Homeಮುಖಪುಟಶಿಕ್ಷಣವು ಸಾಂವಿಧಾನಿಕ ಹಕ್ಕು: JNU ಹೋರಾಟಕ್ಕೆ ಬೆಂಬಲ ಸೂಚಿಸಿದ ಬಾಲಿವುಡ್‌ ನಟಿ ಸ್ವರ ಭಾಸ್ಕರ್ 

ಶಿಕ್ಷಣವು ಸಾಂವಿಧಾನಿಕ ಹಕ್ಕು: JNU ಹೋರಾಟಕ್ಕೆ ಬೆಂಬಲ ಸೂಚಿಸಿದ ಬಾಲಿವುಡ್‌ ನಟಿ ಸ್ವರ ಭಾಸ್ಕರ್ 

ಸಾಮಾನ್ಯವಾಗಿ ಶಿಕ್ಷಣವು ನಮಗೆ ಆದ್ಯತೆಯಾಗದಿದ್ದರೆ ಹೆಣ್ಣು ಮಕ್ಕಳ ಶಿಕ್ಷಣ ಸಾಧ್ಯವಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು JNU ಹಿರಿಯ ವಿದ್ಯಾರ್ಥಿ ಸ್ವರ ಭಾಸ್ಕರ್‌ ನುಡಿದಿದ್ದಾರೆ.

- Advertisement -
- Advertisement -

ಬಾಲಿವುಡ್ ನಟಿ ಸ್ವರ ಭಾಸ್ಕರ್ ಅವರು ಪ್ರತಿಷ್ಠಿತ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿವಾದಾತ್ಮಕ ಶುಲ್ಕ ಹೆಚ್ಚಳ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. JNUವಿನ ಹಳೆಯ ವಿದ್ಯಾರ್ಥಿಯೂ ಆಗಿರುವ ಅವರು ಶಿಕ್ಷಣವು ಸಾಂವಿಧಾನಿಕ ಹಕ್ಕು ಎಂದು ಸಾರಿದ್ದಾರೆ.

ಈ ಮೂಲಕ ಜೆಎನ್‌ಯು ವಿದ್ಯಾರ್ಥಿಗಳು ನಡೆಸುತ್ತಿರುವ ಶುಲ್ಕ ಹೆಚ್ಚಳದ ವಿರುದ್ಧದ ಹೋರಾಟಕ್ಕೆ ಅವರು ಬೆಂಬಲ ಸೂಚಿಸಿದ್ದಾರೆ.

“ನಾನು ತೆರಿಗೆ ಪಾವತಿಸುವವಳು. ಉನ್ನತ ಶಿಕ್ಷಣವನ್ನು ಸಬ್ಸಿಡಿಯಾಗಿ ನೀಡಲು ನನ್ನ ತೆರಿಗೆಗಳನ್ನು ಬಳಸುವುದಕ್ಕೆ ನನಗೆ ಸಂಪೂರ್ಣ ಒಪ್ಪಿಗೆಯಿದೆ. ಏಕೆಂದರೆ ಶಿಕ್ಷಣವು ಹಣವುಳ್ಳ ಕೆಲವೇ ಜನರಿಗೆ ಮಾತ್ರ ಕೈಗೆಟುವಂಥ ಸರಕು ಆಗಬಾರದು ಎಂದು ನಾನು ದೃಢವಾಗಿ ನಂಬುತ್ತೇನೆ. ಇದು ಎಲ್ಲಾ ಜನರಿಗೂ ಸಿಗಬೇಕೆ ಹೊರತು ಕೆಲವೇ ಜನರ ಸ್ವತ್ತಾಗಬಾರದು” ಎಂದಿದ್ದಾರೆ.

ಇದನ್ನೂ ಓದಿ: ಶಿಕ್ಷಣದ ರಾಷ್ಟ್ರೀಕರಣಕ್ಕಾಗಿ, JNU ಉಳಿವಿಗಾಗಿ ಒತ್ತಾಯ: ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ ಅಸ್ತಿತ್ವಕ್ಕೆ, ನಾಳೆ ಮಹತ್ವದ ಸಭೆ.

“ಶಿಕ್ಷಣವು ಒಂದು ಹಕ್ಕು, ಸಾಂವಿಧಾನಿಕ ಹಕ್ಕು, ಇದು ಉನ್ನತ ಮಟ್ಟದವರೆಗೂ ಉಚಿತವಾಗಿ ಸಿಗಬೇಕಾಗಿದೆ. ಸಮಾಜದಲ್ಲಿ ಸಾಮಾನ್ಯವಾಗಿ ಶಿಕ್ಷಣವು ನಮಗೆ ಆದ್ಯತೆಯಾಗದಿದ್ದರೆ ಹೆಣ್ಣು ಮಕ್ಕಳ ಶಿಕ್ಷಣ ಸಾಧ್ಯವಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು 31 ವರ್ಷದ ಸ್ವರ ಭಾಸ್ಕರ್‌ ಈ ತಿಂಗಳ ಆರಂಭದಲ್ಲಿ ನವದೆಹಲಿಯಲ್ಲಿ ನಡೆದ ಎಸ್‌ಡಿಜಿಗಳ ಪರಿಣಾಮ ಶೃಂಗಸಭೆಯಲ್ಲಿ ಹೇಳಿದ್ದಾರೆ.

ನಿಸ್ಸಂದೇಹವಾಗಿ ಧೈರ್ಯಶಾಲಿ ಹೇಳಿಕೆಗಳಿಗೆ ಹೆಸರುವಾಸಿಯಾದ ಸ್ವರ ಭಾಸ್ಕರ್‌, ಸುಸ್ಥಿರ ಅಭಿವೃದ್ಧಿ ಗುರಿಗಳ (ಎಸ್‌ಡಿಜಿ) ಸಭೆಯಲ್ಲಿ ಲಿಂಗ ಸಮಾನತೆಯಿಂದ ಹಿಡಿದು ಆರೋಗ್ಯ ಮತ್ತು ಶಿಕ್ಷಣದವರೆಗೆ ವ್ಯಾಪಕ ವಿಷಯಗಳ ಕುರಿತು ಮಾತನಾಡಿದ್ದಾರೆ.

ಈ ಹಿಂದೆಯು ಸಹ ಸ್ವರ ಭಾಸ್ಕರ್‌ ಹಲವು ವಿಷಯಳ ಪರವಾಗಿ ಮಾತಾಡಿದ್ದಲ್ಲದೇ ಕಳೆದ ಲೋಕಸಭೆ ಚುನಾವಣೆ ವೇಳೆ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ್ತು ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್‌ ಪರವಾಗಿ ಪ್ರಚಾರ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...