HomeಮುಖಪುಟNCERT ಪುಸ್ತಕದಿಂದ 'ಡಾರ್ವಿನ್‌ನ ವಿಕಾಸದ ಸಿದ್ಧಾಂತ' ಕೈಬಿಡುವುದನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವ

NCERT ಪುಸ್ತಕದಿಂದ ‘ಡಾರ್ವಿನ್‌ನ ವಿಕಾಸದ ಸಿದ್ಧಾಂತ’ ಕೈಬಿಡುವುದನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವ

- Advertisement -
- Advertisement -

ಎನ್‌ಸಿಇಆರ್‌ಟಿ ಪ್ರಕಟಿಸಿದ 10ನೇ ತರಗತಿಯ ಪಠ್ಯಪುಸ್ತಕದಿಂದ ‘ಚಾರ್ಲ್ಸ್ ಡಾರ್ವಿನ್ ಅವರ ವಿಕಾಸದ ಸಿದ್ಧಾಂತ’ವನ್ನು ತೆಗೆದುಹಾಕಿರುವುದನ್ನು ಪ್ರಚಾರಕ್ಕಾಗಿ ವಿವಾದ ಮಾಡಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ರಾಜ್ಯ ಖಾತೆ ಸಚಿವ ಸುಭಾಸ್ ಸರ್ಕಾರ್ ಶನಿವಾರ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

NCERT ಕಳೆದ ವರ್ಷ 10ನೇ ತರಗತಿಯ ವಿಜ್ಞಾನ ಪಠ್ಯಪುಸ್ತಕದಲ್ಲಿ “ಆನುವಂಶಿಕತೆ ಮತ್ತು ವಿಕಸನ” ಅಧ್ಯಾಯವನ್ನು “ಆನುವಂಶಿಕತೆ” ಎಂದು ಬದಲಾಯಿಸಲಾಗುವುದು ಎಂದು ಘೋಷಿಸಿತು.

ಏಪ್ರಿಲ್ 20ರಂದು, ದೇಶಾದ್ಯಂತ 1,800 ಕ್ಕೂ ಹೆಚ್ಚು ವಿಜ್ಞಾನಿಗಳು, ಶಿಕ್ಷಕರು ಹಾಗೂ ಶಿಕ್ಷಣತಜ್ಞರು ಆ ವಿಷಯವನ್ನು ತೆಗೆದುಹಾಕುವ ಬಗ್ಗೆ NCERT ಗೆ ಮುಕ್ತ ಪತ್ರವನ್ನು ಬರೆದಿದ್ದರು.

ವಿಕಸನದ ಸಿದ್ದಾಂತವು ವಿಜ್ಞಾನದ ಮೂಲಭೂತ ಆವಿಷ್ಕಾರಕ್ಕೆ ಒಡ್ಡಿಕೊಳ್ಳುವುದಾಗಿದೆ. ಅದನ್ನೇ ನೀವು ಕೈ ಬಿಟ್ಟರೆ ವಿದ್ಯಾರ್ಥಿಗಳು ತಮ್ಮ ಆಲೋಚನಾ ಪ್ರಕ್ರಿಯೆಗಳಲ್ಲಿ ”ಅಂಗವಿಕಲರಾಗಿ” ಉಳಿಯುತ್ತಾರೆ ಎಂದು ವೈಜ್ಞಾನಿಕ ಸಮುದಾಯವು ಭಾವಿಸುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕಂಗೆಡುತ್ತಿರುವ ಪ್ರಜಾಪ್ರಭುತ್ವ ಮತ್ತು ಬೆದರಿದ ರಾಜಕೀಯಕ್ಕೆ ಬಲಿಪಶುಗಳಾದ ಪಠ್ಯಪುಸ್ತಕಗಳು

”ವೈಜ್ಞಾನಿಕ ಮನೋಭಾವ ಮತ್ತು ತರ್ಕಬದ್ಧ ದೃಷ್ಟಿಕೋನ ನಿರ್ಮಿಸುವಲ್ಲಿ ವಿಕಾಸದ ಪ್ರಕ್ರಿಯೆಯ ತಿಳುವಳಿಕೆಯು ನಿರ್ಣಾಯಕವಾಗಿದೆ. ಡಾರ್ವಿನ್‌ನ ಶ್ರಮದಾಯಕ ಅವಲೋಕನಗಳು ಮತ್ತು ಅವನ ತೀಕ್ಷ್ಣವಾದ ಒಳನೋಟಗಳು ಅವನನ್ನು ನೈಸರ್ಗಿಕ ಆಯ್ಕೆಯ ಸಿದ್ಧಾಂತದ ಕಡೆಗೆ ಕರೆದೊಯ್ದವು, ವಿಜ್ಞಾನದ ಪ್ರಕ್ರಿಯೆ ಮತ್ತು ವಿಮರ್ಶಾತ್ಮಕ ಚಿಂತನೆಯ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತದೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ ರೋಗದ ನಂತರ ವಿದ್ಯಾರ್ಥಿಗಳಿಗೆ ಪಠ್ಯಕ್ರಮವನ್ನು ಕಡಿಮೆ ಮಾಡಲು ಎನ್‌ಸಿಇಆರ್‌ಟಿಯ ಕೆಲವು ಭಾಗಗಳನ್ನು ಕೈಬಿಡಲಾಗಿದೆ ಎಂದು ಶನಿವಾರ ಸರ್ಕಾರ್ ಹೇಳಿದರು.

ಮಕ್ಕಳು ಅಧ್ಯಯನ ಮಾಡಲು ಬಯಸಿದರೆ, ಡಾರ್ವಿನ್ ಸಿದ್ಧಾಂತವು ಎಲ್ಲಾ ವೆಬ್‌ಸೈಟ್‌ಗಳಲ್ಲಿ ಲಭ್ಯವಿದೆ. 12ನೇ ತರಗತಿಯಲ್ಲಿ, ಪಠ್ಯಕ್ರಮದಲ್ಲಿ ಈಗಾಗಲೇ ಡಾರ್ವಿನ್ ಸಿದ್ಧಾಂತವಿದೆ, ಆದ್ದರಿಂದ ಅಂತಹ ಸುಳ್ಳು ಪ್ರಚಾರ ಮಾಡಬಾರದು ಎಂದು ಸರ್ಕಾರ್ ಹೇಳಿರುವುದಾಗಿ ANI ವರದಿ ಮಾಡಿದೆ.

2018ರಲ್ಲಿ, ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸತ್ಯಪಾಲ್ ಸಿಂಗ್ ಅವರು, ”ಡಾರ್ವಿನ್ ಅವರ ಮನುಷ್ಯನ ವಿಕಾಸದ ಸಿದ್ಧಾಂತವು ‘ವೈಜ್ಞಾನಿಕವಾಗಿ ತಪ್ಪು’ ಮತ್ತು ಅದನ್ನು ಬದಲಾಯಿಸಬೇಕು” ಎಂದು ಹೇಳಿದ್ದರು.

”ಮನುಷ್ಯನು ಭೂಮಿಯ ಮೇಲೆ ಕಾಣಿಸಿಕೊಂಡಾಗಿನಿಂದ ಅವನು ಯಾವಾಗಲೂ ಮನುಷ್ಯನಾಗಿದ್ದಾನೆ. ನಮ್ಮ ಪೂರ್ವಜರು ಸೇರಿದಂತೆ ಯಾರೂ ಲಿಖಿತ ಅಥವಾ ಮೌಖಿಕವಾಗಿ, ಮಂಗವು ಮನುಷ್ಯನಾಗುವುದನ್ನು ನೋಡಿದ್ದೇವೆ ಎಂದು ಹೇಳಿಲ್ಲ. ನಾವು ಓದಿದ ಯಾವುದೇ ಪುಸ್ತಕಗಳು ಅಥವಾ ನಮ್ಮ ಅಜ್ಜಿಯರು ನಮಗೆ ಹೇಳಿದ ಕಥೆಗಳು ಅಂತಹ ಉಲ್ಲೇಖವನ್ನು ಹೊಂದಿಲ್ಲ” ಎಂದು ಅವರು ಹೇಳಿದ್ದರು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...