Homeಕರ್ನಾಟಕ‘ಶಿಕ್ಷಣ ಇಲಾಖೆ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ’: ಪ್ರಧಾನಿಗೆ ಪತ್ರ ಬರೆದ ರಾಜ್ಯದ 13 ಸಾವಿರ ಶಾಲೆಗಳು

‘ಶಿಕ್ಷಣ ಇಲಾಖೆ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ’: ಪ್ರಧಾನಿಗೆ ಪತ್ರ ಬರೆದ ರಾಜ್ಯದ 13 ಸಾವಿರ ಶಾಲೆಗಳು

ಇಬ್ಬರು ಬಿಜೆಪಿ ಸಚಿವರು ಶಾಲೆಗಳಿಗೆ ಅಕ್ಷರಶಃ ಹಾನಿಯನ್ನುಂಟುಮಾಡಿದ್ದಾರೆ ಎಂದು ಪತ್ರದಲ್ಲಿ ದೂರಲಾಗಿದೆ

- Advertisement -
- Advertisement -

ರಾಜ್ಯದ ಸುಮಾರು 13,000 ಶಾಲೆಗಳನ್ನು ಪ್ರತಿನಿಧಿಸುವ ಎರಡು ಸಂಘಗಳು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ಸ್‌‌ ಮತ್ತು ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ನಿರ್ವಹಣಾ ಸಂಘವು, ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ಪ್ರಮಾಣ ಪತ್ರ ನೀಡಲು ರಾಜ್ಯ ಶಿಕ್ಷಣ ಇಲಾಖೆಯು ಲಂಚಕ್ಕೆ ಬೇಡಿಕೆಯಿಡುತ್ತಿರುವ ಆರೋಪದ ಕುರಿತು ಪರಿಶೀಲಿಸುವಂತೆ ಪತ್ರ ಬರೆದು ಪ್ರಧಾನಿ ಮೋದಿಯನ್ನು ಒತ್ತಾಯಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವೈಜ್ಞಾನಿಕ, ತರ್ಕರಹಿತ, ತಾರತಮ್ಯ ಮತ್ತು ಅನುಸರಣೆಯ ಮಾನದಂಡಗಳನ್ನು ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಮಾತ್ರ ಅನ್ವಯಿಸಲಾಗುತ್ತಿದ್ದು, ದೊಡ್ಡ ಭ್ರಷ್ಟಾಚಾರ ನಡೆಯುತ್ತಿದೆ” ಎಂದು ಪತ್ರವು ಆರೋಪಿಸಿದೆ.

ಇದನ್ನೂ ಓದಿ: ಶಿಕ್ಷಣವನ್ನು ವೈದಿಕಗೊಳಿಸುವ ಜಾಗತಿಕ ಹುನ್ನಾರ

ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಅನೇಕ ದೂರುಗಳು ಮತ್ತು ಮನವಿಗಳನ್ನು ನೀಡಿದರೂ ಅವರು ಅದನ್ನು ಗಮನಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಸಂಘಗಳು ಹೇಳಿಕೊಂಡಿದ್ದು, ಸಚಿವರ ರಾಜೀನಾಮೆಗೆ ಒತ್ತಾಯಿಸಿವೆ.

“ಶಿಕ್ಷಣ ಸಚಿವಾಲಯವು ಇಡೀ ವ್ಯವಸ್ಥೆಯ ದಯನೀಯ ಪರಿಸ್ಥಿತಿಯನ್ನು ಆಲಿಸಲು ಮತ್ತು ಅರ್ಥಮಾಡಿಕೊಳ್ಳಲು ಹಾಗೂ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಯಾವುದೆ ಕ್ರಮಕೈಗೊಳ್ಳುತ್ತಿಲ್ಲ. ಹೆಚ್ಚು ಹೆಚ್ಚು ಹೂಡಿಕೆದಾರರಿಗೆ ಅವಕಾಶ ನೀಡುವ ಮೂಲಕ ಇಬ್ಬರು ಬಿಜೆಪಿ ಸಚಿವರು ಅಕ್ಷರಶಃ ಶಿಕ್ಷಣವನ್ನು ವ್ಯಾಪಾರೀಕರಿಸುವ ಶಾಲೆಗಳಿಗಿಂತ ಬಜೆಟ್ ಶಾಲೆಗಳಿಗೆ ಹೆಚ್ಚಿನ ಹಾನಿಯನ್ನುಂಟುಮಾಡಿದ್ದಾರೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಹೊಸ ಶೈಕ್ಷಣಿಕ ವರ್ಷ ಆರಂಭಗೊಂಡರೂ ಸರಕಾರ ನಿಗದಿಪಡಿಸಿದ ಪಠ್ಯಪುಸ್ತಕಗಳು ಇನ್ನೂ ಶಾಲೆಗಳಿಗೆ ತಲುಪಿಲ್ಲ ಎಂದು ಸಂಘಗಳು ಆರೋಪಿಸಿವೆ.

ಇದನ್ನೂ ಓದಿ: ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ರಚನೆ ಪ್ರಕ್ರಿಯೆ; ಶಿಕ್ಷಣದ ಮೇಲಿನ ರಾಜ್ಯಗಳ ಅಧಿಕಾರವನ್ನು ಕಸಿಯುವ ಪ್ರಹಸನ

“ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಸಾರ್ವಜನಿಕ ಮತ್ತು ಖಾಸಗಿ ಶಾಲೆಗಳು ಪ್ರಾಯೋಗಿಕವಾಗಿ ಮತ್ತು ಭೌತಿಕವಾಗಿ ಜಾರಿಗೊಳಿಸಬಹುದಾದ ಕಠಿಣ ನಿಯಮಗಳನ್ನು ಉದಾರೀಕರಣಗೊಳಿಸಲು ಶಿಕ್ಷಣ ಸಚಿವರು ಯಾವುದೇ ಕಾಳಜಿ ವಹಿಸುತ್ತಿಲ್ಲ” ಎಂದು ಸಂಘಗಳು ಪ್ರಧಾನಿಗೆ ಬರೆದ ದೂರಿನಲ್ಲಿ ಹೇಳಿದ್ದಾರೆ.

ಈ ಎಲ್ಲಾ ಆರೋಪಗಳನ್ನು ಪರಿಶೀಲಿಸಬೇಕು ಮತ್ತು ಕರ್ನಾಟಕ ಶಿಕ್ಷಣ ಸಚಿವಾಲಯದ ವ್ಯವಹಾರಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಶಾಲಾ ಸಂಘಗಳು ಪ್ರಧಾನಿ ಮೋದಿಯವರನ್ನು ಒತ್ತಾಯಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕುರುಬನ ವಿರುದ್ಧ ಕುರಿಗಳು ತೋಳಕ್ಕೆ ಮನವಿ ಸಲ್ಲಿಸಿವೆ. 2023ರ ರಾಜ್ಯ ವಿಧಾನಸಭಾ ಚುನಾವಣೆ ಮತ್ತು 2024ರ ಲೋಕಸಭಾ ಚುನಾವಣೆಗಳಿಗಾಗಿ fund raising ಚಟುವಟಿಕೆಗಳು ರಭಸದಿಂದ ಸಾಗುತ್ತಿರುವಂತಿವೆ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...