HomeಮುಖಪುಟNCERT ಪುಸ್ತಕದಿಂದ 'ಡಾರ್ವಿನ್‌ನ ವಿಕಾಸದ ಸಿದ್ಧಾಂತ' ಕೈಬಿಡುವುದನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವ

NCERT ಪುಸ್ತಕದಿಂದ ‘ಡಾರ್ವಿನ್‌ನ ವಿಕಾಸದ ಸಿದ್ಧಾಂತ’ ಕೈಬಿಡುವುದನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವ

- Advertisement -
- Advertisement -

ಎನ್‌ಸಿಇಆರ್‌ಟಿ ಪ್ರಕಟಿಸಿದ 10ನೇ ತರಗತಿಯ ಪಠ್ಯಪುಸ್ತಕದಿಂದ ‘ಚಾರ್ಲ್ಸ್ ಡಾರ್ವಿನ್ ಅವರ ವಿಕಾಸದ ಸಿದ್ಧಾಂತ’ವನ್ನು ತೆಗೆದುಹಾಕಿರುವುದನ್ನು ಪ್ರಚಾರಕ್ಕಾಗಿ ವಿವಾದ ಮಾಡಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ರಾಜ್ಯ ಖಾತೆ ಸಚಿವ ಸುಭಾಸ್ ಸರ್ಕಾರ್ ಶನಿವಾರ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

NCERT ಕಳೆದ ವರ್ಷ 10ನೇ ತರಗತಿಯ ವಿಜ್ಞಾನ ಪಠ್ಯಪುಸ್ತಕದಲ್ಲಿ “ಆನುವಂಶಿಕತೆ ಮತ್ತು ವಿಕಸನ” ಅಧ್ಯಾಯವನ್ನು “ಆನುವಂಶಿಕತೆ” ಎಂದು ಬದಲಾಯಿಸಲಾಗುವುದು ಎಂದು ಘೋಷಿಸಿತು.

ಏಪ್ರಿಲ್ 20ರಂದು, ದೇಶಾದ್ಯಂತ 1,800 ಕ್ಕೂ ಹೆಚ್ಚು ವಿಜ್ಞಾನಿಗಳು, ಶಿಕ್ಷಕರು ಹಾಗೂ ಶಿಕ್ಷಣತಜ್ಞರು ಆ ವಿಷಯವನ್ನು ತೆಗೆದುಹಾಕುವ ಬಗ್ಗೆ NCERT ಗೆ ಮುಕ್ತ ಪತ್ರವನ್ನು ಬರೆದಿದ್ದರು.

ವಿಕಸನದ ಸಿದ್ದಾಂತವು ವಿಜ್ಞಾನದ ಮೂಲಭೂತ ಆವಿಷ್ಕಾರಕ್ಕೆ ಒಡ್ಡಿಕೊಳ್ಳುವುದಾಗಿದೆ. ಅದನ್ನೇ ನೀವು ಕೈ ಬಿಟ್ಟರೆ ವಿದ್ಯಾರ್ಥಿಗಳು ತಮ್ಮ ಆಲೋಚನಾ ಪ್ರಕ್ರಿಯೆಗಳಲ್ಲಿ ”ಅಂಗವಿಕಲರಾಗಿ” ಉಳಿಯುತ್ತಾರೆ ಎಂದು ವೈಜ್ಞಾನಿಕ ಸಮುದಾಯವು ಭಾವಿಸುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕಂಗೆಡುತ್ತಿರುವ ಪ್ರಜಾಪ್ರಭುತ್ವ ಮತ್ತು ಬೆದರಿದ ರಾಜಕೀಯಕ್ಕೆ ಬಲಿಪಶುಗಳಾದ ಪಠ್ಯಪುಸ್ತಕಗಳು

”ವೈಜ್ಞಾನಿಕ ಮನೋಭಾವ ಮತ್ತು ತರ್ಕಬದ್ಧ ದೃಷ್ಟಿಕೋನ ನಿರ್ಮಿಸುವಲ್ಲಿ ವಿಕಾಸದ ಪ್ರಕ್ರಿಯೆಯ ತಿಳುವಳಿಕೆಯು ನಿರ್ಣಾಯಕವಾಗಿದೆ. ಡಾರ್ವಿನ್‌ನ ಶ್ರಮದಾಯಕ ಅವಲೋಕನಗಳು ಮತ್ತು ಅವನ ತೀಕ್ಷ್ಣವಾದ ಒಳನೋಟಗಳು ಅವನನ್ನು ನೈಸರ್ಗಿಕ ಆಯ್ಕೆಯ ಸಿದ್ಧಾಂತದ ಕಡೆಗೆ ಕರೆದೊಯ್ದವು, ವಿಜ್ಞಾನದ ಪ್ರಕ್ರಿಯೆ ಮತ್ತು ವಿಮರ್ಶಾತ್ಮಕ ಚಿಂತನೆಯ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತದೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ ರೋಗದ ನಂತರ ವಿದ್ಯಾರ್ಥಿಗಳಿಗೆ ಪಠ್ಯಕ್ರಮವನ್ನು ಕಡಿಮೆ ಮಾಡಲು ಎನ್‌ಸಿಇಆರ್‌ಟಿಯ ಕೆಲವು ಭಾಗಗಳನ್ನು ಕೈಬಿಡಲಾಗಿದೆ ಎಂದು ಶನಿವಾರ ಸರ್ಕಾರ್ ಹೇಳಿದರು.

ಮಕ್ಕಳು ಅಧ್ಯಯನ ಮಾಡಲು ಬಯಸಿದರೆ, ಡಾರ್ವಿನ್ ಸಿದ್ಧಾಂತವು ಎಲ್ಲಾ ವೆಬ್‌ಸೈಟ್‌ಗಳಲ್ಲಿ ಲಭ್ಯವಿದೆ. 12ನೇ ತರಗತಿಯಲ್ಲಿ, ಪಠ್ಯಕ್ರಮದಲ್ಲಿ ಈಗಾಗಲೇ ಡಾರ್ವಿನ್ ಸಿದ್ಧಾಂತವಿದೆ, ಆದ್ದರಿಂದ ಅಂತಹ ಸುಳ್ಳು ಪ್ರಚಾರ ಮಾಡಬಾರದು ಎಂದು ಸರ್ಕಾರ್ ಹೇಳಿರುವುದಾಗಿ ANI ವರದಿ ಮಾಡಿದೆ.

2018ರಲ್ಲಿ, ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸತ್ಯಪಾಲ್ ಸಿಂಗ್ ಅವರು, ”ಡಾರ್ವಿನ್ ಅವರ ಮನುಷ್ಯನ ವಿಕಾಸದ ಸಿದ್ಧಾಂತವು ‘ವೈಜ್ಞಾನಿಕವಾಗಿ ತಪ್ಪು’ ಮತ್ತು ಅದನ್ನು ಬದಲಾಯಿಸಬೇಕು” ಎಂದು ಹೇಳಿದ್ದರು.

”ಮನುಷ್ಯನು ಭೂಮಿಯ ಮೇಲೆ ಕಾಣಿಸಿಕೊಂಡಾಗಿನಿಂದ ಅವನು ಯಾವಾಗಲೂ ಮನುಷ್ಯನಾಗಿದ್ದಾನೆ. ನಮ್ಮ ಪೂರ್ವಜರು ಸೇರಿದಂತೆ ಯಾರೂ ಲಿಖಿತ ಅಥವಾ ಮೌಖಿಕವಾಗಿ, ಮಂಗವು ಮನುಷ್ಯನಾಗುವುದನ್ನು ನೋಡಿದ್ದೇವೆ ಎಂದು ಹೇಳಿಲ್ಲ. ನಾವು ಓದಿದ ಯಾವುದೇ ಪುಸ್ತಕಗಳು ಅಥವಾ ನಮ್ಮ ಅಜ್ಜಿಯರು ನಮಗೆ ಹೇಳಿದ ಕಥೆಗಳು ಅಂತಹ ಉಲ್ಲೇಖವನ್ನು ಹೊಂದಿಲ್ಲ” ಎಂದು ಅವರು ಹೇಳಿದ್ದರು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...