಾಕಾರರ ಮೇಲೆ ಹರಿದ ಕಾರನ್ನು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಚಾಲನೆ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ದೆಹಲಿಯ ಮೇದಂತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ರೈತ ಮುಖಂಡ ತೇಜಿಂದರ್ ಸಿಂಗ್ ವಿರ್ಕ್, 72 ಗಂಟೆಗಳ ನಂತರವೂ ಆರೋಪಿಗಳನ್ನು ಬಂಧಿಸದಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.

ಭಾನುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಭೇಟಿ ಮತ್ತು ಉಪಮುಖ್ಯಮಂತ್ರಿ ಕೇಶವ್ ಶರ್ಮಾ ವಿರುದ್ಧ ನಡೆದ ಪ್ರತಿಭಟನೆಯನ್ನು ರೈತ ಮುಖಂಡ ಮತ್ತು ಎಸ್‌ಕೆಎಂ ಸದಸ್ಯ ತೇಜಿಂದರ್ ಸಿಂಗ್ ವಿರ್ಕ್ ಆಯೋಜಿಸಿದ್ದರು.

ಜೊತೆಗೆ ಮಾತನಾಡಿರುವ ತೇಜಿಂದರ್ ವಿರ್ಕ್, “ಇದು ನಮ್ಮನ್ನು ಕೊಲ್ಲುವ ಪಿತೂರಿಯಾಗಿತ್ತು. ಅಜಯ್ ಮಿಶ್ರಾ ಅವರು ಲಖಿಂಪುರವನ್ನು ಬಿಟ್ಟು ಉತ್ತರ ಪ್ರದೇಶದಲ್ಲಿ ರೈತರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತಿದ್ದೆವು. ನಾವು ಪೊಲೀಸರು ಮತ್ತು ಆಡಳಿತದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೆವು. ಅವರ ಮೇಲೆ ಕಪ್ಪು ಬಾವುಟ ಬೀಸಲು ಮಾರ್ಗದುದ್ದಕ್ಕೂ ನಿಂತಿದ್ದೆವು” ಎಂದಿದ್ದಾರೆ.

“ಅವರ ಮಾರ್ಗ ಬದಲಾಗಿದೆ ಎಂದು ನಮಗೆ ಮಧ್ಯಾಹ್ನ 3 ಗಂಟೆಗೆ ತಿಳಿಯಿತು. ನಾವು ಶಾಂತಿಯುತವಾಗಿ ಹಿಂತಿರುಗಲಾರಂಭಿಸಿದೆವು. ಇದ್ದಕ್ಕಿದ್ದಂತೆ, ವೇಗವಾಗಿ ಬಂದ ಕಾರುಗಳು ನಮಗೆ ಹಿಂದಿನಿಂದ ಡಿಕ್ಕಿ ಹೊಡೆದವು. ಕಾರು ಗಂಟೆಗೆ 100 ಕಿಮೀ ವೇಗದಲ್ಲಿತ್ತು. ಅವರು ಉದ್ದೇಶಪೂರ್ವಕವಾಗಿ ನಮ್ಮ ಮೇಲೆ ಕಾರು ಹರಿಸಿದರು. ಅಜಯ್ ಮಿಶ್ರಾ ಅವರ ಮಗ ಮತ್ತು ಅವನ ಸಹಚರರು ಕಾರಿನಲ್ಲಿದ್ದರು. ಆಗ ನನಗೆ ಪ್ರಜ್ಞೆ ತಪ್ಪಿತು” ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿರುವ ರೈತ ಮುಖಂಡ, “ನಾನು ಸಾಕ್ಷಿ ಹೇಳಲು ಸಿದ್ಧನಿದ್ದೇನೆ. ಯೋಗಿ ಆದಿತ್ಯನಾಥ್ ಸರ್ಕಾರ ದಾಳಿಕೋರರಿಗೆ ಸಹಾಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಭಾನುವಾರದ ಹಿಂಸಾಚಾರದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯ ತೇಜಿಂದರ್ ಸಿಂಗ್ ವಿರ್ಕ್ ಸದ್ಯ ದೆಹಲಿಯ ಮೇದಂತದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಲು ವಕೀಲರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...