Homeಕರ್ನಾಟಕ‘ಶಿಕ್ಷಣ ಇಲಾಖೆ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ’: ಪ್ರಧಾನಿಗೆ ಪತ್ರ ಬರೆದ ರಾಜ್ಯದ 13 ಸಾವಿರ ಶಾಲೆಗಳು

‘ಶಿಕ್ಷಣ ಇಲಾಖೆ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ’: ಪ್ರಧಾನಿಗೆ ಪತ್ರ ಬರೆದ ರಾಜ್ಯದ 13 ಸಾವಿರ ಶಾಲೆಗಳು

ಇಬ್ಬರು ಬಿಜೆಪಿ ಸಚಿವರು ಶಾಲೆಗಳಿಗೆ ಅಕ್ಷರಶಃ ಹಾನಿಯನ್ನುಂಟುಮಾಡಿದ್ದಾರೆ ಎಂದು ಪತ್ರದಲ್ಲಿ ದೂರಲಾಗಿದೆ

- Advertisement -
- Advertisement -

ರಾಜ್ಯದ ಸುಮಾರು 13,000 ಶಾಲೆಗಳನ್ನು ಪ್ರತಿನಿಧಿಸುವ ಎರಡು ಸಂಘಗಳು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ಸ್‌‌ ಮತ್ತು ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ನಿರ್ವಹಣಾ ಸಂಘವು, ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ಪ್ರಮಾಣ ಪತ್ರ ನೀಡಲು ರಾಜ್ಯ ಶಿಕ್ಷಣ ಇಲಾಖೆಯು ಲಂಚಕ್ಕೆ ಬೇಡಿಕೆಯಿಡುತ್ತಿರುವ ಆರೋಪದ ಕುರಿತು ಪರಿಶೀಲಿಸುವಂತೆ ಪತ್ರ ಬರೆದು ಪ್ರಧಾನಿ ಮೋದಿಯನ್ನು ಒತ್ತಾಯಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವೈಜ್ಞಾನಿಕ, ತರ್ಕರಹಿತ, ತಾರತಮ್ಯ ಮತ್ತು ಅನುಸರಣೆಯ ಮಾನದಂಡಗಳನ್ನು ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಮಾತ್ರ ಅನ್ವಯಿಸಲಾಗುತ್ತಿದ್ದು, ದೊಡ್ಡ ಭ್ರಷ್ಟಾಚಾರ ನಡೆಯುತ್ತಿದೆ” ಎಂದು ಪತ್ರವು ಆರೋಪಿಸಿದೆ.

ಇದನ್ನೂ ಓದಿ: ಶಿಕ್ಷಣವನ್ನು ವೈದಿಕಗೊಳಿಸುವ ಜಾಗತಿಕ ಹುನ್ನಾರ

ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಅನೇಕ ದೂರುಗಳು ಮತ್ತು ಮನವಿಗಳನ್ನು ನೀಡಿದರೂ ಅವರು ಅದನ್ನು ಗಮನಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಸಂಘಗಳು ಹೇಳಿಕೊಂಡಿದ್ದು, ಸಚಿವರ ರಾಜೀನಾಮೆಗೆ ಒತ್ತಾಯಿಸಿವೆ.

“ಶಿಕ್ಷಣ ಸಚಿವಾಲಯವು ಇಡೀ ವ್ಯವಸ್ಥೆಯ ದಯನೀಯ ಪರಿಸ್ಥಿತಿಯನ್ನು ಆಲಿಸಲು ಮತ್ತು ಅರ್ಥಮಾಡಿಕೊಳ್ಳಲು ಹಾಗೂ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಯಾವುದೆ ಕ್ರಮಕೈಗೊಳ್ಳುತ್ತಿಲ್ಲ. ಹೆಚ್ಚು ಹೆಚ್ಚು ಹೂಡಿಕೆದಾರರಿಗೆ ಅವಕಾಶ ನೀಡುವ ಮೂಲಕ ಇಬ್ಬರು ಬಿಜೆಪಿ ಸಚಿವರು ಅಕ್ಷರಶಃ ಶಿಕ್ಷಣವನ್ನು ವ್ಯಾಪಾರೀಕರಿಸುವ ಶಾಲೆಗಳಿಗಿಂತ ಬಜೆಟ್ ಶಾಲೆಗಳಿಗೆ ಹೆಚ್ಚಿನ ಹಾನಿಯನ್ನುಂಟುಮಾಡಿದ್ದಾರೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಹೊಸ ಶೈಕ್ಷಣಿಕ ವರ್ಷ ಆರಂಭಗೊಂಡರೂ ಸರಕಾರ ನಿಗದಿಪಡಿಸಿದ ಪಠ್ಯಪುಸ್ತಕಗಳು ಇನ್ನೂ ಶಾಲೆಗಳಿಗೆ ತಲುಪಿಲ್ಲ ಎಂದು ಸಂಘಗಳು ಆರೋಪಿಸಿವೆ.

ಇದನ್ನೂ ಓದಿ: ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ರಚನೆ ಪ್ರಕ್ರಿಯೆ; ಶಿಕ್ಷಣದ ಮೇಲಿನ ರಾಜ್ಯಗಳ ಅಧಿಕಾರವನ್ನು ಕಸಿಯುವ ಪ್ರಹಸನ

“ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಸಾರ್ವಜನಿಕ ಮತ್ತು ಖಾಸಗಿ ಶಾಲೆಗಳು ಪ್ರಾಯೋಗಿಕವಾಗಿ ಮತ್ತು ಭೌತಿಕವಾಗಿ ಜಾರಿಗೊಳಿಸಬಹುದಾದ ಕಠಿಣ ನಿಯಮಗಳನ್ನು ಉದಾರೀಕರಣಗೊಳಿಸಲು ಶಿಕ್ಷಣ ಸಚಿವರು ಯಾವುದೇ ಕಾಳಜಿ ವಹಿಸುತ್ತಿಲ್ಲ” ಎಂದು ಸಂಘಗಳು ಪ್ರಧಾನಿಗೆ ಬರೆದ ದೂರಿನಲ್ಲಿ ಹೇಳಿದ್ದಾರೆ.

ಈ ಎಲ್ಲಾ ಆರೋಪಗಳನ್ನು ಪರಿಶೀಲಿಸಬೇಕು ಮತ್ತು ಕರ್ನಾಟಕ ಶಿಕ್ಷಣ ಸಚಿವಾಲಯದ ವ್ಯವಹಾರಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಶಾಲಾ ಸಂಘಗಳು ಪ್ರಧಾನಿ ಮೋದಿಯವರನ್ನು ಒತ್ತಾಯಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕುರುಬನ ವಿರುದ್ಧ ಕುರಿಗಳು ತೋಳಕ್ಕೆ ಮನವಿ ಸಲ್ಲಿಸಿವೆ. 2023ರ ರಾಜ್ಯ ವಿಧಾನಸಭಾ ಚುನಾವಣೆ ಮತ್ತು 2024ರ ಲೋಕಸಭಾ ಚುನಾವಣೆಗಳಿಗಾಗಿ fund raising ಚಟುವಟಿಕೆಗಳು ರಭಸದಿಂದ ಸಾಗುತ್ತಿರುವಂತಿವೆ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...