HomeUncategorizedಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

- Advertisement -
- Advertisement -

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ ಯುವಜನರು ಕೇಳುತ್ತಿರುವುದಾದರೂ ಏನನ್ನು? 21 ಮಕ್ಕಳನ್ನು ಬಲಿತೆಗೆದುಕೊಂಡ ಈ ಹಗರಣಕ್ಕೆ ಕಾರಣಕರ್ತರು ಯಾರು? ಅವರಿಗೆ ಶಿಕ್ಷೆಯಾಗಲಿ. ಮುಂದೆಂದೂ ಇಂಥ ಹಗರಣಗಳು ನಡೆಯದಿರಲಿ. ತಮ್ಮ ಮೂಗಿನ ಅಡಿಯಲ್ಲಿ ಇಂಥ ಹತ್ಯಾಕಾಂಡಕ್ಕೆ ಸಮನಾದ ಹಗರಣ ನಡೆಯಲು ಬಿಟ್ಟು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ ಎಂಬುದು ಅವರ ಮುಖ್ಯ ಬೇಡಿಕೆ.

ಆದರೆ ನರೇಂದ್ರ ಮೋದಿಯವರ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಏನಾಗಿದೆ ಎಂಬುದೇ ಅರ್ಥವಾಗುತ್ತಿಲ್ಲ. ಇಡೀ ದೇಶಕ್ಕೆ ಅರ್ಥವಾಗುತ್ತಿರುವುದು ಮೋದಿಯವರ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ. ಯಕಶ್ಚಿಃತ್ ಒಬ್ಬ ಮಂತ್ರಿಯ ರಾಜೀನಾಮೆ ಪಡೆಯಲು ಸರ್ಕಾರಕ್ಕೆ ಸಾಧ್ಯವಿಲ್ಲವೇ? ಧರ್ಮೇಂಧ್ರ ಪ್ರಧಾನ್ ಅಷ್ಟು ದೊಡ್ಡ ವ್ಯಕ್ತಿಯೇ? ಪ್ರಭಾವಶಾಲಿಯೇ? ಒಬ್ಬನ ರಾಜಕೀಯ ಭವಿಷ್ಯಕ್ಕಾಗಿ ಲಕ್ಷಾಂತರ ಮಕ್ಕಳ ಭವಿಷ್ಯವನ್ನು ನಾಶಪಡಿಸಬೇಕಾ? ಸಣ್ಣ ಮಕ್ಕಳೂ ಈಗ ಈ ಪ್ರಶ್ನೆಯನ್ನು ಕೇಳುತ್ತಿದ್ದಾರೆ.

ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸುತ್ತಿದ್ದಂತೆ ಸರ್ಕಾರ ಮಾಡಬೇಕಿದ್ದ ಮೊದಲ ಕೆಲಸ ಶಿಕ್ಷಣ ಸಚಿವರ ಬದಲಾವಣೆ. ಅದನ್ನು ಯಾರೋ ಹೇಳಿ ಕೇಳಿ ಮಾಡಬೇಕಾಗಿರಲಿಲ್ಲ. ಸರ್ಕಾರಕ್ಕೆ ವಿದ್ಯಾರ್ಥಿಗಳ ಮೇಲೆ ಕಾಳಜಿ ಇದ್ದಿದ್ದರೆ ಮೊದಲ ದಿನವೇ ಅದನ್ನು ಮಾಡಬೇಕಿತ್ತು. 21 ವಿದ್ಯಾರ್ಥಿಗಳ ಹೆಣಗಳು ಬಿದ್ದರೂ ಶಿಕ್ಷಣ ಸಚಿವನನ್ನು ಸಂಪುಟದಲ್ಲಿ ಇಟ್ಟುಕೊಳ್ಳುವುದು ಸರ್ಕಾಕ್ಕೆ ನಾಚಿಕೆಗೇಡಿನ ವಿಷಯ ಎಂದು ಸ್ವತಃ ಮೋದಿಯವರಿಗೇ ಅನ್ನಿಸಬೇಕಿತ್ತು. ಆದರೆ ಇಡೀ ಸರ್ಕಾರ ಮತ್ತು ಅದರ ಬೆಂಬಲಿಗರು ಸಚಿವನ ಬೆನ್ನಿಗೆ ನಿಂತುಬಿಟ್ಟರು.

ಈಗ ಈ ಚಳವಳಿ ಎಲ್ಲಿಗೆ ಬಂದು ನಿಂತಿದೆ ನೋಡಿ. ಆಗಾಗ ರೇಡಿಯೋಗಳಲ್ಲಿ ಮನದ ಮಾತು ಆಡುವ ಪ್ರಧಾನ ಮಂತ್ರಿಗಳು ಪರಿಸ್ಥಿತಿ ವಿಕೋಪಕ್ಕೆ ಹೋಗುವವರೆಗೆ ಮಾತೇ ಆಡಲಿಲ್ಲ. ಸಾವಿರಗಟ್ಟಲೆ ಇದ್ದ ವಿದ್ಯಾರ್ಥಿಗಳ ಸಂಖ್ಯೆ ಲಕ್ಷಾಂತರವಾಗುತ್ತ ಹೋಯಿತು. ಕೋಟಿಗಟ್ಟಲೆ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಈ ಆಂದೋಲನ ಕೂಡಿಕೊಂಡರು. ಜನರ ದೃಷ್ಟಿಯಲ್ಲಿ, ವಿದ್ಯಾರ್ಥಿಗಳ ದೃಷ್ಟಿಯಲ್ಲಿ ಸರ್ಕಾರದ ವಿಶ್ವಾಸಾರ್ಹತೆ ಮುಕ್ಕಾಗುತ್ತಲೇ ಹೋಯಿತು. ವಿದ್ಯಾರ್ಥಿಗಳು ತಮ್ಮದೇ ದೇಶದ ಸರ್ಕಾರದ ಮೇಲಿನ ನಂಬಿಕೆ ಕಳೆದುಕೊಂಡರು. ಇಷ್ಟೆಲ್ಲ ಆಗುವುದಕ್ಕೆ ಬಿಡಬೇಕಿತ್ತಾ?

ಜುಲೈ 20, 21 ರಂದು ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸರ ಪೈಶಾಚಿಕ ದಾಳಿಯನ್ನು ಯಾವ ನಾಗರಿಕ ಸಮಾಜ ಸಹಿಸಿಕೊಳ್ಳಲು ಸಾಧ್ಯ? ಈ ದಾಳಿಗೆ ಒಳಗಾದವರು ವಿದ್ಯಾರ್ಥಿಗಳು, ಹದಿಹರೆಯದವರು, 25 ವರ್ಷದ ಒಳಗಿನವರು. ಒಬ್ಬ ಇನ್ಸ್ಪೆಕ್ಟರ್ ದರ್ಜೆಯ ಅಧಿಕಾರಿ ಒಬ್ಬ ಹೆಣ್ಣಮಗಳ ಖಾಸಗಿ ಅಂಗಕ್ಕೆ ಲಾಠಿಯಿಂದ ತಿವಿಯುವ ದೃಶ್ಯವನ್ನು ಗಮನಿಸಿದೆ. ಎಂಥ ರಾಕ್ಷಸರು ಇವರು? ಮೊಳೆಗಳನ್ನು ಸಿಕ್ಕಿಸಲಾಗಿದ್ದ ಲಾಠಿಗಳಿಂದ ವಿದ್ಯಾರ್ಥಿಗಳನ್ನು ಬಡಿಯಲಾಯಿತು. ವಿದ್ಯಾರ್ಥಿಗಳ ಗುಂಪಿನ ಮೇಲೆಯೇ ಅಶ್ರುವಾಯು ಸೆಲ್ ಗಳನ್ನು ಸಿಡಿಸಲಾಯಿತು. ಪೊಲೀಸರ ಜೊತೆಯಲ್ಲಿ ಕೆಲವು ಗೂಂಡಾಗಳೂ ಸೇರಿಕೊಂಡು ವಿದ್ಯಾರ್ಥಿಗಳನ್ನು ಹೊಡೆದರು.

ನಮ್ಮ ಪ್ರಧಾನಿಯವರನ್ನು ಅವರ ಬೆಂಬಲಿಗರು ವಿಶ್ವಗುರು ಎಂದು ಹೇಳುತ್ತಾರೆ. ಅವರನ್ನು ವಿಶ್ವನಾಯಕ ಎಂದು ಬಿಂಬಿಸುತ್ತಾರೆ. ನಮ್ಮ ದೇಶದ ಪ್ರಧಾನಿ ವಿಶ್ವನಾಯಕರಾಗುವುದು ನಮಗೆ ಹೆಮ್ಮೆಯ ವಿಷಯವೇ. ಆದರೆ ತನ್ನದೇ ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಯಲ್ಲಿ ನಿಂತು ನ್ಯಾಯಕ್ಕಾಗಿ ಬೇಡುತ್ತ ಲಾಠಿ, ಬೂಟಿನೇಟು ತಿನ್ನುತ್ತಿರುವಾಗ ಪ್ರಧಾನಿ ಮೋದಿಯವರು ವಿಶ್ವನಾಯಕ ಎಂದು ಹೇಳಿಕೊಳ್ಳುವ ನೈತಿಕತೆ ಉಳಿಸಿಕೊಳ್ಳುತ್ತಾರೆಯೇ? ಇಷ್ಟು ಸಣ್ಣ ವಿಷಯ ಇವರಿಗೆ ಅರ್ಥವಾಗುತ್ತಿಲ್ಲವೇ?

ಎಂದಿನಂತೆ ಕೆಲವು ಸರ್ಕಾರದ ಬೆಂಬಲಿಗರು ವಿದ್ಯಾರ್ಥಿಗಳ ಪ್ರತಿಭಟನೆಯನ್ನು ದೇಶ ವಿರೋಧಿ, ಪಾಕಿಸ್ತಾನದಿಂದ ಫಂಡು ಬಂದಿದೆ, ಚೀನಾ ಇದರ ಹಿಂದೆ ಇದೆ ಎಂದೆಲ್ಲ ಹೇಳುತ್ತಿದ್ದಾರೆ. ಆದರೆ ಈ ದುಷ್ಟ ವ್ಯವಸ್ಥೆಯಿಂದ ಸತ್ತ 21 ಮಕ್ಕಳು ಭಾರತೀಯರಲ್ಲವೇ? ಅವರು ಪಾಕಿಸ್ತಾನಿಗಳಾ? ಚೀನೀಯರಾ? ಅವರಿಗೆ ನ್ಯಾಯ ಕೊಡಬೇಕಾಗಿದ್ದು ಭಾರತ ಸರ್ಕಾರವಲ್ಲವೇ? ನ್ಯಾಯ ಕೇಳುವವರೆಲ್ಲ ಪಾಕಿಸ್ತಾನಿಗಳಾಗಿಬಿಡುತ್ತಾರಾ ಈ ದೇಶದಲ್ಲಿ? ಯಾರೋ ಪಾಕಿಸ್ತಾನೀಯರು ಈ ಚಳವಳಿಯನ್ನು ಬೆಂಬಲಿಸಿದ ಮಾತ್ರಕ್ಕೆ ಆ ಹೋರಾಟ ಪಾಕಿಸ್ತಾನ ಪ್ರೇರಿತ ಆಗಿಬಿಡುತ್ತದೆಯೇ?

ಈಗ ನಡೆಯುತ್ತಿರುವ ವಿದ್ಯಾರ್ಥಿ ಚಳವಳಿ ಐತಿಹಾಸಿಕವಾದದ್ದು. ಈ ಚಳವಳಿಯನ್ನು ವಿದ್ಯಾರ್ಥಿಗಳೇ ಮುನ್ನಡೆಸಬೇಕು. ವಿದ್ಯಾರ್ಥಿಗಳೇ ತೀರ್ಮಾನಗಳನ್ನು ತೆಗೆದುಕೊಳ್ಳಬೇಕು. ರಾಜಕೀಯ ಪಕ್ಷಗಳು ಈ ಪ್ರತಿಭಟನೆಯಿಂದ ದೂರವೇ ಉಳಿಯಬೇಕು, ಬೇಕಿದ್ದರೆ ಅವರು ಪ್ರತ್ಯೇಕವಾಗಿ ಚಳವಳಿ ನಡೆಸಲಿ. ಈ ಚಳವಳಿಗೆ ರಾಜಕೀಯ ಬಣ್ಣ ಬರುವುದು ಬೇಡ. ವಿದ್ಯಾರ್ಥಿಗಳು ಒಂದು ದುರಹಂಕಾರಿ ಸರ್ಕಾರವನ್ನು ಬಗ್ಗಿಸಿ, ಅದರ ಕರ್ತವ್ಯವನ್ನು, ಜವಾಬ್ದಾರಿಯನ್ನು ನೆನಪಿಸುತ್ತಿದ್ದಾರೆ. ಅವರ ಜೊತೆಗೆ ನಾವು ನಿಲ್ಲೋಣ.

ವಿದ್ಯಾರ್ಥಿಗಳ ಬೆನ್ನಿಗೆ ಇಡೀ ದೇಶದ ಜನತೆ ಇದೆ. ಕನ್ನಡದ ಜನತೆಯೂ ಇದೆ. ಈ ಆಂದೋಲನ ಯಶಸ್ವಿಯಾಗಲಿ, ಶಿಕ್ಷಣ ವ್ಯವಸ್ಥೆ ಸರಿಯಾದ ದಾರಿಗೆ ಹೋಗಲಿ. ಎಲ್ಲದಕ್ಕಿಂತ ಮುಖ್ಯವಾಗಿ ನೀಟ್ ಎಂಬ ವ್ಯವಸ್ಥೆಯೇ ರದ್ದಾಗಲಿ, ನಮಗೆ ಸಿಇಟಿ ಸಾಕು, ಈ ದರಿದ್ರ ನೀಟ್ ಬೇಡವೇ ಬೇಡ.

ಟಿ.ಎ.ನಾರಾಯಣಗೌಡ
ರಾಜ್ಯಾಧ್ಯಕ್ಷರು
ಕರ್ನಾಟಕ ರಕ್ಷಣಾ ವೇದಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...