Homeಕರ್ನಾಟಕರಾಜ್ಯದ ಮಕ್ಕಳ ಭವಿಷ್ಯ ಕಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್‌: ಬಹುತ್ವ ಕರ್ನಾಟಕ ಆಕ್ರೋಶ

ರಾಜ್ಯದ ಮಕ್ಕಳ ಭವಿಷ್ಯ ಕಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್‌: ಬಹುತ್ವ ಕರ್ನಾಟಕ ಆಕ್ರೋಶ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು, ಕರ್ನಾಟಕದ ಮಕ್ಕಳ ಭವಿಷ್ಯವನ್ನು ಕಸಿದುಕೊಂಡಿದ್ದಾರೆ ಎಂದು ‘ಬಹುತ್ವ ಕರ್ನಾಟಕ’ ವೇದಿಕೆಯು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದೆ. ಅವರು ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಅವರನ್ನು ಶಾಸಕ ಸ್ಥಾನದಿಂದ ಅಮಾನ್ಯಗೊಳಿಸಬೇಕು ಎಂದು ವೇದಿಕೆ ಸೋಮವಾರ ಆಗ್ರಹಿಸಿದೆ.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ‘ಬಹುತ್ವ ಕರ್ನಾಟಕ’ ವೇದಿಕೆಯು ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂಬ ಒತ್ತಾಯಕ್ಕೆ 6 ಕಾರಣಗಳನ್ನು ನೀಡಿದೆ. ಸಚಿವರು ತಮ್ಮ ಪಾತ್ರವನ್ನು ಸಕ್ರಿಯವಾಗಿ ಪಾಲಿಸಲು ವಿಫಲರಾಗಿದ್ದು, ಅವರು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಅದು ಒತ್ತಾಯಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೊರೊನಾ ಬಿಕ್ಕಟ್ಟಿನ ಪರಿಸ್ಥಿತಿಯಿಂದಲೂ ಸತತವಾಗಿ ಮಕ್ಕಳ ಶಿಕ್ಷಣವನ್ನು ಪಣಕ್ಕೆ ಒಡ್ಡಿದ ಸಚಿವರು ರಾಜ್ಯದ ಶಿಕ್ಷಣವನ್ನು ಬಿಕ್ಕಟಿನಲ್ಲಿ ಸಿಲುಕಿಸಿದ್ದಾರೆ. ಹಾಗೆಯೇ ಅಪೌಷ್ಠಿಕಾಂಶ ಮಟ್ಟ ಹೆಚ್ಚುತ್ತಿದ್ದರೂ ಅದನ್ನು ನಿಯಂತ್ರಿಸಲು ಯಾವುದೇ ಕ್ರಮವನ್ನು ತೆಗೆದುಕೊಂಡಿರುವುದಿಲ್ಲ ಮತ್ತು ಶಿಕ್ಷಣವನ್ನು ಬ್ರಾಹ್ಮಣವಾದಿ ಹಿಡಿತಕ್ಕೆ ಸಿಲುಕಿಸುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ” ಎಂದು ಬಹುತ್ವ ಕರ್ನಾಟಕ ಆಕ್ರೊಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರೂ ಟಾರ್ಗೆಟ್‌?

ಸಚಿವರ ರಾಜೀನಾಮೆಗೆ ‘ಬಹುತ್ವ ಕರ್ನಾಟಕ’ ನೀಡಿರುವ ಕಾರಣಗಳು:

  • ಕೋವಿಡ್‌ -19 ಶಿಕ್ಷಣದ ಮೇಲೆ ಬೀರಿದೆ ಪರಿಣಾಮವನ್ನು ತಡೆಗಟ್ಟಲು ವಿಫಲರಾಗಿದ್ದಾರೆ.
    ಕೋವಿಡ್‌ – 19 ತಡೆಗಟ್ಟಲು ಜಾರಿಗೊಳಿಸಿದ್ದ ಲಾಕ್‌ ಡೌನ್‌ ಸಮಯದಲ್ಲಿ ಲಕ್ನಾ೦ತರ ಮಕ್ಕಳು ಎರಡು ವರ್ಷದ ಶಿಕ್ಷಣವನ್ನು ಕಳೆದುಕೂಂಡಿದ್ದಾರೆ. ಈ ಕಾರಣ ಹಲವಾರು ಮಕ್ಕಳು ಶಿಕ್ಷಣಕ್ಕೆ ತಿಲಾಂಜಲಿ ನೀಡುವ ಪರಿಸ್ಥಿತಿಗೆ ನೂಕಲಾಗಿದೆ ಮತ್ತು ಇಂತಹ ಮಕ್ಕಳನ್ನು ಶಾಲೆಗಳಿಗೆ ವಾಪಸ್ಸು ಕರೆತರಲು ಯಾವುದೇ ರೀತಿಯ ಕ್ರಮವನ್ನು ಜರುಗಿಸಿರುವುದಿಲ್ಲ. ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೊಳಿಸದೆ ಸರ್ಕಾರವು ತನ್ನ ಜವಾಬ್ದಾರಿಗಳನ್ನು ಕೈಬಿಟ್ಟಂತಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ಸಾವಿರಾರು ಮಕ್ಕಳು ಶಾಲೆಯನ್ನು ಬಿಟ್ಟಿದ್ದಾರೆ. ಈ ನಿಟ್ಟಿನಲ್ಲಿ ಶಾಲೆಗೆ ಹೋಗುತ್ತಿರುವ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ಒದಗಿಸಲು ಸರ್ಕಾರವು ವಿಫಲವಾಗಿದೆ. ಈ ಮಕ್ಕಳ ಕಲಿಕೆಗೆ ಧಕ್ಕೆ ಉಂಟಾಗುವುದಿಲ್ಲವೇ?
    ಶಿಕ್ಷಣ ಹಕ್ಕು ಕಾಯ್ದೆ ಅಡಿಯಲ್ಲಿ ಶಿಕ್ಷಕಿಯರನ್ನು ನೇಮಿಸಬೇಕೆಂದು ಇದ್ದರೂ, ಶಿಕ್ಷಕಿಯರ, ಆಡಳಿತ ಸಿಬ್ಬಂದಿಗಳ ನೇಮಕಾತಿ ಮಾಡದೆ, ಮಕ್ಕಳಿಗೆ ದೊರಕುವ ಕಲಿಯುವಿಕೆಗೆ ಧಕ್ಕೆ ಉ೦ಟು ಮಾಡಲಾಗಿದೆ. ಸರ್ಕಾರವು ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.
  • ಅಪೌಷ್ಠಿಕತೆಯನ್ನು ತಡೆಗಟ್ಟಲು ವಿಫಲರಾಗಿದ್ದಾರೆ.
    5ನೇ ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಶೇಖಡಾ 35.4 ಮಕ್ಕಳು ಕುಂಠಿತವಾಗಿದ್ದಾರೆ ಮತ್ತು ಶೇಖಡಾ 32.9 ಮಕ್ಕಳು ಕಡಿಮೆ ತೂಕ ಹೊಂದಿರುತ್ತಾರೆ ಎಂದು ವರದಿ ಆಗಿದೆ. ಇದನ್ನು ತಡೆಗಟ್ಟಲು ಮಕ್ಕಳಿಗೆ ಪ್ರತಿ ದಿನ ಮೊಟ್ಟೆ ನೀಡಬೇಕ೦ದು ರಾಷ್ಟ್ರೀಯ ಪೌಷ್ಠಿಕಾಂಶ ಸಂಸ್ಥೆ ಮತ್ತು ಹಲವಾರು ಪೌಷಿಕ ತಜ್ಞರು ಅಭಿಪ್ರಾಯಿಸಿದ್ದಾರೆ. ಹೀಗಿದ್ದರೂ ಸಹ ಸಚಿವ ನಾಗೇಶ್‌ ಅವರ ಸಚಿವಾಲಯವು ಅಪೌಷ್ಟಿಕ ಮಕ್ಕಳಿಗೆ ವಾರಕ್ಕೆ 5 ಬಾರಿ ಮೊಟ್ಟೆ ನೀಡುವಲ್ಲಿ ವಿಫಲರಾಗಿದ್ದಾರೆ. ಇದಕ್ಕೆ ಕಾರಣ ಧಾರ್ಮಿಕ ಗುಂಪುಗಳ ಜಾತೀಯ ಮನೋಭಾವನೆ ಒಂದೇ ಆಗಿದೆ.4ನೇ ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಸಮೀಕ್ಷೆಯ ಪ್ರಕಾರ ರಾಜ್ಯದ ಜನಸಂಖ್ಯೆಯಲ್ಲಿ, ಶಾಲಾ ಮಕ್ಕಳಿಗೆ ಮೊಟ್ಟೆ ನೀಡಿದರೆ ಶೇಖಡಾ 83 ಜನರಿಗೆ ಯಾವುದೇ ರೀತಿಯ ಸಾಂಸ್ಕೃತಿಕ ಅಥವಾ ಧಾರ್ಮಿಕ ತಕರಾರು ಇರುವುದಿಲ್ಲ ಎಂದು ವರದಿ ಮಾಡಲಾಗಿದೆ. ಹೀಗಿದ್ದರೂ ಸಹ ಇಡೀ ದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲಿ ಮಾತ್ರ ಬಿಸಿ ಊಟದೊಂದಿಗೆ ಮೊಟ್ಟೆ ನೀಡದಿರುವ ರಾಜ್ಯವಾಗಿದೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಗೆ ವಿರೋಧ: ನಾಳೆ ಕುಪ್ಪಳ್ಳಿಯಿಂದ ತೀರ್ಥಹಳ್ಳಿಗೆ ಪಾದಯಾತ್ರೆ – ಕಿಮ್ಮನೆ ರತ್ನಾಕರ್

  • ಶಿಕ್ಷಣ ಹಕ್ಕಿನ ನಿರಾಕರಣೆ
    ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪನ್ನು ಉದ್ದೇಶಪೂರ್ವಕವಾಗಿ ಸರಿಯಾಗಿ ಜಾರಿಗೊಳಿಸದೆ ತಮ್ಮದೇ ಇಲಾಖೆಯ ಆದೇಶದ ತದ್ವಿರುದ್ಧವಾಗಿ ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಯರನ್ನು ಅವರ ಪರೀಕ್ಷೆ ಬರೆಯದ ಹಾಗೆ ಮಾಡಿ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ. ಬಹುಸಂಖ್ಯಾತ ಸಮುದಾಯದ ಯುವಕರು ಕಾನೂನನ್ನುತಮ್ಮ ಕೈಗೆತ್ತಿಕೊಂಡು ಮುಸಲ್ಮಾನ ವಿದ್ಯಾರ್ಥಿನಿಯರನ್ನು ಶಿಕ್ಷಣ ಸಂಸ್ಥೆಗಳಲ್ಲಿ ಹೀಯಾಳಿಸಿ ಕಿರುಕುಳ ನೀಡಿದ ವಿರುದ್ಧ ಯಾವುದೇ ರೀತಿಯ ಕ್ರಮ ಜರುಗಿಸುವುದರಲ್ಲಿ ವಿಫಲರಾಗಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಂಸೆ ಮತ್ತು ತಾರತಮ್ಯವನ್ನು ರೂಢಿಗತಗೊಳಿಸಲಾಗಿದೆ.ಒಂದೇ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಎಲ್ಲಾ ಧರ್ಮದ ವಿದ್ಯಾರ್ಥಿಗಳ ಮಧ್ಯೆ ಸೌಹಾರ್ದತೆಯನ್ನು ಮುರಿಯಲು ಇವರೇ ಕಾರಣರಾಗಿರುತ್ತಾರೆ. ಮುಸಲ್ಮಾನ ವಿದ್ಯಾರ್ಥಿನಿಯರನ್ನು ಸಮರ್ಥಿಸಿಕೊಂಡ ಶಿಕ್ಷಕಿಯರ ವಿರುದ್ಧ ಅಪರಾಧಿಕ ಕ್ರಮ ಜರುಗಿಸುವ ಬೆದರಿಕೆಯನ್ನು ಒಡ್ಡಲಾಗಿದೆ. ಹೊಸ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ವಿರುದ್ಧ ಅಮಾನತುಗೊಳಿಸುವಿಕೆ, ಹಿಂಸೆ ಮತ್ತು ಸೌಹಾರ್ದತೆ ಮುರಿಯುವ ಕಾರ್ಯ ಚಟುವಟಿಕೆಗಳು ಕಂಡುಬರುತ್ತಿವೆ ಮತ್ತು ಅಹಿತಕಾರಿ ವಾತಾವರಣವನ್ನು ಸೃಷ್ಟಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಶಿಕ್ಷಣವನ್ನು ನಿರಾಕರಿಸಿದ್ದ ಏಕೈಕ ಸಚಿವರು ಇವರಾಗಿದ್ದಾರೆ.
  • ಪಠ್ಯಪುಸ್ತಕ ಪರಿಷ್ಕರಣೆ
    ಪಠ್ಯಪುಸ್ತಕಗಳು, ಪ್ರಜಾಪ್ರಭುತ್ವದಲ್ಲಿ ಸಕ್ರಿಯ ನಾಗರಿಕರಾಗಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ
    ನೀಡಬೇಕು. ಅವೈಜ್ಞಾನಿಕ ಮತ್ತು ಜಾತಿವಾದಿ ಪಠ್ಯಪುಸ್ತಕ ಪರಿಷ್ಕರಣೆ ಪ್ರಕ್ರಿಯೆಯು ಶಿಕ್ಷಣ ಹಕ್ಕು ಕಾಯಿದೆಯ ಸೆಕ್ಷನ್‌ 29 ರ ಉಲ್ಲಂಘನೆಯಾಗಿದೆ. 2005 ರ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು (National Curriculum Framework) ಭಾರತವು ಹಲವಾರು ಪ್ರಾದೇಶಿಕ ಮತ್ತು ಸ್ಥಳೀಯ ಸಂಸ್ಕೃತಿಗಳಿಂದ ಮಾಡಲ್ಪಟ್ಟ ಬಹುಸಂಸ್ಕೃತಿಯ ಸಮಾಜವಾಗಿದ್ದು, ಎಲ್ಲಾ ಗುಂಪುಗಳು ಸಹಬಾಳ್ವೆಯಿಂದ ಬಾಳಲು ಹಾಗು ಬೆಳೆಯಲು ಸಮಾನ ಹಕ್ಕುಗಳನ್ನು ಹೊಂದಿವೆ ಹಾಗೂ ಶಿಕ್ಷಣ ವ್ಯವಸ್ಥೆಯು ಸಾಂಸ್ಕೃತಿಕ ಬಹುತ್ವಕ್ಕೆ ಪ್ರತಿಕ್ರಿಯಿಸುವ ಅಗತ್ಯವಿದೆ ಎಂದು ಸ್ಪಷ್ಟವಾಗಿ ಹೇಳುತ್ತದೆ.ದಲಿತ ಲೇಖಕರು, ಪಿ.ಲಂಕೇಶ್‌, ಸಾರಾ ಅಬೂಬಕರ್‌ ಅವರ ಕೃತಿಗಳನ್ನು ತೆಗೆದುಹಾಕುವ ಮೂಲಕ ಮತ್ತು ಡಾ.ಅ೦ಬೇಡ್ಕರ್‌ ಮತ್ತು ಬಸವಣ್ಣ ಅವರಿಗೆ ಸಂಬಂಧಿಸಿದ ಐತಿಹಾಸಿಕ ಸಂಗತಿಗಳನ್ನು ತಿರುಚಿ ಪಠ್ಯಪುಸ್ತಕ ಪರಿಷ್ಕರಣೆ ಪ್ರಕ್ರಿಯೆಯು ಎನ್‌ಸಿಎಫ್‌ ಮತ್ತು ಆರ್‌ಟಿಇ ಕಾಯ್ದೆಯನ್ನು ಉಲ್ಲಂಘಿಸುತ್ತದೆ.

ಇದನ್ನೂ ಓದಿ: ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ಬಿಜೆಪಿಯ ವಿನಯ್‌ ಬಿದರೆ ಸಮರ್ಥನೆ

  • ಪಠ್ಯಪುಸ್ತಕ ವಿತರಣೆಯಲ್ಲಿ ವಿಳಂಬ
    ಸಚಿವ ನಾಗೇಶ್‌ ಅವರು ಶೈಕ್ಷಣಿಕ ವರ್ಷದಲ್ಲಿ ಒಂದು ತಿಂಗಳಿಗಿಂತ ಹೆಚ್ಚು ಕಾಲ ಪಠ್ಯಪುಸ್ತಕಗಳ ವಿತರಣೆಯನ್ನು ವಿಳಂಬಗೊಳಿಸಿದ್ದಾರೆ. ಇದು 2023 ರಲ್ಲಿ ತಮ್ಮ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಮೇಲೆ ಬೀರುವ ದುಷ್ಪರಿಣಾಮಗಳನ್ನು ಕಾಳಜಿ ವಹಿಸಿಲ್ಲ.
  • ಸಾಂವಿಧಾನಿಕ ಪ್ರತಿಜ್ಞೆಯನ್ನು ಅನುಸರಿಸಲು ವಿಫಲತೆ
    ಭಾರತದ ಸಂವಿಧಾನದ ಮೌಲ್ಯಗಳಿಗೆ ನಂಬಿಕೆಯಿರಿಸಿ ಅದರಂತೆ ನಡೆದುಕೊಳ್ಳುವರೆಂದು ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಆರ್‌ಟಿಇ ಕಾಯಿದೆಗೆ ಬದ್ಧವಾಗದೆ, ಯುವ ವಿದ್ಯಾರ್ಥಿಗಳಿಗೆ ನಿರ್ಣಾಯಕ ಪೋಷಕಾಂಶಗಳನ್ನು ನಿರಾಕರಿಸುವ ಮೂಲಕ ಮತ್ತು ಶೈಕ್ಷಣಿಕ ಜಾಗದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಹೊರಗಿಡುವ ಮೂಲಕ, ನ್ಯಾಯಾಲಯದ ತೀರ್ಪನ್ನು ತಪ್ಪಾಗಿ ಅರ್ಥ್ಯಸುವ ಮೂಲಕ ಬಿ.ಸಿ.ನಾಗೇಶ್‌‌ ಅವರು ಸಂವಿಧಾನದ ಆಶಯಗಳಿಗೆ, ಮೌಲ್ಯಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇದು ಅವರ ಪ್ರಮಾಣ ವಚನದ ಉಲ್ಲಂಘನೆಯಾಗಿದೆ.

ಬಹುತ್ವ ಕರ್ನಾಟಕದ ಒತ್ತಾಯಗಳು

  • ಸಚಿವ ಬಿ ಸಿ ನಾಗೇಶ್‌ ಅವರು ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಅವರನ್ನು ಶಾಸಕ ಸ್ಥಾನದಿಂದ ಅಮಾನ್ಯಗೊಳಿಸಬೇಕು.
  • ಸರ್ಕಾರವು ಎಲ್ಲಾ ಜಿಲ್ಲೆಗಳ ಸರ್ಕಾರಿ ಶಾಲೆಗಳಿಗೆ ವಾರದಲ್ಲಿ 5 ದಿನ ಮೊಟ್ಟೆಗಳನ್ನು ನೀಡಬೇಕು.
  • ಎಲ್ಲಾ ಮಕ್ಕಳು ಶಾಲೆಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ವಿಶೇಷ ಕ್ರಮಗಳನ್ನು ಜಾರಿಗೊಳಿಸಬೇಕು ಮತ್ತು ಕಲಿಕೆಯ ಅಂತರವನ್ನು ಖಚಿತಪಡಿಸಿಕೊಳ್ಳಲು ತಮಿಳುನಾಡಿನಂತೆ ವಿಶೇಷ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು.

ಇದನ್ನೂ ಓದಿ: ಪರಿಷ್ಕೃತ ಪಠ್ಯ ಪುಸ್ತಕ ವಿರೋಧಿಸಿ ‘ಜೂನ್‌ 18ರ ಶನಿವಾರ’ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

  • ಮುಸ್ಲಿಂ ವಿದ್ಯಾರ್ಥಿನಿಯರು ಕಿರುಕುಳಕ್ಕೆ ಒಳಗಾಗದಂತೆ ಮತ್ತು ಅವರ ಶಿಕ್ಷಣದ ಹಕ್ಕು ಮತ್ತು ಇತರ ಹಕ್ಕುಗಳನ್ನು ಉಲ್ಲಂಘನೆಯಾಗದಂತೆ ಖಚಿತಪಡಿಸಿಕೊಳ್ಳಬೇಕು.
  • ಪರಿಷ್ಕೃತ ಪಠ್ಯಪುಸ್ತಕಗಳನ್ನು ಹಿ೦ಂಪಡಯಬೇಕು ಮತ್ತು ಹಳೆಯ ಪಠ್ಯಪುಸ್ತಕಗಳನ್ನು ತಕ್ಷಣವೇ ನೀಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...