Homeಕರ್ನಾಟಕ‘ಶಿಕ್ಷಣ ಇಲಾಖೆ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ’: ಪ್ರಧಾನಿಗೆ ಪತ್ರ ಬರೆದ ರಾಜ್ಯದ 13 ಸಾವಿರ ಶಾಲೆಗಳು

‘ಶಿಕ್ಷಣ ಇಲಾಖೆ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ’: ಪ್ರಧಾನಿಗೆ ಪತ್ರ ಬರೆದ ರಾಜ್ಯದ 13 ಸಾವಿರ ಶಾಲೆಗಳು

ಇಬ್ಬರು ಬಿಜೆಪಿ ಸಚಿವರು ಶಾಲೆಗಳಿಗೆ ಅಕ್ಷರಶಃ ಹಾನಿಯನ್ನುಂಟುಮಾಡಿದ್ದಾರೆ ಎಂದು ಪತ್ರದಲ್ಲಿ ದೂರಲಾಗಿದೆ

- Advertisement -
- Advertisement -

ರಾಜ್ಯದ ಸುಮಾರು 13,000 ಶಾಲೆಗಳನ್ನು ಪ್ರತಿನಿಧಿಸುವ ಎರಡು ಸಂಘಗಳು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ಸ್‌‌ ಮತ್ತು ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ನಿರ್ವಹಣಾ ಸಂಘವು, ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ಪ್ರಮಾಣ ಪತ್ರ ನೀಡಲು ರಾಜ್ಯ ಶಿಕ್ಷಣ ಇಲಾಖೆಯು ಲಂಚಕ್ಕೆ ಬೇಡಿಕೆಯಿಡುತ್ತಿರುವ ಆರೋಪದ ಕುರಿತು ಪರಿಶೀಲಿಸುವಂತೆ ಪತ್ರ ಬರೆದು ಪ್ರಧಾನಿ ಮೋದಿಯನ್ನು ಒತ್ತಾಯಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವೈಜ್ಞಾನಿಕ, ತರ್ಕರಹಿತ, ತಾರತಮ್ಯ ಮತ್ತು ಅನುಸರಣೆಯ ಮಾನದಂಡಗಳನ್ನು ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಮಾತ್ರ ಅನ್ವಯಿಸಲಾಗುತ್ತಿದ್ದು, ದೊಡ್ಡ ಭ್ರಷ್ಟಾಚಾರ ನಡೆಯುತ್ತಿದೆ” ಎಂದು ಪತ್ರವು ಆರೋಪಿಸಿದೆ.

ಇದನ್ನೂ ಓದಿ: ಶಿಕ್ಷಣವನ್ನು ವೈದಿಕಗೊಳಿಸುವ ಜಾಗತಿಕ ಹುನ್ನಾರ

ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಅನೇಕ ದೂರುಗಳು ಮತ್ತು ಮನವಿಗಳನ್ನು ನೀಡಿದರೂ ಅವರು ಅದನ್ನು ಗಮನಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಸಂಘಗಳು ಹೇಳಿಕೊಂಡಿದ್ದು, ಸಚಿವರ ರಾಜೀನಾಮೆಗೆ ಒತ್ತಾಯಿಸಿವೆ.

“ಶಿಕ್ಷಣ ಸಚಿವಾಲಯವು ಇಡೀ ವ್ಯವಸ್ಥೆಯ ದಯನೀಯ ಪರಿಸ್ಥಿತಿಯನ್ನು ಆಲಿಸಲು ಮತ್ತು ಅರ್ಥಮಾಡಿಕೊಳ್ಳಲು ಹಾಗೂ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಯಾವುದೆ ಕ್ರಮಕೈಗೊಳ್ಳುತ್ತಿಲ್ಲ. ಹೆಚ್ಚು ಹೆಚ್ಚು ಹೂಡಿಕೆದಾರರಿಗೆ ಅವಕಾಶ ನೀಡುವ ಮೂಲಕ ಇಬ್ಬರು ಬಿಜೆಪಿ ಸಚಿವರು ಅಕ್ಷರಶಃ ಶಿಕ್ಷಣವನ್ನು ವ್ಯಾಪಾರೀಕರಿಸುವ ಶಾಲೆಗಳಿಗಿಂತ ಬಜೆಟ್ ಶಾಲೆಗಳಿಗೆ ಹೆಚ್ಚಿನ ಹಾನಿಯನ್ನುಂಟುಮಾಡಿದ್ದಾರೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಹೊಸ ಶೈಕ್ಷಣಿಕ ವರ್ಷ ಆರಂಭಗೊಂಡರೂ ಸರಕಾರ ನಿಗದಿಪಡಿಸಿದ ಪಠ್ಯಪುಸ್ತಕಗಳು ಇನ್ನೂ ಶಾಲೆಗಳಿಗೆ ತಲುಪಿಲ್ಲ ಎಂದು ಸಂಘಗಳು ಆರೋಪಿಸಿವೆ.

ಇದನ್ನೂ ಓದಿ: ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ರಚನೆ ಪ್ರಕ್ರಿಯೆ; ಶಿಕ್ಷಣದ ಮೇಲಿನ ರಾಜ್ಯಗಳ ಅಧಿಕಾರವನ್ನು ಕಸಿಯುವ ಪ್ರಹಸನ

“ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಸಾರ್ವಜನಿಕ ಮತ್ತು ಖಾಸಗಿ ಶಾಲೆಗಳು ಪ್ರಾಯೋಗಿಕವಾಗಿ ಮತ್ತು ಭೌತಿಕವಾಗಿ ಜಾರಿಗೊಳಿಸಬಹುದಾದ ಕಠಿಣ ನಿಯಮಗಳನ್ನು ಉದಾರೀಕರಣಗೊಳಿಸಲು ಶಿಕ್ಷಣ ಸಚಿವರು ಯಾವುದೇ ಕಾಳಜಿ ವಹಿಸುತ್ತಿಲ್ಲ” ಎಂದು ಸಂಘಗಳು ಪ್ರಧಾನಿಗೆ ಬರೆದ ದೂರಿನಲ್ಲಿ ಹೇಳಿದ್ದಾರೆ.

ಈ ಎಲ್ಲಾ ಆರೋಪಗಳನ್ನು ಪರಿಶೀಲಿಸಬೇಕು ಮತ್ತು ಕರ್ನಾಟಕ ಶಿಕ್ಷಣ ಸಚಿವಾಲಯದ ವ್ಯವಹಾರಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಶಾಲಾ ಸಂಘಗಳು ಪ್ರಧಾನಿ ಮೋದಿಯವರನ್ನು ಒತ್ತಾಯಿಸಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಕುರುಬನ ವಿರುದ್ಧ ಕುರಿಗಳು ತೋಳಕ್ಕೆ ಮನವಿ ಸಲ್ಲಿಸಿವೆ. 2023ರ ರಾಜ್ಯ ವಿಧಾನಸಭಾ ಚುನಾವಣೆ ಮತ್ತು 2024ರ ಲೋಕಸಭಾ ಚುನಾವಣೆಗಳಿಗಾಗಿ fund raising ಚಟುವಟಿಕೆಗಳು ರಭಸದಿಂದ ಸಾಗುತ್ತಿರುವಂತಿವೆ.

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್...

0
"ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಪರಿವರ್ತಿಸಿದ್ದಾರೆ. ಕಾವಲುಗಾರ ವಾಹನ ಹೀಗೆ ಹೋಗುವುದಿಲ್ಲ ಎಂದು ಹೇಳುತ್ತಿದ್ದರೂ ಜಿಹಾದಿಗಳು ವಾಹನವನ್ನು ಹೀಗೆ ಕಳುಹಿಸಲು ಹಠ ಹಿಡಿದಿದ್ದಾರೆ. ಇದು ಯಾವ...