HomeಮುಖಪುಟNCERT ಪುಸ್ತಕದಿಂದ 'ಡಾರ್ವಿನ್‌ನ ವಿಕಾಸದ ಸಿದ್ಧಾಂತ' ಕೈಬಿಡುವುದನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವ

NCERT ಪುಸ್ತಕದಿಂದ ‘ಡಾರ್ವಿನ್‌ನ ವಿಕಾಸದ ಸಿದ್ಧಾಂತ’ ಕೈಬಿಡುವುದನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವ

- Advertisement -
- Advertisement -

ಎನ್‌ಸಿಇಆರ್‌ಟಿ ಪ್ರಕಟಿಸಿದ 10ನೇ ತರಗತಿಯ ಪಠ್ಯಪುಸ್ತಕದಿಂದ ‘ಚಾರ್ಲ್ಸ್ ಡಾರ್ವಿನ್ ಅವರ ವಿಕಾಸದ ಸಿದ್ಧಾಂತ’ವನ್ನು ತೆಗೆದುಹಾಕಿರುವುದನ್ನು ಪ್ರಚಾರಕ್ಕಾಗಿ ವಿವಾದ ಮಾಡಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ರಾಜ್ಯ ಖಾತೆ ಸಚಿವ ಸುಭಾಸ್ ಸರ್ಕಾರ್ ಶನಿವಾರ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

NCERT ಕಳೆದ ವರ್ಷ 10ನೇ ತರಗತಿಯ ವಿಜ್ಞಾನ ಪಠ್ಯಪುಸ್ತಕದಲ್ಲಿ “ಆನುವಂಶಿಕತೆ ಮತ್ತು ವಿಕಸನ” ಅಧ್ಯಾಯವನ್ನು “ಆನುವಂಶಿಕತೆ” ಎಂದು ಬದಲಾಯಿಸಲಾಗುವುದು ಎಂದು ಘೋಷಿಸಿತು.

ಏಪ್ರಿಲ್ 20ರಂದು, ದೇಶಾದ್ಯಂತ 1,800 ಕ್ಕೂ ಹೆಚ್ಚು ವಿಜ್ಞಾನಿಗಳು, ಶಿಕ್ಷಕರು ಹಾಗೂ ಶಿಕ್ಷಣತಜ್ಞರು ಆ ವಿಷಯವನ್ನು ತೆಗೆದುಹಾಕುವ ಬಗ್ಗೆ NCERT ಗೆ ಮುಕ್ತ ಪತ್ರವನ್ನು ಬರೆದಿದ್ದರು.

ವಿಕಸನದ ಸಿದ್ದಾಂತವು ವಿಜ್ಞಾನದ ಮೂಲಭೂತ ಆವಿಷ್ಕಾರಕ್ಕೆ ಒಡ್ಡಿಕೊಳ್ಳುವುದಾಗಿದೆ. ಅದನ್ನೇ ನೀವು ಕೈ ಬಿಟ್ಟರೆ ವಿದ್ಯಾರ್ಥಿಗಳು ತಮ್ಮ ಆಲೋಚನಾ ಪ್ರಕ್ರಿಯೆಗಳಲ್ಲಿ ”ಅಂಗವಿಕಲರಾಗಿ” ಉಳಿಯುತ್ತಾರೆ ಎಂದು ವೈಜ್ಞಾನಿಕ ಸಮುದಾಯವು ಭಾವಿಸುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕಂಗೆಡುತ್ತಿರುವ ಪ್ರಜಾಪ್ರಭುತ್ವ ಮತ್ತು ಬೆದರಿದ ರಾಜಕೀಯಕ್ಕೆ ಬಲಿಪಶುಗಳಾದ ಪಠ್ಯಪುಸ್ತಕಗಳು

”ವೈಜ್ಞಾನಿಕ ಮನೋಭಾವ ಮತ್ತು ತರ್ಕಬದ್ಧ ದೃಷ್ಟಿಕೋನ ನಿರ್ಮಿಸುವಲ್ಲಿ ವಿಕಾಸದ ಪ್ರಕ್ರಿಯೆಯ ತಿಳುವಳಿಕೆಯು ನಿರ್ಣಾಯಕವಾಗಿದೆ. ಡಾರ್ವಿನ್‌ನ ಶ್ರಮದಾಯಕ ಅವಲೋಕನಗಳು ಮತ್ತು ಅವನ ತೀಕ್ಷ್ಣವಾದ ಒಳನೋಟಗಳು ಅವನನ್ನು ನೈಸರ್ಗಿಕ ಆಯ್ಕೆಯ ಸಿದ್ಧಾಂತದ ಕಡೆಗೆ ಕರೆದೊಯ್ದವು, ವಿಜ್ಞಾನದ ಪ್ರಕ್ರಿಯೆ ಮತ್ತು ವಿಮರ್ಶಾತ್ಮಕ ಚಿಂತನೆಯ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತದೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ ರೋಗದ ನಂತರ ವಿದ್ಯಾರ್ಥಿಗಳಿಗೆ ಪಠ್ಯಕ್ರಮವನ್ನು ಕಡಿಮೆ ಮಾಡಲು ಎನ್‌ಸಿಇಆರ್‌ಟಿಯ ಕೆಲವು ಭಾಗಗಳನ್ನು ಕೈಬಿಡಲಾಗಿದೆ ಎಂದು ಶನಿವಾರ ಸರ್ಕಾರ್ ಹೇಳಿದರು.

ಮಕ್ಕಳು ಅಧ್ಯಯನ ಮಾಡಲು ಬಯಸಿದರೆ, ಡಾರ್ವಿನ್ ಸಿದ್ಧಾಂತವು ಎಲ್ಲಾ ವೆಬ್‌ಸೈಟ್‌ಗಳಲ್ಲಿ ಲಭ್ಯವಿದೆ. 12ನೇ ತರಗತಿಯಲ್ಲಿ, ಪಠ್ಯಕ್ರಮದಲ್ಲಿ ಈಗಾಗಲೇ ಡಾರ್ವಿನ್ ಸಿದ್ಧಾಂತವಿದೆ, ಆದ್ದರಿಂದ ಅಂತಹ ಸುಳ್ಳು ಪ್ರಚಾರ ಮಾಡಬಾರದು ಎಂದು ಸರ್ಕಾರ್ ಹೇಳಿರುವುದಾಗಿ ANI ವರದಿ ಮಾಡಿದೆ.

2018ರಲ್ಲಿ, ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸತ್ಯಪಾಲ್ ಸಿಂಗ್ ಅವರು, ”ಡಾರ್ವಿನ್ ಅವರ ಮನುಷ್ಯನ ವಿಕಾಸದ ಸಿದ್ಧಾಂತವು ‘ವೈಜ್ಞಾನಿಕವಾಗಿ ತಪ್ಪು’ ಮತ್ತು ಅದನ್ನು ಬದಲಾಯಿಸಬೇಕು” ಎಂದು ಹೇಳಿದ್ದರು.

”ಮನುಷ್ಯನು ಭೂಮಿಯ ಮೇಲೆ ಕಾಣಿಸಿಕೊಂಡಾಗಿನಿಂದ ಅವನು ಯಾವಾಗಲೂ ಮನುಷ್ಯನಾಗಿದ್ದಾನೆ. ನಮ್ಮ ಪೂರ್ವಜರು ಸೇರಿದಂತೆ ಯಾರೂ ಲಿಖಿತ ಅಥವಾ ಮೌಖಿಕವಾಗಿ, ಮಂಗವು ಮನುಷ್ಯನಾಗುವುದನ್ನು ನೋಡಿದ್ದೇವೆ ಎಂದು ಹೇಳಿಲ್ಲ. ನಾವು ಓದಿದ ಯಾವುದೇ ಪುಸ್ತಕಗಳು ಅಥವಾ ನಮ್ಮ ಅಜ್ಜಿಯರು ನಮಗೆ ಹೇಳಿದ ಕಥೆಗಳು ಅಂತಹ ಉಲ್ಲೇಖವನ್ನು ಹೊಂದಿಲ್ಲ” ಎಂದು ಅವರು ಹೇಳಿದ್ದರು.”

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...