HomeಮುಖಪುಟNCERT ಪುಸ್ತಕದಿಂದ 'ಡಾರ್ವಿನ್‌ನ ವಿಕಾಸದ ಸಿದ್ಧಾಂತ' ಕೈಬಿಡುವುದನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವ

NCERT ಪುಸ್ತಕದಿಂದ ‘ಡಾರ್ವಿನ್‌ನ ವಿಕಾಸದ ಸಿದ್ಧಾಂತ’ ಕೈಬಿಡುವುದನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವ

- Advertisement -
- Advertisement -

ಎನ್‌ಸಿಇಆರ್‌ಟಿ ಪ್ರಕಟಿಸಿದ 10ನೇ ತರಗತಿಯ ಪಠ್ಯಪುಸ್ತಕದಿಂದ ‘ಚಾರ್ಲ್ಸ್ ಡಾರ್ವಿನ್ ಅವರ ವಿಕಾಸದ ಸಿದ್ಧಾಂತ’ವನ್ನು ತೆಗೆದುಹಾಕಿರುವುದನ್ನು ಪ್ರಚಾರಕ್ಕಾಗಿ ವಿವಾದ ಮಾಡಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ರಾಜ್ಯ ಖಾತೆ ಸಚಿವ ಸುಭಾಸ್ ಸರ್ಕಾರ್ ಶನಿವಾರ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

NCERT ಕಳೆದ ವರ್ಷ 10ನೇ ತರಗತಿಯ ವಿಜ್ಞಾನ ಪಠ್ಯಪುಸ್ತಕದಲ್ಲಿ “ಆನುವಂಶಿಕತೆ ಮತ್ತು ವಿಕಸನ” ಅಧ್ಯಾಯವನ್ನು “ಆನುವಂಶಿಕತೆ” ಎಂದು ಬದಲಾಯಿಸಲಾಗುವುದು ಎಂದು ಘೋಷಿಸಿತು.

ಏಪ್ರಿಲ್ 20ರಂದು, ದೇಶಾದ್ಯಂತ 1,800 ಕ್ಕೂ ಹೆಚ್ಚು ವಿಜ್ಞಾನಿಗಳು, ಶಿಕ್ಷಕರು ಹಾಗೂ ಶಿಕ್ಷಣತಜ್ಞರು ಆ ವಿಷಯವನ್ನು ತೆಗೆದುಹಾಕುವ ಬಗ್ಗೆ NCERT ಗೆ ಮುಕ್ತ ಪತ್ರವನ್ನು ಬರೆದಿದ್ದರು.

ವಿಕಸನದ ಸಿದ್ದಾಂತವು ವಿಜ್ಞಾನದ ಮೂಲಭೂತ ಆವಿಷ್ಕಾರಕ್ಕೆ ಒಡ್ಡಿಕೊಳ್ಳುವುದಾಗಿದೆ. ಅದನ್ನೇ ನೀವು ಕೈ ಬಿಟ್ಟರೆ ವಿದ್ಯಾರ್ಥಿಗಳು ತಮ್ಮ ಆಲೋಚನಾ ಪ್ರಕ್ರಿಯೆಗಳಲ್ಲಿ ”ಅಂಗವಿಕಲರಾಗಿ” ಉಳಿಯುತ್ತಾರೆ ಎಂದು ವೈಜ್ಞಾನಿಕ ಸಮುದಾಯವು ಭಾವಿಸುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕಂಗೆಡುತ್ತಿರುವ ಪ್ರಜಾಪ್ರಭುತ್ವ ಮತ್ತು ಬೆದರಿದ ರಾಜಕೀಯಕ್ಕೆ ಬಲಿಪಶುಗಳಾದ ಪಠ್ಯಪುಸ್ತಕಗಳು

”ವೈಜ್ಞಾನಿಕ ಮನೋಭಾವ ಮತ್ತು ತರ್ಕಬದ್ಧ ದೃಷ್ಟಿಕೋನ ನಿರ್ಮಿಸುವಲ್ಲಿ ವಿಕಾಸದ ಪ್ರಕ್ರಿಯೆಯ ತಿಳುವಳಿಕೆಯು ನಿರ್ಣಾಯಕವಾಗಿದೆ. ಡಾರ್ವಿನ್‌ನ ಶ್ರಮದಾಯಕ ಅವಲೋಕನಗಳು ಮತ್ತು ಅವನ ತೀಕ್ಷ್ಣವಾದ ಒಳನೋಟಗಳು ಅವನನ್ನು ನೈಸರ್ಗಿಕ ಆಯ್ಕೆಯ ಸಿದ್ಧಾಂತದ ಕಡೆಗೆ ಕರೆದೊಯ್ದವು, ವಿಜ್ಞಾನದ ಪ್ರಕ್ರಿಯೆ ಮತ್ತು ವಿಮರ್ಶಾತ್ಮಕ ಚಿಂತನೆಯ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತದೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ ರೋಗದ ನಂತರ ವಿದ್ಯಾರ್ಥಿಗಳಿಗೆ ಪಠ್ಯಕ್ರಮವನ್ನು ಕಡಿಮೆ ಮಾಡಲು ಎನ್‌ಸಿಇಆರ್‌ಟಿಯ ಕೆಲವು ಭಾಗಗಳನ್ನು ಕೈಬಿಡಲಾಗಿದೆ ಎಂದು ಶನಿವಾರ ಸರ್ಕಾರ್ ಹೇಳಿದರು.

ಮಕ್ಕಳು ಅಧ್ಯಯನ ಮಾಡಲು ಬಯಸಿದರೆ, ಡಾರ್ವಿನ್ ಸಿದ್ಧಾಂತವು ಎಲ್ಲಾ ವೆಬ್‌ಸೈಟ್‌ಗಳಲ್ಲಿ ಲಭ್ಯವಿದೆ. 12ನೇ ತರಗತಿಯಲ್ಲಿ, ಪಠ್ಯಕ್ರಮದಲ್ಲಿ ಈಗಾಗಲೇ ಡಾರ್ವಿನ್ ಸಿದ್ಧಾಂತವಿದೆ, ಆದ್ದರಿಂದ ಅಂತಹ ಸುಳ್ಳು ಪ್ರಚಾರ ಮಾಡಬಾರದು ಎಂದು ಸರ್ಕಾರ್ ಹೇಳಿರುವುದಾಗಿ ANI ವರದಿ ಮಾಡಿದೆ.

2018ರಲ್ಲಿ, ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸತ್ಯಪಾಲ್ ಸಿಂಗ್ ಅವರು, ”ಡಾರ್ವಿನ್ ಅವರ ಮನುಷ್ಯನ ವಿಕಾಸದ ಸಿದ್ಧಾಂತವು ‘ವೈಜ್ಞಾನಿಕವಾಗಿ ತಪ್ಪು’ ಮತ್ತು ಅದನ್ನು ಬದಲಾಯಿಸಬೇಕು” ಎಂದು ಹೇಳಿದ್ದರು.

”ಮನುಷ್ಯನು ಭೂಮಿಯ ಮೇಲೆ ಕಾಣಿಸಿಕೊಂಡಾಗಿನಿಂದ ಅವನು ಯಾವಾಗಲೂ ಮನುಷ್ಯನಾಗಿದ್ದಾನೆ. ನಮ್ಮ ಪೂರ್ವಜರು ಸೇರಿದಂತೆ ಯಾರೂ ಲಿಖಿತ ಅಥವಾ ಮೌಖಿಕವಾಗಿ, ಮಂಗವು ಮನುಷ್ಯನಾಗುವುದನ್ನು ನೋಡಿದ್ದೇವೆ ಎಂದು ಹೇಳಿಲ್ಲ. ನಾವು ಓದಿದ ಯಾವುದೇ ಪುಸ್ತಕಗಳು ಅಥವಾ ನಮ್ಮ ಅಜ್ಜಿಯರು ನಮಗೆ ಹೇಳಿದ ಕಥೆಗಳು ಅಂತಹ ಉಲ್ಲೇಖವನ್ನು ಹೊಂದಿಲ್ಲ” ಎಂದು ಅವರು ಹೇಳಿದ್ದರು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...